Connect with us

LATEST NEWS

Mangalore: ರಾಷ್ಟ್ರೀಯ ಶಿಕ್ಷಣ ನೀತಿ ರದ್ದು-ಎನ್‌ಎಸ್‌ಯುಐ ಕಾರ್ಯಕರ್ತರಿಂದ ಸಂಭ್ರಮ

Published

on

ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂ ದ ಕರ್ನಾಟಕ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಗೊಳಿಸಿರುವುದನ್ನು ಬೆಂಬಲಿಸಿ ಸಂಭ್ರಮಾಚರಣೆ ಜು.8ರಂದು ಮಲ್ಲಿಕಟ್ಟೆಯ ಇಂದಿರಾ ಭವನದಲ್ಲಿ ನಡೆಯಿತು.

ಮಂಗಳೂರು: ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂ ದ ಕರ್ನಾಟಕ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಗೊಳಿಸಿರುವುದನ್ನು ಬೆಂಬಲಿಸಿ ಸಂಭ್ರಮಾಚರಣೆ ಜು.8ರಂದು ಮಲ್ಲಿಕಟ್ಟೆಯ ಇಂದಿರಾ ಭವನದಲ್ಲಿ ನಡೆಯಿತು.

ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಅಧ್ಯಕ್ಷ ಸುಹಾನ್‌ ಆಳ್ವ ಅವರ ನೇತೃತ್ವದಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಸಿಹಿ ತಿಂಡಿ ಹಂಚಿ ಸಂಭ್ರಮಿಸಲಾಯಿತು. ಸಿದ್ಧರಾಮಯ್ಯ ಸರಕಾರಕ್ಕೆ ಜೈಕಾರ ಘೋಷಣೆಗಳನ್ನು ಕೂಗಲಾಯಿತು.

ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ಈ ಸಂದರ್ಭ ಮಾತನಾಡಿದ ಸುಹಾನ್‌ ಆಳ್ವ ಅವರು ಇದು ಎನ್‌ಎಸ್‌ಯುನ ಸಂಘಟನಾತ್ಮಕ ಹೋರಾಟಕ್ಕೆ ಸಂದ ಜಯವಾಗಿದೆ.

ವಿದ್ಯಾರ್ಥಿ ವಿರೋಧಿ ನೀತಿಯನ್ನು ರಾಷ್ಟ್ರಾದ್ಯಂತ ಹೇರಲು ಮುಂದಾಗಿದ್ದರು. ನಾವು ಹಲವು ಬಾರಿ ಪ್ರತಿಭಟನೆ ನಡೆಸಿದ್ದೆವು.

ನಮಗೆ ಜಯ ಸಿಕ್ಕಿದೆ. ಇದು ನ್ಯಾಷನಲ್ ಪಾಲಿಸಿ ಅಲ್ಲ, ನಾಗ್ಪುರ ಪಾಲಿಸಿ ಆಗಿತ್ತು. ಬಜೆಟ್ ಮಂಡನೆ ವೇಳೆ ಬಹಿಷ್ಕಾರ ಮಾಡಿದ ಸಿಎಂ ಸಿದ್ಧರಾಮಯ್ಯ ಅವರಿಗೆ ಧನ್ಯವಾದ ಅರ್ಪಿಸುವುದಾಗಿ ನುಡಿದರು.

BANTWAL

ವಿಟ್ಲ: ವಿದ್ಯಾರ್ಥಿನಿಗೆ ಕಿರುಕುಳ-ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

Published

on

ಬಂಟ್ವಾಳ: ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ವಿಚಾರದಲ್ಲಿ ಪೆರುವಾಯಿ ಮೂಲದ ಯುವಕನ ವಿರುದ್ಧ ವಿಟ್ಲ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

ಕೇಪು ಗ್ರಾಮದ 9ನೇ ತರಗತಿ ವಿದ್ಯಾರ್ಥಿಯೊಬ್ಬಳನ್ನು ಯುವಕ ಕೆಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡಿದ್ದಾನೆ. ಶಾಲೆ ಸಮೀಪ ಬಂದು ಬೈಕ್ ನಲ್ಲಿ ಕೂರುವಂತೆ ಹೇಳಿದ್ದಾನೆ.

ಈ ಎಲ್ಲಾ ವಿಚಾರವನ್ನು ಬೇರೆ ಕಡೆ ಹೇಳಬಾರದೆಂದು ಬೆದರಿಸುವ ಕಾರ್ಯ ಮಾಡಿದ್ದಾನೆ. ಇದರಿಂದ ಭಯಗೊಂಡ ಬಾಲಕಿ ಶಾಲೆಯ ಶಿಕ್ಷಕರಲ್ಲಿ ತಿಳಿಸಿದ್ದು, ಅವರು ಪೋಷಕರಿಗೆ ಮಾಹಿತಿ ನೀಡಿ, ನಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Continue Reading

DAKSHINA KANNADA

ಇಂದು ಕರ್ನಾಟಕ ಬಂದ್‌: ಕರಾವಳಿಗರಿಂದ ನೈತಿಕ ಬೆಂಬಲ-ಬಸ್‌, ಹೊಟೇಲ್‌, ಶಾಲೆಗಳು ಎಂದಿನಂತೆ

Published

on

ಮಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಹಲವು ಸಂಘಟನೆಗಳು ಕರೆ ನೀಡಿರುವ ಇಂದಿನ (ಶುಕ್ರವಾರ) ಕರ್ನಾಟಕ ಬಂದ್ ಗೆ ಕರಾವಳಿಯಲ್ಲಿ ನೈತಿಕ ಬೆಂಬಲ ವ್ಯಕ್ತವಾಗಿದೆ.

ಖಾಸಗಿ ಬಸ್ ಸಂಘಟನೆಯು ಕರ್ನಾಟಕ ಬಂದ್ ಗೆ ನೈತಿಕ ಬೆಂಬಲ ನೀಡಿದೆ. ಆದರೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳು ಎಂದಿನಂತೆ ಓಡಾಟ ನಡೆಸಲಿದೆ.

ಕಾವೇರಿ ವಿಚಾರವಾಗಿ ನಮ್ಮ ಸಹಾನುಭೂತಿಯಿದೆ. ಆದರೆ ಬಸ್ ಸಂಚಾರ ಬಂದ್ ಮಾಡುವುದರಿಂದ ವಿದ್ಯಾರ್ಥಿಗಳು, ಉದ್ಯೋಗಿಗಳು ಸೇರಿ ಸಾರ್ವಜನಿಕ ಜೀವನಕ್ಕೆ ಕಷ್ಟವಾಗುವ ಕಾರಣ ನಾವು ನೈತಿಕ ಬೆಂಬಲ ಸೂಚಿಸುತ್ತೇವೆ. ಬಸ್ ಓಡಾಟ ಎಂದಿನಂತೆ ಇರಲಿದೆ ಎಂದು ಖಾಸಗಿ ಬಸ್ ಒಕ್ಕೂಟ ತಿಳಿಸಿದೆ.

ಜೊತೆಗೆ ಕರಾವಳಿ ಹೋಟೆಲ್ ಉದ್ಯಮವು ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲ ಮಾತ್ರ ನೀಡಿದೆ. ಹೀಗಾಗಿ ಉಡುಪಿ- ಮಂಗಳೂರಿನಲ್ಲಿ ಹೋಟೆಲ್ ಗಳು ತೆರೆದಿರಲಿವೆ.

ಇಂದು ಕರ್ನಾಟಕ ಬಂದ್ ಇದ್ದರೂ, ಕರಾವಳಿ ಜಿಲ್ಲೆಗಳಲ್ಲಿ ಜನ ಜೀವನ ಎಂದಿನಂತೆ ಇರಲಿದೆ. ಜೊತೆಗೆ ಶಾಲಾ-ಕಾಲೇಜುಗಳು ಎಂದಿನಂತೆ ಕಾರ್ಯ ನಿರ್ವಹಿಸಲಿದೆ.

Continue Reading

LATEST NEWS

ಭೀಕರ ಬ್ಲಾಸ್ಟ್: ಮೊಬೈಲ್ ಬಳಿಯಲ್ಲಿ ಡಿಯೋಡರೆಂಟ್ ಬಾಟಲಿಗಳನ್ನು ಇಡ್ಡುತ್ತೀರಾ ಹಾಗಾದ್ರೆ ಹುಷಾರ್..!!

Published

on

ಮಹಾರಾಷ್ಟ್ರ: ಮೂವರು ಮೊಬೈಲ್ ಫೋನ್ ಸ್ಫೋಟದಿಂದ ತೀವ್ರ ಸುಟ್ಟ ಗಾಯಗಳಿಂದ ಬಳಲುತ್ತಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ಮಹಾರಾಷ್ಟ್ರದ ನಾಸಿಕ್‌ನ ಸಿಡ್ಕೋ ಉತ್ತಮ್ ನಗರ ಪ್ರದೇಶದಲ್ಲಿ ಮಂಗಳವಾರದಂದು ನಡೆದಿದೆ.

ಮನೆಯೊಳಗೆ ಚಾರ್ಜ್ ಮಾಡಲು ಇಟ್ಟಿದ್ದ ಮೊಬೈಲ್ ಸ್ಫೋಟಗೊಂಡ ಕಾರಣ ಈ ಘಟನೆ ನಡೆದಿದೆ.

ಫೋನ್ ಪಕ್ಕದಲ್ಲಿ ಡಿಯೋಡರೆಂಟ್ ಕ್ಯಾನ್ ಸ್ಫೋಟದ ತೀವ್ರತೆ ಮತ್ತಷ್ಟು ಹೆಚ್ಚಿಸಿದೆ.

ಸ್ಫೋಟದ ತೀವ್ರತೆಯು ಎಷ್ಟು ದೊಡ್ಡದಾಗಿದೆ ಎಂದರೆ ಅದು ಸುತ್ತಮುತ್ತಲಿನ ಪ್ರತಿಯೊಂದು ಕಿಟಕಿಗಳನ್ನು ಒಡೆದು ಹಾಕಿತು.

ಸ್ಫೋಟದ ತೀವ್ರತೆಯಿಂದಾಗಿ ಹೊರಗೆ ನಿಲ್ಲಿಸಿದ್ದ ಕಾರಿನ ಗಾಜುಗಳು ಕೂಡ ಒಡೆದಿವೆ.

ಅಕ್ಕಪಕ್ಕದ ಮನೆಗಳ ಕಿಟಕಿ ಗಾಜುಗಳೂ ಒಡೆದಿರುವ ಬಗ್ಗೆ ವರದಿಯಾಗಿದೆ.

ಸ್ಫೋಟದ ವೇಳೆ ಮನೆಯಲ್ಲಿದ್ದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅವರು ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ ಹಾಗೂ ಪೊಲೀಸರ ತನಿಖೆ ಮುಂದುವರೆದಿದೆ.

 

Continue Reading

LATEST NEWS

Trending