Connect with us

DAKSHINA KANNADA

ಉಳ್ಳಾಲ ಪೊಲೀಸ್ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರದ ಆರೋಪ : ಲೋಕಾಯುಕ್ತದಿಂದ ಮಂಗಳೂರು ಪೊಲೀಸ್ ಕಮೀಷನರ್ ಗೆ ನೋಟಿಸ್ ಜಾರಿ..!

Published

on

ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಉಳ್ಳಾಲ ಪೋಲೀಸ್ ಠಾಣೆಯ ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರದ ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ದಾಖಲೆ ಸಮೇತ ವರದಿ ನೀಡುವಂತೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್ ಅವರಿಗೆ ಲೋಕಾಯುಕ್ತದಿಂದ ನೋಟಿಸ್ ಜಾರಿಯಾಗಿದೆ.

2023ರ ಫೆ.14 ರ ಒಳಗೆ ಸೂಕ್ತ ದಾಖಲೆಗಳೊಂದಿಗೆ ಹಾಜರಾಗಲು ಪೊಲೀಸ್ ಕಮೀಷನರ್ ಅವರಿಗೆ ಸೂಚಿಸಲಾಗಿದೆ.

ಉಳ್ಳಾಲ ಪೊಲೀಸ್ ಠಾಣೆಯ ಠಾಣಾಧಿಕಾರಿ ಸಂದೀಪ್ ಜಿ.ಎಸ್. ಮತ್ತು ಅಲ್ಲಿನ ಸಬ್ ಇನ್ಸ್ ಪೆಕ್ಟರ್ ಪ್ರದೀಪ್ ವಿರುದ್ಧ ಸಾಮಾಜಿಕ ಕಾರ್ಯಕರ್ತರಾದ, ಉಳ್ಳಾಲದ ನಿವಾಸಿಯಾಗಿರುವ ಮೊಹಮ್ಮದ್ ಕಬೀರ್ ಎಂಬುವರು ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು.

ಈ ಇಬ್ಬರೂ ಅಧಿಕಾರಿಗಳು ಭ್ರಷ್ಟಾಚಾರಿಗಳಾಗಿದ್ದು, ಇಬ್ಬರ ಮೇಲೆ ಕ್ರಮ ಜರುಗಿಸಬೇಕು ಎಂದು ಅವರು ಮನವಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ನೋಟಿಸ್ ಜಾರಿಯಾಗಿದೆ. ಕಳೆದ ವರ್ಷ ಈವರೆಗೆ ಈ ಇಬ್ಬರೂ ತನಿಖೆಗಳ ವರದಿ ಸಲ್ಲಿಸಬೇಕು ಹಾಗೂ ಆ ಪ್ರಕರಣಗಳ ಎಲ್ಲಾ ದಾಖಲೆಗಳನ್ನೂ ನೀಡಬೇಕು ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ.

ಲೋಕಾಯುಕ್ತ ದೂರಿನಲ್ಲಿ ಕಬೀರ್ ಅವರು ಈ ಇಬ್ಬರೂ ಅಧಿಕಾರಿಗಳ ಮೇಲೆ ಕೆಲವು ಗುರುತರ ಆರೋಪಗಳನ್ನು ಮಾಡಿದ್ದಾರೆ.

ಗಾಂಜಾ ಮಾಫಿಯ, ಮರಳು ಮಾಫಿಯಾದಾರರಿಂದ ಹಣವನ್ನು ಇಡಲಾಗಿದೆ. ಇನ್ನು, ಹೊಟೇಲ್ ಮಾಲೀಕರಿಂದ ಕೂಡ ಹಣ ವಸೂಲಿ ನಡೆಸುತ್ತಿದ್ದಾರೆ.

ಚಿನ್ನದ ಅಂಗಡಿ ದರೋಡೆ ಕೇಸ್ ನಲ್ಲಿ ಜಪ್ತಿ ಮಾಡಿದ ಚಿನ್ನ ಮತ್ತು ಬೆಳ್ಳಿಯನ್ನು ಇನ್ಸ್ ಪೆಕ್ಟರ್ ಸಂದೀಪ್ ಎಗರಿಸಿದ್ದಾರೆಂದು ಅವರು ಆರೋಪಿಸಿದ್ದಾರೆ.

ಈ ಎಲ್ಲಾ ವಿಷಯಗಳು ಮಂಗಳೂರು ಪೊಲೀಸ್ ಕಮೀಷನರ್ ಆದ ಶಶಿಕುಮಾರ್ ಅವರಿಗೆ ತಿಳಿದಿದೆ.

ಆದರೂ ಅವರು ಸುಮ್ಮನಿದ್ದಾರೆ. ಹಾಗಾಗಿ, ಅವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಕಬೀರ್ ಅವರು ತಮ್ಮ ದೂರಿನಲ್ಲಿ ದಾಖಲಿಸಿದ್ದಾರೆ.

ದೂರನ್ನು ಗಂಭೀರವಾಗಿ ಪರಿಗಣಿಸಿರುವ ಲೋಕಾಯುಕ್ತ, ಕರ್ನಾಟಕ ಲೋಕಾಯುಕ್ತ ನಿಯಮಗಳ ಕಲಂ.9 ರಡಿಯಲ್ಲಿ ತನಿಖೆ ನಡೆಸುವುದು ಸೂಕ್ತ ಎಂದು ನಿರ್ಧರಿಸಿ ನೋಟಿಸ್ ಜಾರಿ ಮಾಡಿದೆ.

Click to comment

Leave a Reply

Your email address will not be published. Required fields are marked *

DAKSHINA KANNADA

Sullia: ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿ ಶವವಾಗಿ ಪತ್ತೆ..!

Published

on

ಸುಳ್ಯ: ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂದು ಗುರುತಿಸಲಾಗಿದೆ.

ಸುಳ್ಯದಲ್ಲಿರುವ ಆರಂಬೂರು ಸೇತುವೆ ಬಳಿಯ ಪಯಸ್ವಿನಿ ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿಯು ಕಾಣೆಯಾಗಿದ್ದಾರೆ. ಬಳಿಕ ಅವರ ಹುಡುಕಾಟ ನಡೆಸಲಾಗಿದೆ. ಆದರೆ ಎಷ್ಟು ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಆ ಕಾರಣದಿಂದ ಸುಳ್ಯದ ಪೈಚಾರ್ ನ ಮುಳುಗು ತಜ್ಞರ ತಂಡವು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮೇಳಕ್ಕೆತ್ತುವಲ್ಲಿ ಯಶಸ್ವಿಯಾಗಿದೆ. ಸುಳ್ಯ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ

Continue Reading

DAKSHINA KANNADA

Sullia: ಮದ್ಯ ಸೇವಿಸಿ ಅಡ್ಡಾದಿಡ್ಡಿ ವಾಹನ ಚಲಾವಣೆ- ಎಪಿಎಂಸಿ ಕಾರ್ಯದರ್ಶಿ ಅಮಾನತು

Published

on

ಸುಳ್ಯ: ಮದ್ಯಪಾನ ಮಾಡಿ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಸರಕಾರಿ ವಾಹನ ಚಲಾಯಿಸಿದ ಪ್ರಕರಣದ ಆರೋಪಿ ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್‌ ಕುಮಾರ್‌ನನ್ನು ಅಮಾನತುಗೊಳಿಸಿ ಇಲಾಖೆ ಆದೇಶ ಹೊರಡಿಸಿದೆ.

ನವೀನ್‌ ಕುಮಾರ್ ಮಂಗಳವಾರ ರಾತ್ರಿ ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ಇಲಾಖೆಯ ನಾಮಫ‌ಲಕವಿರುವ ವಾಹನವನ್ನು ಅಪಾಯಕಾರಿಯಾಗಿ ಚಲಾಯಿಸಿದ್ದನೆಂದು ಆರೋಪಿಸಲಾಗಿದೆ. ಅಡ್ಡಾದಿಡ್ಡಿಯಾಗಿ ವಾಹನ ಚಲಾಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದ್ದರು. ಈ ಸಂದರ್ಭ ತಾನು ಸುಳ್ಯ ಎಪಿಎಂಸಿ ಕಾರ್ಯದರ್ಶಿ, ನನ್ನದು ತಪ್ಪಾಯಿತು ಎಂದು ಕ್ಷಮೆ ಯಾಚಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಎಪಿಎಂಸಿ ಕಾರ್ಯದರ್ಶಿಯವರನ್ನು ಅಮಾನತುಗೊಳಿಸಿ ಆದೇಶ ಮಾಡಲಾಗಿದೆ. ಬೆಳ್ತಂಗಡಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಅವರಿಗೆ ಸುಳ್ಯ ಎಪಿಎಂಸಿ ಪ್ರಭಾರ ವಹಿಸಲಾಗಿದೆ.

 

Continue Reading

DAKSHINA KANNADA

ಕಟೀಲು ಕ್ಷೇತ್ರಕ್ಕೆ ಮಾಜಿ ಸಚಿವ, ಶಾಸಕ ಶ್ರೀರಾಮುಲು ಭೇಟಿ

Published

on

ಕಿನ್ನಿಗೋಳಿ: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಮಾಜಿ ಸಚಿವ, ಶಾಸಕ ಶ್ರೀರಾಮುಲು ಭೇಟಿ ನೀಡಿದರು.

ದೇವಳದ ವತಿಯಿಂದ ಶ್ರೀ ರಾಮುಲು ಅವರನ್ನು ಗೌರವಿಸಲಾಯಿತು.

ಈ ಸಂದರ್ಭ ವೆಂಕಟರಮಣ ಆಸ್ರಣ್ಣ, ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರುಗುತ್ತು ಉಪಸ್ಥಿತರಿದ್ದರು.

ಕ್ಷೇತ್ರದಲ್ಲಿ ಅವರು ಅನ್ನಪ್ರಸಾದವನ್ನು ಸ್ವೀಕರಿಸಿ ಸರಳತೆ ಮೆರೆದರು. ಬಳಿಕ ಕ್ಷೇತ್ರದ ಕುರಿತಂತೆ ಹೆಚ್ಚಿನ ಮಾಹಿತಿ ಪಡೆದುಕೊಂಡರು.

Continue Reading

LATEST NEWS

Trending