Connect with us

    LATEST NEWS

    Mangalore: ಕರ್ನಾಟಕ ಕಂಡ ಶ್ರೇಷ್ಠ ಬಜೆಟ್ : ಮಾಜಿ ಸಚಿವ ರಮನಾಥ ರೈ

    Published

    on

    ಸಿಎಂ ಸಿದ್ದರಾಮಯ್ಯರವರು ಮಂಡಿಸಿದ 2023-24ನೇ ಸಾಲಿನ ಬಜೆಟ್ ಈವರೆಗೆ ಕರ್ನಾಟಕದಲ್ಲಿ ಮಂಡನೆಯಾಗಿರುವ ಬಜೆಟ್ ಗಳ ಪೈಕಿ ಶ್ರೇಷ್ಠ ಬಜೆಟ್ ಎಂದು ಮಾಜಿ ಸಚಿವ ರಮನಾಥ ರೈ ವ್ಯಕ್ತಪಡಿಸಿದರು.

    ಮಂಗಳೂರು: ಸಿಎಂ ಸಿದ್ದರಾಮಯ್ಯರವರು ಮಂಡಿಸಿದ 2023-24ನೇ ಸಾಲಿನ ಬಜೆಟ್ ಈವರೆಗೆ ಕರ್ನಾಟಕದಲ್ಲಿ ಮಂಡನೆಯಾಗಿರುವ ಬಜೆಟ್ ಗಳ ಪೈಕಿ ಶ್ರೇಷ್ಠ ಬಜೆಟ್ ಎಂದು ಮಾಜಿ ಸಚಿವ ರಮನಾಥ ರೈ ವ್ಯಕ್ತಪಡಿಸಿದರು.

    ಈ ಬಜೆಟ್ ಅಪರೂಪದಲ್ಲೇ ಅಪರೂಪದ ಬಜೆಟ್. ಐದು ಗ್ಯಾರಂಟಿ ಯೋಜನೆಗಳಿಗೆ ಅನುದಾನ ಒದಗಿಸುವುದರ ಜೊತೆಗೆ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳ ಪೈಕಿ 76 ಪ್ರಣಾಳಿಕೆಗಳನ್ನು ಈ ಬಜೆಟ್ ನಲ್ಲಿ ಜಾರಿ ಮಾಡಿ ಘೋಷಣೆ ಮಾಡಲಾಗಿದೆ.

    ಈ ಬಜೆಟ್ ಎಲ್ಲಾ ವರ್ಗದ ಜನರ ಪರವಾದ ಬಜೆಟ್ ಆಗಿದ್ದು, ಸಮಾಜ ಸ್ನೇಹಿ, ಮಹಿಳಾ ಸ್ನೇಹಿ, ಯುವ ಸ್ನೇಹಿ, ರೈತ ಸ್ನೇಹಿ ಬಜೆಟ್ ಕೂಡ ಆಗಿರುತ್ತದೆ.

    ಬಜೆಟ್ ನಲ್ಲಿ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲನ್ನು ನೀಡಲಾಗಿದೆ. ಎಲ್ಲಾ ಇಲಾಖೆಯಗಳಿಗೂ ಎಲ್ಲಾ ಪ್ರದೇಶಗಳಿಗೂ ಎಲ್ಲಾ ಕ್ಷೇತ್ರಗಳಿಗೂ ಎಲ್ಲಾ ಜಿಲ್ಲೆಗಳಿಗೂ ಎಲ್ಲಾ ವರ್ಗಗಳಿಗೂ ಈ ಬಜೆಟ್ ನ್ಯಾಯ ಒದಗಿಸಿದೆ.

    ಕರಾವಳಿ ಕರ್ನಾಟಕಕ್ಕೂ ಬಜೆಟ್ ನಲ್ಲಿ ಹೆಚ್ಚು ಆಧ್ಯತೆ ನೀಡಲಾಗಿದೆ. ಕರಾವಳಿಯ ಪ್ರವಾಸೋಧ್ಯಮ ಮತ್ತು ಮೀನುಗಾರ ಸಮುದಾಯಕ್ಕೆ ಬಲ ಕೊಟ್ಟಿದೆ.

    ಕರಾವಳಿ ಬೀಚ್‌ ಪ್ರವಾಸೋದ್ಯಮ ಕಾರ್ಯಪಡೆ ರಚನೆ, ಕಡಲ ತೀರದ ಸಮಗ್ರ ಅಭಿವೃದ್ಧಿಗಾಗಿ ವಿಸ್ತೃತ ಯೋಜನೆ ತಯಾರಿ ಮತ್ತು ಸಸಿಹಿತ್ಲು ಕಡಲ ತೀರವನ್ನು ಅಂತಾರಾಷ್ಟ್ರೀಯ ಸರ್ಫಿಂಗ್‌ ತಾಣವಾಗಿ ಅಭಿವೃದ್ಧಿಗೊಳಿಸಲು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆಯನ್ನು ರೂಪಿಸಿರುವುದು ಕರಾವಳಿ ಕರ್ನಾಟಕವನ್ನು ಅಭಿವೃದ್ಧಿಯಲ್ಲಿ ಮುಂದಕ್ಕೆ ಕೊಂಡೊಯ್ಯಲಿದೆ.

    ಮೀನುಗಾರ ಮಹಿಳೆಯರಿಗೆ ಬಡ್ಡಿರಹಿತವಾಗಿ ನೀಡುವ ಸಾಲವನ್ನು 50 ಸಾವಿರ ರೂಪಾಯಿಂದ 3 ಲಕ್ಷ ರೂಪಾಯಿಗೆ ಹೆಚ್ಚಿಸಿರುವುದರಿಂದ ಅವರ ಬದುಕು ಹಸನಾಗಲಿದೆ.

    ಕರಾವಳಿಯ ಮೂರು ಜಿಲ್ಲೆಗಳಿಗೆ ನಾರಾಯಣ ಗುರು ವಸತಿ ಶಾಲೆ ಕೊಟ್ಟಿದ್ದಾರೆ.

    ಕರಾವಳಿಗೆ ದೊಡ್ಡ ಯೋಜನೆಗಳನ್ನು ಕೊಟ್ಟಿರುವ ಸಿದ್ದರಾಮಯ್ಯನವರಿಗೆ ಕರಾವಳಿ ಕರ್ನಾಟಕದ ಜನರ ಪರವಾಗಿ ಧನ್ಯವಾದಗಳು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಮೊಬೈಲ್ ಇಂಟರ್ನೆಟ್ ಬೇಗ ಖಾಲಿ ಆಗ್ತಿದ್ಯಾ…? ಈ ಟ್ರಿಕ್ಸ್ ಫಾಲೋ ಮಾಡಿ ನೋಡಿ….!!

    Published

    on

    ಮಂಗಳೂರು: ಹೊಸ ಹೊಸ ಮೊಬೈಲ್ ಅಪ್ಲಿಕೇಶನ್ ಬಂದಂತೆ ನಾವು ಮೊಬೈಲ್ ಗೆ ಹೆಚ್ಚೆಚ್ಚು ಎಡಿಕ್ಟ್ ಆಗುತ್ತಿದ್ದೇವೆ. ಅದರ ಜೊತೆಗೆ ನೆಟ್ ಪ್ಯಾಕ್ ಕೂಡಾ ಇದೀಗ ದುಬಾರಿಯಾಗಿಬಿಟ್ಟಿದೆ. ಮೊಬೈಲ್​ನಲ್ಲಿ ಡೇಟಾ ಪ್ಯಾಕ್ ಹಾಕಿಸಿದ್ದರೂ, ಇಂಟರ್​ನೆಟ್ ಬೇಗ ಖಾಲಿ ಆಗ್ತಾ ಇದ್ಯಾ? ಅದಕ್ಕೆ ಕಾರಣವೇನು? ದಿನಕ್ಕೆ 2 ಜಿಬಿ ಡೇಟಾ ಇದ್ದರೂ ಸಾಕಾಗುತ್ತಿಲ್ಲವೇ? ರೀಲ್ಸ್ ನೋಡುತ್ತಲೇ ಡೇಟಾ ಖಾಲಿ ಆಗುತ್ತಿರುವ ಬಗ್ಗೆ ಮೆಸೇಜ್ ಬರುತ್ತಿದೆಯಾ? ಹಾಗಾದರೆ ನಿಮ್ಮ ಸ್ಮಾರ್ಟ್​ಫೋನ್​ನಲ್ಲಿ ನೆಟ್​ ಬೇಗ ಖಾಲಿ ಆಗದಿರಲು ಏನು ಮಾಡಬೇಕು? ಡೇಟಾ ಪ್ಯಾಕ್ ಹೆಚ್ಚು ಇರುವಂತೆ ನೋಡಿಕೊಳ್ಳುವುದು ಹೇಗೆ? ಇಲ್ಲಿದೆ ನೋಡಿ.

    • ಸ್ಮಾರ್ಟ್ಫೋನ್ ಗಳಲ್ಲಿ ಕೆಲವು ಆ್ಯಪ್ ಗಳು ಸ್ವಯಂಚಾಲಿತವಾಗಿ ಅಪ್ಡೇಟ್ ಆಗುತ್ತದೆ. ಆಗ ನೆಟ್ ಬೇಗ ಖಾಲಿಯಾಗುತ್ತದೆ. ಇದಕ್ಕಾಗಿ ನೀವು ಸೆಟ್ಟಿಂಗ್ ಗೆ ಹೋಗಿ ಆಟೋಮ್ಯಾಟಿಕ್ ಡೌನ್ ಲೋಡ್ ಆಪ್ಶನ್ ನ್ನು ಆಫ್ ಮಾಡಬೇಕು. ವೈಫೈ ಬಳಸುವಾಗ ಮಾತ್ರ ಅಪ್ಲಿಕೇಶನ್ ಗಳನ್ನು ಅಪ್ಡೇಟ್ ಮಾಡೋದು ಒಳಿತು.
    • ಆಂಡ್ರಾಯ್ಡ್ ಫೋನ್ ಗಳು ಡೇಟಾ ಉಳಿತಾಯ ಮೋಡ್ ಎಂಬ ಆಯ್ಕೆಯನ್ನು ಹೊಂದಿದೆ. ಈ ಆಯ್ಕೆ ನಿಮ್ಮ ಮೊಬೈಲ್ ನಲ್ಲಿದ್ದು ಅದನ್ನು ಸಕ್ರಿಯಗೊಳಿಸಿದ್ರೆ ಡೇಟಾ ಉಳಿಸಬಹುದು. ಡೇಟಾ ಸೇವಿಂಗ್ ಮೋಡ್ ನಿಮ್ಮ ಫೋನ್ ನಲ್ಲಿ ಅನಗತ್ಯ ಡೇಟಾ ಪೋಲು ಆಗುವುದನ್ನು ತಡೆಯುತ್ತದೆ. ಇದರಿಂದ ನಿಮಗೆ ಬಳಕೆಗೆ ಡೇಟಾ ಹೆಚ್ಚು ಲಭ್ಯ ಆಗುತ್ತದೆ.
    • ಇತ್ತೀಚಿನ ದಿನಗಳಲ್ಲಿ ಗೂಗಲ್ ಮ್ಯಾಪ್ ಆ್ಯಪ್ ಬಳಸೋದು ಹೆಚ್ಚಾಗಿದೆ. ಇದು ಅತ್ಯಂತ ಹೆಚ್ಚು ಡೇಟಾವನ್ನು ಬಳಸಿಕೊಳ್ಳುತ್ತೆ‌. ಹಾಗಿರುವಾಗ ಇಂತಹ ಆ್ಯಪ್ ಗಳನ್ನು ಆಫ್ ಲೈನ್ ನಲ್ಲಿ ಉಪಯೋಗಿಸಬೇಕೇ ಹೊರತು ಆನ್ಲೈನ್ ನಲ್ಲಲ್ಲ. ಈ ಆ್ಯಪ್ ನ ಅಪ್ಡೇಟ್ ನ್ನು ಕೂಡಾ ವೈಫೈನಲ್ಲೇ ಮಾಡೋದು ಉತ್ತಮ.‌
    • ನಾವು ಎಲ್ಲಿಯಾದರೂ ಸಂಚರಿಸುತ್ತಿದ್ದರೆ ಯೂಟ್ಯೂಬ್ ವೀಡಿಯೋಗಳನ್ನು ಅಥವಾ ಇನ್ನಾವುದೋ ಆ್ಯಪ್ ಬಳಸೋದು ಹೆಚ್ಚು. ಸಂಚಾರದ ಸಂದರ್ಭದಲ್ಲಿ ವೈಫೈ ಅನುಕೂಲತೆ ಇದ್ದರೆ ವೀಡಿಯೋ ಆಗಲೇ ಡೌನ್ಲೋಡ್ ಮಾಡಿಡುವುದು ಉತ್ತಮ. ನಂತರ ಆಫ್ಲೈನಲ್ಲೇ ಅದನ್ನು ವೀಕ್ಷಿಸಬಹುದು.
    • ವೀಡಿಯೋ ಮತ್ತು ಫೋಟೋಗಳನ್ನು ಆಟೋಮ್ಯಾಟಿಕ್ ಡೌನ್ ಲೋಡ್ ಆಪ್ಶನ್ ನಿಂದ ತೆಗೆಯಿರಿ. ಆಗ ಡೇಟಾ ಉಳಿತಾಯವಾಗುತ್ತದೆ.
    Continue Reading

    BELTHANGADY

    ಬಸ್ ನಿಲ್ದಾಣಕ್ಕೆ ಬಂಗೇರ ಹೆಸರು ; ನುಡಿನಮನದಲ್ಲಿ ಸಿಎಂ ಘೋಷಣೆ..!

    Published

    on

    ಬೆಳ್ತಂಗಡಿ: ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತ ಪಡಿಸಿದರು. ಮಾಜಿ ಸಚಿವ ವಸಂತ ಬಂಗೇರ ಅವರ ಉತ್ತರ ಕ್ರಿಯೆ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ನಾನು ಮತ್ತು ವಸಂತ ಬಂಗೇರ ಒಟ್ಟಿಗೇ ವಿಧಾನಸಭೆ ಪ್ರವೇಶಿಸಿದ್ದೆವು. ಅವತ್ತಿನಿಂದ ಅವರ ಉಸಿರಿನ ಕೊನೆ ಗಳಿಗೆಯವರೆಗೂ ನನ್ನ ಸ್ನೇಹಿತರಾಗಿದ್ದರು. ಇವರ ಅಗಲಿಕೆ ನನಗೆ ಅಪಾರ ದುಃಖ ತಂದಿದೆ ಎಂದರು.

    ಸತ್ಯ, ಬಡವರ ಪರ ಕಾಳಜಿ, ರಾಜಿ ರಹಿತ ಜನಪರ ಕೆಲಸಗಳ ಮೂಲಕ ತಮ್ಮ ವೈಯುಕ್ತಿಕ ಮತ್ತು ರಾಜಕೀಯ ಜೀವನವನ್ನು ಸಾರ್ಥಕಗೊಳಿಸಿಕೊಂಡವರು ಬಂಗೇರ ಅವರು ನನ್ನ ಬಳಿಗೆ ಯಾವತ್ತೂ ವೈಯುಕ್ತಿಕ ಕೆಲಸಗಳಿಗಾಗಿ ಬಂದಿಲ್ಲ. ಬಂದಾಗಲೆಲ್ಲಾ ಜನರ ಕೆಲಸಗಳಿಗಾಗಿ ಬೇಡಿಕೆ ಇಟ್ಟಿದ್ದರು. 2023 ರಲ್ಲೂ ಚುನಾವಣೆಯಲ್ಲಿ ಸ್ಪರ್ಧಿಸಲು ಮನವಿ ಮಾಡಿದರೂ ಅವರು ಒಪ್ಪಲಿಲ್ಲ. ಈ ಬಾರಿ ಸ್ಪರ್ಧಿಸಿದ್ದರೆ ಖಂಡಿತಾ ಗೆದ್ದು ಮಂತ್ರಿಯಾಗುತ್ತಿದ್ದರು ಎಂದರು.

    ವಸಂತ ಬಂಗೇರ ಅವರ ಸಾವಿನಿಂದ ರಾಜ್ಯ, ರಾಜಕಾರಣ ಅತ್ಯಂತ ಬಡವಾಗಿದೆ. ಬಂಗೇರ ಅವರ ಆರೋಗ್ಯ ಚೇತರಿಸಿಕೊಳ್ಳುತ್ತದೆ, ಮತ್ತಷ್ಟು ಕಾಲ ನಮ್ಮ ಜೊತೆಗೆ ಇರುತ್ತಾರೆ ಎನ್ನುವ ಆಸೆ ಇತ್ತು. ಆದರೆ ನಮ್ಮನ್ನು ಅಗಲಿಬಿಟ್ಟಿರುವುದು ನನ್ನ ಪ್ರೀತಿಯ ಸ್ನೇಹಿತನನ್ನು ಕಳೆದುಕೊಂಡಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
    ಮಾಜಿ ಸಚಿವ ಜನಾರ್ಧನ ಪೂಜಾರಿ, ಸ್ಪೀಕರ್ ಯು.ಟಿ.ಖಾದರ್ ಮತ್ತು ವಸಂತ ಬಂಗೇರ ಅವರ ಕುಟುಂಬದ ಸದಸ್ಯರು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳು ಉಪಸ್ಥಿತರಿದ್ದರು.

    ಬೆಳ್ತಂಗಡಿ  ಬಸ್‌ ನಿಲ್ದಾಣಕ್ಕೆ ಬಂಗೇರ ಹೆಸರಿಡಲು ಸರ್ಕಾರ ಸಿದ್ದ

    ಬೆಳ್ತಂಗಡಿ ಬಸ್‌ ನಿಲ್ದಾಣಕ್ಕೆ ವಸಂತ ಬಂಗೇರ ಅವರ ಹೆಸರಿಡಲು ಸರ್ಕಾರ ಸಿದ್ದವಿದೆ. ಜೊತೆಗೆ ಅವರ ಪ್ರತಿಮೆ ನಿರ್ಮಿಸಿ ವೃತ್ತದಲ್ಲಿ ಸ್ಥಾಪಿಸಬೇಕು ಎನ್ನುವ ಬೇಡಿಕೆಗೂ ಸರ್ಕಾರ ಸ್ಪಂದಿಸಲಿದೆ ಎಂದು ಸಿಎಂ ಭರವಸೆ ನೀಡಿದರು.

    Continue Reading

    LATEST NEWS

    ಪತಿಯಿಂದಲೇ ಭೀಕರ ಹ*ತ್ಯೆಯಾದ ‘ಭಜರಂಗಿ’ ಸಿನೆಮಾ ನಟಿ ..!

    Published

    on

    ಮೈಸೂರು: ನಟಿ ಹಾಗೂ ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತೆ ವಿದ್ಯಾ ನಂದೀಶ್ ಭೀಕರವಾಗಿ ಕೊಲೆಯಾಗಿರುವ ದುರ್ಘಟನೆ ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೌಟುಂಬಿಕ ಕಲಹದಿಂದಾಗಿ ನಟಿ ಹ*ತ್ಯೆಯಾಗಿದ್ದು, ವಿದ್ಯಾ ಅವರನ್ನು ಪತಿ ನಂದೀಶ್‌ ಕೊ*ಲೆ ಮಾಡಿದ್ದಾನೆ ಎನ್ನಲಾಗಿದೆ.

    vidya nandeesh

    ಸಿನಿಮಾ ಮಾತ್ರವಲ್ಲ ಇತ್ತೀಚೆಗೆ ಕಾಂಗ್ರೆಸ್ ಪಕ್ಷದ ಬ್ಲಾಕ್ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ವಿದ್ಯಾ ಅವರು ಕೆಲ ನಾಯಕರೊಂದಿಗೆ ಆಪ್ತರಾಗಿದ್ದರು. ಇದೇ ಕುಟುಂಬದಲ್ಲಿ ವಿರಸಕ್ಕೆ ಕಾರಣವಾಗಿತ್ತು ಎನ್ನಲಾಗಿದೆ. ಈ ವಿಚಾರದಲ್ಲಿ ಪತಿ ಹಾಗೂ ಪತ್ನಿ ನಡುವೆ ಜಗಳಕ್ಕೆ ದಾರಿ ಮಾಡಿಕೊಟ್ಟಿತ್ತು ಎನ್ನುವ ಮಾತುಗಳು ಕೇಳಿಬಂದಿವೆ.  ಸೋಮವಾರ ರಾತ್ರಿ ಪತಿ ಪತ್ನಿ ಇಬ್ಬರ ನಡುವೆ ಜಗಳ ನಡೆದಿದೆ.  ಗಲಾಟೆ ವೇಳೆ ಹರಿತವಾದ ಆಯುಧದಿಂದ ತಲೆಗೆ ಹೊಡೆದಿದ್ದಾರೆ ಎನ್ನಲಾಗಿದೆ. ಮಾತಿಗೆ ಮಾತು ಬೆಳೆದು ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

    ಇದನ್ನೂ ಓದಿ..; ಮಾಜಿ ಪ್ರಿಯತಮೆ ಮದುವೆಗೆ ವಿಶ್ ಮಾಡಲು ಹೋದ ಯುವಕ..! ವರನಿಗೆ ಹಿಗ್ಗಾಮುಗ್ಗ ಥಳಿಸಿ ಹಲ್ಲೆ..!!

    ಹ್ಯಾಟ್ರಿಕ್ ಹೀರೊ ಶಿವರಾಜ್‌ಕುಮಾರ್ ನಟನೆಯ ಸೂಪರ್‌ ಹಿಟ್‌ ಚಿತ್ರ ‘ಭಜರಂಗಿ’ಯಲ್ಲಿ ನಟಿಸಿದ್ದರು. ಚಿರಂಜೀವಿ ಸರ್ಜಾ ನಟನೆಯ ‘ಅಜಿತ್’ ಚಿತ್ರದಲ್ಲಿ ವಿದ್ಯಾ ನಂದೀಶ್ ನಾಯಕನ ಸ್ನೇಹಿತೆಯ ಪಾತ್ರದಲ್ಲಿ ಮಿಂಚಿದ್ದರು. ಮಾತ್ರವಲ್ಲ ಹಲವು ಸಿನಿಮಾಗಳಲ್ಲಿ ಪೋಷಕ ಪಾತ್ರವನ್ನು ನಿಭಾಯಿಸಿದ್ದರು. ಇದೀಗ ಕೌಟುಂಬಿಕ ಕಲಹದಿಂದಾಗಿ ನಟಿ ಹತ್ಯೆಯಾಗಿದ್ದಾರೆ.

     

     

    Continue Reading

    LATEST NEWS

    Trending