DAKSHINA KANNADA
ಮಂಗಳೂರು : ಬಂಟರ ಮಾತೃ ಸಂಘದ 103 ನೇ ವಾರ್ಷಿಕ ಸರ್ವ ಸದಸ್ಯರ ಸಭೆ
ಮಂಗಳೂರು : ಆರ್ಥಿಕವಾಗಿ ಹಿಂದುಳಿದ ಬಂಟ ಸಮಾಜದವರ ಏಳಿಗೆಗೆ ಮತ್ತು ಸಮಗ್ರ ಅಭಿವೃದ್ದಿಗೆ ಬಂಟರ ಯಾನೆ ನಾಡವರ ಮಾತೃಸಂಘ ಸ್ಪಂದಿಸುತ್ತಿದೆ. ಬಂಟರ ಸಾಂಸ್ಕೃತಿಕ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ, ವೈವಾಹಿಕ, ಆರೋಗ್ಯ, ವಸತಿ ಮತ್ತು ಒಟ್ಟು ಜೀವನದ ವ್ಯವಸ್ಥೆಗೆ ಬಂಟರ ಮಾತೃಸಂಘ ಸ್ಪಂದಿಸಿ ಕೆಲಸ ಮಾಡುತ್ತಿದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ ತಿಳಿಸಿದರು.
ಬಂಟ್ಸ್ ಹಾಸ್ಟೇಲ್ ನಲ್ಲಿರುವ ಗೀತಾ ಎಸ್. ಎಮ್.ಶೆಟ್ಟಿ ಸಭಾಭವನದಲ್ಲಿ ನಡೆದ ಬಂಟರ ಯಾನೆ ನಾಡವರ ಮಾತೃ ಸಂಘದ 2022-23 ನೇ ಸಾಲಿನ 103 ನೇ ವಾರ್ಷಿಕ ಸರ್ವಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಂಟರ ಯಾನೆ ನಾಡವರ ಮಾತೃ ಸಂಘಕ್ಕೆ 115 ವರ್ಷಗಳ ಇತಿಹಾಸ ಇದೆ. ಈ ನಿಟ್ಟಿನಲ್ಲಿ ಮಾತೃಸಂಘದ ಬಹು ಕನಸಿನ ಯೋಜನೆಯಾದ ಶತಮಾನೋತ್ಸವ ಕಟ್ಟಡ ನಿರ್ಮಾಣ ಸಮಿತಿಗೆ ಎಂಆರ್ ಜಿ ಗ್ರೂಪ್ ನ ಚೆಯರ್ ಮೆನ್ ಕೆ ಪ್ರಕಾಶ್ ಶೆಟ್ಟಿಯವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದ್ದು, ಕಟ್ಟಡ ನಿರ್ಮಾಣಕ್ಕೆ ಪ್ರಕಾಶ್ ಶೆಟ್ಟಿಯವರಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ. ಅದೇ ರೀತಿ ವಿಶ್ವ ಬಂಟರ ಮಾಹಿತಿ ಕೋಶ ಸಮಿತಿಗೆ ಹೇರಂಭ ಇಂಡಸ್ಟೀಸ್ ನ ಆಡಳಿತ ನಿರ್ದೇಶಕ ಕನ್ಯಾನ ಕೂಳೂರು ಸದಾಶಿವ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಒಂದು ಯೋಜನೆಗೆ ಒಂದು ಕೋಟಿ ರೂಪಾಯಿಗೂ ಮಿಕ್ಕಿ ಖರ್ಚಾಗಲಿದ್ದು, ಅದರ ಸಂಪೂರ್ಣ ವೆಚ್ಚವನ್ನು ಕನ್ಯಾನ ಸದಾಶಿವ ಶೆಟ್ಟಿಯವರು ಭರಿಸಲಿದ್ದಾರೆಂದು ಅಜಿತ್ ಕುಮಾರ್ ರೈ ತಿಳಿಸಿದರು.
ಶ್ರೀ ರಾಮಕೃಷ್ಣ ಶಾಲಾ ಕಾಲೇಜ್ ನಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುತ್ತದೆ. ಇಲ್ಲಿರುವ ಮಕ್ಕಳಿಗೆ ಹಲವಾರು ಸವಲತ್ತುಗಳು ದೊರಕುತ್ತಿದೆ. ಸಮಾಜದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಇದರ ಪ್ರಯೋಜನ ಪಡೆಯುವಂತೆ ವಿನಂತಿಸಿದರು.
ಮೀಸಲಾತಿಯಲ್ಲಿ ಬಂಟರಿಗೆ ಅನ್ಯಾಯ :
ಬಂಟ ಸಮಾಜವನ್ನು ಕೇಂದ್ರ ಸರಕಾರವು ಮೀಸಲಾತಿ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿಲ್ಲ. ರಾಜ್ಯದ ಮೀಸಲಾತಿ ಪಟ್ಟಿಯಲ್ಲಿ ಸಮಾಜವು ಪ್ರವರ್ಗ 2 ( ಎ) ಯಲ್ಲಿ ಸೇರಲು ಅರ್ಹರಾಗಿದ್ದರೂ ಬಂಟ ಸಮುದಾಯವನ್ನು ಪ್ರವರ್ಗ 3 (ಬಿ) ಯಲ್ಲಿ ಸೇರಿಸಿರುವ ಕಾರಣ ಸಮುದಾಯ ಶಿಕ್ಷಣ, ಉದ್ಯೋಗ, ಸಾಮಾಜಿಕ, ರಾಜಕೀಯ ಮುಂತಾದ ಕ್ಷೇತ್ರಗಳಲ್ಲಿ ಸಿಗುವ ಸೌಲಭ್ಯಗಳಿಂದ ವಂಚಿತರಾಗಿ ಸಮುದಾಯಕ್ಕೆ ತುಂಬಾ ಹಿನ್ನಡೆಯಾಗಿದೆ ಎಂದು ಮಾಲಾಡಿ ಅಜಿತ್ ಕುಮಾರ್ ರೈ ತಿಳಿಸಿದರು.
ಸಮಾಜವನ್ನು ಕೇಂದ್ರ ಸರಕಾರದ ಮೀಸಲಾತಿ ಪಟ್ಟಿಯಲ್ಲಿ ಸೇರಿಸಲು ಹಾಗೂ ರಾಜ್ಯದ ಮೀಸಲಾತಿ ಪಟ್ಟಿಯಲ್ಲಿ ಬಂಟ ಸಮಾಜವನ್ನು ಪ್ರವರ್ಗ 3 (ಬಿ) ಯಿಂದ ಪ್ರವರ್ಗ 2 (ಎ) ಗೆ ಸೇರ್ಪಡೆಗೊಳಿಸಲು ಅಗತ್ಯವಿರುವ ಮಾಹಿತಿಯನ್ನು ಸಂಗ್ರಹಿಸಿ ಮೀಸಲಾತಿಯಲ್ಲಿ ಸೇರಿಸುವ ಉದ್ದೇಶದಿಂದ ಹಾಗೂ ಸಮಾಜದ ನಿಜವಾದ ಸ್ಥಿತಿಗತಿಯನ್ನು ಸರಕಾರದ ಗಮನಕ್ಕೆ ಬರುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ಬಾಂಧವ್ಯ ಎಂಬ ನಾಮಾಂಕಿತದೊಂದಿಗೆ ವಿಶ್ವವ್ಯಾಪಿಯಾಗಿ ನೆಲೆಸಿರುವ ಬಂಟರ ಸಾಂಸ್ಕೃತಿಕ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ, ವೈವಾಹಿಕ, ಆರೋಗ್ಯ, ವಸತಿ, ಧಾರ್ಮಿಕ ಮತ್ತು ಒಟ್ಟು ಜೀವನದ ವ್ಯವಸ್ಥೆ ಹಾಗೂ ಇತರ ಸ್ಥಿತಿಗತಿಗಳ ಬಗ್ಗೆ ಸಮಗ್ರ ಮಾಹಿತಿಯನ್ನು ಸಂಗ್ರಹಿಸಿ ಮಹೋನ್ನತವಾದ ದೂರಗಾಮಿ ಪರಿಣಾಮವನ್ನು ಬೀರುವ “ವಿಶ್ವ ಬಂಟರ ಮಾಹಿತಿ ಕೋಶ”ವನ್ನು ತಯಾರು ಮಾಡುವ ಒಂದು ಅನುಕರಣೀಯ ಶ್ರೇಷ್ಠ ಕೆಲಸವನ್ನು ಮಾಡಲು ಕಾರ್ಯ ಪ್ರವೃತ್ತರಾಗಿದ್ದೇವೆ ಎಂದು ಅಜಿತ್ ಕುಮಾರ್ ರೈ ತಿಳಿಸಿದರು.
ಸಾಮಾಜಿಕ ಜಾಲತಾಣದ ಮೂಲಕ ಪ್ರಪಂಚದ ಯಾವುದೇ ಮೂಲೆಯಲ್ಲಿದ್ದರೂ ವಿಶ್ವ ಬಂಟರ ಮಾಹಿತಿಕೋಶ ಪೂರ್ಣವಾದ ನಂತರ ಬಂಟ ಸಮಾಜ ಬಾಂಧವರ ಬಗ್ಗೆ ಸಮಗ್ರ ಮಾಹಿತಿಯನ್ನು ಪಡೆಯುವ ಅವಕಾಶ ಒದಗಿ ಬರುತ್ತದೆ. ಇದರಿಂದ ಸಮಾಜ ಬಾಂಧವರು ಹಲವಾರು ವಿಧದ ಪ್ರಯೋಜನಗಳನ್ನು ಪಡೆಯಬಹುದು ಎಂದರು.
2022-23 ನೇ ಸಾಲಿನ ವಾರ್ಷಿಕ ವರದಿಯನ್ನು ಪ್ರಧಾನ ಕಾರ್ಯದರ್ಶಿ ಕೆ ಎಂ ಶೆಟ್ಟಿ ಮಂಡಿಸಿದರು. 2022-23 ನೇ ಸಾಲಿನ ವಾರ್ಷಿಕ ಲೆಕ್ಕಪತ್ರಗಳನ್ನು ಕೋಶಾಧಿಕಾರಿ ಸಿಎ. ರಾಮ್ ಮೋಹನ್ ರೈ ಟಿ ಮಂಡಿಸಿದರು. ಸಭೆಯಲ್ಲಿ ವಿದ್ಯಾರ್ಥಿ ಭವನಗಳ, ಶಾಲಾ ಕಾಲೇಜುಗಳ, ತಾಲೂಕು ಸಮಿತಿಗಳ ವಾರ್ಷಿಕ ವರದಿಯನ್ನು ಮಂಡಿಸಲಾಯಿತು.
ಇದನ್ನೂ ಓದಿ : ಮತ್ತೆ ಕಿರುತೆರೆಗೆ ಲಗ್ಗೆ ಇಟ್ಟ ನಟ ರೂಪೇಶ್ ಶೆಟ್ಟಿ; ‘Huu ಅಂತೀಯಾ…Uhuu ಅಂತೀಯಾ’ ಅಂದ್ರು ರಾಕ್ ಸ್ಟಾರ್!
ಉಮೇಶ್ ರೈ ಪದವುಮೇಗಿನ ಮನೆ, ಶಾಲಿನಿ ಶೆಟ್ಟಿ, ಸಂಜೀವ ರೈ, ಕಾವು ಹೇಮನಾಥ ಶೆಟ್ಟಿ, ವಸಂತ ಶೆಟ್ಟಿ, ಮಿಥುನ್ ಹೆಗ್ಡೆ ಉಡುಪಿ, ವಿಜಯ ಶೆಟ್ಟಿ ಕಾರ್ಕಳ, ಆವರ್ಸೆ ಸುಧಾಕರ ಶೆಟ್ಟಿ, ದಯಾನಂದ ರೈ ಮನವಳಿಕೆ, ಜಯರಾಮ ಭಂಡಾರಿ, ಸುಧೀರ್ ಕುಮಾರ್ ರೈ ವರದಿಗಳನ್ನು ಮಂಡಿಸಿದರು. 2023-24 ನೇ ಸಾಲಿಗೆ ಲೆಕ್ಕಪರಿಶೋಧಕರಾಗಿ ದಯಾಶರಣ್ ಶೆಟ್ಟಿ ಆಯ್ಕೆಯಾದರು.
ಅಜಿತ್ ಕುಮಾರ್ ರೈ ಸ್ವಾಗತಿಸಿದರು. ದೀಪಿಕಾ, ಸಿಂಧೂರ, ಸಹನಾ ಪ್ರಾರ್ಥನೆಗೈದರು. ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ ವಂದಿಸಿದರು. ಶರತ್ ಶೆಟ್ಟಿ ಪಡುಪಳ್ಳಿ ಕಾರ್ಯಕ್ರಮ ನಿರ್ವಹಿಸಿದರು.
DAKSHINA KANNADA
ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ
ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.
ಉತ್ತರದ ಬ್ರೇಕ್ ವಾಟರ್ 831 ಮೀಟರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.
ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
DAKSHINA KANNADA
ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು
ಮಂಗಳೂರು: ಗುಜರಾತ್ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.
ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್ ಗಾರ್ಡ್ ತಂಡ ಹೆಲಿಕಾಪ್ಟರ್ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.
ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್ ಗಾರ್ಡ್ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್ ಗಾರ್ಡ್ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.
DAKSHINA KANNADA
ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!
ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.
ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.
ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.
ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.
ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ