DAKSHINA KANNADA
ಮಾ.2-4 ವರ್ಚುವಲ್ ಮ್ಯಾರಿಟೈಮ್ ಇಂಡಿಯಾ ಶೃಂಗಸಭೆ 2021; ಎನ್ ಎಂ ಪಿ ಟಿ ನೇತೃತ್ವದಲ್ಲಿ ಪೂರ್ವ ಬಾವಿ ಸಭೆ..!
ಮಾ.2-4 ವರ್ಚುವಲ್ ಮ್ಯಾರಿಟೈಮ್ ಇಂಡಿಯಾ ಶೃಂಗಸಭೆ 2021; ಎನ್ ಎಂ ಪಿ ಟಿ ನೇತೃತ್ವದಲ್ಲಿ ಪೂರ್ವ ಬಾವಿ ಸಭೆ..!
ಮಂಗಳೂರು: ಕಳೆದೊಂದು ವರ್ಷದಿಂದ ನಾವು ಕೊರೊನಾದಿಂದ ಕಂಗೆಟ್ಟಿದ್ದೇವೆ. ಕೇವಲ ಭಾರತ ಮಾತ್ರವಷ್ಟೇ ಅಲ್ಲ, ಇಡೀ ವಿಶ್ವವೇ ಇದರ ಹೊಡೆತಕ್ಕೆ ಸಿಲುಕಿದೆ.
ಆದರೆ ನಮ್ಮ ಬಳಿ ಇರುವ ಸ್ವಯಂಶಕ್ತಿಯಿಂದಾಗಿ ನಾವು ಅದನ್ನು ಮೆಟ್ಟಿನಿಲ್ಲಲು ಸಮರ್ಥರಾಗಿದ್ದೇವೆ ಎಂದು ಮಂಗಳೂರು ನವಮಂಗಳುರು ಬಂದರು ಮಂಡಳಿ ಅಧ್ಯಕ್ಷ ವೆಂಕಟರಮಣ ಅಕ್ಕರಾಜು ಅಭಿಪ್ರಾಯಪಟ್ಟರು.
ಭಾರತೀಯ ಕಡಲ ವಲಯದಲ್ಲಿ ದೇಶೀಯ ಮತ್ತು ಅಂತರರಾಷ್ಟ್ರೀಯ ಹೂಡಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ ವರ್ಚುವಲ್ ಮ್ಯಾರಿಟೈಮ್ ಇಂಡಿಯಾ ಶೃಂಗಸಭೆ 2021 ಭಾರತೀಯ ಬಂದರು, ಹಡಗು ಮತ್ತು ಜಲಮಾರ್ಗಗಳ ಸಚಿವಾಲಯ ಆಯೋಜನೆ ಮಾಡುತ್ತಿದೆ.
ಮಾರ್ಚ್ 02 ರಿಂದ 04 ರವರೆಗೆ ನಡೆಯಲಿರುವ ವರ್ಚುವಲ್ ಶೃಂಗ ಸಭೆಯ ಅಂಗವಾಗಿ ಪೂರ್ವಭಾವಿಯಾಗಿ ವಿವಿಧ ಸಣ್ಣ ಮತ್ತು ಬೃಹತ್ ಕೈಗಾರಿಕಾ ವಲಯಗಳ ಹೂಡಿಕೆದಾರರು ಮತ್ತು ಕೈಗಾರಿಕಾ ವಲಯದ ಸಂಘ ಸಂಸ್ಥೆಗಳ ನೆರವಿನೊಂದಿಗೆ ರೋಡ್ ಷೋ ಗಳನ್ನು ನ್ಯೂ ಮೆಂಗ್ಳೂರು ಪೋರ್ಡ್ ಟ್ರಸ್ಟ್ ಆಯೋಜನೆ ಮಾಡುತ್ತಿದೆ.
ಇದರ ಅಂಗವಾಗಿ ಮಂಗಳೂರಿನ ಬೈಕಂಪಾಡಿ ಕೈಗಾರಿಕಾ ವಲಯದ ಸಭಾಂಗಣದಲ್ಲಿ ಸಣ್ಣ ಕೈಗಾರಿಕಾ ಒಕ್ಕೂಟದ ಆಶ್ರಯದಲ್ಲಿ ಹಮ್ಮಿಕೊಂಡ ಸಭೆಯಲ್ಲಿ ಮಾತನಾಡಿದರು. ಪೋರ್ಟ್, ಬಂದರು ಚಟುವಟಿಕೆಗಳು ಮಹಾಮಾರಿ ಕೊರೊನಾದ ಸುಳಿಗೆ ಸಿಲುಕಿ ಒದ್ದಾಡಿದೆ. ಆದರೆ ನಮ್ಮ ಬಳಿ ಇರುವ ಶಕ್ತಿ, ಸಾಮರ್ಥ್ಯದಿಂದ ನಾವು ಅದನ್ನು ಮೆಟ್ಟಿ ಬೆಳೆದು ನಿಂತಿದ್ದೇವೆ. ಇದೀಗ ನಮಗೆ ಸವಾಲುಗಳನ್ನು ಎದುರಿಸಿ ಸಮರ್ಥವಾಗಿ ಮುನ್ನಡೆಯುವುದಕ್ಕೆ ಶಕ್ತಿ ಬಂದಿದೆ. ಮೇರಿಟೈಮ್ ಮಂಡಳಿ ಮೂಲಕ ನಾವು ಇನ್ನೂ ಬೆಳೆಯಬೇಕಾಗಿದೆಎಂದು ಅವರು ಹೇಳಿದರು.
ಭಾರತೀಯ ಕಡಲ ವಲಯದಲ್ಲಿನ ಸಂಭಾವ್ಯ ವ್ಯಾಪಾರ ಅವಕಾಶಗಳನ್ನು ಅನ್ವೇಷಣೆ, ಆತ್ಮನಿರ್ಭರ್ ಭಾರತ್ ಕುರಿತೂ ಅಕ್ಕರಾಜು ಮಾತನಾಡಿದರು. ಇದೇ ವೇಳೆ ನಡೆದ ಸಂವಾದ ಕಾರ್ಯಕ್ರಮದಲ್ಲೂ ಅವರು ಹಲವು ಪ್ರಶ್ನೆಗಳಿಗೆ ಉತ್ತರಿಸಿದರು.
ಬಳಿಕ ನಮ್ಮ ಕುಡ್ಲ ವಾಹಿನಿಗೆ ಮಾತನಾಡಿದ ನವಮಂಗಳೂರು ಬಂದರು ಮಂಡಳಿ ಅಧ್ಯಕ್ಷ ವೆಂಕಟರಮಣ ಅಕ್ಕರಾಜು “ಭಾರತೀಯ ಕಡಲ ವಲಯದಲ್ಲಿನ ಸಂಭಾವ್ಯ ವ್ಯಾಪಾರ ಅವಕಾಶಗಳನ್ನು ಅನ್ವೇಷಿಸುವುದು ಮತ್ತು ಆತ್ಮನಿರ್ಭರ್ ಭಾರತ್ ಮಾಡುವುದು” ಈ ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.
DAKSHINA KANNADA
ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ
ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.
ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.
ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು
ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
DAKSHINA KANNADA
ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ
ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.
ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.
- FILM4 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM4 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM5 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru4 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!