LATEST NEWS
ಟಿಕ್ಟಾಕ್ ಸುಂದರಿಗೆ ಕಂಟಕವಾಯ್ತು ಮೊಬೈಲ್ ಗೀಳು – ಗಂಡನಿಂದಲೇ ನಡೆಯಿತು ಘೋರ ಕೃತ್ಯ..!
ಯೂಟ್ಯೂಬ್ ಶಾರ್ಟ್ಸ್ ಮತ್ತು ಇನ್ಸ್ಟಾಗ್ರಾಂ ರೀಲ್ಸ್ ಇಂದು ವಯಸ್ಸಿನ ಹಂಗಿಲ್ಲದೆ ಎಲ್ಲರನ್ನು ತನ್ನತ್ತ ಸೆಳೆಯುತ್ತಿದೆ. ಪ್ರತಿಭೆಗೆ ಒಂದು ಉತ್ತಮ ವೇದಿಕೆಯಾದರೂ ಕೂಡ ಕೆಲವೊಮ್ಮೆ ಇದೇ ರೀಲ್ಸ್ ಮತ್ತು ಶಾರ್ಟ್ಸ್ ಪ್ರಾಣಕ್ಕೂ ಸಂಚಕಾರ ತರುತ್ತಿದೆ.
ಮಂಡ್ಯ:ಯೂಟ್ಯೂಬ್ ಶಾರ್ಟ್ಸ್ ಮತ್ತು ಇನ್ಸ್ಟಾಗ್ರಾಂ ರೀಲ್ಸ್ ಇಂದು ವಯಸ್ಸಿನ ಹಂಗಿಲ್ಲದೆ ಎಲ್ಲರನ್ನು ತನ್ನತ್ತ ಸೆಳೆಯುತ್ತಿದೆ. ಪ್ರತಿಭೆಗೆ ಒಂದು ಉತ್ತಮ ವೇದಿಕೆಯಾದರೂ ಕೂಡ ಕೆಲವೊಮ್ಮೆ ಇದೇ ರೀಲ್ಸ್ ಮತ್ತು ಶಾರ್ಟ್ಸ್ ಪ್ರಾಣಕ್ಕೂ ಸಂಚಕಾರ ತರುತ್ತಿದೆ.
ಇದೀಗ ಇದೇ ರೀಲ್ಸ್ ಯುವತಿಯೊಬ್ಬಳ ಪ್ರಾಣವನ್ನು ತೆಗೆದಿದೆ. ರೀಲ್ಸ್ನಿಂದ ದಾಂಪತ್ಯ ಜೀವನದಲ್ಲಿ ಬಿರುಕು ಉಂಟಾದ ಹಿನ್ನೆಲೆಯಲ್ಲಿ ಯುವತಿ ತನ್ನ ಗಂಡನಿಂದಲೇ ಬರ್ಬರ ಹತ್ಯೆಯಾಗಿದ್ದಾಳೆ.
ಈ ಘಟನೆ ಮಂಡ್ಯದ ಶ್ರೀರಂಗಪಟ್ಟಣ ತಾಲ್ಲೂಕಿನ ಮಂಡ್ಯಕೊಪ್ಪಲಿನಲ್ಲಿ ನಡೆದಿದೆ.
ಮೃತ ಯುವತಿಯನ್ನು ಪೂಜಾ (26) ಎಂದು ಗುರುತಿಸಲಾಗಿದೆ. ತನ್ನ ಪತಿ ಶ್ರೀನಾಥ್ (36)ನಿಂದ ಹತ್ಯೆಯಾಗಿದ್ದಾಳೆ.
ಪೂಜಾ ಯಾವಾಗಲೂ ರೀಲ್ಸ್ನಲ್ಲಿ ಬಿಜಿಯಾಗಿರುತ್ತಿದ್ದಳು. ಇಷ್ಟೇ ಅಲ್ಲದೆ, ಸ್ನೇಹಿತರೊಂದಿಗೂ ಚಾಟಿಂಗ್ ಮಾಡುತ್ತಿದ್ದಳು.
ಯಾವಾಗಲೂ ಮೊಬೈಲ್ನಲ್ಲಿ ಮುಳುಗಿರುತ್ತಿದ್ದ ಪೂಜಾಳನ್ನು ನೋಡಿ ಗಂಡನಿಗೆ ಸಂಶಯ ಶುರುವಾಗಿತ್ತು.
ಪರಪುರುಷನೊಂದಿಗೆ ತನ್ನ ಪತ್ನಿಗೆ ಅನೈತಿಕ ಸಂಬಂಧ ಇರಬಹುದೆಂಬ ಅನುಮಾನ ಬಲವಾಯಿತು.
ಇದೇ ಅನುಮಾನ ಪ್ರೀತಿಸಿ ಮದುವೆಯಾಗಿದ್ದ ಮಡದಿಯನ್ನೇ ಕೊಲೆ ಮಾಡುವ ಹಂತಕ್ಕೆ ತಂದು ನಿಲ್ಲಿಸಿದೆ. ವೇಲ್ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾನೆ.
ಕೊಲೆ ಮಾಡಿದ 3 ದಿನ ಬಳಿಕ 102ಗೆ ಕರೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ.
ಪೂಜಾ ಹಾಗೂ ಶ್ರೀನಾಥ್, 9 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಆರಂಭದಲ್ಲಿ ಇಬ್ಬರೂ ಅನ್ಯೋನ್ಯವಾಗಿಯೇ ಬದುಕುತ್ತಿದ್ದರು.
ಇಬ್ಬರ ದಾಂಪತ್ಯ ಜೀವನಕ್ಕೆ ಸಾಕ್ಷಿಯಾಗಿ ಒಂದು ಹೆಣ್ಣು ಮಗು ಸಹ ಇದೆ. ಆದರೆ, ಕೆಲವು ವರ್ಷಗಳಿಂದ ಪೂಜಾಗೆ ರೀಲ್ಸ್ ಮತ್ತು ಶಾರ್ಟ್ಸ್ ಮೇಲಿನ ವ್ಯಾಮೋಹವನ್ನು ಬೆಳೆಸಿಕೊಂಡಿದ್ದಳು.
ರೀಲ್ಸ್ ಮಾಡುವ ಜೊತೆಗೆ ಹೆಚ್ಚೆಚ್ಚು ಫೋನ್ ಬಳಸುತ್ತಿದ್ದಳು. ಅತಿಯಾದ ಫೋನ್ ಬಳಕೆಯಿಂದಾಗಿ ದಾಂಪತ್ಯದಲ್ಲಿ ಬಿರುಕು ಮೂಡಿ ಗಂಡ-ಹೆಂಡತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು.
ಪರಪುರುಷರೊಂದಿಗೆ ಸಂಬಂಧ ಇಟ್ಟುಕೊಂಡಿದ್ದೀಯಾ ಅಂತ ಅನುಮಾನ ವ್ಯಕ್ತಪಡಿಸಿ ಶ್ರೀನಾಥ್ ಜಗಳ ಆಡುತ್ತಿದ್ದ. ಇದೇ ಜಗಳ ಮೂರು ದಿನಗಳ ಹಿಂದೆ ತಾರಕಕ್ಕೇರಿ ತಾಳ್ಮೆ ಕಳೆದುಕೊಂಡ ಶ್ರೀನಾಥ್, ವೇಲ್ನಿಂದ ಪೂಜಾಳ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾನೆ.
ಕೊಲೆ ಮಾಡಿದ ಬಳಿಕ ಶವ ಸಾಗಿಸಲು ಮಾವನೇ ಅಳಿಯನಿಗೆ ಸಾಥ್ ನೀಡಿದ್ದಾರೆ. ಅಳಿಯನೊಂದಿಗೆ ಸೇರಿ ತನ್ನ ಮಗಳ ಶವವನ್ನು ಕಾವೇರಿ ನದಿಗೆ ಎಸೆದು ಬಂದಿದ್ದರು.
ಇದಕ್ಕು ಮುನ್ನ ಕೊಲೆಗೈದ ಬಳಿಕ ಶ್ರೀನಾಥ್, ತನ್ನ ಮಾವ ಶೇಖರ್ಗೆ ಕರೆ ಮಾಡಿ, ಕೊಲೆ ಮಾಡಿರುವುದನ್ನು ತಿಳಿಸಿದ್ದ.
ಮಗಳ ಕೊಲೆ ಬಗ್ಗೆ ತಿಳಿದರೂ ಅದನ್ನು ಪೊಲೀಸರಿಗೆ ಹೇಳದೆ ಅಳಿಯನಿಗೆ ಶೇಖರ್ ಸಾಥ್ ನೀಡಿದ್ದಾರೆ. ಮನೆಯಿಂದ ಬೈಕ್ ನಲ್ಲಿ ಶವ ಸಾಗಿಸಿ, ಬಳಿಕ ಮೃತದೇಹಕ್ಕೆ ಭಾರವಾದ ಕಲ್ಲು ಕಟ್ಟಿ ನದಿಗೆ ಎಸೆದು ಬಂದಿದ್ದಾರೆ.
ಕಳೆದ ಸೋಮವಾರ ಈ ಕೊಲೆ ನಡೆದಿದೆ. ಹತ್ಯೆಯ ಬಳಿಕವೂ ಮನೆಯಲ್ಲೇ ಇದ್ದ ಶ್ರೀನಾಥ್, ಮೂರು ದಿನಗಳ ಬಳಿಕ ನಿಮಿಷಾಂಭ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ತೆರಳಿದ್ದ.
ದೇವರ ದರ್ಶನದ ಬಳಿಕ ಪೊಲೀಸರಿಗೆ ಕರೆ ಮಾಡಿ ಶರಣಾಗಿದ್ದಾನೆ. ಶವ ಸಾಗಿಸಲು ಸಾಥ್ ನೀಡಿದ ಮಾವನ ಬಗ್ಗೆಯೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಅತ್ತ ಮಗಳ ಶವವನ್ನು ನದಿಗೆಸೆದು ಬಂದಿದ್ದ ಶೇಖರ್, ಹೋಟೆಲ್ ಕೆಲಸದಲ್ಲಿ ತೊಡಗಿದ್ದ. ಇದೀಗ ಇಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಅರಕೆರೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅರಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
ಜಮೀನಿಗೆ ಬಂದ ಹಸುಗಳಿಗೆ ನಾಡಕೋವಿಯಿಂದ ಶೂಟೌಟ್- 4 ಹಸುಗಳು ಸಾವು, 6 ಹಸುಗಳಿಗೆ ಗಾಯ..!
ಉಡುಪಿ: ಜಮೀನಿಗೆ ಬಂದ ಹಸುಗಳಿಗೆ ನಾಡಕೋವಿಯಿಂದ ಶೂಟ್ ಮಾಡಿದರಲ್ಲಿ ನಾಲ್ಕು ಹಸುಗಳು ಸಾವನ್ನಪ್ಪಿದ್ದು, ಆರು ಹಸುಗಳಿಗೆ ಗಾಯಗಳು ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ.
ಬೈಂದೂರು ತಾಲೂಕಿನ ಬೆಳ್ಳಾಲ ಗ್ರಾಮದ ಅಂಗಡಿ ಜಡ್ಡು ಪರಿಸರದಲ್ಲಿ ಈ ಅಮಾನವೀಯ ಕೃತ್ಯ ನಡೆದಿದ್ದು, ಸ್ಥಳೀಯ ನಿವಾಸಿ ನರಸಿಂಹ ಎಂಬಾತನ ಮೇಲೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶೂಟೌಟ್ ನಿಂದ ಗುಲಾಬಿ ಎಂಬ ಮಹಿಳೆಯ ಎರಡು ಹಸುಗಳು ಸಾವನ್ನಪ್ಪಿದ್ದು, ಆರು ಹಸುಗಳಿಗೆ ಗಾಯಗಳಾಗಿವೆ.
ಗಾಯಗೊಂಡ ದನಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ನಾಡ ಕೋವಿಯಿಂದ ಗುಂಡು ಹಾರಿಸಿದ್ದು, ಈವರೆಗೆ ಒಟ್ಟು ನಾಲ್ಕು ಹಸುಗಳು ಸಾವನ್ನಪ್ಪಿವೆ.
ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ನರಸಿಂಹ ನಾಪತ್ತೆಯಾಗಿದ್ದಾನೆ.
ಹಸುಗಳ ಮಾಲಕರಿಗೆ ಆರೋಪಿ ನರಸಿಂಹ ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಲಾಗಿದೆ.
ಮೃತ ಹಸುಗಳನ್ನು ಸ್ಥಳೀಯರು ಸೇರಿ ದಫನ ಮಾಡಿದ್ದರು.
ಇಂದು ಪೊಲೀಸರು ಮತ್ತು ಇತರ ಅಧಿಕಾರಿಗಳ ಸಮಕ್ಷಮ ಹಸುಗಳ ಮೃತ ದೇಹಗಳನ್ನು ಮೇಲಕ್ಕೆತ್ತಿ ಮಹಜರು ನಡೆಸಲಾಯಿತು.
DAKSHINA KANNADA
ಕಿನ್ನಿಗೋಳಿಯಲ್ಲಿ ಮುಸ್ಲಿಂ ಯುವಕನ ಮೇಲೆ ದೈವ ಆವೇಶ- ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂತು ಮಹತ್ವದ ಸತ್ಯ..!
ಕಿನ್ನಿಗೋಳಿ: ಒರಿಸ್ಸಾ ಮೂಲದ ಮುಸ್ಲಿಂ ಯುವಕನು ಪೆರ್ಮುದೆಯಲ್ಲಿನ ಚಾಮುಂಡಿ ದೈವಸ್ಥಾನದ ಕೆಲಸ ನಿರ್ವಹಿಸುವ ಸಂದರ್ಭ ಏಕಾಏಕಿ ಈತನಿಗೆ ದೈವ ಆವೇಶವಾದ ಘಟನೆ ಮಂಗಳೂರಿನ ಕಿನ್ನಿಗೋಳಿಯಲ್ಲಿ ನಡೆದಿದೆ.
ಕಳೆದ ಎರಡು ತಿಂಗಳ ಹಿಂದೆ ದೈವಸ್ಥಾನಕ್ಕೆ ಸಂಬಂಧಪಟ್ಟ ತಡೆಗೋಡೆ ನಿರ್ಮಿಸುವ ಸಂದರ್ಭ ಒರಿಸ್ಸಾ ಮೂಲದ ಯುವಕನ ಮೈಯಲ್ಲಿ ದೈವ ಅವೇಷ ಬಂದಿದ್ದು, ಪ್ರಶ್ನಾ ಚಿಂತನೆಯಲ್ಲಿ ಕಂಡುಕೊಂಡಾಗ ಇದು ಜಿಲ್ಲೆಯ ಪ್ರತಿಷ್ಟಿತ ಕಂಪನಿಯಾದ ಎಂ.ಆರ್.ಪಿ.ಎಲ್ ನಿಂದ ಬಂದ ಸಮಸ್ಯೆ ಎಂದು ಕಂಡು ಬಂದಿದೆ.
ಕಳೆದ ಮೂರು ದಶಕಗಳ ಹಿಂದೆ, ಪ್ರತಿಷ್ಠಿತ ಎಂ.ಆರ್,ಪಿ,ಎಲ್ ಕಂಪನಿಗಾಗಿ ಜಮೀನು ಭೂಸ್ವಾಧೀನಗೊಂಡಿದ್ದು, ಆ ಸಂದರ್ಭ ಅಲ್ಲಿದ್ದ ಪಿಲಿಚಾಮುಂಡಿ ದೈವಸ್ಥಾನ ಹಾಗೂ ಕೊಡಮಣಿತ್ತಾಯ ದೈವಸ್ಥಾನ ಪುನರ್ವಸತಿ ಪ್ರದೇಶದಲ್ಲಿನ ಅಂದರೆ ಪೆರ್ಮುದೆ ಸೋಮನಾಥ ಧಾಮಕ್ಕೆ ಸ್ಥಳಾಂತರಗೊಂಡು ಕಾಲ ಕಾಲಕ್ಕೆ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿತ್ತು.
ಪೆರ್ಮುದೆ ಗ್ರಾಮಕ್ಕೆ ಸಂಬಂಧಿಸಿ ದೈವಗಳ ನಾಲ್ಕು ಗಡು ಇದ್ದು, ಪ್ರಸುತ್ತ ಕಾಯರ್ ಕಟ್ಟೆ ಎಂಬುದು ಕುತ್ತೆತ್ತೂರು ಗ್ರಾಮದ ಪೆರ್ಮುದೆ ಗಡುವಾಗಿದೆ.
ಈ ಗಡು ಸ್ಥಳದಲ್ಲಿ ನಡೆಯುತ್ತಿದ್ದ ದೈವಾರಾಧನೆ ಪ್ರಕ್ರಿಯೆಗಳು ಕಳೆದ 18 ವರ್ಷಗಳಿಂದ ಸ್ಥಗಿತಗೊಂಡಿದೆ.
ಭೂಸ್ವಾಧೀನಗೊಂಡ ಮತ್ತು ಎಂ ಆರ್ ಪಿ ಎಲ್ ಗೆ ಹತ್ತಿರವಾದ ಕಾರಣ ಇಲ್ಲಿ ನೇಮ ನಡೆಸಲು ಆಸಾದ್ಯವಾಗಿತ್ತು.
ಇಲ್ಲಿನ ಬೌಗೋಳಿಕ ಸ್ಥಿತಿಗತಿಗಳೂ ಇದಕ್ಕೆ ಪ್ರಮುಖ ಕಾರಣವಾಗಿತ್ತು.
ನೇಮ ಸ್ಥಗಿತಗೊಂಡ ನಂತರದ ಕಾಲದಲ್ಲಿ ಗ್ರಾಮ ವ್ಯಾಪ್ತಿಯಲ್ಲಿ ಮತ್ತು ಕಂಪನಿ ವ್ಯಾಪ್ತಿಯಲ್ಲಿ ದೋಷ ದೃಷ್ಟಾಂತ ಕಂಡು ಬರಲು ಪ್ರಾರಂಭವಾಯಿತು.
ಪಿಲಿಚಂಡಿ ದೈವಸ್ಥಾನದ ವಾರ್ಷಿಕ ನೇಮೋತ್ಸವ ಸಂದರ್ಭ ಕಾಯರ್ ಕಟ್ಟೆ ಗಡು ಸ್ಥಳದಲ್ಲಿ ನಡೆಯುತ್ತಿದ್ದ ಕಾರ್ಯಗಳು ಯಥಾ ಪ್ರಕಾರ ಮುಂದುವರಿದರೆ ಮಾತ್ರ ದೋಷಗಳಿಗೆ ಪರಿಹಾರ ಎಂಬ ದೈವದ ನುಡಿಯಾಯಿತ್ತು.
ಈ ಪ್ರಕರಣದ ಬಗ್ಗೆ ಗ್ರಾಮಸ್ಥರು ಸಮಾಲೋಚನೆ ನಡೆಸಿ ದೈವ ಸಾನಿದ್ಯಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸುವ ಮೂಲಕ ದೈವದ ನುಡಿಯ ಬಗ್ಗೆ ಸಂಕಲ್ಪ ಮಾಡಲಾಯಿತು.
ದೈವಾರಧನೆಯಲ್ಲಿ ಮೂಲ ಸ್ವರೂಪ ಕಳೆದುಕೊಂಡ ಕಾರಣದಿಂದಾಗಿ ಎಂ.ಆರ್.ಪಿ.ಎಲ್ ಸಹಿತ ಇತರ ಕೈಗಾರಿಕೆಗಳಿಗೂ ಕೂಡ ಹಲವು ದೋಷ ಕಂಡುಬಂದಿದ್ದು, ಪರಿಹಾರ ಪ್ರಾಯಶ್ಚಿತಕ್ಕಾಗಿ ಕಂಪನಿಯವರು ಕಂಪನಿ ಒಳಗೆ ಚಾಮುಂಡಿ ದೇವಸ್ಥಾನ ನಿರ್ಮಿಸಿ ಅರ್ಚಕರನ್ನು ನೇಮಿಸಿ ತ್ರಿಕಾಲ ಪೂಜೆ ಮಾಡಲಾಗುತ್ತಿದೆ.
ಕಂಪನಿಗಾಗಿ ಭೂಸ್ವಾಧೀನಗೊಂಡ ಕಾರಣ ಈ ಅವ್ಯವಸ್ಥೆಗಳು ಎದುರಾಗಿರುವುದರಿಂದ, ನೇಮೋತ್ಸವಕ್ಕೆ ಸೂಕ್ತವಾಗುವ ರೀತಿಯಲ್ಲಿ ಸ್ಥಳವನ್ನು ಜೀರ್ಣೋದ್ದಾರಗೊಳಿಸುವ ಕಾರ್ಯದಲ್ಲಿ ಕಂಪನಿಯೇ ಮೇಲುಸ್ತುವಾರಿ ವಹಿಸಬೇಕು ಅಲ್ಲದೆ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕೆಂಬುದು ಗ್ರಾಮಸ್ಥರ ಬೇಡಿಕೆಯಾಗಿದ್ದು, ಕಂಪನಿಯ ನಿಯಮ ನಿಬಂಧನೆಗಳಿಗೆ ಬದ್ದರಾಗಿ ನೇಮೋತ್ಸವ ನಡೆಸಲಾಗುವುದು ಎಂಬುದು ಗ್ರಾಮಸ್ಥರ ಅಭಿಪ್ರಾಯ.
ಒಟ್ಟಿನಲ್ಲಿ ಈ ಪ್ರಕರಣಕ್ಕೆ ಸಾಕಷ್ಟು ಮಹತ್ವ ಬಂದಿದ್ದು ಕಂಪನಿ ಹೇಗೆ ಪ್ರತಿಕ್ರಿಯೆ ನೀಡುತ್ತದೆ ಎಂಬುದು ಕಾದು ನೋಡಬೇಕಾಗಿದೆ.
DAKSHINA KANNADA
Mangaluru: ಎಂಡೋ ಪೀಡಿತರಿಗೆ 1 ಕೋ.ರೂ. ನೆರವು ನೀಡಿದ ಎಂ.ಆರ್.ಪಿ.ಎಲ್. ಸಂಸ್ಥೆ
ಮಂಗಳೂರು: ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋ ಕೆಮಿಕಲ್ಸ್ ಲಿಮಿಟೆಡ್- ಎಂ.ಆರ್.ಪಿ.ಎಲ್. ಸಂಸ್ಥೆಯು ದಕ್ಷಿಣ ಕನ್ನಡ ಜಿಲ್ಲೆಯ ಎಂಡೋ ಸಲ್ಫಾನ್ ಪೀಡಿತ ರೋಗಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಒಂದು ಕೋಟಿ ರೂಪಾಯಿ ಸಹಾಯ ಧನ ನೀಡಲು ಮುಂದಾಗಿದೆ.
ಈ ಕುರಿತಂತೆ ಆಶಯ ಪತ್ರವನ್ನು ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಎಂ.ಆರ್.ಪಿ.ಎಲ್. ಕಂಪೆನಿಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ಶ್ಯಾಮ್ ಪ್ರಸಾದ್ ಕಾಮತ್ ಮುಂಡ್ಕೂರು ಅವರು ಅವರಿಗೆ ಹಸ್ತಾಂತರಿಸಿದರು.
ಎಂ.ಆರ್.ಪಿ.ಎಲ್. ಸಂಸ್ಥೆಯು ತನ್ನ ಸಿ.ಎಸ್.ಆರ್. ನಿಧಿಯಿಂದ ಒಂದು ಕೋಟಿ ರೂಪಾಯಿ ನೆರವನ್ನು ಜಿಲ್ಲೆಯ ಅರೋಗ್ಯ ಇಲಾಖೆಗೆ ನೀಡಲಿದ್ದು, ಈ ಮೊತ್ತವನ್ನು ವಿಟ್ಲ, ಸುಳ್ಯ, ಬೆಳ್ತಂಗಡಿ, ಪುತ್ತೂರು, ಮತ್ತು ಮೂಡುಬಿದಿರೆ ತಾಲೂಕುಗಳಲ್ಲಿರುವ ಎಂಡೋ ಪೀಡಿತರ ಪುನರ್ವಸತಿ ಕೇಂದ್ರಗಳಿಗೆ ವೈದ್ಯಕೀಯ ವ್ಯವಸ್ಥೆಗಳಿಗಾಗಿ ಬಳಸಿಕೊಳ್ಳಲು ಉದ್ದೇಶಿಸಲಾಗಿದೆ.
ಪ್ರಮುಖವಾಗಿ ನಾಲ್ಕು ಸಂಚಾರಿ ವೈದ್ಯಕೀಯ ವಾಹನಗಳು, ಫಿಸಿಯೋಥೆರಪಿ ಉಪಕರಣಗಳು, ಹಾಸಿಗೆ ಹಿಡಿದ ರೋಗಿಗಳನ್ನು ಪುನರ್ವಸತಿ ಕೇಂದ್ರಗಳಿಗೆ ಕರೆದೊಯ್ಯಲು ಮತ್ತು ವಾಪಸ್ ಕರೆತರಲು 2 ವಾಹನ ಖರೀದಿಸಲು, ಕೊಯಿಲ ಮತ್ತು ಕೊಕ್ಕಡಗಳಲ್ಲಿ ಇರುವ ಪುನರ್ವಸತಿ ಕೇಂದ್ರಗಳಿಗೆ ಎರಡು ಡೀಸೆಲ್ ಜನರೇಟರ್ ಕೊಂಡುಕೊಳ್ಳಲು ಇದನ್ನು ವಿನಿಯೋಗಿಲಾಗುತ್ತದೆ.
ಆಶಯ ಪತ್ರವನ್ನು ಸ್ವೀಕರಿಸಿದ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ತಿಮ್ಮಯ್ಯ ಅವರು ನೆರವು ನೀಡಲು ಮುಂದಾಗಿರುವ ಎಂ.ಆರ್.ಪಿ.ಎಲ್. ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿದರು.
ಈ ಕೊಡುಗೆಯಿಂದ ಜಿಲ್ಲೆಯಲ್ಲಿರುವ 4 ಸಾವಿರಕ್ಕೂ ಅಧಿಕ ಎಂಡೋ ಸಲ್ಫಾನ್ ಪೀಡಿತರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಸಾಧ್ಯವಾಗಲಿದೆ ಎಂದು ಅಭಿಪ್ರಾಯ ಪಟ್ಟರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ತಿಮ್ಮಯ್ಯ, ಎಂಡೋ ಸಲ್ಫಾನ್ ಪೀಡಿತರ ಆರೋಗ್ಯ ವಿಭಾಗದ ನೋಡಲ್ ಅಧಿಕಾರಿ ಡಾ. ನವೀನ್ ಚಂದ್ರ ಕುಲಾಲ್, ಎಂ.ಆರ್.ಪಿ.ಎಲ್. ಚೀಫ್ ಜನರಲ್ ಮ್ಯಾನೇಜರ್ ಮನೋಜ್ ಕುಮಾರ್ ಎ., ಎಚ್ ಅರ್ ವಿಭಾಗದ ಜಿ.ಜಿ.ಎಂ. ಕೃಷ್ಣ ಹೆಗ್ಡೆ ಅವರು ಉಪಸ್ಥಿತರಿದ್ದರು.
- bengaluru6 days ago
ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ..!
- DAKSHINA KANNADA5 days ago
2ನೇ ಮದುವೆಯಾದ ಕಿರುತೆರೆ ನಟಿ ಜ್ಯೋತಿ ರೈ …!
- DAKSHINA KANNADA6 days ago
ಮುಂದಿನ ವರ್ಷದಿಂದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ 3 ಬೋರ್ಡ್ ಎಕ್ಸಾಮ್- ಮಧು ಬಂಗಾರಪ್ಪ
- DAKSHINA KANNADA6 days ago
ಮಂಗಳೂರಿನ ಆಟೋಮ್ಯಾಟ್ರಿಕ್ಸ್ ಶೋ ರೂಮ್ ನಲ್ಲಿ ಟಾಟಾ ನೆಕ್ಸಾನ್, ಇ.ವಿ ಬಿಡುಗಡೆ