LATEST NEWS
ಕೊಂದ ಶವ ಸಾಗಿಸಲು ಕಷ್ಟವೆಂದು ಸೊಂಟದಿಂದ ಕತ್ತರಿಸಿ ನಾಲೆಗೆ ಎಸೆದ್ರು..!: ಡಬಲ್ ಮರ್ಡರ್ ಕೇಸ್ ಬೇಧಿಸಿದ ಪೊಲೀಸ್
ಮಂಡ್ಯ: ಇಬ್ಬರು ಮಹಿಳೆಯರನ್ನು ಬರ್ಬರವಾಗಿ ಕೊಂದು, ಹೆಣ ಬೈಕ್ನಲ್ಲಿ ತೆಗೆದುಕೊಂಡು ಹೋಗಲು ಕಷ್ಟವಾಗುತ್ತದೆ ಎಂದು ದೇಹವನ್ನು ಎರಡು ತುಂಡರಿಸಿ ಸೊಂಟದ ಭಾಗವನ್ನು ಮಾತ್ರ ನಾಲೆಗೆ ಎಸೆದ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ ಸಂಬಂಧ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕುದೂರು ಹೋಬಳಿಯ ಕೋಡಿಹಳ್ಳಿ ಕಾಲೋನಿ ನಿವಾಸಿ ಹಾಗೂ ಪಾಂಡವಪುರ ತಾಲೂಕಿನ ಹರವು ಗ್ರಾಮದ ಮಹಿಳೆಯನ್ನು ಬಂಧಿಸಲಾಗಿದೆ.
ತನಿಖೆಯ ವೇಳೆ ಇವರಿಬ್ಬರು ಒಟ್ಟು ಮೂರು ಕೊಲೆಗಳನ್ನು ಮಾಡಿದ್ದು, ಮತ್ತೆ 5 ಕೊಲೆಗಳಿಗೆ ಸಂಚು ರೂಪಿಸಿದ್ದರು ಎಂಬ ಭಯಾನಕ ಅಂಶ ಬಯಲಿಗೆ ಬಂದಿದೆ.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಪಾರ್ವತಿ, ಚಾಮರಾಜ ನಗರದ ಗೀತಾ ಅಲಿಯಾಸ್ ಪುಟ್ಟಿ ಕೊಲೆಯಾದವರು.
ಘಟನೆ ವಿವರ
ಪ್ರಕರಣ ಸಂಬಂಧ ದಕ್ಷಿಣ ವಲಯ ಪೊಲೀಸ್ ಮಹಾನಿರೀಕ್ಷಕ ಪ್ರವೀಣ್ ಪವಾರ್ ಮಾಹಿತಿ ನೀಡಿ, ಜೂ.7ರಂದು ಪಾಂಡವಪುರ ತಾಲೂಕಿನ ಬೇಬಿ ಗ್ರಾಮದ ಕೆರೆಕೋಡಿ ಕಟ್ಟೆ ಕೆಳಗೆ ಹರಿಯುವ ನೀರಿನಲ್ಲಿ 30-32 ವರ್ಷ ವಯಸ್ಸಿನ ಅಪರಿಚಿತ ಮಹಿಳೆ ಹಾಗೂ ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದ ಮಾಡರಹಳ್ಳಿ ರಸ್ತೆ ಬಳಿ ಸಿಡಿಎಸ್ ನಾಲೆಗೆ ಸಂಪರ್ಕಿಸುವ ಸಾಲೋಡು ಹಳ್ಳದ ಪಕ್ಕದ ಕೈಲ ಭತ್ತದ ಗದ್ದೆಯಲ್ಲಿ 40-45 ವರ್ಷ ವಯಸ್ಸಿನ ಮತ್ತೊಬ್ಬ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದ್ದವು.
ಎರಡೂ ಮೃತದೇಹಗಳಲ್ಲಿ ಸೊಂಟದ ಕೆಳಭಾಗ ಮಾತ್ರ ಇತ್ತು. ಈ ಎರಡೂ ಮೃತದೇಹವನ್ನು ಗುರುತು ಪತ್ತೆ ಹಚ್ಚುವುದೇ ಪೊಲೀಸರಿಗೆ ಸವಾಲಾಗಿತ್ತು ಎಂದರು.
ಗೀತಾ ಹಾಗೂ ಪಾರ್ವತಿಗೆ ಗಾರ್ಮೆಂಟ್ಸ್ ಮತ್ತು ಹೋಂ ನರ್ಸಿಂಗ್ ಕೆಲಸ ಕೊಡಿಸುವುದಾಗಿ ನಂಬಿಸಿ ಇಬ್ಬರನ್ನೂ ಮೇಟಗಳ್ಳಿಯ ಬಾಡಿಗೆ ಮನೆಗೆ ಕರೆಸಿಕೊಂಡು ಇಬ್ಬರನ್ನೂ ಕೊಲೆ ಮಾಡಲಾಗಿತ್ತು.
ಗೀತಾ ಕಾಣೆಯಾಗಿದ್ದ ಪ್ರಕರಣ ಜು.7ರಂದು ಚಾಮರಾಜ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.
ದೇಹವನ್ನು ಎರಡು ತುಂಡರಿಸಿ ಬೇರೆ ಬೇರೆ ಕಡೆ ಬಿಸಾಡಿದ್ದರು..!
ಪಾರ್ವತಿಯನ್ನು ಮೇ. 30ರಂದು, ಗೀತಾಳನ್ನು ಜೂ. 3ರಂದು ಕೊಲೆ ಮಾಡಲಾಗಿತ್ತು. ಶವಗಳನ್ನು ಬೈಕ್ಗಳಲ್ಲಿ ಸಾಗಿಸುವುದು ಕಷ್ಟವೆಂಬ ಕಾರಣಕ್ಕೆ ದೇಹಗಳನ್ನು ಅರ್ಧಕ್ಕೆ ತುಂಡರಿಸಿ ಬೇರೆ ಬೇರೆ ಕಡೆ ಬಿಸಾಡಿಸಿದ್ದರು.
9 ತನಿಖಾ ತಂಡ, 1,116ಕ್ಕೂ ಕಾಣೆಯಾದ ಮಹಿಳೆಯರ ಪ್ರಕರಣ ಪರಿಶೀಲನೆ
ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿರಕ್ಕೂ ಹೆಚ್ಚು ಕರ ಪತ್ರಗಳನ್ನು ಅಕ್ಕಪಕ್ಕದ ಜಿಲ್ಲೆಗಳಲ್ಲಿ ಹಂಚಿಕೆ ಮಾಡಿ ಮೃತರ ಗುರುತು ಪತ್ತೆಗಾಗಿ ಜನರು ಹಾಗೂ ಪೊಲೀಸರ ಸಹಕಾರ ಕೋರಲಾಗಿತ್ತು.
ಜೊತೆಗೆ 9 ತನಿಖಾ ತಂಡಗಳನ್ನು ರಚಿಸಿ, ತಾಂತ್ರಿಕ ಮಾಹಿತಿ ಕಲೆ ಹಾಕಲು 2 ತಾಂತ್ರಿಕ ಪರಿಣಿತ ತಂಡಗಳನ್ನು ರಚಿಸಲಾಗಿತ್ತು. ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ 1,116ಕ್ಕೂ ಹೆಚ್ಚಿನ ಮಹಿಳೆಯರು ಕಾಣೆಯಾದ ಪ್ರಕರಣಗಳನ್ನು ಪರಿಶೀಲಿಸಲಾಗಿತ್ತು.
kerala
5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್..!
ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.
ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.
ಆನ್ ಲೈನ್ ಗೇಮಿಂಗ್ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?
ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್ಲೈನ್ ಗೇಮಿಂಗ್ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.
DAKSHINA KANNADA
ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ
ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.
ಉತ್ತರದ ಬ್ರೇಕ್ ವಾಟರ್ 831 ಮೀಟರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.
ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
LATEST NEWS
WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.
ಸೀಟ್ ಗಾಗಿ ಎಡವಟ್ಟು :
ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.
ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್ಗೆ 60 ರೂ., ಹಾಲ್ಫ್ಗೆ 40 ರೂ.
ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.
ರೋಹಿತ್ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.
ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ