Connect with us

    LATEST NEWS

    ‘ಮಂಗಳೂರು ಸಿಟಿ ಪೊಲೀಸ್‌’ ವೆಬ್‌ಸೈಟ್‌ ನಾಪತ್ತೆಯಾಗಿದೆ ಹುಡುಕಿ ಕೊಡಿ

    Published

    on

    ಮಂಗಳೂರು: ಮಂಗಳೂರು ನಗರ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯಲ್ಲಿ ನಡೆದ ಪ್ರಕರಣಗಳ ಬಗ್ಗೆ ಮಾಧ್ಯಮಕ್ಕೆ ಹಾಗೂ ಸಾರ್ವಜನಿಕರಿಗೆ ಮಾಹಿತಿ ನೀಡುವ ಉದ್ದೇಶದಿಂದ ಮಂಗಳೂರು ಸಿಟಿ ಪೊಲೀಸ್‌ ಎಂಬ ವೆಬ್‌ಸೈಟ್‌ ಇತ್ತು.

    ಅದು ಕೆಲ ತಿಂಗಳಿಂದ ನಿಷ್ಕ್ರಿಯಗೊಂಡು ಇದೀಗ ಗೂಗಲ್‌ ಸರ್ಚ್‌ ಇಂಜಿನ್‌ನಿಂದಲೇ ನಾಪತ್ತೆಯಾಗಿದೆ. ಮಂಗಳೂರು ಕಮೀಷನರೇಟ್‌ ವ್ಯಾಪ್ತಿಗೆ ಹೋಲಿಸಿದರೆ ಉಡುಪಿ ಜಿಲ್ಲಾ ಪೊಲೀಸ್‌ ಪ್ರತಿನಿತ್ಯ ಎರಡು ಸಮಯದಲ್ಲಿ ತಮ್ಮ ವ್ಯಾಪ್ತಿಯಲ್ಲಿ ಬರುವ ಅಪರಾಧ, ನಾಪತ್ತೆ, ಅಪಘಾತ ಸೇರಿದಂತೆ ಪ್ರಕರಣ ದಾಖಲಾದ ಮಾಹಿತಿಯನ್ನು ನೀಡುತ್ತಿದೆ.

    ಉಡುಪಿ ಜಿಲ್ಲಾ ಪೊಲೀಸ್‌ ವೆಬ್‌ಸೈಟ್‌ ಪ್ರತಿನಿತ್ಯ ಅಪರಾಹ್ನ ಹಾಗೂ ಮಧ್ಯಾಹ್ನ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣಗಳ ಬಗ್ಗೆ ಮಾಹಿತಿ ನೀಡುತ್ತದೆ.


    ಉಡುಪಿ ಜಿಲ್ಲೆಯು ಎಸ್‌ಪಿ ವ್ಯಾಪ್ತಿಯನ್ನು ಹೊಂದಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯು ಎಸ್‌ಪಿ ವ್ಯಾಪ್ತಿ ಸೇರಿ ನಗರ ಕಮೀಷನರೇಟ್‌ ವ್ಯಾಪ್ತಿ ಹೊಂದಿದೆ. ಇಲ್ಲಿ ಅಪರಾಧ ಪ್ರಕರಣಗಳು ಹೆಚ್ಚು. ಉಡುಪಿ ಜಿಲ್ಲೆಗೆ ಹೋಲಿಸಿದರೆ ದ.ಕ ಜಿಲ್ಲೆಯ ಪೊಲೀಸ್‌ ಅಧಿಕಾರಿಗಳ ಸಂಖ್ಯೆ ಹೆಚ್ಚಿದೆ.

    ಜೊತೆಗೆ ಅಪರಾಧ, ಸೈಬರ್‌ ಸೇರಿದಂತೆ ಹಲವು ವಿಭಾಗಗಳಲ್ಲಿ ಹೆಚ್ಚು ಅನುಭವ ಮತ್ತು ಪರಿಣಿತಿ ಹೊಂದಿರುವವರು ಇದ್ದಾರೆ. ಆದರೂ ಒಂದು ಜನರಿಗೆ ಮಾಹಿತಿ ನೀಡುವ ಉದ್ದೇಶದಿಂದ ನಿರ್ಮಿತವಾದ ಪೊಲೀಸ್‌ ವೆಬ್‌ಸೈಟ್‌ ಅನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡದೇ ನೀರಿನಲ್ಲಿ ಇಟ್ಟ ಹೋಮದಂತೆ ಆಗಿದೆ.


    ಈ ಹಿಂದೆ ಮಂಗಳೂರು ಕಮಿಷನರೇಟ್‌ ವ್ಯಾಪ್ತಿಯಲ್ಲಿ ನಡೆಯುವ ಅಪರಾಧ ಪ್ರಕರಣಗಳ ಬಗ್ಗೆ ಎಫ್‌ಐಆರ್‌ ಸಾರಾಂಶವನ್ನು ಆ ದಿನವೇ ಸಂಜೆಯೊಳಗೆ ವೆಬ್‌ಸೈಟ್‌ನಲ್ಲಿ ಪ್ರಕಟಿಸುತ್ತಿದ್ದರು. ಜೊತೆಗೆ ಪೊಲೀಸ್‌ ಆಯುಕ್ತರ ಕಛೇರಿಯಲ್ಲಿ ನಡೆಯುವ ಸಭೆಗಳ ಮಾಹಿತಿ, ಪತ್ರಿಕಾ ಪ್ರಕಟಣೆಗಳನ್ನು ಇದರಲ್ಲಿ ಪ್ರಕಟಿಸಲಾಗುತ್ತಿತ್ತು.

    ಈ ಹಿಂದೆ ಜನಸಾಮಾನ್ಯರಿಗೆ ಪೊಲೀಸ್‌ ಇಲಾಖೆಯ ಹಿರಿಯ ಅಧಿಕಾರಿಗಳ, ಕಮಿಷನರೇಟ್‌ ವ್ಯಾಪ್ತಿಯ ಠಾಣೆಗಳ, ಸಂಚಾರಿ ಠಾಣೆಯ ದೂರವಾಣಿ ಸಂಖ್ಯೆ ಸಿಗುತಿತ್ತು. ಈ ಮೂಲಕ ಸಂಬಂಧಪಟ್ಟವರನ್ನು ನೇರವಾಗಿ ಸಂಪರ್ಕಿಸಬಹುದಿತ್ತು.

    ಆದರೆ ಈಗ ಗೂಗಲ್‌ ಸರ್ಚ್‌ ಎಂಜಿನ್‌ನಲ್ಲಿ ವೆಬ್ಸೈಟ್‌ ನಾಪತ್ತೆಯಾಗುವುದರೊಂದಿಗೆ ಪೊಲೀಸ್‌ ಇಲಾಖೆ ಜನರಿಂದ ದೂರವಿದೆಯೇನೋ ಎಂಬಂತೆ ಭಾಸವಾಗುತ್ತಿದೆ.
    ಠಾಣೆಗಳಲ್ಲಿ ಘಟನೆ ನಡೆದ ಬಗ್ಗೆ ಮಾಹಿತಿಯೇ ಇಲ್ಲ ಅನ್ನುತ್ತಾರೆ?
    ಮಂಗಳೂರು ಕಮಿಷನರೇಟ್‌ ವ್ಯಾಪ್ತಿ ದ.ಕ ಜಿಲ್ಲಾ ಕೇಂದ್ರ ಪ್ರದೇಶವಾಗಿದ್ದು, ಇಲ್ಲಿ ರಾಜ್ಯ ರಾಷ್ಟ್ರಮಟ್ಟದ ಮಾಧ್ಯಮಗಳ ವರದಿಗಾರರಿದ್ದಾರೆ. ಆದ್ದರಿಂದ ಕಮಿಷನರೇಟ್‌ ವ್ಯಾಪ್ತಿಯಲ್ಲಿ ನಡೆಯುವ ಪ್ರತಿಯೊಂದು ಪ್ರಕರಣಗಳ ಬಗ್ಗೆ ಸರಿಯಾದ ಮಾಹಿತಿ ಸಿಗುತ್ತಿಲ್ಲ. ಕೆಲವು ಅಪರಾಧ ಪ್ರಕರಣಗಳ ಬಗ್ಗೆ ಕೆಲವು ಮಾಧ್ಯಮ ವರದಿಗಾರರು ಪೊಲೀಸ್‌ ಠಾಣೆಗಳಲ್ಲಿ ನಿಖರತೆಯನ್ನು ತಿಳಿಯಲು ಮಾಹಿತಿ ಕೇಳಿದರೆ ಘಟನೆ ಬಗ್ಗೆ ಮಾಹಿತಿ ಇಲ್ಲ ಎಂದು ಹೇಳುತ್ತಾರೆ. ಜೊತೆಗೆ ಕೆಲವು ಮಾಧ್ಯಮಗಳಿಗೆ ಕೆಲವು ಪ್ರಕರಣಗಳ ಮಾಹಿತಿ ದೊರೆಯುತ್ತದೆ. ಅದೇ ಮಾಹಿತಿಯನ್ನು ಕೆಲವರು ಎರವಲು ಪಡೆಯುತ್ತಾರೆ.ಈ ವೇಳೆ ಗೊಂದಲಗಳು ಉಂಟಾಗುತ್ತದೆ. ಕೆಲವೇ ಕೆಲವು ಆಯ್ದ ಪ್ರಕರಣಗಳ ಬಗ್ಗೆ ಮಂಗಳೂರು ಪೊಲೀಸ್‌ ಆಯುಕ್ತರು, ಅಥವಾ ಡಿಸಿಪಿ ಪತ್ರಿಕಾಗೋಷ್ಠಿ ಕರೆದು ಮಾಹಿತಿ ನೀಡುತ್ತಾರೆ.
    ಮಾಹಿತಿ ಎಡವಟ್ಟಿನಿಂದ ವರದಿಗಳೂ ಎಡವಟ್ಟು
    ಸಣ್ಣಪುಟ್ಟ ಪ್ರಕರಣಗಳ ಬಗ್ಗೆ ಸರಿಯಾದ ಮಾಹಿತಿ ಸಿಗುತ್ತಿಲ್ಲ. ಈ ಹಿಂದಿನ ಪೊಲೀಸ್‌ ಆಯುಕ್ತರು ಹುದ್ದೆಯಲ್ಲಿದ್ದಾಗ ವೆಬ್‌ಸೈಟ್‌ ನಿರ್ವಹಣೆಗೆ ಪರಿಣಿತ ಸಿಬ್ಬಂದಿ ನೇಮಕ ಮಾಡಿ ಪ್ರತಿದಿನದ ಆಗುಹೋಗುಗಳ ಬಗ್ಗೆ ಮಾಹಿತಿಗಳು ಇಲಾಖಾ ವೆಬ್‌ಸೈಟ್‌ನಲ್ಲಿ ಅಪ್ಡೇಡ್‌ ಆಗುತಿತ್ತು.

    ಆದ್ದರಿಂದ ಮಾಧ್ಯಮಗಳ ವರದಿಯಿಂದ ಓದುಗರು ಗೊಂದಲಕ್ಕೀಡಾಗುತ್ತಿರಲಿಲ್ಲ. ಈಗ ಒಬ್ಬೊಬ್ಬ ವರದಿಗಾರರಿಗೆ ತಪ್ಪು ತಪ್ಪು ಮಾಹಿತಿ ಸಿಗುವುದರಿಂದ ಓದುಗರು ಅಥವಾ ಕೇಳುಗರು ಪ್ರಕರಣದ ಅದೇ ತಪ್ಪು ವರದಿಯನ್ನು ಓದುತ್ತಾರೆ.
    ಬೆಂಗಳೂರು ಕಮೀನರೇಟ್‌ ವ್ಯಾಪ್ತಿಯಲ್ಲಿ ಟ್ರಾಫಿಕ್‌ ಪೊಲೀಸ್‌ ಅವರು ಒಂದು ಟ್ವೀಟ್‌ ಮಾಡಿದರೂ ಅದಕ್ಕೆ ಪ್ರತಿಕ್ರಿಯಿಸುತ್ತಾರೆ. ಜೊತೆಗೆ ಪ್ರತಿನಿತ್ಯದ ಆಗುಹೋಗುಗಳನ್ನು ಟ್ವಿಟ್ಟರ್‌, ಫೇಸ್‌ಬುಕ್‌, ಪೊಲೀಸ್‌ ವೆಬ್‌ಸೈಟ್‌ ಮುಂತಾದ ಜಾಲತಾಣದ ಮುಖಾಂತರ ಜನರಿಗೆ ಹತ್ತಿರವಾಗಿದ್ದಾರೆ.

    ಆದರೆ ರಾಜ್ಯದ ವಾಣಿಜ್ಯ ನಗರದ ಮಂಗಳೂರು ಪೊಲೀಸರು ಮಾತ್ರ ಓಬಿರಾಯನ ಕಾಲದಲ್ಲೇ ಇರುವುದು ದುರಂತವೇ ಸರಿ.
    ಈ ಬಗ್ಗೆ ಈಗಲಾದರೂ ಮಂಗಳೂರು ನಗರ ಪೊಲೀಸ್‌ ಆಯುಕ್ತರು ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಜನರಿಗೆ ಪೊಲೀಸ್‌ ಇಲಾಖೆಯ ಮಾಹಿತಿ, ಅಧಿಕಾರಿಗಳ ಸಂಪರ್ಕ ಸಂಖ್ಯೆ, ಪೊಲೀಸ್‌ ಠಾಣಾ ಮಾಹಿತಿ ಸೇರಿ ಪ್ರತಿನಿತ್ಯ ಅಪರಾಧ ಪ್ರಕರಣ, ಇಲಾಖೆಯ ಪತ್ರಿಕಾ ಪ್ರಕಟಣೆಗಳ ಬಗ್ಗೆ ಗೊಂದಲಗಳು ಉಂಟಾಗಲಿದೆ.
    ಆಯ್ದ ಪತ್ರಕರ್ತರಿಗೆ ಮಾತ್ರ ಮಾಹಿತಿ
    ನಗರ ಪೊಲೀಸ್‌ ಕಮೀಷನರ್‌ ಕೆಲವು ಆಯ್ದ ಪತ್ರಕರ್ತರಿಗೆ ಮಾತ್ರ ಮಾಹಿತಿ ನೀಡುತ್ತಾರೆ ಎಂಬ ಆರೋಪ ಪತ್ರಕರ್ತರೇ ಮಾಡುತ್ತಿದ್ದಾರೆ. ಇದರಿಂದ ಎಲ್ಲಾ ಮಾಧ್ಯಮದವರಿಗೆ ಮಾಹಿತಿ ಸಿಗದೇ ಓದುಗರಿಗೂ ತಪ್ಪು ಮಾಹಿತಿ ರವಾನೆಯಾಗುತ್ತದೆ.

    ಈ ತಪ್ಪು ಮಾಹಿತಿ ರವಾನೆಯನ್ನು ತಪ್ಪಿಸುವ ಉದ್ದೇಶದಿಂದ ಹಲವು ಬಾರಿ ಪೊಲೀಸ್‌ ವೆಬ್‌ಸೈಟ್‌ ಅನ್ನು ಮೊದಲಿನಂತೆ ಸಕ್ರಿಯಗೊಳಿಸುವಂತೆ ಹಲವು ಪತ್ರಕರ್ತರು ಮತ್ತೆ ಮತ್ತೆ ಮನವಿ ಮಾಡಿದರೂ ಪೊಲೀಸ್‌ ಇಲಾಖೆ ಹಾಗೂ ಪೊಲೀಸ್‌ ಕಮೀಷನರ್‌ ಕ್ಯಾರೇ ಅನ್ನುತ್ತಿಲ್ಲ ಏಕೆ ಎಂಬ ಪ್ರಶ್ನೆ ನಿಗೂಢವಾಗಿಯೇ ಉಳಿದಿದೆ.

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?

    Published

    on

    ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
    ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.

    ಸೀಟ್ ಗಾಗಿ ಎಡವಟ್ಟು :
    ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.

    ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್‌ಗೆ 60 ರೂ., ಹಾಲ್ಫ್‌ಗೆ 40 ರೂ.
    ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.

    ರೋಹಿತ್‌ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

    ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.

    Continue Reading

    LATEST NEWS

    Trending