Connect with us

LATEST NEWS

ಮಳಲಿ ವಿವಾದ: ಸಿವಿಲ್‌ ಕೋರ್ಟ್‌ಗೆ ವಿಚಾರಣೆ ಅಧಿಕಾರವಿಲ್ಲ-ಮಸೀದಿ ಪರ ವಕೀಲರಿಂದ ವಾದ

Published

on

ಮಂಗಳೂರು: ಮಳಲಿ ಮಸೀದಿ ವಿವಾದ ಬಗ್ಗೆ ನಿನ್ನೆ ಮೂರನೇ ಬಾರಿ ಮಂಗಳೂರಿನ ಹೆಚ್ಚುವರಿ ಸಿವಿಲ್‌ ನ್ಯಾಯಾಲಯದಲ್ಲಿ ನಿನ್ನೆ ವಿಚಾರಣೆ ನಡೆದು ಜೂ.9ಕ್ಕೆ ಮತ್ತೆ ಅರ್ಜಿ ವಿಚಾರಣೆ ಮುಂದೂಡಲಾಗಿದೆ.


ಮಸೀದಿ ಆಡಳಿತ ಮಂಡಳಿಯ ವಾದವೇನು?
ಮಸೀದಿ ಆಡಳಿತ ಮಂಡಳಿಯ ಪರವಾಗಿ ವಕೀಲ ಎಂ.ಪಿ ಶೆಣೈ ವಾದ ಮಂಡಿಸಿ ಜ್ಞಾನವಾಪಿ ಮಾದರಿಯಲ್ಲಿ ಮಳಲಿ ಮಸೀದಿಯಲ್ಲೂ ಸರ್ವೇ ಕಾರ್ಯ ನಡೆಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಮನವಿ ಮಾಡಿದ್ದರೆ, ಈ ಅರ್ಜಿಯನ್ನು ವಜಾಗೊಳಿಸಬೇಕು.

ಜೊತೆಗೆ ಮಳಲಿ ಮಸೀದಿ ಜಾಗ ವಕ್ಫ್‌ ಆಸ್ತಿಯಾಗಿ ನಮೂದಾಗಿರುವುದರಿಂದ ಇದರ ವಿಚಾರಣೆ ನಡೆಸಲು ಸಿವಿಲ್ ನ್ಯಾಯಾಲಯಕ್ಕೆ ಅಧಿಕಾರವಿಲ್ಲ. ಇದರ ಅಧಿಕಾರ ಇರುವುದು ವಕ್ಫ್‌ ಟ್ರಿಬ್ಯೂನಲ್ಸ್‌ಗೆ ಮಾತ್ರ ಎಂದು ವಾದಿಸಿದರು.
ಇದಕ್ಕೆ ಪೂರಕವಾಗಿ ವಕ್ಫ್‌ ಕಾಯ್ದೆಗಳ ಪ್ರಮುಖ ಪುಟಗಳನ್ನು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗಳ ಹಲವು ತೀರ್ಪುಗಳನ್ನೂ ಉಲ್ಲೇಖಿಸಿದ ಎ೦.ಪಿ. ಶೆಣೈ, ವಿಎಚ್‌ ಪಿ ಅರ್ಜಿಯನ್ನು ತಿರಸ್ಕರಿಸಿ ಮಸೀದಿ ನವೀಕರಣ ಕಾಮಗಾರಿಗೆ ಅನುವು ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ವಿಹಿಂಪ ಪರ ವಕೀಲ ಚಿದಾನಂದ ಕೆದಿಲಾಯ ಅವರು ವಾದ ಮಂಡನೆಗೆ ಸಮಯವಕಾಶ ಕೇಳಿದ್ದಾರೆ. ಜೂ.9ಕ್ಕೆ ವಿಚಾರಣೆ ಮುಂದೂಡಲಾಗಿದೆ.
ಇದಕ್ಕೂ ಮೊದಲು ಅಂದರೆ ಮೇ.31 ಹಾಗೂ ಜೂ.1ರಂದು ನಡೆದ ಅರ್ಜಿ ವಿಚಾರಣೆ ವೇಳೆ ಎರಡೂ ಕಡೆಯ ವಕೀಲರು ವಾದ ಮಂಡಿಸಿದ್ದರು.
ಆಗ ವಾದ ಮಂಡಿಸಿದ ವಿಹೆಚ್‌ಪಿ ಪರ ವಕೀಲ, ಇಸ್ಲಾಂ ನಿಯಮಗಳ ಪ್ರಕಾರ ನಮಾಜ್‌ನ್ನು ಎಲ್ಲಿ ಬೇಕಾದರೂ ಮಾಡಬಹುದು. ನಿಗದಿತ ಜಾಗದಲ್ಲೇ ಮಾಡಬೇಕೆಂದಿಲ್ಲ. ಮಸೀದಿ ಜಾಗದಲ್ಲಿ ದೇವಾಲಯ ಮಾದರಿಗಳು ಕಂಡುಬಂದಿರುವುದರಿಂದ ವಿವಾದಿತ ಜಾಗದ ಸರ್ವೇ ಮಾಡಲು ಕೋರ್ಟ್ ಆದೇಶ ಮಾಡಬೇಕು ಎಂದು ವಾದ ಮಂಡಿಸಿದ್ದರು.

ಅದಕ್ಕೆ ಪ್ರತಿವಾದ ಮಂಡಿಸಿದ ಮಸೀದಿ ಆಡಳಿತ ಮಂಡಳಿ ಪರ ವಕೀಲರು, ಮಳಲಿ ಮಸೀದಿಗೆ ನೂರಾರು ವರ್ಷಗಳ ಇತಿಹಾಸವಿದೆ. ಇದೇ ಜಾಗದಲ್ಲಿ ದಫನ ಭೂಮಿ ಹಿಂದಿನಿಂದಲೂ ನಡೆದುಕೊಂಡು ಬಂದಿರುವುದಕ್ಕೆ ದಾಖಲೆಗಳಿವೆ. ಮೇಲಾಗಿ ಇದು ವಕ್ಫ್‌ ಆಸ್ತಿಯಾಗಿ ಸರ್ಕಾರಿ ದಾಖಲೆಗಳಲ್ಲೂ ಉಲ್ಲೇಖವಾಗಿದೆ.

ಪಂಚಾಯ್ತಿ ಅನುಮತಿ ಪಡೆದೇ ನವೀಕರಣ ಮಾಡಲು ತೊಡಗಿದ್ದಾರೆ. ಮಸೀದಿ ಇತಿಹಾಸಕ್ಕೆ ಪೂರಕ ದಾಖಲೆಗಳು ಇವೆ. ಆದರೆ ದೇವಾಲಯವಿತ್ತು ಎನ್ನುವುದಕ್ಕೆ ಸಾಕ್ಷ್ಯಗಳಿಲ್ಲ, ಹಾಗಾಗಿ ವಿಹಿಂಪದ ಸರ್ವೇ ಮನವಿ ತಿರಸ್ಕರಿಸಬೇಕು ಎಂದು ವಾದಿಸಿದ್ದರು.
ವಿವಾದವೇನು?
ಇದೇ ವರ್ಷದ ಏಪ್ರಿಲ್ 21ರಂದು ಮಳಲಿ ಮಸೀದಿ ನವೀಕರಣ ಹಿನ್ನೆಲೆಯಲ್ಲಿ ಕಟ್ಟಡದ ಕೆಲವು ಭಾಗವನ್ನು ಕೆಡವುತ್ತಿದ್ದಾಗ ದೇವಸ್ಥಾನ ಮಾದರಿಯ ಕೆಲವೊ೦ದು ವಸ್ತುಗಳು ಪತ್ತೆಯಾಗಿದ್ದರಿ೦ದ ಹಿ೦ದೂ ಸಂಘಟನೆಗಳು ಇದು ದೇವಸ್ಥಾನವೆಂದು ಪ್ರತಿಪಾದಿಸಿ ಕೋರ್ಟ್‌ನಲ್ಲಿ ದಾವೆ ಹೂಡಿದ್ದರು.

ಜೊತೆಗೆ ವಿಶ್ವ ಹಿಂದೂ ಪರಿಷತ್‌ ನೇತೃತ್ವದಲ್ಲಿ ಮಸೀದಿ ಪಕ್ಕದಲ್ಲಿರುವ ಮಳಲಿಯ ಭಜನಾ ಮಂದಿರದಲ್ಲಿ ಇತ್ತೀಚೆಗೆ ತಾಂಬೂಲ ಪ್ರಶ್ನೆ ಇರಿಸಲಾಗಿತ್ತು. ಈ ವೇಳೆ ದೈವ ಸಾನಿಧ್ಯ ಇರುವುದು ಕಂಡುಬಂದಿತ್ತು.

1 Comment

Leave a Reply

Your email address will not be published. Required fields are marked *

LATEST NEWS

SSLC ಫಲಿತಾಂಶ ಪ್ರಕಟಿಸಲು ದಿನಾಂಕ ನಿಗದಿ; ಯಾವಾಗ?

Published

on

ಬೆಂಗಳೂರು: 2023-24ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಪ್ರಕಟಕ್ಕೆ ದಿನಗಣನೆ ಶುರುವಾಗಿದೆ. ಕರ್ನಾಟಕ ಪರೀಕ್ಷಾ ಮಂಡಳಿ ಫಲಿತಾಂಶ ಪ್ರಕಟ ಮಾಡಲು ಸರ್ವ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ವಾರವೇ ರಾಜ್ಯದಲ್ಲಿ SSLC ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ.

2023-24ನೇ ಸಾಲಿನ SSLC ಪರೀಕ್ಷೆ-1 ಕಳೆದ ಮಾರ್ಚ್‌ 25 ರಿಂದ ಏಪ್ರಿಲ್ 6, 2024ರವರೆಗೆ ನಡೆದಿತ್ತು. ಪರೀಕ್ಷೆ-1 ಬರೆದಿರುವ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಫಲಿತಾಂಶಕ್ಕಾಗಿ ಕಾದು ಕುಳಿತಿದ್ದಾರೆ. ಕೊನೆಗೂ ಕಾಯುವಿಕೆಯ ಸಮಯ ಕೊನೆಯಾಗುತ್ತಿದೆ.

ಈ ಬಾರಿ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿರುವುದರಿಂದ SSLC ಪರೀಕ್ಷೆ ಫಲಿತಾಂಶ ಪ್ರಕಟವಾಗುವುದು ತಡವಾಗಿದೆ. SSLC ಮೌಲ್ಯಮಾಪನ ಈಗಾಗಲೇ ಸಂಪೂರ್ಣವಾಗಿದ್ದು, ಪರೀಕ್ಷಾ ಮಂಡಳಿ ಫಲಿತಾಂಶ ಪ್ರಕಟ ಮಾಡಲು ಸರ್ವ ಸಿದ್ಧತೆಯನ್ನು ಮಾಡಿಕೊಂಡಿದೆ.

ನಾಳೆ ಅಂದ್ರೆ ಮೇ 7ರಂದು ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಮತದಾನ ಮುಗಿದ ಎರಡು ದಿನದಲ್ಲಿ SSLC ಫಲಿತಾಂಶ ಪ್ರಕಟಿಸಲು ಪರೀಕ್ಷಾ ಮಂಡಳಿ ಮೂಲಗಳಿಂದ ಖಚಿತ ಮಾಹಿತಿ ಲಭ್ಯವಾಗಿದೆ. ಇದೇ ಮೇ 8 ಬುಧವಾರ ಇಲ್ಲವೇ ಮೇ 9ರ ಗುರುವಾರ SSLC ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ಮೇ 10 ಬಸವ ಜಯಂತಿ ಹಿನ್ನೆಲೆಯಲ್ಲಿ ಸರ್ಕಾರಿ ರಜೆ ಇದೆ. ಹೀಗಾಗಿ ಮೇ 9ರೊಳಗೆ SSLC ಫಲಿತಾಂಶ ಪ್ರಕಟ ಮಾಡಲು ಪರೀಕ್ಷಾ ಮಂಡಳಿ ಮೂಲಗಳಿಂದ ಖಚಿತ ಮಾಹಿತಿ ಸಿಕ್ಕಿದೆ.

Continue Reading

LATEST NEWS

Elvish Yadav Faces Money Laundering Probe: What’s the Case About?

Published

on

Lucknow: Popular YouTuber Siddharth Yadav, known as Elvish Yadav, is under investigation for alleged money laundering linked to using snake venom as a recreational drug at his parties. The Enforcement Directorate has filed a case under the Prevention of Money Laundering Act (PMLA), following an FIR and charge sheet from the Noida police regarding the snake venom case.

 

The probe aims to trace funds from the snake venom business and their potential use in organizing parties. Elvish Yadav and others involved will be questioned by the Enforcement Directorate, according to reports.

Elvish Yadav was arrested by Noida Police on March 17 in connection with the snake venom case but was later released on bail. He faces charges under various laws, including the Narcotic Drugs and Psychotropic Substances (NDPS) Act, Wildlife Protection Act, and the Indian Penal Code (IPC).

The case originated from a complaint by the NGO People for Animals (PFA) last November. Five people were arrested and released on bail after snake charmers were found with venomous snakes and vials of snake venom in a Noida banquet hall. Elvish Yadav was reportedly not present during the raid.youtuber

Continue Reading

DAKSHINA KANNADA

15 ಸಾವಿರ ಸಂಬಳ..! ಮನೆಯಲ್ಲಿ ಕಂತೆ ಕಂತೆ ನೋಟು..! ED ಅಧಿಕಾರಿಗಳೇ ಶಾಕ್..!

Published

on

ಮಂಗಳೂರು ( ಜಾರ್ಖಂಡ್‌ ): ಆತ ತಿಂಗಳಿಗೆ 15 ಸಾವಿರ ಸಂಬಳ ಪಡೆಯುವ ಒಬ್ಬ ಸಾಮಾನ್ಯ ನೌಕರ. ಆದ್ರೆ ಆತನ ಮನೆಗೆ ಇಡಿ ದಾಳಿ ಮಾಡಿ ಬರೋಬ್ಬರಿ 30 ಕೋಟಿ ಹಣವನ್ನು ಜಪ್ತಿ ಮಾಡಿದೆ. ಇದು ಜಾರ್ಖಂಡ್‌ನಲ್ಲಿ ನಡೆದ ಘಟನೆಯಾಗಿದ್ದು, ಹತ್ತು ಸಾವಿರ ಲಂಚ ಪ್ರಕರಣದ ಸಂಬಂಧ ತನಿಖೆ ನಡೆಸಿದ್ದ ಇಡಿ  ಸಾಮಾನ್ಯ ನೌಕರನ ಮನಗೆ ದಾಳಿ ಮಾಡಿತ್ತು. ಅಲ್ಲಿ ಅಡಗಿಸಿಟ್ಟಿದ್ದ ಹಣ ನೋಡಿ ಇಡಿ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಹಣ ಎಣಿಸಲು ಮೆಷಿನ್ ಹಾಗೂ ಹೆಚ್ಚುವರಿ ನೌಕರರನ್ನು ಮನೆಗೆ ಕರೆಸಿಕೊಂಡಿದ್ದಾರೆ.

ನೌಕರನ ಮನೆಗೆ ಲಂಚದ ಹಣ…!

ಜಾರ್ಖಂಡ್‌ ನ ಸಚಿವ ಅಲಂಗೀರ್ ಆಲಂ ಅವರ ಖಾಸಗಿ ಕಾರ್ಯದರ್ಶಿ ಮನೆ ಮೇಲೆ ರಾಂಚಿಯ ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಅಲಂಗೀರ್ ಆಲಂ ಅವರ ಸಚಿವಾಲಯದಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಅಲ್ಲಿನ ಲಂಚದ ಹಣ ನೌಕರನ ಮನೆಗೆ ಹೋಗುತ್ತದೆ ಅನ್ನೋ ಮಾಹಿತಿ ಸಿಕ್ಕಿತ್ತು. ಹೀಗಾಗಿ ಸಚಿವರ ಆಪ್ತ ಕಾರ್ಯದರ್ಶಿಯ ಅಡಿಯಲ್ಲಿ ಮಾಸಿಕ 15 ಸಾವಿರಕ್ಕೆ ಕೆಲಸ ಮಾಡುತ್ತಿದ್ದ ನೌಕರನ ಮನೆಗೆ ದಾಳಿ ಮಾಡಿದಾಗ ಇಷ್ಟೊಂದು ಪ್ರಮಾಣದ ಹಣ ಪತ್ತೆಯಾಗಿದೆ.

ವಿಡಿಯೋ ನೋಡಿ :

ಹತ್ತು ಸಾವಿರ ಲಂಚದ ಹಿಂದೆ ಬಿದ್ದಿದ್ದ ಇಡಿ..!

ಕಳೆದ ವರ್ಷ ಹತ್ತು ಸಾವಿರ ರೂಪಾಯಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಇಂಜೀನಿಯರ್ ಮನೆ ಮೇಲೆ ಇಡಿ ದಾಳಿ ನಡೆಸಿತ್ತು. ಈ ವೇಳೆ ಇಂಜೀನಿಯರ್ ಅವರ ಹೇಳಿಕೆಯನ್ನು ದಾಖಲಿಸಿದಾಗ ಲಂಚದ ಹಣ ಸಚಿವರಿಗೆ ತಲುಪಿಸಲಾಗುತ್ತದೆ ಎಂಬ ಸ್ಪೋಟಕ ಹೇಳಿಕೆ ನೀಡಿದ್ದರು. ಬಳಿಕ ಜಾರ್ಖಂಡ್‌ನ ಗ್ರಾಮೀಣ ಅಭಿವೃದ್ದಿ ಸಚಿವ ಅಲಂಗೀರ್ ಆಲಂ ಹಾಗೂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಹೆಸರು ಮುನ್ನಲೆಗೆ ಬಂದಿತ್ತು . ಹೀಗಾಗಿ ಸಂಜೀವ್‌ ಲಾಲ್ ಅವರ ಬಳಿ ನೌಕರನಾಗಿದ್ದ ವ್ಯಕ್ತಿಯ ಮನೆಗೆ ದಾಳಿ ಮಾಡಲಾಗಿದೆ.

ಇದನ್ನೂ ಓದಿ : ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು..!

ಜಾರ್ಖಂಡ್ ಕಾಂಗ್ರೆಸ್ ಸರ್ಕಾರದ ಸಚಿವ…!

ಅಲಂಗೀರ್ ಆಲಂ ಜಾರ್ಖಂಡ್‌ನ ಪಾಕುರ್ ಕ್ಷೇತ್ರದಿಂದ ನಾಲ್ಕು ಬಾರಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈಗ ಸರ್ಕಾರದಲ್ಲಿ ಸಂಸದೀಯ ವ್ಯವಹಾರ ಮತ್ತು ಗ್ರಾಮೀಣಾಭಿವೃದ್ದಿ ಸಚಿವರಾಗಿದ್ದಾರೆ. ಈ ಹಿಂದೆ 2006 ರಿಂದ 2009 ರ ವರೆಗೆ ಅವರು ಸ್ಪೀಕರ್ ಕೂಡಾ ಆಗಿದ್ದರು. 2023ರ ಡಿಸೆಂಬರ್‌ ತಿಂಗಳಲ್ಲಿ ಜಾರ್ಖಂಡ್‌ನ ಕಾಂಗ್ರೆಸ್‌ ರಾಜ್ಯಸಭಾ ಸದಸ್ಯ ಉದ್ಯಮಿ ಧೀರಜ್ ಸಾಹು ಮನೆ ಮೇಲೂ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ಮನೆಯಲ್ಲಿ 350 ಕೋಟಿಯಷ್ಟು ಹಣ ಪತ್ತೆಯಾಗಿತ್ತು. ಈ ವೇಳೆ ಧೀರಜ್ ಸಾಹು ಅದು ಮದ್ಯದ ವ್ಯವಹಾರದ ಹಣವಾಗಿದ್ದು, ಅದಕ್ಕೂ ಪಕ್ಷಕ್ಕೂ ಸಂಬಂಧ ಇಲ್ಲ ಎಂದು ಹೇಳಿದ್ದರು.

Continue Reading

LATEST NEWS

Trending