Connect with us

    BELTHANGADY

    ಸೌದೆ ಒಡೆಯಲೂ ಬಂತು ಯಂತ್ರ… ಹೇಗಿದೆ ನೋಡಿ..!

    Published

    on

    ದಕ್ಷಿಣ ಕನ್ನಡ: ಇತ್ತೀಚಿನ ದಿನಗಳಲ್ಲಿ ಎಲ್ಲಾ ಕೆಲಸಗಳೂ ಯಂತ್ರದ ಮೂಲಕವೇ ನಡೆಯುತ್ತಿದೆ. ಮನೆಯಲ್ಲಿ ನೆಲ ಒರಸಲು ಮಿಷಿನ್, ಅಡುಗೆ ಮಾಡಲು ಮಿಷಿನ್ ಹಾಗೆಯೇ ವಾಷಿಂಗ್ ಮಿಷಿನ್‌ನಲ್ಲಿ ಬಟ್ಟೆ ಒಗೆದರೂ ಅದನ್ನು ಆರಿಸಲೂ ಒಂದು ಮಿಷಿನ್ ಬಂದಿದೆ. ಹೀಗೆ ಪ್ರತಿ ಕೆಲಸಕ್ಕೂ ಜನರು ಯಂತ್ರಗಳನ್ನು ಅವಲಂಭಿಸಿದ್ದಾರೆ. ಹಿಂದೆ ಮರ ಕಡಿಯಲೂ ಜನರೇ ಬೇಕಿತ್ತು. ಆದರೆ ಆ ಜಾಗಕ್ಕೂ ಮಿಷಿನ್ ಬಂತು. ಈಗ ಕಟ್ಟಿಗೆ ಒಡೆಯಲೂ ಮಿಷಿನ್ ಬಂದಿದೆ.

    ಹೌದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಮಗೇ ಬೇಕಾದ ಸೈಝ್‌ಗೆ ಕಟ್ಟಿಗೆಯನ್ನು ಒಡೆಯಲು ವಿಶೇಷ ರೀತಿಯ ಯಂತ್ರವೊಂದು ಬಂದಿದೆ. ಈಗ ಬೇಸಿಗೆಯ ಬಿಸಿ ಏರಿದೆ. ಆದರೆ ನಾಳೆಯ ದಿನ ಮಳೆ ಬರಬಹುದು. ಆಗ ಸ್ನಾನ ಮಾಡಲು ನೀರು ಕಾಯಿಸಲು, ಅಡುಗೆಗೆ ಕಟ್ಟಿಗೆಯ ಉಪಯೋಗ ಆಗುತ್ತದೆ ಎಂದು ಜನರು ಈಗಲೇ ಅದನ್ನು ಸಂಗ್ರಹಿಸಿಡುತ್ತಾರೆ. ಇನ್ನು ಬೇಸಿಗೆಯಲ್ಲಿ ಸೋಲಾರ್ ಬಿಸಿ ಆದರೂ ಮಳೆಗಾಲದಲ್ಲಿ ಅದರ ಕೆಲಸ ಕಮ್ಮಿ. ಆಗ ಜನರು ಕಟ್ಟಿಗೆಗಾಗಿಯೇ ಅವಲಂಬಿತರಾಗುತ್ತಾರೆ. ಈಗ ಸೌದೆ ಒಡೆಯುವ ಕೆಲಸ ಯಂತ್ರಗಳೇ ಮಾಡುತ್ತಿದೆ. ಈ ಯಂತ್ರ ಜನರು ಪರಿಶ್ರಮಕ್ಕೆ ಬ್ರೇಕ್ ಹಾಕಿದ್ದು, ಕಷ್ಟದ ಕೆಲಸ ಸುಲಭ ಮಾಡುತ್ತಿದೆ.

    ಈ ಮಿಷಿನ್‌ನ ಬೆಲೆ 2.5 ಲಕ್ಷ ರೂಪಾಯಿ. ಬೆಳ್ತಂಗಡಿ ತಾಲೂಕಿನ ಸವಣಾಲಿನ ಕೇಶವ ಗೌಡ ಎನ್ನುವವರು ಇದನ್ನು ತಮಿಳುನಾಡಿನಿಂದ ತರಿಸಿದ್ದಾರೆ. ಇದು ಪೆಟ್ರೋಲ್ ಚಾಲಿತ ಯಂತ್ರವಾಗಿದ್ದು, ಸಣ್ಣ ಕಟ್ಟಿಗೆಯಿಂದ ಹಿಡಿದು ದೊಡ್ಡ ಕಟ್ಟಿಗೆಯವರೆಗೆ ನಮಗೆ ಬೇಕಾದ ಗಾತ್ರಕ್ಕೆ ಈ ಯಂತ್ರದಲ್ಲಿ ತುಂಡು ಮಾಡಬಹುದು.

    ಇದನ್ನೂ ಓದಿ : ಈಶ್ವರಪ್ಪ ನಾಮಪತ್ರ ಸಲ್ಲಿಕೆ ವೇಳೆ ಪ್ರಧಾನಿ ಮೋದಿ ಭಾಗಿ!?

    ಯಂತ್ರ ಚಾಲನೆಗೊಂಡಂತೆ ಚೂಪಾದ ಕೊಡಲಿಯ ಮೊನೆಯೊಂದು ಮೇಲಿನಿಂದ ಕೆಳಗೆ ಬರುತ್ತದೆ. ಇದು ಕಟ್ಟಿಗೆಯನ್ನು ಕ್ಷಣ ಮಾತ್ರದಲ್ಲಿ ಸೀಳಿ ಹಾಕುತ್ತದೆ. ಈ ಕೆಲಸಕ್ಕೆ ಇಬ್ಬರು ಇದ್ದಾರೆ.

    ಜನರ ಶ್ರಮದಿಂದ ದಿನಗಟ್ಟಲೇ ಆಗುವ ಕೆಲಸ ಈ ಯಂತ್ರದ ಸಹಾಯದಿಂದ ಒಂದೆರಡು ಗಂಟೆಗಳಲ್ಲಿ ಆಗುತ್ತದೆ. ಒಟ್ಟಾರೆಯಾಗಿ ಹೇಳುವುದಾದರೆ ಕಟ್ಟಿಗೆ ಒಡೆಯಲು ಈಗ ಕಾರ್ಮಿಕರು ಸಿಗುತ್ತಿಲ್ಲ. ಆದ್ದರಿಂದ, ಈ ಯಂತ್ರ ಜನರ ಸಹಕಾರಿಯಾಗಿ ಕಾರ್ಯ ನಿರ್ವಹಿಸಲಿದೆ ಎನ್ನುವುದು ಜನರ ಅಭಿಪ್ರಾಯ.

    BELTHANGADY

    ಅಂತರಾಷ್ಟ್ರೀಯ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

    Published

    on

    ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ಸಿದ್ದಾರ್ಥ್ ಎಂ.ಸಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ಫ್ಲಾಯ್ಡ್ ಮಿಸ್ಕಿತ್ ರಾಷ್ಟ್ರಮಟ್ಟದ ಟಾರ್ಗೆಟ್ ಬಾಲ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ನೇಪಾಳದ ಕಠ್ಮಂಡುವಿನಲ್ಲಿ ಜುಲೈ 8 ರಿಂದ ಜರುಗಿದ ಅಂತರಾಷ್ಟ್ರೀಯ ಮಟ್ಟದ ದಕ್ಷಿಣ ಏಷ್ಯಾ ಟಾರ್ಗೆಟ್ ಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

    ಫ್ಲಾಯ್ಡ್ ಮಿಸ್ಕಿತ್ ಮಡಂತ್ಯಾರು ನಿವಾಸಿ ಬೇಬಿ ಡಯಾನ ಮಿಸ್ಕಿತ್ ಹಾಗೂ ಕ್ಲೌಡಿ ಫ್ರಾನ್ಸಿಸ್ ಮಿಸ್ಕಿತ್ ದಂಪತಿಗಳ ಪುತ್ರರಾಗಿದ್ದು, ಸಿದ್ಧಾರ್ಥ್ ಎಂ.ಸಿ ಮಂಗಳೂರಿನ ಕಪಿತಾನಿಯೊ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಮಮಿತಾ ಹಾಗೂ ಬಿ.ಸಿ.ರೋಡ್ ನ ನ್ಯಾಯವಾದಿ ಪಿ.ಚೆನ್ನಪ್ಪ ಸಾಲಿಯಾನ್ ದಂಪತಿಗಳ ಪುತ್ರರಾಗಿದ್ದಾರೆ.

    ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ ವಿಟ್ಲ ತರಬೇತಿ ನೀಡಿರುತ್ತಾರೆ.

    Continue Reading

    BELTHANGADY

    ಬೆಳ್ತಂಗಡಿ: ವಿದ್ಯುತ್‌ ತಗುಲಿ ಯುವಕ ಮೃ*ತ್ಯು

    Published

    on

    ಉಪ್ಪಿನಂಗಡಿ: ಮನೆಯಲ್ಲಿ ವಿದ್ಯುತ್ ಇಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ ಫ್ಯೂಸ್ ಹಾಕಲು ತೆರಳಿದ ಯುವಕನೋರ್ವ ವಿದ್ಯುತ್ ಆಘಾ*ತಕ್ಕೆ ಬ*ಲಿಯಾದ ಘಟನೆ ಜು.15ರಂದು ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ನಡೆದಿದೆ.

    ಹರೀಶ (32) ಮೃ*ತ ಯುವಕ. ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದ ಈತ ಉತ್ತಮ ಕಬಡ್ಡಿ ಆಟಗಾರನೂ ಆಗಿದ್ದು, ತನ್ನ ಮನೆಗೆ ವಿದ್ಯುತ್ ಬರುತ್ತಿಲ್ಲವೆಂದು ವಿದ್ಯುತ್ ಪ್ರವಹಿಸಿ ಈತ ಮೃ*ತಪಟ್ಟಿದ್ದಾರೆ.

    Continue Reading

    BELTHANGADY

    ವಿಧಾನಸಭಾ ಅಧಿವೇಶನ: ಫಝಲ್ ಕೋಯಮ್ಮ ತಂಙಳ್, ನಿರೂಪಕಿ ಅಪರ್ಣಾ ಸಹಿತ ಅಗಲಿದ ಗಣ್ಯರಿಗೆ ಸಂತಾಪ

    Published

    on

    ಬೆಂಗಳೂರು: ವಿಧಾನ ಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಇಂದು ಪೂರ್ವಾಹ್ನ 11 ಗಂಟೆಗೆ ಆರಂಭಗೊಂಡಿತು.

    ಸದನ ಆರಂಭಗೊಳ್ಳುತ್ತಿದ್ದಂತೆ ಸಭಾಧ್ಯಕ್ಷರಾದ ಯು.ಟಿ.ಖಾದರ್‌ ಅವರು ಸಂತಾಪ ಸೂಚಿಸುವ ನಿರ್ಣಯವನ್ನು ಮಂಡಿಸಿ, ಅಗಲಿದ ಗಣ್ಯರ ಕೊಡುಗೆಗಳನ್ನು ಸ್ಮರಿಸಿದರು.

    ಅಗಲಿದ ಗಣ್ಯರಾದ ಧಾರ್ಮಿಕ ಮುಖಂಡ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ (ಕೂರತ್ ತಂಙಳ್), ನಿರೂಪಕಿ ಅಪರ್ಣಾ, ಸಾಹಿತಿ ಕಮಲಾ ಹಂಪನಾ, ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರಿಗೆ ಸದನಗಳ ಸದಸ್ಯರು ಸಂತಾಪ ಅರ್ಪಿಸಿದರು.

    Continue Reading

    LATEST NEWS

    Trending