Connect with us

    FILM

    ಮಲಯಾಳಂ ನಟ ಬೈಜು ಸಂತೋಷ್ ಬಂಧನ; ಜಾಮೀನಿನ ಮೇಲೆ ಬಿಡುಗಡೆ

    Published

    on

    ಮಂಗಳೂರು/ತಿರುವನಂತಪುರ : ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿ ದ್ವಿಚಕ್ರ ವಾಹನಕ್ಕೆ ಡಿ*ಕ್ಕಿ ಹೊಡೆದ ಆರೋಪದ ಮೇಲೆ ಮಲಯಾಳಂ ಚಿತ್ರನಟ ಬೈಜು ಸಂತೋಷ್ ಅವರನ್ನು ಇಂದು(ಅ.14) ಮುಂಜಾನೆ ಪೊಲೀಸರು ಬಂಧಿಸಿದ್ದಾರೆ.

    ಮ್ಯೂಸಿಯಂ ಪೊಲೀಸ್ ಠಾಣೆ ವ್ಯಾಪ್ತಿಯ ಕೌಡಿಯಾರ್-ವೆಲ್ಲಯಂಬಲಂ ರಸ್ತೆಯಲ್ಲಿ ರಾತ್ರಿ 11.45ಕ್ಕೆ ಅಪಘಾತ ಸಂಭವಿಸಿದೆ. ಘಟನೆಯ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಬೈಜುವನ್ನು ವಶಕ್ಕೆ ಪಡೆದಿದ್ದಾರೆ.

    ಭಾರತೀಯ ನ್ಯಾಯ ಸಂಹಿತಾ (ಬಿಎನ್‌ ಎಸ್ ) (ಸಾರ್ವಜನಿಕ ಮಾರ್ಗದಲ್ಲಿ ದುಡುಕಿನ ಚಾಲನೆ) ಮತ್ತು 1988 ರ ಮೋಟಾರು ವಾಹನಗಳ ಕಾಯ್ದೆಯ ಸೆಕ್ಷನ್ 185 (ಮದ್ಯದ ಅಮಲಿನಲ್ಲಿ ಚಾಲನೆ) ಸೆಕ್ಷನ್ 281 ರ ಅಡಿಯಲ್ಲಿ ಅವರ ವಿರುದ್ಧ ಆರೋಪ ಹೊರಿಸಲಾಗಿದೆ.

    ಇದನ್ನೂ ಓದಿ : BBK11: ನಿದ್ದೆ ಕಣ್ಣಲ್ಲಿ ಎದ್ದ ಸ್ಪರ್ಧಿಗಳಿಗೆ ಶಾಕ್​ ಕೊಟ್ಟ ಬಿಗ್​ ಬಾಸ್​! ನಾನು ಈ ಮನೆಯಲ್ಲಿ ಇರಲ್ಲ ಎಂದಿದ್ದೇಕೆ?

    ಬಳಿಕ ಬೈಜು ಅವರನ್ನು ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದ್ದು, ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗಂಭೀ*ರ ಗಾಯಗಳಾಗದ ಸ್ಕೂಟರ್ ಪ್ರಯಾಣಿಕರು ಪೊಲೀಸರಿಗೆ ದೂರು ನೀಡಿಲ್ಲ ಎಂದು ವರದಿಯಾಗಿದೆ.

     

    BIG BOSS

    ಲಾಯರ್ ಜಗದೀಶ್ ಹೊರಗೆ, ಪತ್ನಿ ಒಳಗೆ: ಕಲರ್ಸ್ ಶೋನಲ್ಲಿ ಜಗದೀಶ್ ಪತ್ನಿ

    Published

    on

    ಬಿಗ್​ಬಾಸ್ ಕನ್ನಡ ಸೀಸನ್ 11 ಪ್ರಾರಂಭ ಆದಾಗಿನಿಂದಲೂ ವಕೀಲ ಜಗದೀಶ್ ಮನೆಯಲ್ಲಿ ಅಬ್ಬರ ಎಬ್ಬಿಸಿದ್ದಾರೆ. ಬೇಕೆಂದೇ ನಿಯಮಗಳನ್ನು ಮುರಿಯುವುದು, ಕೆಟ್ಟ ಭಾಷೆ ಬಳಸುವುದು, ಮಿತಿ ಮೀರಿ ಫ್ಲರ್ಟ್ ಮಾಡುವುದು, ಸಿಕ್ಕ-ಸಿಕ್ಕವರ ಮೇಲೆ, ಸಿಕ್ಕ-ಸಿಕ್ಕವರ ಬಳಿ ಛಾಡಿ ಹೇಳುವುದು, ಎಲ್ಲರ ಮೇಲೂ ಜಗಳ ಆಡುವುದು, ಬಿಗ್​ಬಾಸ್​ ಧಮ್ಕಿ ಹಾಕುವುದು ಇದೇ ಮಾಡುತ್ತಾ ಬಂದಿದ್ದಾರೆ. ಜಗದೀಶ್ ಅವರ ಈ ವರ್ತನೆಯಿಂದ ಬೇಸತ್ತು ಇಡೀ ಮನೆ ಮಂದಿ ಅವರ ವಿರುದ್ಧ ಒಂದಾಗಿದ್ದರು. ಜಗದೀಶ್ ಹಾಗೂ ಮನೆಯ ಸದಸ್ಯರೊಬ್ಬರ ನಡುವೆ ಜಟಾಪಟಿ ನಡೆದಿರುವ ಕಾರಣ ಇದೀಗ ಜಗದೀಶ್ ಅನ್ನು ಕಲರ್ಸ್ ವಾಹಿನಿಯ ಬಿಗ್​ಬಾಸ್ ಮನೆಯಿಂದ ಹೊರಗೆ ಹಾಕಲಾಗಿದೆ. ಆದರೆ ಅವರ ಪತ್ನಿ ಅದೇ ಕಲರ್ಸ್ ವಾಹಿನಿಯ ಶೋ ಒಂದರಲ್ಲಿ ಅತಿಥಿಯಾಗಿ ಕಾಣಿಸಿಕೊಂಡಿದ್ದಾರೆ.

    ಸವಿರುಚಿ ಕಾರ್ಯಕ್ರಮ ಕಲರ್ಸ್ ವಾಹಿನಿಯ ಜನಪ್ರಿಯ ಅಡುಗೆ ಕಾರ್ಯಕ್ರಮ. ಈ ಕಾರ್ಯಕ್ರಮಕ್ಕೆ ಲಾಯರ್ ಜಗದೀಶ್ ಅವರ ಪತ್ನಿ ಅತಿಥಿಯಾಗಿ ಆಗಮಿಸಿದ್ದಾರೆ. ಜಗದೀಶ್ ಪತ್ನಿ ಸೌಮ್ಯಾ ಜಗದೀಶ್ ಅವರು ಸವಿರುಚಿ ಕಾರ್ಯಕ್ರಮಕ್ಕೆ ಆಗಮಿಸಿದ್ದು, ರುಚಿ-ರುಚಿಯಾದ ಅಡುಗೆ ಮಾಡಿದ್ದಾರೆ. ಈ ಕಾರ್ಯಕ್ರಮದ ಪ್ರೋಮೋ ಅನ್ನು ಕಲರ್ಸ್ ವಾಹಿನಿ ಹಂಚಿಕೊಂಡಿದೆ. ವಿಶೇಷವೆಂದರೆ ಈ ಶೋ ಪ್ರಸಾರವಾಗುವ ವೇಳೆಗಾಗಲೆ ಜಗದೀಶ್, ಬಿಗ್​ಬಾಸ್ ಮನೆಯಿಂದ ಹೊರಗೆ ಬಂದಿದ್ದಾಗಿದೆ.

    ಶೋನಲ್ಲಿ ಸೌಮ್ಯಾ ಅವರು, ಸೋಯಾ ಚಂಕ್ಸ್ ಮಸಾಲಾ ಕರಿ ಅಡುಗೆ ಮಾಡಿ ತೋರಿಸಿದರು. ಕಾರ್ಯಕ್ರಮದಲ್ಲಿ ಜಗದೀಶ್ ಬಗ್ಗೆಯೂ ಮಾತನಾಡಿದ ಸೌಮ್ಯಾ ಅವರು, ಬಿಗ್​ಬಾಸ್​ ನಲ್ಲಿ ಹೇಗೆ ಅವರು ಇದ್ದಾರೆಯೋ ಹಾಗೆಯೇ ಮನೆಯಲ್ಲಿಯೂ ಜಗದೀಶ್ ಇರುತ್ತಾರೆ ಎಂದು ಹೇಳಿದ್ದರು. ‘ಜಗದೀಶ್ ಅವರ ವ್ಯಕ್ತಿತ್ವ, ವರ್ತನೆಯನ್ನು ಯಾರೂ ಊಹಿಸಲು ಸಾಧ್ಯ ಆಗುವುದಿಲ್ಲ. ಒಮ್ಮೆ ಇದ್ದಕ್ಕಿದ್ದಂತೆ ಜಗಳ ಆಡಿ ಬಿಡುತ್ತಾರೆ ಆ ನಂತರ ಅವರೇ ಬಂದು ಕ್ಷಮೆ ಕೇಳುತ್ತಾರೆ. ಅವರಿಗೆ, ಅವರು ಮಾಡಿದ ತಪ್ಪು ಬೇಗನೆ ಅರ್ಥ ಆಗುತ್ತದೆ’ ಎಂದು ಪತ್ನಿ ಸೌಮ್ಯಾ ಅಡುಗೆ ಶೋನಲ್ಲಿ ಹೇಳಿದ್ದಾರೆ.

    ಈಗ ಜಗದೀಶ್ ಬಿಗ್​ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಎಲಿಮಿನೇಟ್ ಅನ್ನುವುದಕ್ಕಿಂತಲೂ ಹೊರಗಟ್ಟಲ್ಪಟ್ಟಿದ್ದಾರೆ. ಮನೆಯ ಒಳಗಿದ್ದಾಗ ಬಿಗ್​ಬಾಸ್ ಅನ್ನು ಹಾಗೆ ಮಾಡ್ತೀನಿ, ಹೀಗೆ ಮಾಡ್ತೀನಿ ಎಂದೆಲ್ಲ ಸವಾಲು ಹಾಕಿದ್ದರು. ಈಗ ಜಗದೀಶ್ ಹೊರಗೆ ಬಂದ ಮೇಲೆ ಏನು ಮಾಡುತ್ತಾರೆ ಕಾದು ನೋಡಬೇಕಿದೆ.

    Continue Reading

    BIG BOSS

    ಬಿಗ್​​ ಬಾಸ್​ನಲ್ಲಿ ಹೊಡೆದಾಡಿಕೊಂಡ ಸ್ಪರ್ಧಿಗಳು! ಜಗದೀಶ್​ ಮತ್ತು ರಂಜಿತ್​ ಔಟ್​

    Published

    on

    ಬಿಗ್​ ಬಾಸ್​​ ಸೀಸನ್​ 11 ಕಾರ್ಯಕ್ರಮದಿಂದ ಲಾಯರ್​ ಜಗದೀಶ್​ ಮತ್ತು ರಂಜಿತ್​ ​ಹೊರಬಂದಿದ್ದಾರೆ. ಕಿಚ್ಚ ನಿರೂಪಣೆಯ ರಿಯಾಲಿಟಿ ಶೋದಲ್ಲಿ ಹೊಡೆದಾಡಿಕೊಂಡ ಹಿನ್ನೆಲೆ ಇಬ್ಬರನ್ನು ಬಿಗ್​ಬಾಸ್​ ಮನೆಯಿಂದ ಹೊರ ಕಳುಹಿಸಿದ್ದಾರೆ ಎನ್ನಲಾಗುತ್ತಿದೆ.

    ಬಿಗ್​ ಬಾಸ್​ ಕನ್ನಡ ಪ್ರಾರಂಭವಾಗಿ 3 ವಾರ ಕಳೆದಿದೆ. ಆದರೆ ಮನೆಯಲ್ಲಿ ಸ್ಪರ್ಧಿಗಳ ನಡುವೆ ಪ್ರಾರಂಭದಿಂದಲೂ ಮಾತಿನ ಚಕಮಕಿ ನಡೆಯುತ್ತಾ ಬಂದಿದೆ. ಅದರಲ್ಲೂ ಲಾಯರ್​ ಜಗದೀಶ್​ ಮತ್ತು ಮನೆಯ ಇತರೆ ಸ್ಪರ್ಧಿಗಳ ನಡುವೆ ಕೊಂಚ ವೈಮನಸ್ಸು ಬೆಳೆದಿತ್ತು. ಆದರೀಗ ಮಾತಿನ ಚಕಮಕಿ ಕೈ-ಕೈ ಮಿಲಾಯಿಸುವಷ್ಟರಮಟ್ಟಿಗೆ ಹೋಗಿದೆ.

    ಬಿಗ್​ ಬಾಸ್​ ಮನೆಯಲ್ಲಿ ಏನಾಯ್ತ?

    ನಿನ್ನೆ ಎಪಿಸೋಡ್​​ನಲ್ಲೂ ಕೂಡ ಸ್ಪರ್ಧಿಗಳ ನಡುವೆ ದೊಡ್ಡ ಜಗಳವಾಗಿತ್ತು. ಜಗದೀಶ್ ಮತ್ತು ಉಗ್ರಂ ಮಂಜು ನಡುವೆ ಜಗಳ ಏರ್ಪಟ್ಟಿತ್ತು. ಆ ಬಳಿಕ ರಂಜಿತ್ ಮತ್ತು ಜಗದೀಶ್ ನಡುವೆ ನೇರಾನೇರ ಮಾತುಕತೆ ನಡೆದು ಹೊಡೆದಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

    Continue Reading

    FILM

    ಸೈಬರ್ ಕ್ರೈಂ ರಾಷ್ಟ್ರೀಯ ರಾಯಭಾರಿಯಾಗಿ ರಶ್ಮಿಕಾ ಮಂದಣ್ಣ ನೇಮಕ

    Published

    on

    ಮಂಗಳೂರು/ ನವದೆಹಲಿ :  ದೇಶದಲ್ಲಿ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ. ಇದನ್ನು ನಿಗ್ರಹಿಸುವ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವಾಲಯ ಆರಂಭಿಸಿರುವ ಭಾರತದ ಸೈಬರ್ ಅಪರಾಧಗಳ ಸಮನ್ವಯ ಕೇಂದ್ರದ ರಾಷ್ಟ್ರೀಯ ಬ್ರಾಂಡ್ ಅಂಬಾಸಿಡರ್ ಆಗಿ ನಟಿ ರಶ್ಮಿಕಾ ಮಂದಣ್ಣ ಅವರನ್ನು ನೇಮಕ ಮಾಡಲಾಗಿದೆ.

    ನಮ್ಮನ್ನು ನಾವು ರಕ್ಷಿಸಿಕೊಳ್ಳಬೇಕು :

    ಈ ಬಗ್ಗೆ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.  ಕೆಲವು ವರ್ಷಗಳ ಹಿಂದೆ ನನ್ನ ಡೀಪ್ ಫೇಕ್ ವಿಡಿಯೋ ವೈರಲ್ ಆಗಿದ್ದು ಗೊತ್ತೇ ಇದೆ. ಅದು ಸೈಬರ್ ಕ್ರೈಂ. ಅದರ ನಂತರ ನಾನು ಸೈಬರ್ ಅಪರಾಧಗಳ ವಿರುದ್ಧ ಹೋರಾಡಬೇಕು ಎಂದು ಯೋಚಿಸಿದೆ. ಈ ಬಗ್ಗೆ ಎಲ್ಲರಿಗೂ ಅರಿವು ಮೂಡಿಸಬೇಕು ಎಂದುಕೊಂಡಿದ್ದೆ. ಆ ನಿಮಿತ್ತ ಕಾರ್ಯಯೋಜನೆ ರೂಪಿಸಿದ್ದೆ

    ಇದೇ ವೇಳೆ ನಾನು ಕೇಂದ್ರ ಸರ್ಕಾರದ ಜೊತೆಗೆ ಗೃಹ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ ಬ್ರಾಂಡ್ ಅಂಬಾಸಿಡರ್ ಆಗಿದ್ದೇನೆ ಎಂದು ಹೇಳಲು ನನಗೆ ಸಂತೋಷವಾಗಿದೆ. ಸೈಬರ್ ಕ್ರಿಮಿನಲ್‌ಗಳು ಎಲ್ಲರನ್ನೂ ಟಾರ್ಗೆಟ್ ಮಾಡುತ್ತಿದ್ದಾರೆ. ನಾವು ಎಚ್ಚರವಾಗಿರುವುದು ಮಾತ್ರವಲ್ಲದೆ ನಮ್ಮನ್ನು ನಾವು ರಕ್ಷಿಸಿಕೊಳ್ಳಬೇಕು ಮತ್ತು ಸೈಬರ್ ಅಪರಾಧಗಳ ವಿರುದ್ಧ ಕೆಲಸ ಮಾಡಬೇಕು. ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ ಬ್ರಾಂಡ್ ಅಂಬಾಸಿಡರ್ ಆಗಿ ನಾನು ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸುತ್ತೇನೆ. ಸೈಬರ್ ಅಪರಾಧಗಳಿಂದ ದೇಶವನ್ನು ರಕ್ಷಿಸಬೇಕು  ಎಂದು ಪೋಸ್ಟ್ ಮಾಡಿದ್ದಾರೆ.

    ಇದನ್ನೂ ಓದಿ : ‘ಮಾರ್ಟಿನ್’ ಚೆನ್ನಾಗಿಲ್ಲ ಎಂದ ಯೂಟ್ಯೂಬರ್​ಗೆ ಬೆದರಿಕೆ ಹಾಕಿದ ಧ್ರುವ ಫ್ಯಾನ್ಸ್

    ರಶ್ಮಿಕಾ ಮಂದಣ್ಣ ಡೀಪ್ ಫೇಕ್ ವೀಡಿಯೋ ಭಾರಿ ಸಂಚಲನ ಸೃಷ್ಠಿಸಿತ್ತು. ರಶ್ಮಿಕಾ ಮಾತ್ರವಲ್ಲದೆ, ಕಾಜೋಲ್, ಆಲಿಯಾ ಸೇರಿದಂತೆ ಕೆಲವರ ವಿಡಿಯೋಗಳು ವೈರಲ್​ ಆಗಿದವು. ಈ ಬಗ್ಗೆ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದರು.  ರಶ್ಮಿಕಾ ಇದರ ಬಗ್ಗೆ ಹೋರಾಟ ನಡೆಸುತ್ತಿದ್ದರು. ಇದೀಗ ಅವರನ್ನೇ ರಾಷ್ಟ್ರೀಯ ರಾಯಭಾರಿಯಾಗಿ ನೇಮಕ ಮಾಡಲಾಗಿದೆ.

    Continue Reading

    LATEST NEWS

    Trending