HomeLATEST NEWSನವರಾತ್ರಿಗೆ ಹೆಣ್ಣು ವೇಷ ಹಾಕುತ್ತಿದ್ದ ದೇರೆಬೈಲಿನ 'ಜನ್ನು' ಕೊಂಚಾಡಿಯಲ್ಲಿ ಕೊಲೆ..!

ನವರಾತ್ರಿಗೆ ಹೆಣ್ಣು ವೇಷ ಹಾಕುತ್ತಿದ್ದ ದೇರೆಬೈಲಿನ ‘ಜನ್ನು’ ಕೊಂಚಾಡಿಯಲ್ಲಿ ಕೊಲೆ..!

ಮಂಗಳೂರು: ನವರಾತ್ರಿ ಸಂದರ್ಭದಲ್ಲಿ ಮನೆ ಮನೆಗೆ ಹೆಣ್ಣು ವೇಷ ಧರಿಸಿ ಹೋಗುತ್ತಿದ್ದ ವ್ಯಕ್ತಿಯೋರ್ವರ ಮೃತದೇಹ ಮಂಗಳೂರಿನ ಕೊಂಚಾಡಿಯಲ್ಲಿ ಕುತ್ತಿಗೆ ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಪೊಲೀಸರು ಇದನ್ನು ಕೊಲೆಯೆಂದು ಶಂಕಿಸಿದ್ದು ಜಯಾನಂದ (65) ಎಂದು ಗುರುತ್ತಿಸಲಾಗಿದೆ.

ಸ್ಥಳೀಯರು ನೀಡಿದ ದೂರಿನಂತೆ ಹರಿಪದವು ಕಿಯೋನಿಕ್ಸ್ ಗೆ ಸಂಬಂದಪಟ್ಟ ಖಾಲಿ ಜಾಗಕ್ಕೆ ಬಂದು ನೋಡಿದಾಗ ಜಯಾನಂದ ರವರನ್ನು ಯಾರೋ ಕುತ್ತಿಗೆಗೆ ಪ್ಲಾಸ್ಟಿಕ್ ಕೆಂಪು ದಾರದಿಂದ ಬಲವಾಗಿ ಬಿಗಿದು ಕೊಲೆ ಮಾಡಿರುವಂತೆ ಕಂಡುಬಂದಿದ್ದು, ಮುಖದ ತುಂಬಾ ಇರುವೆಗಳು, ನೋಣಗಳು ಮುತ್ತಿಕೊಂಡಿತ್ತು.

ಜಯಾನಂದ ವಿಪರೀತವಾದ ಆಮಲು ಪದಾರ್ಥ ಸೇವಿಸುವ ಚಟ ಹೊಂದಿದ್ದರು.

ನಿನ್ನೆ ಯಾರೋ ಅಪರಿಚಿತರ ಮಧ್ಯೆ ಯಾವುದೋ ಕಾರಣಕ್ಕೆ ಕಿರಿಕ್ ಆಗಿ ಜಯಾನಂದರವರನ್ನು ಕುತ್ತಿಗೆಗೆ ಪ್ಲಾಸ್ಟಿಕ್ ಕೆಂಪುದಾರದಿಂದ ಬಿಗಿದು ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಕಾವೂರು ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

Latest articles

ಕೆಲಸ ಇಲ್ಲದವನು ಎಂದು ಬೈಯುತ್ತಿದ್ದ ಅಜ್ಜಿಯನ್ನು ಕೊಂದು ಸುಟ್ಟು ಹಾಕಿದ ಕಿರಾತಕ ಮೊಮ್ಮಗ

ಮೈಸೂರು: ದುಡಿಯುವ ವಯಸ್ಸಿನಲ್ಲಿ ಪುಂಡ ಪೋಕರಿಯಂತೆ ಅಲೆಯುತ್ತಿದ್ದುದಕ್ಕೆ ಬೈಯುತ್ತಿದ್ದ ಅಜ್ಜಿಯನ್ನು ಸ್ವಂತ ಮೊಮ್ಮಗನೇ ಕೊಂದು ಸುಟ್ಟು ಹಾಕಿ ಶವವನ್ನು...

ಚಿತ್ರದುರ್ಗ : ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ಅಕ್ರಮ ಗೋಸಾಗಾಟ- ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ..!

ಚಿತ್ರದುರ್ಗದಲ್ಲಿ ರಾತ್ರಿ ವೇಳೆ ಕಳ್ಳರು ಬೀದಿ ಬದಿಯ ಗೋವುಗಳನ್ನು ಕಳ್ಳತನ ಮಾಡಿ ಟೆಂಪೋದಲ್ಲಿ ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ...

ಕೇರಳಕ್ಕೆಮುಂಗಾರು ಪ್ರವೇಶ- ಮಂಗಳೂರಿನಲ್ಲಿ ಸಂಜೆ ಬಿರುಸಿನ ಮಳೆ..!

ಕೇರಳದಲ್ಲಿ ಇಂದು ಮುಂಗಾರು ಪ್ರವೇಶಿಸಿದ್ದು ಈ ಹಿನ್ನೆಲೆಯಲ್ಲಿ ಕರಾವಳಿಯ ಬಂದರು ನಗರ ಮಂಗಳೂರಿನಲ್ಲಿ ಇಂದು ಸಂಜೆ ಬಿರುಸಿನ ಮಳೆಯಾಗಿದೆ.ಮಂಗಳೂರು...

ಬೆಂಗಳೂರು: ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ರನ್ನು ಭೇಟಿಯಾದ ಸ್ಪೀಕರ್ ಯು.ಟಿ.ಖಾದರ್

ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಸ್ಪೀಕರ್ ಯು.ಟಿ.ಖಾದರ್ ಅವರು ಮೊದಲ ಬಾರಿಗೆ ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರನ್ನು...