Thursday, March 23, 2023

ಗಂಗೊಳ್ಳಿ: ತೆಂಗಿನಕಾಯಿ ಕೊಯ್ಯುತ್ತಿದ್ದ ವ್ಯಕ್ತಿ ಮರದಿಂದ ಬಿದ್ದು ಸಾವು

ಗಂಗೊಳ್ಳಿ: ತೆಂಗಿನಮರ ಹತ್ತಿ ತೆಂಗಿನಕಾಯಿ ಕೊಯುತ್ತಿದ್ದಾಗ ಜಾರಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಕುಂದಾಪುರದ ಆಲೂರು ಗ್ರಾಮದ ಮೂಡುಬೆಟ್ಟು ಕಳಿ ಎಂಬಲ್ಲಿ ನಿನ್ನೆ ನಡೆದಿದೆ.


ಮೃತ ವ್ಯಕ್ತಿಯನ್ನು ರಾಮ ಗೌಡ (45) ಎಂದು ಗುರುತಿಸಲಾಗಿದೆ.
ಅ.11ರಂದು ರಾಮ ಗೌಡ ಎಂಬುವವರು ತನ್ನ ಮನೆಯ ಸಮೀಪ ತೆಂಗಿನ ಮರವನ್ನು ಹತ್ತಿ ತೆಂಗಿನ ಕಾಯಿಯನ್ನು ಕೊಯ್ಯುವಾಗ ಆಕಸ್ಮಿಕವಾಗಿ ಕಾಲು ಜಾರಿ 25 ಅಡಿ ಮೇಲಿನಿಂದ ಕೆಳಗೆ ನೆಲದ ಮೇಲೆ ಬಿದ್ದ ಪರಿಣಾಮ ಕುತ್ತಿಗೆಗೆ ತೀವ್ರ ಜಖಂ ಗೊಂಡಿದ್ದು,

ತಕ್ಷಣವೇ ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಿದಾಗ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸುತ್ತಾರೆ.

ಅಲ್ಲಿಂದ ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಹೋಗಿದ್ದು, ಅಲ್ಲಿ ಆಯುಷ್ಮಾನ್ ಬೆಡ್ ಖಾಲಿ ಇಲ್ಲದ ಕಾರಣ ಅಲ್ಲಿಂದ ಮತ್ತೆ ಸುರತ್ಕಲ್ ಮುಕ್ಕ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಚಿಕಿತ್ಸೆ ನೀಡಿ ಒಳರೋಗಿಯಾಗಿ ದಾಖಲಿಸಿಕೊಂಡಿರುತ್ತಾರೆ.

ಆದರೆ ನಿನ್ನೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics

ಉಡುಪಿ : ಕಳವಾದ 74 ಲಕ್ಷ ರೂಪಾಯಿ ಸೊತ್ತುಗಳು ಮರಳಿ ಮಾಲಕರಿಗೆ ಹಸ್ತಾಂತರಿಸಿದ ಪೊಲೀಸರು.!

ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳ್ಳತನ ,ದರೋಡೆ ಮತ್ತಿತರ ಕಾರಣಗಳಿಂದ ಸುತ್ತುಗಳನ್ನು ಕಳೆದುಕೊಂಡವರಿಗೆ ಅವರ ಚಿನ್ನಾಭರಣ ಸೊತ್ತು ಮತ್ತು ನಗದನ್ನು ಹಸ್ತಾಂತರಿಸಲಾಯಿತು.ಉಡುಪಿ : ಉಡುಪಿ ಜಿಲ್ಲೆಯ ವಿವಿಧ ಪೊಲೀಸ್...

ಶುಕ್ರವಾರದ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ : 3 ವಾರ ಯಾವುದೇ ಮುಷ್ಕರ ನಡೆಸದಂತೆ ಕಟ್ಟಾಜ್ಞೆ..!

ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಕರ್ನಾಟಕ ಹೈ ಕೋರ್ಟ್ ಬ್ರೇಕ್​​ ಹಾಕಿದ್ದು, 3 ವಾರಗಳ ಕಾಲ ಯಾವುದೇ ಮುಷ್ಕರ ನಡೆಸದಂತೆ ಕಟ್ಟಾಜ್ಞೆ ಹೊರಡಿಸಿದೆ.ಬೆಂಗಳೂರು: ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಕರ್ನಾಟಕ ಹೈ ಕೋರ್ಟ್...

ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜಿನೈಕ್ಯ..!

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆವರು ಜಿನೈಕ್ಯರಾಗಿದ್ದಾರೆ.ಹಾಸನ : ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ...