Connect with us

DAKSHINA KANNADA

Malali Masjid Row : ಮಳಲಿ ಮಸೀದಿ ವಿವಾದದ ವಿಹೆಚ್​ಪಿ ಅರ್ಜಿ ವಜಾಕ್ಕೆ ಸಲ್ಲಿಸಿದ ಅರ್ಜಿ ವಿಚಾರಣೆ ಜೂ. 6 ಕ್ಕೆ ಮುಂದೂಡಿದ ನ್ಯಾಯಾಲಯ

Published

on

ಮಳಲಿಯ ಮಸೀದಿಯ ನವೀಕರಣ ಕಾಮಗಾರಿ ವೇಳೆ ದೇಗುಲ ಶೈಲಿ ಕಟ್ಟಡ ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸುವಂತೆ ಮಸೀದಿ ಆಡಳಿತ ಸಮಿತಿ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಜೂನ್ 6 ಕ್ಕೆ ಮುಂದೂಡಿದೆ.

ಮಂಗಳೂರು :  ಮಳಲಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡುವಂತೆ ಕೋರಿ ಮಸೀದಿಯ ಪರವಾಗಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಗೊಂಡ ಮಂಗಳೂರಿನ ಮೂರನೇ ಹೆಚ್ಚುವರಿ ನ್ಯಾಯಾಲಯವು ತೀರ್ಪನ್ನು ಜೂ.6ಕ್ಕೆ ಮುಂದೂಡಿದೆ.

ಇಂದು ಮಂಗಳೂರಿನ ಮೂರನೇ ಹೆಚ್ಚುವರಿ ನ್ಯಾಯಾಲಯದಲ್ಲಿ ವಾದ-ಪ್ರತಿವಾದ ನಡೆಸಿದ ನ್ಯಾಯವಾದಿಗಳು ಮಂಗಳವಾರ ನಡೆಸಿದ್ದ ವಾದಗಳಿಗೆ ಬದ್ಧರಾಗಿ ನ್ಯಾಯಾಲಯದ ಗಮನ ಸೆಳೆಯಲು ಮುಂದಾದರು.

ಮಸೀದಿಯ ಪರವಾಗಿ ವಾದಿಸಿದ ವಕೀಲರು ಎರಡು ಅರ್ಜಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಮಸೀದಿಯ ಜಮೀನನ್ನು ಈಗಾಗಲೇ ವಕ್ಫ್ ಬೋರ್ಡಿಗೆ ಬಿಟ್ಟು ಕೊಟ್ಟಿರುತ್ತದೆ. ಹೀಗಾಗಿ‌ ಈ ಪ್ರಕರಣವು ಸಿವಿಲ್ ನ್ಯಾಯಾಲಯದ ಪರಿಧಿಗೆ ಬರುವುದಿಲ್ಲ.

ಇದು ವಕ್ಫ್ ನ್ಯಾಯಾಲಯದ ಅಧೀನಕ್ಕೆ ಬರುತ್ತದೆ. ಆದ್ದರಿಂದ ಈ ಪ್ರಕರಣವನ್ನು ಸಿವಿಲ್ ನ್ಯಾಯಾಲಯದಲ್ಲಿ ನಡೆಸಲು ಸಾಧ್ಯವಿಲ್ಲ. ಹೀಗಿರುವಾಗ ವಿಶ್ವ ಹಿಂದೂ ಪರಿಷತ್ ಮಾಡಿರುವ ಮನವಿ ನ್ಯಾಯಾಲಯದಲ್ಲಿ ಸ್ವೀಕಾರಾರ್ಹವಲ್ಲ.

ಅಲ್ಲದೆ 1991ರ ಪ್ರಕಾರ ಮಸೀದಿಯನ್ನು ಯಥಾಸ್ಥಿತಿಯಲ್ಲಿ ಕಾಯ್ದಿರಿಸಿಕೊಂಡು ಮಸೀದಿಯ ಪುನರ್ ನಿರ್ಮಾಣ ಕಾಮಗಾರಿಗೆ ಅನುವು ಮಾಡಿಕೊಡ ಬೇಕೆಂದು ಮಸೀದಿ ಪರ ವಕೀಲರು ನ್ಯಾಯಾಲಯಕ್ಕೆ ಮನವಿ‌ ಮಾಡಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ  ವಿಹೆಚ್‌ಪಿ ಪರ ವಕೀಲರಾದ ಚಿದಾನಂದ ಕೆದಿಲಾಯ, ಮಸೀದಿಯ ಕಟ್ಟಡ ಪುರಾತನವಾಗಿದ್ದು, ಈ ಬಗ್ಗೆ ನ್ಯಾಯಾಲಯವು ವಿಶೇಷ ಕಮಿಷನ್ ನೇಮಿಸಿ ಉತ್ಖನನ ಮಾಡಿ ಸತ್ಯಾಸತ್ಯತೆ ಗಳನ್ನು ತಿಳಿಯಬೇಕೆಂದು ನ್ಯಾಯಾಲಯಕ್ಕೆ ಮನವಿ ಮಾಡಿದರು.

ಬಳಿಕ ವಾದ ಮಂಡಿಸಿದ ಮಸೀದಿಯ ಪರ ವಕೀಲರು, ಪ್ರಕರಣವು ವಕ್ಫ್ ನ್ಯಾಯಾಲಯಕ್ಕೆ ಸಂಬಂಧಪಟ್ಟದ್ದು ಅಥವಾ ಸಿವಿಲ್‌‌ ನ್ಯಾಯಾಲಯದ ಪರಿಧಿಗೆ ಬರುತ್ತದೆಯೋ ಇಲ್ಲವೋ? ಎಂಬ ಬಗ್ಗೆ ಪ್ರಥಮವಾಗಿ ನ್ಯಾಯಾಲಯ ತೀರ್ಪು ನೀಡಬೇಕು ಎಂದು ಮನವಿ ಮಾಡಿದರು.

ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿ ಪ್ರಥಮ‌ ಪ್ರಾಶಸ್ತ್ಯದಲ್ಲಿ ವಿವಾದಿತ ಸ್ಥಳವನ್ನು ನ್ಯಾಯಾಲಯದ ಕಮಿಷನ್ ಮೂಲಕ ಸಂಪೂರ್ಣ ಪರಿಶೀಲನೆಗೆ ಒಳಪಡಿಸಬೇಕೆಂದು ನ್ಯಾಯಾಧೀಶರಿಗೆ ನಿವೇದನೆ ಮಾಡಿಕೊಂಡರು.

2 ಕಡೆಯ ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು ಪ್ರಕರಣವು ಸಿವಿಲ್ ನ್ಯಾಯಪೀಠದ ಪರಿಧಿಗೆ ಬರುತ್ತದೆಯೋ, ವಕ್ಫ್ ನ್ಯಾಯಾಲಯಕ್ಕೆ ಅಥವಾ ವಿಶ್ವ ಹಿಂದೂ ಪರಿಷತ್ ಅರ್ಜಿ ಪ್ರಥಮ ಪ್ರಾಶಸ್ತ್ಯದಲ್ಲಿ ಪುರಸ್ಕರಿಸಬೇಕೋ ಎಂಬುದರ ಕುರಿತು ಜೂನ್ 6 ರಂದು ತೀರ್ಪು ನೀಡಲಾಗುವುದು ಎಂದು ತಿಳಿಸಿತು.

DAKSHINA KANNADA

Sullia: ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿ ಶವವಾಗಿ ಪತ್ತೆ..!

Published

on

ಸುಳ್ಯ: ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂದು ಗುರುತಿಸಲಾಗಿದೆ.

ಸುಳ್ಯದಲ್ಲಿರುವ ಆರಂಬೂರು ಸೇತುವೆ ಬಳಿಯ ಪಯಸ್ವಿನಿ ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿಯು ಕಾಣೆಯಾಗಿದ್ದಾರೆ. ಬಳಿಕ ಅವರ ಹುಡುಕಾಟ ನಡೆಸಲಾಗಿದೆ. ಆದರೆ ಎಷ್ಟು ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಆ ಕಾರಣದಿಂದ ಸುಳ್ಯದ ಪೈಚಾರ್ ನ ಮುಳುಗು ತಜ್ಞರ ತಂಡವು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮೇಳಕ್ಕೆತ್ತುವಲ್ಲಿ ಯಶಸ್ವಿಯಾಗಿದೆ. ಸುಳ್ಯ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ

Continue Reading

DAKSHINA KANNADA

Sullia: ಮದ್ಯ ಸೇವಿಸಿ ಅಡ್ಡಾದಿಡ್ಡಿ ವಾಹನ ಚಲಾವಣೆ- ಎಪಿಎಂಸಿ ಕಾರ್ಯದರ್ಶಿ ಅಮಾನತು

Published

on

ಸುಳ್ಯ: ಮದ್ಯಪಾನ ಮಾಡಿ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಸರಕಾರಿ ವಾಹನ ಚಲಾಯಿಸಿದ ಪ್ರಕರಣದ ಆರೋಪಿ ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್‌ ಕುಮಾರ್‌ನನ್ನು ಅಮಾನತುಗೊಳಿಸಿ ಇಲಾಖೆ ಆದೇಶ ಹೊರಡಿಸಿದೆ.

ನವೀನ್‌ ಕುಮಾರ್ ಮಂಗಳವಾರ ರಾತ್ರಿ ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ಇಲಾಖೆಯ ನಾಮಫ‌ಲಕವಿರುವ ವಾಹನವನ್ನು ಅಪಾಯಕಾರಿಯಾಗಿ ಚಲಾಯಿಸಿದ್ದನೆಂದು ಆರೋಪಿಸಲಾಗಿದೆ. ಅಡ್ಡಾದಿಡ್ಡಿಯಾಗಿ ವಾಹನ ಚಲಾಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದ್ದರು. ಈ ಸಂದರ್ಭ ತಾನು ಸುಳ್ಯ ಎಪಿಎಂಸಿ ಕಾರ್ಯದರ್ಶಿ, ನನ್ನದು ತಪ್ಪಾಯಿತು ಎಂದು ಕ್ಷಮೆ ಯಾಚಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಎಪಿಎಂಸಿ ಕಾರ್ಯದರ್ಶಿಯವರನ್ನು ಅಮಾನತುಗೊಳಿಸಿ ಆದೇಶ ಮಾಡಲಾಗಿದೆ. ಬೆಳ್ತಂಗಡಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಅವರಿಗೆ ಸುಳ್ಯ ಎಪಿಎಂಸಿ ಪ್ರಭಾರ ವಹಿಸಲಾಗಿದೆ.

 

Continue Reading

DAKSHINA KANNADA

ಕಟೀಲು ಕ್ಷೇತ್ರಕ್ಕೆ ಮಾಜಿ ಸಚಿವ, ಶಾಸಕ ಶ್ರೀರಾಮುಲು ಭೇಟಿ

Published

on

ಕಿನ್ನಿಗೋಳಿ: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಮಾಜಿ ಸಚಿವ, ಶಾಸಕ ಶ್ರೀರಾಮುಲು ಭೇಟಿ ನೀಡಿದರು.

ದೇವಳದ ವತಿಯಿಂದ ಶ್ರೀ ರಾಮುಲು ಅವರನ್ನು ಗೌರವಿಸಲಾಯಿತು.

ಈ ಸಂದರ್ಭ ವೆಂಕಟರಮಣ ಆಸ್ರಣ್ಣ, ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರುಗುತ್ತು ಉಪಸ್ಥಿತರಿದ್ದರು.

ಕ್ಷೇತ್ರದಲ್ಲಿ ಅವರು ಅನ್ನಪ್ರಸಾದವನ್ನು ಸ್ವೀಕರಿಸಿ ಸರಳತೆ ಮೆರೆದರು. ಬಳಿಕ ಕ್ಷೇತ್ರದ ಕುರಿತಂತೆ ಹೆಚ್ಚಿನ ಮಾಹಿತಿ ಪಡೆದುಕೊಂಡರು.

Continue Reading

LATEST NEWS

Trending