Connect with us

STATE

ಮೃತ ಅಣ್ಣನ ಹೆಸರಿನಲ್ಲಿ 24 ವರ್ಷ ಶಿಕ್ಷಕ ವೃತ್ತಿ ನಡೆಸಿದ ತಮ್ಮನ ಅರೆಸ್ಟ್ ..!

Published

on

ಮೈಸೂರು:  ಮೃತ ಅಣ್ಣನ ಹೆಸರಿನಲ್ಲಿ ತಮ್ಮ 24 ವರ್ಷ ಶಿಕ್ಷಕನಾಗಿ ಕೆಲಸ ಮಾಡಿ ಸರ್ಕಾರಕ್ಕೆ ಮೋಸ ಮಾಡಿದ ತಮ್ಮ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ಹುಣಸೂರು ತಾಲೂಕಿನ ಕಟ್ಟೆಮಳಲವಾಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕನಾಗಿ ನೇಮಕಗೊಂಡಿದ್ದ ಲೋಕೇಶ್ ಗೌಡ ಹೆಸರಲ್ಲಿ ಆತನ ಕಿರಿಯ ಸಹೋದರ ಲಕ್ಷಣೇಗೌಡ ಕೆಲಸ ಮಾಡುತ್ತಿದ್ದರು. ಆಕ್ರಮವಾಗಿ ಸರಿ ಸುಮಾರು 24 ವರ್ಷ ಕರ್ತವ್ಯ ಮುಂದುವರಿಸಿದ್ದರೂ ಇಲಾಖೆಗೆ ಗೊತ್ತಾಗಲೇ ಇಲ್ಲ.

2019ರಲ್ಲಿ ಹುಣಸೂರಿನ ಪತ್ರಕರ್ತ ಇಂಟೆಕ್ ರಾಜು ಅವರಿಗೆ ಈ ಕುರಿತಾದ ಮಾಹಿತಿ ಲಭ್ಯವಾಗಿ ಜಾಡು ಹಿಡಿದು ಹೊರಟಾಗ ಅನುಮಾನ ಮೂಡಿತು.

ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಅವರು ದೂರು ನೀಡಿದ್ದರು. ಈಗ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.ಮೂಲತಃ ಕೆ.ಆರ್.ನಗರ ತಾಲೂಕು ಹೆಬ್ಬಾಳು ಗ್ರಾಮದಲ್ಲಿ ಲಕ್ಷ್ಮಣೇಗೌಡರ ಕುಟುಂಬ ವಾಸವಿದೆ.

1994-95ರಲ್ಲಿ ಲಕ್ಷ್ಮಣೇಗೌಡರ ಹಿರಿಯ ಸಹೋದರ ಲೋಕೇಶ್ ಗೌಡ ಸರ್ಕಾರಿ ಶಿಕ್ಷಕ ಹುದ್ದೆಗೆ ಆಯ್ಕೆಯಾಗಿದ್ದರು. ಆದರೆ, ಕೆಲಸಕ್ಕೆ ಹಾಜರಾಗುವ ಮುನ್ನವೇ ಅವರು ಅಕಾಲಿಕವಾಗಿ ಮೃತಪಟ್ಟರು.

ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ನೇಮಕಾತಿ ಪತ್ರದೊಂದಿಗೆ ಲಕ್ಷ್ಮಣೇಗೌಡ ತಾನೇ ಲೋಕೇಶ್ ಎಂದು ಹೇಳಿಕೊಂಡು, ಪಿರಿಯಾಪಟ್ಟಣದ ಮುದ್ದನಹಳ್ಳಿ ಗ್ರಾಮದ ಶಾಲೆಯಲ್ಲಿ ಕರ್ತವ್ಯ ಆರಂಭಿಸಿದ್ದರು. ನಂತರದ ವರ್ಷಗಳಲ್ಲಿ ಜಿಲ್ಲೆಯ ಹಲವಾರು ಕಡೆ ಶಿಕ್ಷಕರಾಗಿ ಕೆಲಸ ಮಾಡಿದ್ದಾರೆ.

ಪತ್ರಕರ್ತ ಇಂಟೆಕ್ ರಾಜು ನೀಡಿದ ದೂರಿನನ್ವಯ ವರದಿ ನೀಡಲು ಕೆ.ಆರ್.ನಗರ ತಹಶೀಲ್ದಾರ್‌ಗೆ ಡಿಡಿಪಿಐ ಕೋರಿದ್ದರು.

ಲಕ್ಷ್ಮಣೇಗೌಡನ ಕುಟುಂಬದವರು ಮಾಹಿತಿ ನೀಡಲು ನಿರಾಕರಿಸುತ್ತಾರೆಂದು ತಹಶೀಲ್ದಾರ್‌ ವರದಿ ನೀಡಿದರು.

ಈ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಜಿಲ್ಲಾಧಿಕಾರಿ ಸೂಚಿಸಿದರು.

ಆದರೆ, 2020 ರಲ್ಲಿ ಡಿಸಿ ನೀಡಿದ ಸೂಚನೆಯನ್ನು 6 ತಿಂಗಳಾದರೂ ಕ್ಷೇತ್ರ ಶಿಕ್ಷಣಾಧಿಕಾರಿ ಪಾಲಿಸಲಿಲ್ಲ ಎಂದು ಆರೋಪಿಸುವ ರಾಜು, ಲೋಕಾಯುಕ್ತರಿಗೆ ದೂರು ದಾಖಲಿಸಿದರು.

ಲೋಕಾಯುಕ್ತ ಅಧಿಕಾರಿಗಳು ಆರೋಪಿ ಮತ್ತು ದೂರುದಾರರನ್ನು ಕರೆಸಿ ವಿಚಾರಣೆ ನಡೆಸಿದರು. ನೇಮಕಾತಿ ಪ್ರಾಧಿಕಾರದ ಹಂತದಲ್ಲೂ ವಿಚಾರಣೆ ನಡೆಸಲಾಯಿತು. ಈ ವೇಳೆ ಆರೋಪಿ ನೀಡಿದ್ದ ವಂಶವೃಕ್ಷದಲ್ಲಿ ಲಕ್ಷ್ಮಣೇಗೌಡ ಹೆಸರು ನಾಪತ್ತೆಯಾಗಿರುವುದು ಕಂಡುಬಂದ ಹಿನ್ನೆಲೆಯಲ್ಲಿ ವಂಶವೃಕ್ಷವನ್ನು ಅಮಾನ್ಯಗೊಳಿಸಲಾಯಿತು.

ಪ್ರಕರಣದಲ್ಲಿ ಆರೋಪಿ ಸೂಕ್ತ ಮತ್ತು ಅಧಿಕೃತ ದಾಖಲೆಗಳನ್ನು ಸಲ್ಲಿಸುವಲ್ಲಿ ವಿಫಲನಾಗಿರುವುದು ಮತ್ತು ದೂರುದಾರರು ವ್ಯಕ್ತಪಡಿಸಿರುವ ಅನುಮಾನಗಳಲ್ಲಿ ನೈಜತೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಮಾ.21ರಂದು ಪಿರಿಯಾಪಟ್ಟಣದ ಠಾಣೆಯಲ್ಲಿ ದೂರು ದಾಖಲಿಸಲಾಯಿತು.

ಅಂದು ಮಧ್ಯಾಹ್ನ ನಕಲಿ ಶಿಕ್ಷಕನ ಆರೋಪ ಹೊತ್ತಿರುವ ಲಕ್ಷಣೇಗೌಡನನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ. ನಾಗರಾಜ್‌ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

LATEST NEWS

ನಟಿ ಅಮೂಲ್ಯ ಮಾವನ ಮನೆಗೆ ಚುನಾವಣಾ ಅಧಿಕಾರಿಗಳ ದಾಳಿ.. 31 ಲೀಟರ್ ಮದ್ಯ ವಶ..!!

Published

on

ಬೆಂಗಳೂರು: ನಟಿ ಅಮೂಲ್ಯ  ಅವರ ಮಾವ ರಾಜರಾಜೇಶ್ವರಿ ನಗರ  ಮಾಜಿ ಕಾರ್ಪೋರೇಟರ್ ರಾಮಚಂದ್ರಪ್ಪರವರ  ಮನೆ ಮೇಲೆ ಎ.24ರಂದು ರಾತ್ರಿ ಚುನಾವಣಾ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಆರ್.ಆರ್ ನಗರದಲ್ಲಿರುವ ಮನೆ ಮೇಲೆ ದಾಳಿ ಮಾಡಿದ ಅಧಿಕಾರಿಗಳು ಮನೆಯಲ್ಲಿ ಶೋಧ ಮಾಡಿದ್ದಾರೆ. ರಾತ್ರಿ ‌10 ಗಂಟೆ ಸುಮಾರಿಗೆ 10 ವಾಹನಗಳಲ್ಲಿ ಬಂದಿದ್ದ 30ಕ್ಕೂ ಹೆಚ್ಚು ಚುನಾವಣಾ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದು, ಈ ವೇಳೆ ರಾಮಚಂದ್ರ, ನಟಿ ಅಮೂಲ್ಯ ಮತ್ತು ಪತಿ ಜಗದೀಶ್ ಮನೆಯಲ್ಲೇ ಇದ್ದರು. ಚುನಾವಣಾ ಅಧಿಕಾರಿ, ಅಬಕಾರಿ ಪೊಲೀಸ್, ವಾಣಿಜ್ಯ ತೆರಿಗೆ ಅಧಿಕಾರಿಗಳಿಂದ ನಡೆದ ಜಂಟಿ ದಾಳಿಯಲ್ಲಿ ಸತತ 4 ಗಂಟೆಗಳ ಕಾಲ‌ ಶೋಧ‌ ನಡೆಸಿದ್ದಾರೆ.

amulya

31 ಲೀಟರ್ ಮದ್ಯ ವಶ:

ಇನ್ನು ಚುನಾವಣಾ ಅಧಿಕಾರಿಗಳ ದಾಳಿ ವೇಳೆ ರಾಮಚಂದ್ರಪ್ಪ ಅವರ ನಿವಾಸದಲ್ಲಿ ಬೆಲೆ ಬಾಳುವ ವಸ್ತುಗಳು ಪತ್ತೆಯಾಗಿಲ್ಲ ಬದಲಾಗಿ 31 ಲೀಟರ್ ಮದ್ಯವನ್ನು ವಶ ಪಡಿಸಿಕೊಳ್ಳಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ರಾಮಚಂದ್ರಪ್ಪ ಮೊಮ್ಮಕ್ಕಳ ಹುಟ್ಟುಹಬ್ಬಕ್ಕಾಗಿ ಮದ್ಯ ತರಿಸಿದ್ದೆವು. ಆದರೆ ಚುನಾವಣೆ ಹಿನ್ನೆಲೆ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಮಾಡಲು ಆಗುವುದಿಲ್ಲ. ಇದೀಗ ಮದ್ಯವನ್ನು ವಶಕ್ಕೆ ಪಡೆದಿದದ್ದಾರೆ. ಇನ್ನು ವಶಕ್ಕೆ ಪಡೆದಿದ್ದಾರೆ ಎನ್ನುವುದಕ್ಕೆ ನನ್ನ ಸಹಿಯನ್ನು ಪಡೆದುಕೊಂಡು ಹೋಗಿದ್ದಾರೆ. ಈ ಭಾಗದಲ್ಲಿ ಬಿಜೆಪಿ ಲೀಡ್ ಬರುತ್ತೆ. ಇದನ್ನು ಸಹಿಸಲಾಗದ ಕೆಲವರು ಅಧಿಕಾರವನ್ನು ದುರುಪಯೋಗ ಮಾಡುತ್ತಿದ್ದಾರೆ. ಈ ಭಾಗದಲ್ಲಿ ಕಾಂಗ್ರೆಸ್ ಹಣವನ್ನು ಹಂಚಿಕೆ ಮಾಡುತ್ತಿತ್ತು. ಅದಕ್ಕೆ ನಾವು ಅಡ್ಡಿ ಪಡಿಸುತ್ತೇವೆ ಎಂದು ನಮ್ಮ ಮನೆ ಮೇಲೆ‌ ದಾಳಿ ಮಾಡಿದ್ದಾರೆ ಎಂದು ದೂರಿದರು.

amulya

ಮುಂದೆ ಓದಿ..; ಬಡಗುತಿಟ್ಟು ಯಕ್ಷಗಾನದ ಗಾನ ಕೋಗಿಲೆ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ..

ಅಧಿಕಾರಿಗಳಿಗೆ ಪದೇ ಪದೇ ಬರುತ್ತಿದ್ದ ಫೋನ್ ಕಾಲ್:

ದಾಳಿ ವೇಳೆ ಆರ್‌ಓಗೆ ಪದೇ ಪದೇ ಫೋನ್ ಬರುತಿತ್ತು. ಅವರನ್ನು ಎರಡು ದಿನ ಒಳಗಡೆ ಹಾಕಿಸಿ ಎಂದು ಫೋನಿನಲ್ಲಿ ಇದ್ದ ವ್ಯಕ್ತಿ ಹೇಳುತ್ತಿದ್ದರು. ಮೊಮ್ಮಕ್ಕಳ ಹುಟ್ಟುಹಬ್ಬಕ್ಕೆ ಮದ್ಯ ತರಿಸಿದ್ದೆ. ‌‌ಚುನಾವಣೆ ಸಮಯದಲ್ಲಿ ದೊಡ್ಡ ಮಟ್ಟದಲ್ಲಿ ಹುಟ್ಟುಹಬ್ಬ ಆಚರಿಸಬಾರದು ಎಂದು ಸುಮ್ಮನೆ ಆಗಿದ್ದೆವು. ಏನೋ ದೊಡ್ಡದಾಗಿ ಸಿಗುತ್ತೆ ಎಂದು ಕೂಲ್ ಆಗಿ ಬಂದ ಅಧಿಕಾರಿಗಳು ಹಾಟ್ ಆಗಿ ಹೊರ ನಡೆದರು ಎಂದು ರಾಮಚಂದ್ರಪ್ಪ ಹೇಳಿದ್ದಾರೆ.

 

Continue Reading

LATEST NEWS

ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ಖಾದರ್‌ ಭಾಷಾನನ್ನು ಭೀಕರವಾಗಿ ಹ*ತ್ಯೆಗೈದ ಆಂಜನೇಯ ಗುಡಿಯ ಪೂಜಾರಿ..!

Published

on

ರಾಯಚೂರು : ಪತ್ನಿಗೆ ಮೆಸೇಜ್ ಮಾಡಿದ ಕಾರಣಕ್ಕೆ ಹನುಮ ಜಯಂತಿಯಂದು ಉಗ್ರ ರೂಪ ತಾಳಿದ ಆಂಜನೇಯ ಗುಡಿ ಪೂಜಾರಿ ಆ ಯುವಕನನ್ನು ಬರ್ಬರವಾಗಿ ಕೊ*ಲೆಗೈದಿರುವ ಘಟನೆ ರಾಯಚೂರಿನ ತುಗ್ಗಲದಿನ್ನಿ ಗ್ರಾಮದಲ್ಲಿ ನಡೆದಿದೆ.


ಖಾದರ್ ಭಾಷಾ (28) ಕೊ*ಲೆಯಾದ ವ್ಯಕ್ತಿ. ಮಾರುತಿ ಹ*ತ್ಯೆಗೈದ ಪೂಜಾರಿ. ಇಬ್ಬರೂ ಮಸ್ಕಿ ತಾಲೂಕಿನ ಬಳಗಾನೂರು ಗ್ರಾಮದ ನಿವಾಸಿಗಳು. ಆದರೆ, ಖಾದರ್ ಭಾಷಾ ಮಾರುತಿ ಪತ್ನಿ‌ ಮೇಲೆ ಕಣ್ಣು ಹಾಕಿದ್ದಾನೆ. ಹೀಗಾಗಿ ಮಾರುತಿ, ಖಾದರ್‌ ಭಾಷಾನ ಕಣ್ಣು ಕಿತ್ತು ಹಾಕಿ, ಮುಖದ ಗುರುತು ಸಿಗದಂತೆ ಕೊಚ್ಚಿ ಭೀ*ಭತ್ಸವಾಗಿ ಹ*ತ್ಯೆ ಮಾಡಿದ್ದಾನೆ.

ಕೊ*ಲೆಗೈದ ಮಾರುತಿ ಖುದ್ದಾಗಿ ಠಾಣೆಗೆ ಬಂದು ಶರಣಾಗಿದ್ದಾನೆ. ಈ ಕೊ*ಲೆಯಲ್ಲಿ ಇತರರೂ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಳಗಾನೂರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

ಇದನ್ನೂ ಓದಿ : ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಬ್ಯಾಗ್ ಪರಿಶೀಲಿಸಿದ ಕಸ್ಟಮ್ಸ್ ಅಧಿಕಾರಿಗಳಿಗೆ ಶಾಕ್; ಅದರಲ್ಲಿತ್ತು 10 ಅನಕೊಂಡಾ!

Continue Reading

bangalore

ರಾಜ್ಯದ ಎಂಟು ಜಿಲ್ಲೆಗಳಲ್ಲಿ ಮಳೆಯಾಗಲಿದೆ: ಹವಾಮಾನ ಇಲಾಖೆ ಮುನ್ಸೂಚನೆ

Published

on

ಬೆಂಗಳೂರು : ಬಿಸಿಲಿನ ಉರಿಗೆ ಜನರು ಬೆಂದು ಹೋಗಿದ್ದಾರೆ. ವರುಣ ಕೃಪೆ ತೋರಯ್ಯ ಎಂದು ಬೇಡಿಕೊಳ್ಳುತ್ತಿದ್ದಾರೆ. ಈ ನಡುವೆ ಅಲ್ಲಲ್ಲಿ ಮಳೆಯಾಗಿದ್ರೂ ಸೂರ್ಯ ತಾಪವೇನೂ ಕಮ್ಮಿಯಾಗಿಲ್ಲ. ಇದೀಗ 8 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

heavy rain
ಎಲ್ಲೆಲ್ಲಿ ಮಳೆ ?
ರಾಜ್ಯದ ಜನತೆ ಮಳೆರಾಯನಿಗಾಗಿ ಕಾಯುತ್ತಿದ್ದಾರೆ. ಹವಾಮಾನ ಇಲಾಖೆ ಕೆಲವು ಜಿಲ್ಲೆಗಳಿಗೆ ಶುಭ ಸುದ್ದಿ ನೀಡಿದೆ. ಏಪ್ರಿಲ್ 24ರಂದು ಬಾಗಲಕೋಟೆ, ಬೆಳಗಾವಿ, ಬೀದರ್, ಮೈಸೂರು, ಕೊಡಗು, ಹಾಸನ ಸೇರಿ 8 ಜಿಲ್ಲೆಗಳಲ್ಲಿ ಕೆಲವೆಡೆ ಮಳೆ ಬೀಳಬಹುದು ಎಂದು ಹೇಳಿದೆ.

ತಾಪಮಾನ ಹೆಚ್ಚಳ :
ಭಾರತೀಯ ಹವಾಮಾನ ಇಲಾಖೆ ದೇಶದ ಹಲವು ಭಾಗಗಳಲ್ಲಿ ಬಿಸಿಲಿನ ತಾಪ ತೀವ್ರವಾಗಲಿದೆ ಎಂದು ಕೂಡ ಮಾಹಿತಿ ನಡಿದೆ. ಅದರಲ್ಲೂ ಪೂರ್ವ ಮತ್ತು ದಕ್ಷಿಣ ಭಾರತದ ಹೆಚ್ಚಿನ ಭಾಗಗಳಲ್ಲಿ ಶಾಖದ ಅಲೆಗಳು ಹೆಚ್ಚಲಿವೆ ಎಂದಿದೆ. ಏಪ್ರಿಲ್ 25 ರ ವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಏಪ್ರಿಲ್ 27 ರ ವರೆಗೆ ಈ ಪ್ರದೇಶಗಳಲ್ಲಿ ಉಷ್ಣಾಂಶ 2 ರಿಂದ 2 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ : ಖತರ್ನಾಕ್ ಕಳ್ಳನನ್ನು ಬಂಧಿಸಿದ ಕೋಟ ಪೊಲೀಸರು; ‘ನನ್ನ ಬಗ್ಗೆ ಮಾಹಿತಿ ಬೇಕಾದ್ರೆ ಯೂಟ್ಯೂಬ್ ನೋಡಿ’ ಎಂದ ಖದೀಮ!

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಏಪ್ರಿಲ್ 6 ರಂದು ರಾಜಧಾನಿಯಲ್ಲಿ ಗರಿಷ್ಠ 37.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದು ಎಂಟು ವರ್ಷಗಳಲ್ಲಿ ಅತಿ ಹೆಚ್ಚು ಎಂದು ವರದಿಯಾಗಿದೆ.

ಮುಂದಿನವಾರ ನಗರದಲ್ಲಿ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

Continue Reading

LATEST NEWS

Trending