LATEST NEWS
ಮಳಲಿ ದರ್ಗಾ ವಿವಾದ: ಸತ್ಯಾಸತ್ಯತೆ ಕಂಡುಕೊಳ್ಳಲು ಅಷ್ಟಮಂಗಳ ಪ್ರಶ್ನೆಗೆ VHP ನಿರ್ಧಾರ
ಮಂಗಳೂರು: ಭಾರೀ ಚರ್ಚೆಗೆ ಗ್ರಾಸವಾಗಿದ್ದ ಮಳಲಿ ದರ್ಗಾದಲ್ಲಿ ಹಿಂದೂ ದೇವಾಲಯದ ಶೈಲಿಯ ಕೆತ್ತನೆಗಳು ಪತ್ತೆಯಾಗಿದ್ದ ವಿಚಾರದ ಹಿನ್ನೆಲೆ ಇದೀಗ ವಿಎಚ್ ಪಿ ಹಾಗೂ ಬಜರಂಗದಳ ಅಷ್ಟಮಂಗಲ ಪ್ರಶ್ನಾ ಚಿಂತನೆ ನಡೆಸಲು ಚಿಂತನೆ ನಡೆಸಿವೆ.
ಇತ್ತೀಚೆಗೆ ನಗರದ ಹೊರವಲಯದ ಗಂಜಿಮಠದದಲ್ಲಿರುವ ಅಸಯ್ಯದ್ ಅಬ್ದುಲ್ಲಾಹಿಲ್ ಮದನಿ ದರ್ಗಾವೊಂದನ್ನು ನವೀಕರಣಗೊಳಿಸಲು ಕೆಡವಿ ಹಾಕಿದ ಸಂದರ್ಭ ಹಿಂದೂ ದೇವಾಲಯ ಶೈಲಿಯ ಕೆತ್ತನೆ ಪತ್ತೆಯಾಗಿತ್ತು.
ಇದೀಗ ಇಲ್ಲಿರೋದು ಹಿಂದೂ ದೇವಾಲಯವೇ, ದರ್ಗಾವೇ ಅಥವಾ ಬಸದಿಯೇ ಎಂಬ ಬಗ್ಗೆ ದೀರ್ಘವಾದ ಚರ್ಚೆಗಳು ನಡೆಯುತ್ತಿದೆ.
ತಕ್ಷಣ ಮಧ್ಯ ಪ್ರವೇಶಿಸಿರುವ ದ.ಕ ಜಿಲ್ಲಾಡಳಿತವು ಮಂಗಳೂರು ತಹಶೀಲ್ದಾರ್ ರವರ ಮೂಲಕ ದರ್ಗಾ ನವೀಕರಣ ಕಾಮಗಾರಿಯನ್ನು ಸ್ಥಗಿತಗೊಳಿಸಲು ಸೂಚನೆ ನೀಡಿತ್ತು. ಆ ಬಳಿಕ ಕೋರ್ಟ್ ನಿಂದಲೂ ದರ್ಗಾ ನವೀಕರಣ ಕಾಮಗಾರಿಗೆ ತಡೆಯಾಜ್ಞೆ ಬಂದಿತ್ತು.
ಈ ಹಿನ್ನೆಲೆಯಲ್ಲಿ ಈಗಲೂ ದರ್ಗಾದ ಕಾಮಗಾರಿ ಸ್ಥಗಿತಗೊಂಡಿದ್ದು, ದರ್ಗಾ ಇರುವ ಪ್ರದೇಶದ ಮೂಲ ಭೂ ದಾಖಲೆಗಳನ್ನು ಪರಿಶೀಲನೆ ನಡೆಸುವ ಕಾರ್ಯ ನಡೆಯುತ್ತಿದೆ.
ಈ ನಡುವೆ ವಿಎಚ್ ಪಿ ಹಾಗೂ ಬಜರಂಗದಳ ಈ ವಿಚಾರದಲ್ಲಿ ಪ್ರವೇಶ ಮಾಡಿ, ದರ್ಗಾ ಇರುವ ಜಾಗದಲ್ಲಿ ಈ ಹಿಂದೆ ದೇವಾಲಯವಿತ್ತು ಎಂದು ವಾದಿಸಿತ್ತು.
ಅಲ್ಲದೆ ಪುರಾತತ್ತ್ವ ಇಲಾಖೆಯ ಮುಖಾಂತರ ಶೋಧ ಕಾರ್ಯ ನಡೆಸ ಬೇಕೆಂದು ಸರಕಾರಕ್ಕೆ ಒತ್ತಾಯ ಮಾಡಿತ್ತು.
ಇದೀಗ ದರ್ಗಾದ ಭೂವಿವರಗಳನ್ನು ತಿಳಿಯಲು ಅಷ್ಟಮಂಗಲ ಪ್ರಶ್ನಾಚಿಂತನೆ ನಡೆಸಲು ವಿಎಚ್ ಪಿ, ಬಜರಂಗದಳ ನಿರ್ಧಾರ ಕೈಗೊಂಡಿದೆ. ಆದರೆ ಇನ್ನೂ ದಿನಾಂಕ ನಿಗದಿಯಾಗಿಲ್ಲ. ಈ ಮೂಲಕ ಅಲ್ಲಿರೋದು ದರ್ಗಾವೇ ಅಥವಾ ದೇವಾಲಯವೇ ಎಂಬುದಕ್ಕೆ ಗೊಂದಲಕ್ಕೆ ತೆರೆ ಬೀಳುವ ಸಾಧ್ಯತೆಯಿದೆ.
FILM
ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ
ಉಡುಪಿ: ಇಂದು ಬೆಳಂಬೆಳಗ್ಗೆ ರಾಜಕೀಯ ನಾಯಕರು, ಜನಸಾಮಾನ್ಯರು ಮತಗಟ್ಟೆಗೆ ಬಂದು ಮತ ಚಲಾಯಿಸಿದರೆ ಉಡುಪಿಯ ಮತಗಟ್ಟೆಯಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಮತದಾನ ಮಾಡಿದ್ದಾರೆ.
ಕುಕ್ಕಿಕಟ್ಟೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸಂಖ್ಯೆ 197 ಕ್ಕೆ ಆಗಮಿಸಿ ಮತ ಚಲಾಯಿಸಿದರು. ರಕ್ಷಿತ್ ಶೆಟ್ಟಿ ಮನೆಯ ಮುಂಭಾಗದಲ್ಲೇ ಇರುವ ಮತಗಟ್ಟೆಗೆ ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದರು. ರಕ್ಷಿತ್ ಶೆಟ್ಟಿ ಈ ಸಂದರ್ಭದಲ್ಲಿ ಸೆಲೆಬ್ರೆಟಿಯನ್ನು ಕಂಡ ಇತರ ಮತದಾರರು ಹರ್ಷಚಿತ್ತರಾಗಿ ಸೆಲ್ಫೆ ಕ್ಲಿಕಿಸಲು ಮುಂದಾದ ಘಟನೆ ನಡೆಯಿತು.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
LATEST NEWS
ಅಯೋಧ್ಯೆಯ ಅಂಗಳದಲ್ಲಿ ಶೂಟಿಂಗ್ ಮಾಡಿದ ಮೊಟ್ಟ ಮೊದಲ ಕನ್ನಡ ಸೀರಿಯಲ್ ಇದು?
ಮಹಿಳೆಯರಿಗೆ ಸೀರಿಯಲ್ ನೋಡುವುದಂದರೆ ಒಂತಾರ ಹುಚ್ಚು. ಮನೆಯಲ್ಲೇ ಇರುವ ಮಹಿಳೆಯರು ಕೆಲವೊಮ್ಮೆ ಬೆಳಗ್ಗೆಯಿಂದ ಸಂಜೆಯವರೆಗೆ ಟಿವಿಯಲ್ಲಿ ಸೀರಿಯಲ್ ನೋಡುತ್ತಾ ಇರುತ್ತಾರೆ. ಸೀರಿಯಲ್ ನೋಡೊದು ಮಾತ್ರ ಅಲ್ಲ ಅದರ ಬಗ್ಗೆ ಸಂವಾದ ಕೂಡ ಮನೆಯವರಲ್ಲಿ ಮಾಡುತ್ತಾ ಇರುತ್ತಾರೆ.
ಈ ನಡುವೆ ಅಯೋಧ್ಯೆ ರಾಮಮಂದಿರ ನಿರ್ಮಾಣದ ನಂತರ ದೇಶದ ಜನರು ತುಂಬಾ ಸಂತೋಷದಲ್ಲಿದ್ದಾರೆ. ಅದೆಷ್ಟೋ ಜನ ಹಿಂದೂಗಳ ಕನಸು ನನಸಾದ ಕ್ಷಣ ಎಂದು ಹೇಳಬಹುದು. ಒಮ್ಮೆಯಾದ್ರೂ ಅಯೋಧ್ಯೆಗೆ ಹೋಗಿಬರಬೇಕು ಅಂತಾ ಪ್ಲಾನ್ ಅಂತೂ ಮಾಡ್ತಾ ಇರೋದು ಕಂಡಿತ. ಕೆಲವರು ಹೋಗಿ ಬಂದಿದ್ದಾರೆ ಕೂಡ ಆದರೆ ಇನ್ನು ಕೆಲವರು ಇನ್ನು ಹೋಗಬೇಕು. ಇದುವರೆಗೆ ಅಯೋಧ್ಯೆ ರಾಮಮಂದಿರದಲ್ಲಿ ಯಾವೂದೇ ರೀತಿದ ಫಿಲ್ಮ್ ಶೂಟಿಂಗ್, ಸೀರಿಯಲ್, ಕಿರುಚಿತ್ರ ಯಾವೂದು ಶೂಟಿಂಗ್ ಆಗಲಿಲ್ಲ. ಆದರೇ ಇದೇ ಮೊದಲ ಬಾರಿಗೇ ಕನ್ನಡ ಸೀರಿಯಲ್ ಇಂಡಸ್ಟ್ರಿಯಲ್ಲಿ ಕನ್ಯಾದಾನ ಸೀರಿಯಲ್ ಹೊಸ ದಾಖಲೆ ಬರೆದಿದೆ.
ಉದಯ ಟಿವಿಯಲ್ಲಿ ಪ್ರಸಾರವಾಗೋ ಕನ್ಯಾದಾನ ಧಾರಾವಾಹಿ ಈಗ ಹೊಸ ದಾಖಲೆ ಬರೆದಿದ್ದಾರೆ. ಕನ್ನಡ ಟೆಲಿವಿಷನ್ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಅಯೋಧ್ಯೆಯಲ್ಲಿ ಚಿತ್ರೀಕರಣಗೊಂಡ ಮೊಟ್ಟ ಮೊದಲ ಸೀರಿಯಲ್ ಎಂಬ ಹೆಗ್ಗಳಿಕೆಗೆ ಕನ್ಯಾದಾನ ಧಾರಾವಾಹಿ ಪಾತ್ರವಾಗಿದೆ.
ಜನವರಿ 22ರಂದು ಅಂದ್ರೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯಾದ ನಂತರ ಇಲ್ಲಿಯವೆರೆಗೂ ಯಾವುದೇ ಸಿನಿಮಾವಾಗ್ಲಿ, ಅಥವಾ ಸೀರಿಯಲ್ ಆಗ್ಲಿ ಶೂಟ್ ಮಾಡಿರಲಿಲ್ಲ. ಆದ್ರೆ, ಕನ್ಯಾದಾನ ಧಾರವಾಹಿ ತಂಡ ಫಸ್ಟ್ಟೈಮ್ ಅಯೋಧ್ಯೆಗೆ ಹೋಗಿ ಚಿತ್ರೀಕರಣ ಮಾಡಿದೆ.
ಈ ಸೀರಿಯಲ್ನಲ್ಲಿ ಬಹುತೇಕ ಪಾತ್ರಗಳು ಒಂದಲ್ಲ ಒಂದು ಸಮಸ್ಯೆ ಎದುರಿಸ್ತಿವೆ. ಹಾಗಾಗಿ ರಾಮನ ದರ್ಶನ ಪಡೆದು ಆ ಕಷ್ಟಗಳಿಂದ ಹೊರಬರಬೇಕು ಎಂದು ನಿರ್ಧರಿಸಿ, ರಾಮಮಂದಿರಕ್ಕೆ ಹೋಗಿ ಬಾಲರಾಮನ ದರ್ಶನ ಪಡೆದಿದ್ದಾರೆ. ಅಯೋಧ್ಯೆಯಲ್ಲಿ ಶೂಟಿಂಗ್ ಮಾಡಿರೋ ಬಗ್ಗೆ ಸೀರಿಯಲ್ ತಂಡ ಸಂತಸ ಹಂಚಿಕೊಂಡಿದೆ.