FILM
ಮಲಯಾಳಂ ನಟಿ ‘ಕನಕಲತಾ’ ಇನ್ನಿಲ್ಲ
ತಿರುವನಂತಪುರಂ/ಮಂಗಳೂರು: ಮಲಯಾಳಂ ನಟಿ ಕನಕಲತಾ(63 ವ) ತಿರುವನಂತಪುರಂ ಜಿಲ್ಲೆಯ ಮಲಯಿಂಕೀಝುನಲ್ಲಿರುವ ತಮ್ಮ ನಿವಾಸದಲ್ಲಿ ಎ.06ರಂದು ಅನಾರೋಗ್ಯದಿಂದಾಗಿ ನಿಧನರಾದರು. ಇವರು ಪಾರ್ಕಿನ್ಸನ್ ಮತ್ತು ಆಲ್ಝೈಮರ್ ಕಾಯಿಲೆಯಿಂದ ಬಳಲುತ್ತಿದ್ದರು.
300 ಚಲನಚಿತ್ರಗಳಲ್ಲಿ ನಟಿಸಿದ ಹೆಗ್ಗಳಿಕೆ:
ಕಳೆದ ವರ್ಷ ಅವರ ಸಹೋದರಿ ವಿಜಯಮ್ಮ ಅವರು ಕನಕಲತಾ ಅವರ ಅನಾರೋಗ್ಯವನ್ನು ಬಹಿರಂಗಪಡಿಸಿದ್ದರು. ಆಗಸ್ಟ್ 2022 ರಲ್ಲಿ, ವೈದ್ಯರು MRI ಸ್ಕ್ಯಾನ್ ಮೂಲಕ ಬುದ್ಧಿಮಾಂದ್ಯತೆಯನ್ನು ಪತ್ತೆಹಚ್ಚಿದ್ದರು. ರಂಗಭೂಮಿಯಲ್ಲಿ ಹಿನ್ನೆಲೆ ಹೊಂದಿರುವ ಕನಕಲತಾ ಸುಮಾರು 300 ಚಲನಚಿತ್ರಗಳು ಮತ್ತು ಹಲವಾರು ಟಿವಿ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. “ಒರು ಯಾತ್ರಾಮೊಳಿ,” “ಗುರು,” “ಕಿಲುಕಿಲ್ ಪಂಬರಂ,” “ಪಾರ್ವತಿ ಪರಿಣಯಂ,” “ತುಂಪೋಲಿ ಕಡಪ್ಪುರಂ,” “ಆದ್ಯತೆ ಕಣ್ಮಣಿ,” “ಎಫ್.ಐ.ಆರ್.,” “ಆಕಾಶಗಂಗಾ,” “ಅನಿಯತಿಪ್ರವು,” “ಅಂಚರಕಲ್ಯಾಣಂ,” “ದೋಸ್ತ್,” ಮಾಯಿಲ್ಪೀಲಿಕ್ಕಾವು,” ಮತ್ತು “ಮಂತ್ರಮೋತಿರಂ”, ಇವುಗಳು ಅವರ ಜನಪ್ರಿಯ ಚಲನಚಿತ್ರಗಳಾಗಿದೆ.
ಮುಂದೆ ಓದಿ..; ಹೆಣ್ಣು ಮಕ್ಕಳು ಕನಿಷ್ಠ 25 ದಾಟಿದ ಮೇಲೆ ಮದುವೆಯಾಗಿ; ಮಿಲನಾ ನಾಗರಾಜ್
“ಪೂಕ್ಕಳಂ” ಚಿತ್ರ ಅವರು ನಟಿಸಿರುವ ಕೊನೆಯ ಚಿತ್ರವಾಗಿದೆ. ಆದರೆ, ಆಕೆಯ ಆರೋಗ್ಯ ಹದಗೆಟ್ಟಿದ್ದರಿಂದ ಸಿನಿಮಾ ಮತ್ತು ಧಾರಾವಾಹಿಗಳೆರಡರಿಂದಲೂ ಹಿಂದೆ ಸರಿಯಬೇಕಾಯಿತು. “ಅಮ್ಮ” ಸಂಸ್ಥೆಯ ಆರ್ಥಿಕ ನೆರವು ಮತ್ತು ಚಲನಚಿತ್ರ ಅಕಾಡೆಮಿಯ ಬೆಂಬಲವು ಅವರ ವೈದ್ಯಕೀಯ ಚಿಕಿತ್ಸೆಗೆ ಸಹಕಾರ ನೀಡಿತ್ತು ಎನ್ನಲಾಗಿದೆ.
FILM
ದಾಂಪತ್ಯಕ್ಕೆ ಕಾಲಿಡಲಿದ್ದಾರಾ ‘ಪ್ರಭಾಸ್’..! ಈ ಪೋಸ್ಟ್ ಹಿಂದಿನ ಅಸಲಿಯತ್ತೇನು!?
ಟಾಲಿವುಡ್ ನ ಮೋಸ್ಟ್ ಬ್ಯಾಚುಲರ್ ಎಂದೇ ಹೆಸರಾಗಿರುವ ಪ್ರಭಾಸ್ ಸದಾ ತಮ್ಮ ಮದುವೆಯ ವಿಚಾರವಾಗಿಯೇ ಸುದ್ದಿಯಲ್ಲಿರುತ್ತಾರೆ. ಸೂಪರ್ ಸ್ಟಾರ್ ಪ್ರಭಾಸ್ರವರ ಹೆಸರಿನ ಜೊತೆ ಹಲವು ಸ್ಟಾರ್ ನಟಿಯರ ಹೆಸರುಗಳು ತುಣುಕು ಹಾಕುತ್ತಿತ್ತು. ಅದರಲ್ಲೂ ಪುತ್ತೂರಿನ ಬೆಡಗಿ ಅನುಷ್ಕಾ ಶೆಟ್ಟಿ ಯವರ ಹೆಸರು ಆಗಾಗ ಕೇಳಿಬರುತ್ತಿತ್ತು. ಇನ್ನು ಬಾಹುಬಲಿ ಸಿನೆಮಾದ ಬಳಿಕ ಇವರಿಬ್ಬರು ಪ್ರೀತಿಯಲ್ಲಿದ್ದಾರೆ, ಇನ್ನೇನು ದಾಂಪತ್ಯ ಜೀವನಕ್ಕೂ ಕಾಲಿಡಲಿದ್ದಾರೆ ಎಂದು ಹೇಳಲಾಗಿತ್ತು. ಈ ಮಧ್ಯೆ ಪ್ರಭಾಸ್ ಹಾಗೂ ಅನುಷ್ಕಾ ಅದೆಲ್ಲವನ್ನು ಅಲ್ಲಗಳೆದಿದ್ದಾರೆ.
ಇದೀಗ ಪ್ರಭಾಸ್ ಅವರ ಒಂದು ಪೋಸ್ಟ್ ಅಭಿಮಾನಿಗಳಲ್ಲಿ ಖುಷಿ ನೀಡಿದೆ. ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ‘ಡಾರ್ಲಿಂಗ್ಸ್!!.. ಕೊನೆಗೂ ನನ್ನ ಜೀವನದಲ್ಲಿ ಒಬ್ಬ ವಿಶೇಷ ವ್ಯಕ್ತಿ ಬರಲಿದ್ದಾರೆ.. ಸ್ವಲ್ಪ ಕಾಯಿರಿ” ಎಂದು ಬರೆದುಕೊಂಡು ಪೋಸ್ಟ್ ಮಾಡಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳು ಖುಷಿ ಜೊತೆ ಅನುಮಾನವನ್ನೂ ವ್ಯಕ್ತಪಡಿಸಿದ್ದಾರೆ. ಇನ್ನೂ ಈ ಪೋಸ್ಟ್ ನೋಡಿದ ಬಳಿಕ ಪ್ರಭಾಸ್ ಮದುವೆಗೆ ಸಜ್ಜಾಗಿದ್ದಾರಾ..!? ಎಂಬುದಾಗಿಯೂ ಕುತೂಹಲ ಮೂಡಿದೆ. ಇನ್ನೂ ಕೆಲವರು ಸಿನೆಮಾ ಪ್ರಚಾರಕ್ಕಾಗಿ ಈ ತಂತ್ರವನ್ನು ಬಳಸಿದ್ದಾರಾ ಎನ್ನುವುದು ಅನುಮಾನ ಮೂಡಿದೆ.
ದರ್ಶನ್ ‘ಡೆವಿಲ್’ಗೆ ಹೀರೋಯಿನ್ ಫಿಕ್ಸ್; ಡಿಬಾಸ್ ಗೆ ಜೊತೆಯಾದ್ರು ಕರಾವಳಿ ಬೆಡಗಿ!
ಸಿನೆಮಾ ಪ್ರಚಾರಕ್ಕಾಗಿ ಪೋಸ್ಟ್ ಹಾಕಿದ್ರಾ ಪ್ರಬಾಸ್..?
ಸಲಾರ್ ಸಿನೆಮಾ ಹಿಟ್ ಬಳಿಕ ಪ್ರಭಾಸ್ ಅಭಿನಯದ ‘ಕಲ್ಕಿ 2898 ಎಡಿ ‘ ಸಿನೆಮಾ ತೆರೆಗೆ ಬರಲು ಸಿದ್ಧವಾಗಿದೆ. ಇನ್ನೂ ಈ ಸಿನೆಮಾದಲ್ಲಿ ಘಟಾನುಘಟಿಗಳು ಬಣ್ಣ ಹಚ್ಚಿದ್ದಾರೆ. ಅಮಿತಾಬಚನ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್, ದಿಶಾ ಪಟಾನಿ ಮುಂತಾದವರು ನಟಿಸಿದ್ದಾರೆ. ಇದೇ ಸಿನೆಮಾದ ಪ್ರಚಾರಕ್ಕಾಗಿ ಮಾಡಿರುವ ತಂತ್ರ ಎಂದು ಹೇಳಲಾಗಿದೆ. ಇನ್ನು ಈ ಸಿನೆಮಾ ಪ್ರಚಾರಕ್ಕಾಗಿಯೇ ಹೊಸ ವಿನ್ಯಾಸದ ಕಾರೊಂದನ್ನು ತಯಾರು ಮಾಡಲಾಗಿದೆಯಂತೆ. ಹೀಗಾಗಿ ಪ್ರಭಾಸ್ ‘ ನನ್ನ ಜೀವನದಲ್ಲಿ ಹೊಸ ವ್ಯಕ್ತಿ ಆಗಮನ’ ಎಂದು ಬರೆದುಕೊಂಡಿರಬಹುದು ಎಂದು ಊಹಿಸಲಾಗಿದೆ.
ಅದೇನೆ ಇರಲಿ ಪ್ರಭಾಸ್ ಮದುವೆ ಆಗಲು ನಿರ್ಧಿರಿಸಿದ್ದಾರಾ..? ಅಥವಾ ಸಿನೆಮಾ ಪ್ರಚಾರಕ್ಕಾಗಿ ಹೀಗೆ ಬರೆದುಕೊಂಡಿದ್ದಾರಾ..? ಅನ್ನೋದರ ಅಸಲಿಯತ್ತು ಇನ್ನೆರೆಡು ದಿನಗಳಲ್ಲಿ ಕಾದು ನೋಡಬೇಕಿದೆ.
FILM
ದರ್ಶನ್ ‘ಡೆವಿಲ್’ಗೆ ಹೀರೋಯಿನ್ ಫಿಕ್ಸ್; ಡಿಬಾಸ್ ಗೆ ಜೊತೆಯಾದ್ರು ಕರಾವಳಿ ಬೆಡಗಿ!
ಬೆಂಗಳೂರು : ಚಾಲೆಂಜಿಂಗ್ ದರ್ಶನ್ ಸಿನಿಮಾಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಾರೆ. ಚಿತ್ರ ಬಿಡುಗಡೆಗೂ ಮುನ್ನ ಚಿತ್ರದ ಪ್ರತೀ ಅಪ್ಡೇಟ್ ಗಾಗಿ ತುದಿಗಾಲಲ್ಲಿ ನಿಂತಿರುತ್ತಾರೆ. ಹೊಸ ಚಿತ್ರ ಅನೌನ್ಸ್ ಆದಾಗಿನಿಂದ ಪ್ರತಿ ಸುದ್ದಿಗಾಗಿಯೂ ಅಭಿಮಾನಿಗಳು ಕುತೂಹಲದಿಂದ ನಿರೀಕ್ಷೆಯಲ್ಲಿರುತ್ತಾರೆ.
‘ಕಾಟೇರ’ ಚಿತ್ರದ ಯಶಸ್ಸಿನ ನಂತರ ದರ್ಶನ್ ‘ಡೆವಿಲ್’ ಚಿತ್ರವನ್ನು ಅನೌನ್ಸ್ ಮಾಡಿದ್ದರು. ಈಗಾಗಲೇ ಪೋಸ್ಟರ್, ಮೇಕಿಂಗ್ ವೀಡಿಯೋಗಳು ಸದ್ದು ಮಾಡುತ್ತಿವೆ. ಡಿ ಬಾಸ್ ಲುಕ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.
ಕರಾವಳಿ ಬೆಡಗಿ ನಾಯಕಿ :
ದರ್ಶನ್ ಜೊತೆ ನಾಯಕಿಯಾಗಿ ಯಾರು ನಟಿಸಲಿದ್ದಾರೆ ಎಂಬ ಕುತೂಹಲಕ್ಕೂ ಈಗ ತೆರೆ ಬಿದ್ದಿದೆ, ಕರಾವಳಿಯ ಬೆಡಗಿ ದರ್ಶನ್ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಹೌದು, ಕರಾವಳಿ ಮೂಲದ ರಜನಾ ರೈ ‘ಡೆವಿಲ್’ ಚಿತ್ರದ ನಾಯಕಿ. ಈ ಹಿಂದೆಯೂ ರಚನಾ ಡೆವಿಲ್ ಗೆ ನಾಯಕಿ ಆಗಲಿದ್ದಾರೆ ಎಂಬ ಗಾಳಿ ಸುದ್ದಿಯೊಂದು ಹರಿದಾಡುತ್ತಿತ್ತು. ಇದೀಗ ಅದು ದೃಢವಾಗಿದೆ. ಪೋಸ್ಟರ್ ಕೂಡ ಬಿಡುಗಡೆಯಾಗಿದೆ.
ಸಿನಿಮಾದ ನಿರ್ಮಾಣ ಸಂಸ್ಥೆಯಾದ ಜೈ ಮಾತಾ ಕಂಬೈನ್ಸ್ ತನ್ನ ಸೋಶಿಯಲ್ ಮೀಡಿಯಾ ಪುಟದಲ್ಲಿ ಪೋಸ್ಟರ್ ಹಂಚಿಕೊಂಡಿದ್ದು, ‘ವೆಲ್ಕಮ್ ಆನ್ ಬೋರ್ಡ್, ಶುದ್ಧ ಕೌಶಲ್ಯಕ್ಕಾಗಿ ಗುರುತಿಸಲಾಗಿದೆ. ರಚನಾ ರೈ ಸ್ವಾಗತ’ ಎಂದುಬರೆದುಕೊಂಡಿದೆ. ಪೋಸ್ಟರ್ ನಲ್ಲಿ ನೆಲದ ಪ್ರತಿಭೆಗೆ ಮನ್ನಣೆ ಎಂದು ಬರೆಯಲಾಗಿದೆ.
ಪುತ್ತೂರು ಮೂಲದ ರಚನಾ ಈಗಾಗಲೇ ತುಳು, ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ರೂಪೇಶ್ ಶೆಟ್ಟಿ ಜೊತೆ ತುಳು ಚಿತ್ರ ‘ಸರ್ಕಸ್’ನಲ್ಲಿ ನಾಯಕಿಯಾಗಿ ಮಿಂಚಿದ್ದಾರೆ. ಕನ್ನಡದಲ್ಲಿ ಧನ್ವೀರ್ ಗೌಡ ಜೊತೆ ‘ವಾಮನ’ದಲ್ಲೂ ನಟಿಸಿದ್ದಾರೆ. ಬ್ಯಾಡ್ಮಿಂಟನ್ ಪ್ಲೇಯರ್ ಆಗಿರುವ ರಚನಾ ಮಾಡೆಲ್ ಕ್ಷೇತ್ರದಲ್ಲೂ ಮಿಂಚಿದ್ದಾರೆ. ಡ್ಯಾನ್ಸರ್ ಕೂಡಾ ಹೌದು. ‘ಓ ಮೈ ಡಾಗ್’ ಎಂಬ ಪುಸ್ತಕವನ್ನೂ ಅವರು ಬರೆದಿದ್ದಾರೆ.
ಇದನ್ನೂ ಓದಿ : ನಟಿ ಪವಿತ್ರಾ ಜಯರಾಂ ಸಾ*ವಿನ ಬೆನ್ನಲ್ಲೇ ಆತ್ಮಹ*ತ್ಯೆಗೆ ಶರಣಾದ ಸಹನಟ ಚಂದು!
‘ತಾರಕ್’ ಬಳಿಕ ‘ಡೆವಿಲ್’ ಚಿತ್ರದ ಮೂಲಕ ಮತ್ತೆ ಪ್ರಕಾಶ್ ವೀರ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ಸಿನಿಮಾದ ಚಿತ್ರೀಕರಣ ಆರಂಭವಾಗಿದ್ದು, ದರ್ಶನ್ ಕೈಗೆ ಪೆಟ್ಟಾದ ಹಿನ್ನೆಲೆಯಲ್ಲಿ ಚಿತ್ರೀಕರಣ ಸ್ಥಗಿತವಾಗಿತ್ತು. ಸದ್ಯ ದರ್ಶನ್ ಗುಣಮುಖರಾಗಿದ್ದು, ಸದ್ಯದಲ್ಲೇ ಡೆವಿಲ್ ಶೂಟಿಂಗ್ನಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.
FILM
ನಟಿ ಪವಿತ್ರಾ ಜಯರಾಂ ಸಾ*ವಿನ ಬೆನ್ನಲ್ಲೇ ಆತ್ಮಹ*ತ್ಯೆಗೆ ಶರಣಾದ ಸಹನಟ ಚಂದು!
ಕಿರುತೆರೆಯ ಖ್ಯಾತ ನಟಿ ಪವಿತ್ರಾ ಜಯರಾಮ್ ಇತ್ತೀಚೆಗೆ ಹೈದರಾಬಾದ್ ಸಮೀಪ ಕಾರು ಅಪಘಾತದಲ್ಲಿ ಇಹಲೋಕ ತ್ಯಜಿಸಿದ್ದರು. ಈ ವೇಳೆ ಅವರ ಗೆಳೆಯ ಹಾಗೂ ತೆಲುಗು ನಟ ಚಂದು ಅವರಿಗೂ ಪೆಟ್ಟಾಗಿದೆ. ಗೆಳತಿಯನ್ನು ಕಳೆದುಕೊಂಡ ನೋವಿನಲ್ಲಿದ್ದ ಚಂದು ಆತ್ಮಹ*ತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.
ಚಂದು ಹಾಗೂ ಪವಿತ್ರಾ ಜಯರಾಂ ತೆಲುಗಿನ ‘ತ್ರಿನಯನಿ’ ಧಾರಾವಾಹಿಯಲ್ಲಿ ನಟಿಸುತ್ತಿದ್ದರು.
ಪವಿತ್ರಾ ಹಾಗೂ ಚಂದು ಇಬ್ಬರೂ ಸೋಶಿಯಲ್ ಮೀಡಿಯಾಗಳಲ್ಲಿ ಆ್ಯಕ್ಟಿವ್ ಆಗಿದ್ದರು. ಇಬ್ಬರು ಜೊತೆಯಾಗಿ ಹಾಡುಗಳಿಗೆ ಹೆಜ್ಜೆ ಹಾಕುತ್ತಿದ್ದರು. ಯಾವಾಗಲೂ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದರು. ದರ್ಶನ್ ಸಿನಿಮಾಗೆ ಪವಿತ್ರಾ ಅವರಿಗೆ ಆಫರ್ ಬಂದಿತ್ತು. ಹೀಗಾಗಿ ಇವರಿಬ್ಬರು ಜೊತೆಯಾಗಿ ಬೆಂಗಳೂರಿಗೆ ಬಂದಿದ್ದರು. ಹಿಂತಿರುಗುವಾಗ ಪ್ರಯಾಣಿಸುತ್ತಿರುವ ಕಾರು ಅಪಘಾತವಾಗಿತ್ತು. ಈ ವೇಳೆ ನಟಿ ಪವಿತ್ರಾ ಜಯರಾಂ ಸಾ*ವನ್ನಪ್ಪಿದ್ದರು. ಚಂದು ಗಾಯಗೊಂಡಿದ್ದರು.
ಇದನ್ನೂ ಓದಿ : ಬ್ಯಾಂಡೇಜ್ ಸುತ್ತಿಕೊಂಡೇ ಕೇನ್ಸ್ ರೆಡ್ ಕಾರ್ಪೆಟ್ ಮೇಲೆ ಕಾಣಿಸಿಕೊಂಡ ಐಶ್ವರ್ಯ ರೈ
ಪವಿತ್ರಾ ಸಾವಿಗೆ ತೀವ್ರ ನೊಂದಿದ್ದ ಚಂದು ಸೋಶಿಯಲ್ ಮೀಡಿಯಾದಲ್ಲಿ ಮಿಸ್ ಯೂ ಎಂದು ಪವಿತ್ರಾ ಜೊತೆಗಿನ ವೀಡಿಯೋ, ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದರು. ಇದೀಗ ಅವರು ಇಹಲೋಕ ತ್ಯಜಿಸಿದ್ದಾರೆ ಎಂದು ವರದಿಯಾಗಿದೆ.
- LATEST NEWS7 days ago
ಪ್ರೇಯಸಿಯ ಜೊತೆ ಗೋವಾ ಟೂರ್..! ಕ್ಷೌರಿಕನಿಗೆ ದುಬಾರಿಯಾದ ಟೂರ್..!
- DAKSHINA KANNADA7 days ago
ದೇವರಿಗೆ ಇಟ್ಟ ಹೂವುಗಳನ್ನು ಒಣಗಿದ ನಂತರ ಹೀಗೆ ಮಾಡಿ..!
- DAKSHINA KANNADA6 days ago
ಮುಲ್ಕಿ: ಚಿಪ್ಪು ಹೆಕ್ಕಲು ಹೋಗಿ ನೀರಲ್ಲಿ ಕಣ್ಮರೆಯಾದ ಯುವಕ.! ಪತ್ತೆಗೆ ಶೋಧ
- DAKSHINA KANNADA7 days ago
ಎಸ್ ಎಸ್ ಎಲ್ ಸಿ ಫಲಿತಾಂಶ: ಜಿಯಾ ಸ್ವೀಡಲ್ ಲಸ್ರಡೊಗೆ 599 ಅಂಕ
Pingback: ಮತ್ತೆ ಡೀಫ್ ಫೇಕ್ ಗೆ ಬಲಿಯಾದ ಆಲಿಯಾ ಭಟ್; ನಟಿಯ ವೀಡಿಯೋ ನೋಡಿ ಫ್ಯಾನ್ಸ್ ಶಾಕ್! - NAMMAKUDLA NEWS - ನಮ್ಮಕುಡ್ಲ ನ್ಯೂಸ್