Connect with us

STATE

ಇಪ್ಪತ್ನಾಲ್ಕು ಕರುಗಳಿಗೆ ಜನ್ಮ ನೀಡಿದ ಕಾಮಧೇನು: ಮಲೆನಾಡು ಗಿಡ್ಡ ತಳಿಯ ‘ನಾಗಿ’ ಇನ್ನಿಲ್ಲ

Published

on

ಶಿವಮೊಗ್ಗ: ಹಸುಗಳಲ್ಲಿ ಗರಿಷ್ಠ ಭಾರತೀಯ ತಳಿಗಳು 22 ವರ್ಷಗಳ ಕಾಲ ಬದುಕುತ್ತವೆ. ಆದರೆ, ಸುಬ್ರಾವ್ ಅವರ ‘ನಾಗಿ’ ಎಂಬ ಹಸು 32 ವರ್ಷ ಬದುಕಿದ್ದು ಭಾನುವಾರ ಸಾವನ್ನಪ್ಪಿದೆ. ತನ್ನ ಜೀವಿತಾವಧಿಯಲ್ಲಿ 24 ಕರುಗಳಿಗೆ ಜನ್ಮ ನೀಡಿದೆ.

ಮಲೆನಾಡು ಗಿಡ್ಡ ತಳಿಯ ಹಳ್ಳಿಕಾರು ಹಸು ಹೆಚ್ಚು ಅಂದರೆ 22 ವರ್ಷಗಳ ಕಾಲ ಬದುಕಬಹುದು.

ಆದರೆ, ಸಾಗರ ತಾಲೂಕು ಎಡಜಿಗಳೆಮನೆ ಗ್ರಾಮ ಪಂಚಾಯತ್​ ವ್ಯಾಪ್ತಿಯ ಆನೆಗೊಳಿ ಗ್ರಾಮದ ಗಿಡ್ಡ ತಳಿಯ ನಾಗಿ ಎಂಬ ಹೆಸರಿನ ಹಸುವೊಂದು ಪಶು ವೈದ್ಯಕೀಯ ಲೋಕಕ್ಕೆ ಅಚ್ಚರಿ ಎಂಬಂತೆ 32 ವರ್ಷದ ಸುದೀರ್ಘ ಜೀವನ ಮುಗಿಸಿ ಕೊನೆಯುಸಿರೆಳೆದಿದೆ.

ಮಲೆನಾಡು ಗಿಡ್ಡ ಅಂದರೆ, ಅವು ಮನೆಯಲ್ಲಿ ಮೇಯುವುದೇ ಇಲ್ಲ. ಇವು ಹೆಚ್ಚಾಗಿ ಗುಡ್ಡ ಏರಿ, ಹಳ್ಳದಾಟಿ ಮೇಯುವಂತಹ ನಾಟಿ ಹಸುಗಳು.

ಈ ಗೋವು ಎಲ್ಲೂ ಬೇಲಿ ಹಾರದೆ, ಅತ್ಯಂತ ಸೌಮ್ಯ ಸ್ವಭಾವದಿಂದ ಜೀವಿಸಿದೆ. ಅಲ್ಲದೆ, ಒಂದು ದಿನಕ್ಕೆ ಮೂರುವರೆ ಲೀಟರ್ ಹಾಲು ನೀಡುತ್ತಿತ್ತು.

ನಾಗಿ ಕಳೆದ ತಿಂಗಳು ಕೊಟ್ಟಿಗೆಯಲ್ಲಿ ಜಾರಿ ಬಿದ್ದು ಕಾಲು ಮುರಿದುಕೊಂಡಿತ್ತು. ಈ ವೇಳೆ ಅದಕ್ಕೆ ಚಿಕಿತ್ಸೆ ನೀಡಲಾಗಿತ್ತು.

ಅದರೂ ಕೂಡ ಕಳೆದ ಕೆಲ ದಿನಗಳ ಕಾಲ ಮೇಯುವುದನ್ನು ಬಿಟ್ಟಿತ್ತು. ಭಾನುವಾರ ನಾಗಿ ತನ್ನ ಬದುಕಿನ ಪಯಣ ಮುಗಿಸಿದ್ದಾಳೆ.

ಅಂದಹಾಗೆ ನಾಗಿ ಸೇರಿದಂತೆ ತಮ್ಮ ಮನೆಯ ಎಲ್ಲಾ ಹಸುಗಳ ಬಗ್ಗೆ ಸುಬ್ರಾವ್ ಅವರು ದಾಖಲಾತಿಯನ್ನಿಟ್ಟು‌ಕೊಂಡಿದ್ದಾರೆ.

ಇಂತಹ ಅಪರೂಪದ ತಳಿಗಳ ನ್ಯಾಷನಲ್ ಡೈರಿ ಆಫ್ ಇಂಡಿಯಾದ ಡಾ. ರಮೇಶ್ ಅವರು ನಾಗಿ ತಳಿಯ ಬಗ್ಗೆ ಹಾಗೂ ನಾಗಿಯ ಜೀನ್ಸ್ ಬಗ್ಗೆ ಸಂಶೋಧನೆ ನಡೆಸಿದ್ದಾರೆ.

FILM

ಹೊಸ ಅವತಾರದಲ್ಲಿ ZEE ಕನ್ನಡ ‘ಕಾಮಿಡಿ ಕಿಲಾಡಿಗಳು’… ಸ್ಟಾರ್ ನಿರೂಪಕರು ಈಗ ಜಡ್ಜಸ್? ಏನಿದು ಟ್ವಿಸ್ಟ್?

Published

on

ಬೆಂಗಳೂರು: ಜೀ ಕನ್ನಡ ವಾಹಿನಿ ವಿಭಿನ್ನ ರೀತಿಯ ಕಥೆಗಳನ್ನೊಳಗೊಂಡ ಧಾರವಾಹಿಗಳ ಜೊತೆಗೆ ರಿಯಾಲಿಟಿ ಶೋಗಳೂ ಜನರ ಮನಸ್ಸು ಗೆದ್ದಿದೆ. ಜೀ ಕನ್ನಡ ವಾಹಿನಿಯ ಅಚ್ಚು ಮೆಚ್ಚಿನ ರಿಯಾಲಿಟಿ ಶೋ ಗಳಲ್ಲಿ ಜನರನ್ನು ನಕ್ಕು ನಗಿಸುವ ರಿಯಾಲಿಟಿ ಶೋ ಅಂದ್ರೆ ಅದು ಕಾಮಿಡಿ ಕಿಲಾಡಿಗಳು… ಹೌದು, ನಗುವಿನ ಅಲೆಯಲ್ಲಿ ತೇಲಿಸಿ ಮನೆಯವರೆಲ್ಲರೂ ಒಟ್ಟಾಗಿ ಕೂತು ನೋಡುವಂತಹ ಶೋ ‘ಕಾಮಿಡಿ ಕಿಲಾಡಿಗಳು’.

zee

ಮಾಸ್ಟರ್ ಆನಂದ್ ನಿರೂಪಣೆಯಲ್ಲಿ ಮೂಡಿ ಬರುತ್ತಿದ್ದ ಕಾರ್ಯಕ್ರಮವನ್ನು  ‘ಸೈಡ್‌ಗಿಡ್ರಿ ನಿಮ್‌ ಟೆನ್ಷನ್‌ಗಳು, ಮತ್ತೆ ಬಂದಿದ್ದಾರೆ ಕಾಮಿಡಿ ಕಿಲಾಡಿಗಳು’ ಎಂದು ಶೋ ಆರಂಭ ಮಾಡ್ತಾ ಇದ್ದು ಕರ್ನಾಟಕವನ್ನೇ ನಗುವಿನ ಕಡಲಲ್ಲಿ ತೇಲಿಸುವುದಿತ್ತು. ಇದೀಗ ಸೀಸನ್‌ 5 ಪ್ರೇಕ್ಷಕರ ಮುಂದೆ ಬರುತ್ತಿದೆ. ಈಗ ಜೀ ವಾಹಿನಿ ʻಕಾಮಿಡಿ ಕಿಲಾಡಿಗಳು ಪ್ರೀಮಿಯರ್‌ ಲೀಗ್‌ʼಮೂಲಕ ನಿಮ್ಮನ್ನು ಮನರಂಜಿಸಲು ಸಿದ್ಧವಾಗಿದೆ.

ಮುಂದೆ ಓದಿ..; “ನಿತ್ಯಾಮೆನನ್” ಚಿತ್ರರಂಗದಿಂದ ‘ಬ್ಯಾನ್’ ಆಗಲು ಕಾರಣವೇನು ಗೊತ್ತಾ? ಈ ಬಗ್ಗೆ ನಿತ್ಯಾ ಹೇಳಿದ್ದೇನು?

ಪ್ರೀಮಿಯರ್ ಲೀಗ್‌ನಲ್ಲಿ ಇರಲಿದ್ದಾರೆ 5 ಜಡ್ಜಸ್..!

ಈ ಕಾಮಿಡಿ ಪ್ರೀಮಿಯರ್‌ ಲೀಗ್‌ನಲ್ಲಿ ಈ ಬಾರಿ ಐವರು ನಿರೂಪಕರು ಇರಲಿದ್ದಾರೆ. ಸ್ಟೇಜ್‌ನಲ್ಲಿ ಕಂಟೆಂಸ್ಟೆಂಟ್‌ಗಳ ಕುರಿತು ಜಡ್ಜಸ್‌ ಗಳಲ್ಲಿ ಕಮೆಂಟ್ಸ್ ಕೆಳ್ತಾ ಇದ್ದ ನಿರೂಪಕರು ಈಗ ತಾವೇ ಜಡ್ಜ್‌ಮೆಂಟ್ ನೀಡಲು ಹೊರಟಿದ್ದಾರೆ. ಹೌದು, ನಿರೂಪಕರುಗಳಾದ ಅನುಶ್ರೀ, ಮಾಸ್ಟರ್‌ ಆನಂದ್‌, ಅಕುಲ್‌ ಬಾಲಾಜಿ, ಶ್ವೇತಾ ಚಂಗಪ್ಪ ಹಾಗೂ ಕುರಿ ಪ್ರತಾಪ್‌ ಅವರು ಈ ಕಾರ್ಯಕ್ರಮದಲ್ಲಿ ಹೊಸ ಜವಾಬ್ದಾರಿಯನ್ನು ನಿಭಾಯಿಸಲಿದ್ದಾರಂತೆ.

5 ತಂಡಗಳು.. 1 ಟ್ರೋಫಿಗಾಗಿ ಗುದ್ದಾಟ..!

zee

ಮೂಲಗಳ ಪ್ರಕಾರ ಈ ಬಾರಿಯ ಶೋನಲ್ಲಿ ಟಿ-20 ರೀತಿಯಲ್ಲಿ ಹೇಗೆ ತಂಡಗಳು, ಮಾಲೀಕರು , ಕ್ಯಾಪ್ಟನ್‌ಗಳು ಇರುತ್ತಾರೋ ಅದೇ ರೀತಿ ಇಲ್ಲಿಯೂ ಇರಲಿದೆ. ಕರ್ನಾಟಕದ 31 ಜಿಲ್ಲೆಗಳಿಂದ ಆಯ್ಕೆ ಮಾಡಿ ತಂದ ಕಲಾವಿದರನ್ನು ಮೆಗಾ ಆಕ್ಷನ್‌ ಮೂಲಕ ತಮ್ಮ ತಂಡಗಳಿಗೆ ಸೇರಿಸಿಕೊಳ್ಳಲಾಗುವುದು. 5 ತಂಡಗಳು 1 ಟ್ರೋಫಿಗಾಗಿ ಗುದ್ದಾಟ ನಡೆಸಲಿದೆ. ಈ ಶೋ ವಾರಾಂತ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ತಂಡಕ್ಕೆ ಬರೋಬ್ಬರಿ 1 ಲಕ್ಷ ಬಹುಮಾನ ಪಡೆಯುವ ಅವಕಾಶವಿದೆ. ಈ ʻಕಾಮಿಡಿ ಕಿಲಾಡಿಗಳು ಪ್ರೀಮಿಯರ್‌ ಲೀಗ್‌ʼಗೆ ಐವರು ನಿರೂಪಕರು ಹೊಸ ಜವಬ್ದಾರಿ ಹೊತ್ತಿದ್ದಾರೆ. ಹೀಗಾಗಿ ಹೊಸ ನಿರೂಪಕರನ್ನು ಈ ಶೋ ಮೂಲಕ ಕರೆ ತರಲಾಗುತ್ತಿದೆ ಎಂದು ವರದಿಯಾಗಿದೆ. ಆ ನಿರೂಪಕರು ಯಾರು ಎಂಬ ಕುತೂಹಲ ಎಲ್ಲರಲ್ಲೂ ಮೂಡಿತ್ತು ಇದಕ್ಕೆ ಇದೇ ಶನಿವಾರ ಹಾಗೂ ಭಾನುವಾರು ರಾತ್ರಿ 9ಗಂಟೆಗೆ ತೆರೆ ಬೀಳಲಿದೆ.

Continue Reading

DAKSHINA KANNADA

ನಮ್ಮ ಮಾತುಗಳಿಗೆ ಅಸ್ತು ಅನ್ನುವ ಅಶ್ವಿನಿ ದೇವತೆಗಳು – ಯಾರಿವರು?

Published

on

ಮಂಗಳೂರು : ಕೆಲವೊಮ್ಮೆ ನಾವು ಕೆಟ್ಟ ಮಾತುಗಳನ್ನಾಡುವಾಗ ನಮ್ಮ ಹಿರಿಯರು ತಡೆಯುತ್ತಾರೆ. ಬಿಡ್ತು ಅಂತಾ ಹೇಳು ಎಂದು ಹೇಳಿದ ಅನುಭವ ನಿಮಗೂ ಆಗಿರಬಹುದು. ನಮ್ಮ ಹಿರಿಯರು ಹೇಳುವ ಪ್ರಕಾರ ನಾವು ಕೆಟ್ಟ ಮಾತುಗಳನ್ನಾಡುವಾಗ ಅಶ್ವಿನಿ ದೇವತೆಗಳು ಅಸ್ತು ಎಂದರೆ ಅದು ಖಂಡಿತ ನಡೆಯುತ್ತದೆ ಎನ್ನುತ್ತಾರೆ. ಈ ಕಾರಣಕ್ಕಾಗಿ ಅವರು ನಾವು ಬೇಜಾರಲ್ಲಿ ಏನಾದರೂ ತಪ್ಪಿ ಮಾತನಾಡಿದಾಗ ಬಿಡ್ತು ಎಂದು ಹೇಳುವಂತೆ ನಮಗೆ ಹೇಳುತ್ತಿದ್ದರು. ಹಾಗಾದರೆ ಈ ಅಸ್ತು ದೇವತೆಗಳು ಯಾರು.? ಇವರು ಅಸ್ತು ಅಂದಾಕ್ಷಣ ನಾವು ಆಡಿದ ಮಾತುಗಳು ನಿಜವಾಗುತ್ತದೆಯೇ..?

ಅಶ್ವಿನಿ ದೇವತೆಗಳು ಯಾರು.?

ಅಶ್ವಿನಿ ದೇವತೆಯರು ಅಂದರೆ ಸೂರ್ಯಪುತ್ರರು. ಭಗವಾನ್‌ ಸೂರ್ಯ ದೇವನಿಗೆ ಮತ್ತು ಸಂಧ್ಯಾದೇವಿಗೆ ಜನಿಸಿದ ಅವಳಿ ಮಕ್ಕಳು. ಇವರು ಅದೃಷ್ಟದ ದೇವತೆಗಳಾಗಿದ್ದು, ಅಸ್ತು ಅಸ್ತು ಎಂದು ಸದಾ ಪಠಿಸುವ ದೇವರು. ಇವರನ್ನು ಅಶ್ವಿನಿ ಕುಮಾರರೆಂದು, ದೇವತೆಗಳ ವೈದ್ಯರೆಂದು ಪರಿಗಣಿಸಲಾಗುತ್ತದೆ. ಅಶ್ವಿನಿ ದೇವತೆಗಳ ರೂಪವೇ ವಿಚಿತ್ರ. ಯಾಕೆಂದರೆ ಈ ಅವಳಿ ಅಶ್ವಿನಿ ಕುಮಾರರದ್ದು ಮಾನವ ದೇಹವಾದರೆ, ಕುದುರೆಯ ಮುಖ. ಆದರೂ ನೋಡಲು ಅತ್ಯಂತ ಆಕರ್ಷಕರಾಗಿದ್ದರು.

ಅಶ್ವಿನಿ ದೇವತೆಗಳಿಗೆ ಕುದುರೆ ಮುಖ ಬರಲು ಕಾರಣವೇನು.?

ಒಮ್ಮೆ ಸೂರ್ಯ ದೇವನ ಪತ್ನಿಯಾದ ಸಂಧ್ಯಾ ದೇವಿಯು ಸೂರ್ಯ ದೇವನ ತಾಪವನ್ನು ತಡೆಯಲಾರದೆ ಕಷ್ಟಕ್ಕೆ ಸಿಲುಕಿಕೊಳ್ಳುತ್ತಾಳೆ. ಇದನ್ನು ನೋಡಿದ ಸೂರ್ಯ ದೇವನು ತನ್ನ ತಾಪವನ್ನು ಕಡಿಮೆ ಮಾಡಿಕೊಳ್ಳಲು ಮುಂದಾಗುತ್ತಾನೆ. ಆಗ ಸಂಧ್ಯಾ ದೇವಿಯು ಸೂರ್ಯದೇವನು ನನಗಾಗಿ ತನ್ನ ತಾಪವನ್ನು ಇನ್ನೂ ಕಡಿಮೆ ಮಾಡಿಕೊಂಡರೆ ಜಗತ್ತಿನಲ್ಲಿರುವ ಎಲ್ಲಾ ಜೀವರಾಶಿಗಳಿಗೆ ಅಪಾರ ಕಷ್ಟಗಳು ಉಂಟಾಗುತ್ತವೆ ಎಂದು ಯೋಚಿಸಿ, ಹಿಮಾಲಯ ಪರ್ವತ ದತ್ತ ಸ್ವಲ್ಪ ವಿಶ್ರಾಂತಿಯನ್ನು ಪಡೆದುಕೊಳ್ಳಲು ಹೋಗುತ್ತಾಳೆ.

ಅಲ್ಲಿ ಯಾರಿಗೂ ಗುರುತು ಸಿಗದ ಹಾಗೆ ಕುದುರೆಯ ಅವತಾರವನ್ನು ತಾಳಿ ಹಿಮಾಲಯದ ತಪ್ಪಲಿನಲ್ಲಿ ಹೋಗುತ್ತಿರುವಾಗ ಸೂರ್ಯ ದೇವನು ಕುದುರೆಯ ರೂಪದಲ್ಲಿ ಇರುವ ಸಂಧ್ಯಾ ದೇವಿಯನ್ನು ಗುರುತಿಸಿ ತಾನು ಕೂಡ ಕುದುರೆಯ ರೂಪವನ್ನು ತೆಗೆದುಕೊಳ್ಳುತ್ತಾನೆ. ಅಶ್ವಗಳ ಅವತಾರದಲ್ಲಿ ಇವರಿಬ್ಬರ ನಡುವೆ ನಡೆದ ಮಿಲನದ ಸಂಕೇತವಾಗಿ ಜನಿಸಿದವರೇ ಅಶ್ವಿನಿ ದೇವತೆಗಳು. ಹಾಗಾಗಿ ಅವರಿಗೆ ಹುಟ್ಟಿದ ಮಕ್ಕಳಿಗೂ ಕುದುರೆಯ ಮುಖ ಇರುತ್ತದೆ. ಇನ್ನು ಕೆಲವು ಕಥೆಗಳಲ್ಲಿ ಅಶ್ವಿನಿ ದೇವತೆಗಳು ಸೂರ್ಯ ಮತ್ತು ಮೋಡದ ಪುತ್ರರು ಎಂದು ಹೇಳಲಾಗಿದೆ.

ಅಶ್ವಿನಿ ದೇವತೆಗಳ ಮಹತ್ವ:

ಅಶ್ವಿನಿ ದೇವತೆಗಳಿಗೆ ಹಿಂದೂ ಧರ್ಮದಲ್ಲಿ ಮಹತ್ತರ ಸ್ಥಾನವನ್ನು ನೀಡಲಾಗಿದೆ. ಮುಸ್ಸಂಜೆ ಸಮಯವನ್ನು ಅಂದರೆ ಸೂರ್ಯ ಮುಳುಗುವುದಕ್ಕಿಂತ ಮೊದಲು 24 ನಿಮಿಷಗಳನ್ನು ಅಶ್ವಿನಿ ದೇವತೆಗಳ ಸಮಯವೆಂದು ಹೇಳುತ್ತಾರೆ. ಈ ಸಮಯದಲ್ಲಿ ಅಶ್ವಿನಿ ದೇವತೆಗಳು ಚಿನ್ನದ ಕುದುರೆಯಲ್ಲಿ ಸಂಚಾರವನ್ನು ಮಾಡುತ್ತಾರೆ ಎನ್ನುವುದು ನಂಬಿಕೆ. ಈ ಸಮಯದಲ್ಲಿ ಅಪಶಕುನದಂತಹ ಮಾತುಗಳನ್ನು ಆಡಬಾರದು, ಸುಳ್ಳನ್ನು ಹೇಳಬಾರದು, ಇನ್ನೊಬ್ಬರ ಮನಸ್ಸಿಗೆ ನೋವಾಗುವಂತಹ ಪದಗಳನ್ನು ಬಳಸಬಾರದು, ಮಲಗಬಾರದು ಎಂದು ಹೇಳಲಾಗುತ್ತದೆ. ಅಶ್ವಿನಿ ದೇವತೆಗಳು ಅಸ್ತು, ಅಸ್ತು ಎಂದು ನುಡಿಯುತ್ತಿರುತ್ತಾರೆ. ನಾವು ಒಂದು ವೇಳೆ ಅಪಶಕುನ ಮಾತನಾಡಿದಾಗ ಅವರು ಅಸ್ತು ಎಂದರೆ ಅದು ಖಂಡಿತ ನಡೆಯುತ್ತದೆ ಎನ್ನುವ ಕಾರಣಕ್ಕಾಗಿ ಯಾವಾಗಲೂ ನಾವು ಒಳ್ಳೆಯದನ್ನೇ ಮಾತನಾಡಬೇಕು.

ಒಟ್ಟಾರೆಯಾಗಿ ಹೇಳುವುದಾದರೆ ಅಶ್ವಿನಿ ದೇವತೆಗಳು ನಾವು ಒಳ್ಳೆಯದನ್ನ ಮಾತನಾಡಿದರೆ ಒಳ್ಳೆಯದೇ ಬಯಸುತ್ತಾರೆ ಹಾಗೆಯೇ ಕೆಟ್ಟದ್ದನ್ನೇ ಮಾತನಾಡಿದರೇ ಕೆಟ್ಟದ್ದು ಬಯಸುತ್ತಾರೆ ಎನ್ನುವುದು ಜನರ ನಂಬಿಕೆ.

Continue Reading

DAKSHINA KANNADA

ವೋಟ್ ಮಾಡಿ, ಊಟ ಮಾಡಿ: ಹೋಟೆಲ್‌ಗಳಲ್ಲಿ ಸಿಗಲಿದೆ ಫ್ರೀ ದೋಸೆ, ಸಿಹಿ ತಿಂಡಿ!

Published

on

ಬೆಂಗಳೂರು: ಮತದಾನದ ಬಗ್ಗೆ ಜಾಗೃತಿ ಮೂಡಿಸುವುದಕ್ಕಾಗಿ ಮತ್ತು ಮತದಾನ ಪ್ರಮಾಣ ಹೆಚ್ಚಿಸುವ ಸಲುವಾಗಿ ಬೆಂಗಳೂರಿನ ಕೆಲವು ಹೋಟೆಲ್‌ಗಳು ವಿಶಿಷ್ಟ ಜಾಗೃತಿ ಕಾರ್ಯಕ್ರಮ ಆಯೋಜಿಸುತ್ತಿವೆ. ಕಳೆದ ವರ್ಷ ವಿಧಾನ ಚುನಾವಣೆಯಲ್ಲಿ ಮಾಡಿದಂತೆಯೇ ಈ ಬಾರಿಯೂ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಿ ಬಂದವರಿಗೆ ಉಚಿತ ಆಹಾರ, ರಿಯಾಯಿತಿ ದರದಲ್ಲಿ ತಿಂಡಿ ನೀಡುವ ಬಗ್ಗೆ ಘೋಷಣೆ ಮಾಡಿವೆ.

ವೋಟ್ ಮಾಡಿ, ಊಟ ಮಾಡಿ:

ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ನಿಸರ್ಗ ಗ್ರ್ಯಾಂಡ್ ಹೋಟೆಲ್‌ ವೋಟ್ ಮಾಡಿ, ಊಟ ಮಾಡಿ’ ಅಭಿಯಾನದಡಿ ಮತದಾನದ ದಿನದಂದು ಮತದಾನ ಮಾಡಿದ ಗುರುತು ತೋರಿಸಿದವರಿಗೆ ಬೆಣ್ಣೆ ದೋಸೆ, ಲಡ್ಡು ಮತ್ತು ಜ್ಯೂಸ್ ನೀಡುವುದಾಗಿ ಘೋಷಿಸಿದೆ. 2018 ರ ವಿಧಾನಸಭಾ ಚುನಾವಣೆ ವೇಳೆಯೂ ಹೋಟೆಲ್ ಇಂತಹ ಕೊಡುಗೆ ನೀಡಿತ್ತು.

ಪ್ರಜಾಪ್ರಭುತ್ವದಲ್ಲಿ ಮತದಾನ ಮಾಡುವುದು ನಮ್ಮ ಹಕ್ಕು. ಈ ಕುರಿತು ಜಾಗೃತಿ ಮೂಡಿಸುವ ನಮ್ಮ ನಿರಂತರ ಪ್ರಯತ್ನದ ಭಾಗವಾಗಿ ಕೆಲವು ಹೋಟೆಲ್​​ಗಳು ಕೆಲವು ತಿನಿಸುಗಳನ್ನು ರಿಯಾಯಿತಿ ದರದಲ್ಲಿ ಅಥವಾ ಉಚಿತವಾಗಿ ಮತದಾನದ ದಿನದಂದು ನೀಡುತ್ತವೆ. ಸಿಹಿತಿಂಡಿಗಳು ಮತ್ತು ಕೇಕ್‌ಗಳಂತಹ ಕೆಲವು ಆಹಾರ ಪದಾರ್ಥಗಳನ್ನು ಉಚಿತವಾಗಿ ನೀಡುತ್ತಿವೆ.

SawaariZimmedariKi ಅಭಿಯಾನದಡಿ ಶುಕ್ರವಾರ ಹಿರಿಯ ನಾಗರಿಕರು ಮತ್ತು ವಿಕಲಚೇತನ ಮತದಾರರಿಗೆ ಉಚಿತ ಆಟೋರಿಕ್ಷಾ ಮತ್ತು ಕ್ಯಾಬ್ ಸೇವೆ ದೊರೆಯಲಿದೆ.
ಈ ವಿಶೇಷ ಸೇವೆಯನ್ನು ಪಡೆಯಲು ಮತದಾರರು ‘VOTENOW’ ಕೋಡ್ ಅನ್ನು ಬಳಸಬಹುದು ಎಂದು Rapido ತಿಳಿಸಿದೆ.

ಬಿಡದಿ ಬಳಿಯ ಜನಪ್ರಿಯ ಅಮ್ಯೂಸ್‌ಮೆಂಟ್ ಪಾರ್ಕ್ ವಂಡರ್ಲಾ, ಮತದಾನದ ಗುರುತು ಪ್ರದರ್ಶಿಸುವವರಿಗೆ ಏಪ್ರಿಲ್ 26, 27 ಮತ್ತು 28 ರಂದು ಟಿಕೆಟ್‌ ಮೇಲೆ ಶೇಕಡಾ 15 ರಷ್ಟು ರಿಯಾಯಿತಿಯನ್ನು ಘೋಷಿಸಿದೆ.

Continue Reading

LATEST NEWS

Trending