Connect with us

DAKSHINA KANNADA

ಮಂಗಳೂರು : ಬಿಜೆಪಿ ಕೋರ್ ಕಮಿಟಿ ಸಭೆ- ಚುನಾವಣೆ ಗೆಲ್ಲಲು ರಾಜಕೀಯ ಚಾಣಕ್ಯನ ರಣತಂತ್ರ..!

Published

on

ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳೂರಿನಲ್ಲಿ ನಡೆಸಿದ ಕೋರ್ ಕಮಿಟಿ‌ ಸಭೆಯಲ್ಲಿ ಮುಂಬರುವ ಚುನಾವಣೆಯನ್ನು ಎದುರಿಸುವ ಬಗ್ಗೆ ಮಾರ್ಗದರ್ಶನಗಳನ್ನು ನೀಡಿದರು.

ಮಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳೂರಿನಲ್ಲಿ ನಡೆಸಿದ ಕೋರ್ ಕಮಿಟಿ‌ ಸಭೆಯಲ್ಲಿ ಮುಂಬರುವ ಚುನಾವಣೆಯನ್ನು ಎದುರಿಸುವ ಬಗ್ಗೆ ಮಾರ್ಗದರ್ಶನಗಳನ್ನು ನೀಡಿದರು.

ಈ ಸಭೆಯಲ್ಲಿ ಆರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳ ಬಿಜೆಪಿ ಶಾಸಕರು, ಮಾಜಿ ಶಾಸಕರು, ಸಂಸದರು, ಜಿಲ್ಲಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ 118 ಆಹ್ವಾನಿತ ನಾಯಕರು ಭಾಗವಹಿಸಿದ್ದರು.

ಸಂಜೆ 6.15ರಿಂದ ಸುಮಾರು ಒಂದೂಕಾಲು ಗಂಟೆ ಮಂಗಳೂರು ಮತ್ತು ಶಿವಮೊಗ್ಗ ವಿಭಾಗೀಯ ಪ್ರಮುಖರ ಸಭೆಯಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಮುಖ ಚರ್ಚೆಗಳು ನಡೆದವು.

ಆರು ಜಿಲ್ಲೆಗಳಲ್ಲಿ 33 ಕ್ಷೇತ್ರಗಳಿದ್ದು, ಇದರಲ್ಲಿ 29 ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಇದೆ.

ಈ 29 ಕ್ಷೇತ್ರ ಉಳಿಸಿಕೊಂಡು ಉಳಿದ ನಾಲ್ಕು ಕ್ಷೇತ್ರದಲ್ಲಿ ಗೆದ್ದು ಬರುವಂತೆ ಮಾರ್ಗದರ್ಶನ ನೀಡಿದರು.

ರಾಜ್ಯಕ್ಕೆ ಇನ್ನೊಮ್ಮೆ ತಿಂಗಳ ನಂತರ ಬಂದು ಪರಿಶೀಲನೆ ನಡೆಸುತ್ತೇನೆ ಆ ಸಮಯದೊಳಗೆ ನನಗೆ ರಿಸಾಲ್ಟ್ ಬೇಕು..ಫೀಲ್ಡಿಗಿಳಿದು ಕೆಲಸ ಮಾಡಿ ಎಂದು ಸೂಚನೆ ನೀಡಿದರು.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ ಮಾಜಿ ಸಿಎಂ ಯಡಿಯೂರಪ್ಪ ”ಮುಂದಿನ ಒಂದು ತಿಂಗಳಲ್ಲಿ ಸರ್ಕಾರದ ಸಾಧನೆಯನ್ನು ಮನೆ ಮನೆಗೆ ತಲುಪಿಸಬೇಕು. ಮತ್ತೆ ತಿಂಗಳ ನಂತರದ ಬಂದು ಇನ್ನೊಮ್ಮೆ ಪರಿಶಿಲನೆ ನಡೆಸುವುದಾಗಿ‌ ಅಮಿತ್ ಶಾ ಹೇಳಿದ್ದಾರೆ.

ಅಭ್ಯರ್ಥಿ ವಿಚಾರವಾಗಿ ವಿಭಾಗ ಪ್ರಮುಖರ ಸಭೆಯಲ್ಲಿ ಯಾವುದೇ ಚರ್ಚೆ ಆಗಿಲ್ಲ” ಎಂದರು.

”ಎರಡು ವಿಭಾಗದ 33 ವಿಧಾನಸಭಾ ಕ್ಷೇತ್ರಗಳಲ್ಲಿ 29 ಕ್ಷೇತ್ರಗಳಲ್ಲಿ ಬಿಜೆಪಿ ಇದೆ. ಅದನ್ನು ಉಳಿಸಿಕೊಂಡು ಉಳಿದ ನಾಲ್ಕು ಕ್ಷೇತ್ರ ಗೆಲ್ಲಲು ಅಮಿತ್ ಶಾ ಮಾರ್ಗದರ್ಶ‌ನ ನೀಡಿದ್ದಾರೆ.

ಟಿಕೆಟ್ ಬಗ್ಗೆ ಏನೂ ಚರ್ಚೆ ಆಗಿಲ್ಲ” ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು.

‘ಮುಂದಿನ ಚುನಾವಣೆಯಲ್ಲಿ ಯಾವ ರೀತಿ ಗೆಲ್ಲಬೇಕು ಎಂದು ಸ್ಪುಟವಾಗಿ ಅಮಿತ್ ಶಾ ಅವರು ಮಾರ್ಗದರ್ಶನ ನೀಡಿದ್ದಾರೆ.

ಇದರಿಂದ ನಮ್ಮಲ್ಲಿ ರಣೋತ್ಸಾಹ ಹೆಚ್ಚಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರೀಯಿಸಿದ್ದಾರೆ.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending