Connect with us

DAKSHINA KANNADA

ಮಂಗಳೂರು ಪಾಲಿಕೆ ಕಮಿಷನರ್ ಎಲ್ಲೆ ಮೀರಿ ಸದನಕ್ಕೆ ಅಗೌರವ ತಂದಿದ್ದಾರೆ-J.R ಲೋಬೋ

Published

on

ಮಂಗಳೂರು: ಬಿಜೆಪಿ ಸರ್ಕಾರದ ಅಭಿವೃದ್ಧಿ ಕೆಲಸಗಳ ಪ್ರಶ್ನೆ ಇದ್ದ ಸಂಶಯವನ್ನು ಕಾಂಗ್ರೆಸ್ ನಾಯಕ ವಿನಯರಾಜ್ ಅವರು ಸದನದಲ್ಲಿ ಪ್ರಶ್ನಿಸಿದಾಗ ಒಬ್ಬ ಆಯುಕ್ತ ಅವರನ್ನು ಕುಳಿತುಕೊಳ್ಳಿ ಎಂದು ಏರುದನಿಯಲ್ಲಿ ಹೇಳುವುದು ಎಷ್ಟು ಸರಿ ? ಇದು ಇಡೀ ಸದನಕ್ಕೆ ಆಗುವ ಅಗೌರವ. ಜನಪ್ರತಿನಿಧಿಗಳು ಪ್ರಶ್ನೆ ಕೇಳಿದಾಗ ಉತ್ತರ ನೀಡುವ ಕೆಲಸ ಜನಪ್ರತಿನಿಧಿ ಆಗಿರುವ ಮೇಯರ್ ಕೆಲಸ. ಅವರಿಗೆ ಪೂರಕವಾಗಿ ಸಹಾಯ ಮಾಡುವವರು ಆಯುಕ್ತರು. ಆದರೆ ಆಯುಕ್ತರು ಒಬ್ಬ ಜನಪ್ರತಿನಿಧಿಯಲ್ಲಿ ಈ ರೀತಿ ವರ್ತಿಸುವುದು ತಪ್ಪು’ ಎಂದು ದಕ್ಷಿಣ ವಿಧಾನ ಸಭಾ ಕ್ಷೆತ್ರದ ಮಾಜಿ ಶಾಸಕ ಜೆ ಆರ್ ಲೋಬೋ ಹೇಳಿದ್ದಾರೆ.


ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಮುಖ್ಯ ಕಾರ್ಯದರ್ಶಿ ಒಬ್ಬ ಶಾಸಕನಿಗೆ ನೀನು ಕೂತ್ಕೊ ಅಂತ ಹೇಳುವುದು ದೊಡ್ಡ ಅವಮಾನ. ಅವರಿಗಷ್ಟೇ ಅಲ್ಲ. ಸ್ಪೀಕರ್‌ಗೆ ಕೂಡಾ ಅವಮಾನ. ಇವತ್ತು ಇದನ್ನು ನಾನು ಸಮರ್ಥಿಸಿಕೊಂಡ್ರೆ ಮುಂದೆ ಜನಪ್ರತಿನಿಧಿಗಳ ಅವಸ್ಥೆ ಏನಾಗಬೇಡ.

ನಾನು ರಾಜಕೀಯ ವ್ಯಕ್ತಿಯಾಗಿ ಮಾತಾಡುತ್ತಿಲ್ಲ. ಓರ್ವ ಮಾಜಿ ಅಧಿಕಾರಿ ಆಗಿ ಮಾತನಾಡುತ್ತಿದ್ದೇನೆ. ಜನಪ್ರತಿನಿಧಿಗಳಿಗೆ ಮೇಯರ್ ನ್ಯಾಯ ಕೊಡಿಸಬೇಕು. ಆಗದಿದ್ದರೆ ಅಸಮರ್ಥ. ಇಂತಹ ಘಟನೆ ನಡೆದಾಗ ಮೇಯರ್ ಸರಿಯಾಗಿ ನಡೆಸದೇ ಇದ್ದರೆ ಬಿಜೆಪಿ ಪಕ್ಷ ಅಸಮರ್ಥವಾಗಿದೆ ಎಂದೇ ಅರ್ಥ.

ಅಧಿಕಾರಿಗೆ ತನ್ನದೇ ಆದ ಗಡಿರೇಖೆಗಳಿವೆ. ಅಧಿಕಾರಿಗಳೇ ನೀವು ರಾಜಕೀಯ ವ್ಯಕ್ತಿಗಳ ಕೈಗೊಂಬೆ ಆಗಬೇಡಿ. ಇಂತಹ ದುರ್ವ್ಯವಸ್ಥೆಯಲ್ಲಿ ಮುಂದೆ ಸಿಕ್ಕಿಹಾಕಿಕೊಳ್ಳುವುದು ರಾಜಕೀಯ ವ್ಯಕ್ತಿಗಳಲ್ಲ. ಅವರು ಸುಲಭವಾಗಿ ಸೇವ್ ಆಗುತ್ತಾರೆ. ಅಧಿಕಾರಿಗಳು ಸಿಕ್ಕಿಹಾಕಿಕೊಳ್ಳುತ್ತಾರೆ. ಮುಂದೆ ನಾವು ಅಧಿಕಾರಕ್ಕೆ ಬಂದಲ್ಲಿ ಸ್ಮಾರ್ಟ್‌ಸಿಟಿಯ ಸಂಪೂರ್ಣ ಅವ್ಯವಹಾರದ ತನಿಖೆ ನಡೆಸುತ್ತೇವೆ ಎಂದರು.


ಇನ್ನು ಸ್ಮಾರ್ಟ್‌ ಸಿಟಿ ವ್ಯವಸ್ಥೆಯ ಬಗ್ಗೆ ಮಾತನಾಡಿ ‘ಹಲವು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಇಲ್ಲಿ ನಡೆಯುತ್ತಿರುವ ಹಲವು ಸಮಸ್ಯೆಗಳ ಬಗ್ಗೆ ವಿಚಾರಗಳು ಬಂದಾಗ ಪ್ರತಿಪಕ್ಷವಾಗಿ ಕಾಂಗ್ರೆಸ್ ಅದರ ವಿರುದ್ಧ ದನಿ ಎತ್ತುತ್ತದೆ. ಸ್ಮಾರ್ಟ್‌ ಸಿಟಿಯಲ್ಲಿ 32 ಕೋಟಿ ರೂಪಾಯಿಯನ್ನು ಕಮಾಂಡ್ ಕಂಟ್ರೋಲ್‌ ಎಂದು ಖರ್ಚು ಮಾಡಿದ್ದಾರೆ.

ಆದರೆ ಇಲ್ಲಿ ಅಳವಡಿಸಲಾಗಿರುವ ಕ್ಯಾಮೆರಾಗಳೂ ಒಂದು ಕೂಡಾ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. 32 ಕೋಟಿ ಖರ್ಚು ಮಾಡುವಾಗ ಇದರ ಬಗ್ಗೆ ಏನು ಅಧ್ಯಯನ ಮಾಡಿದ್ದಾರೆ. ಮಿಲಾಗ್ರಿಸ್‌ನಲ್ಲಿ ಬ್ಲಾಕ್, ನಂತೂರಿನಲ್ಲಿ ಬ್ಲಾಕ್, ಕೆಪಿಟಿಯಲ್ಲಿ ಬ್ಲಾಕ್, ಲಾಲ್‌ಬಾಗ್‌ನಲ್ಲಿ ಬ್ಲಾಕ್ ಎಲ್ಲಿ ನೋಡಿದ್ರೂ ಬ್ಲಾಕ್. ಇಡೀ ನಗರವೇ ಅಸ್ತವ್ಯಸ್ತವಾಗಿದೆ. ಹಾಗಾದ್ರೆ ಇಷ್ಟರವರೆಗೆ ಇಷ್ಟು ಕೋಟಿ ಖರ್ಚು ಮಾಡಿದ್ರಲ್ವಾ ಅದಕ್ಕೆ ಅಡಿಟ್ ಇಲ್ವಾ..?

ಯಾವ ಸಿಗ್ನಲ್‌ಗಳೂ ನಡೆಯುತ್ತಿಲ್ಲ. ಸ್ಮಾರ್ಟ್ ಸಿಟಿಯ ಬಗ್ಗೆ ಹೇಳೋರಿಲ್ಲ. ಕೇಳೋರಿಲ್ಲ. ಇದರ ಬಗ್ಗೆ ದುಡ್ಡು ಮಾಡ್ಲಿಕ್ಕೆ ಯಾರು ಹೊರಟಿದ್ದಾರೆ ಗೊತ್ತಿಲ್ಲ.

ಮಾಡಿದ್ದರೆ ಅದನ್ನು ಜನರ ಮುಂದೆ ಇಡಬೇಕು. ಜನರ ತೆರಿಗೆ ಹಣವನ್ನು ವಿನಾಕಾರಣ ಪೋಲು ಮಾಡಲು ಕಾಂಗ್ರೆಸ್ ಎಂದಿಗೂ ಬಿಡುವುದಿಲ್ಲ. ಇದರಲ್ಲಿ ಯಾರೆಲ್ಲ ದುಡ್ಡು ಮಾಡಲು ಮಾಡಲು ಮುಂದಾಗಿದ್ದಾರೆ. ? ಇದರ ಬಗ್ಗೆ ಶ್ವೇತ ಪತ್ರ ಹೊರಡಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

 

Click to comment

Leave a Reply

Your email address will not be published. Required fields are marked *

DAKSHINA KANNADA

ಕಡಬ: ಬಿಳಿನೆಲೆ ಕಾಡಿನಲ್ಲಿ ಅಸ್ಥಿಪಂಜರ ಪತ್ತೆ ..!

Published

on

ಕಡಬ: ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿಯಿರುವ ಕಾಡಿನಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಬಗ್ಗೆ ಎ.19ರಂದು ವರದಿಯಾಗಿದೆ. ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದ ಪಕ್ಕದಲ್ಲಿ ಅಸ್ಥಿಪಂಜರ ದೊರಕಿದೆ.

ಅಸ್ಥಿಪಂಜರ

ಬಿಳಿನೆಲೆಯ ಚಂದ್ರಶೇಖರ್ ಎಂವರು ಕಾಡಿಗೆ ಸೌದೆ ತರಲು ಹೋಗಿದ್ದಾಗ ಕೊಳೆತ ವಾಸನೆ ಬಂದಿದೆ. ಈ ಬಗ್ಗೆ ಹುಡುಕಾಡಿದಾಗ ಮೃತ ವ್ಯಕ್ತಿಯ ಅಸ್ಥಿಪಂಜರ ಕಂಡುಬಂದಿದೆ. ದೂರದದಲ್ಲಿದ್ದ ಮರದ ಕೊಂಬೆಯಲ್ಲಿ ಬಟ್ಟೆಯೊಂದು ನೇತಾಡುವುದು ಕಂಡು ಬಂದಿದೆ.

Read More..;ಸೈಕಲ್ ರಿಪೇರಿ ವಿಚಾರಕ್ಕೆ ಜೀ*ವಾಂತ್ಯಗೊಳಿಸಿದ ಬಾಲಕ..!

ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಯುಡಿ ಆರ್‌:12/2024 ಕಲಂ:174(3),(iv) CrPC ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Continue Reading

DAKSHINA KANNADA

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್

Published

on

ಬಂಟ್ವಾಳ : ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಪೋರೇಟರ್‌ ಆಗಿ ಮೇಯರ್ ಆಗಿದ್ದ ಕವಿತಾ ಸನಿಲ್ ಇದೀಗ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಮುಂಚೂಣಿಯಲ್ಲಿದ್ದ ಕವಿತಾ ಸನಿಲ್‌ ವಿಧಾನ ಸಭಾ ಚುನಾವಣೆಯಲ್ಲೂ ಸಾಕಷ್ಟು ಪ್ರಚಾರ ಮಾಡಿದ್ರು. ಸಿಎಂ ಸಿದ್ದರಾಮಯ್ಯ ಅವರಿಗೂ ಉತ್ತಮ ಒಡನಾಟ ಇಟ್ಟುಕೊಂಡಿದ್ದ ಕವಿತಾ ಸನಿಲ್ ಸದ್ಯ ಪಕ್ಷದ ನಾಯಕರ ಬಗ್ಗೆ ಅಸಮಾಧಾನಗೊಂಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೂ ತನಗೆ ಸೂಕ್ತ ಸ್ಥಾನಮಾನ ನೀಡಿಲ್ಲ ಎಂದು ಪಕ್ಷ ಚಟುವಟಿಕೆಯಿಂದ ದೂರ ಉಳಿದಿದ್ದರು. ಯಾವುದಾದರು ಒಂದು ನಿಗಮ ಸಿಗಬಹುದು ಎಂಬ ಅವರ ನಿರೀಕ್ಷೆ ಹುಸಿಯಾದ ಹಿನ್ನಲೆಯಲ್ಲಿ ಇದೀಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಂಟ್ವಾಳಕ್ಕೆ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಂದ ಬಿಜೆಪಿ ಬಾವುಟ ಪಡೆದು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಇದನ್ನೂ ಓದಿ : ಸೂಪರ್ ಹಿಟ್ ಚಿತ್ರ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್ ಡೇಟ್ ಫಿಕ್ಸ್!

Continue Reading

DAKSHINA KANNADA

‘ಕೇಸರಿಕರಣ’ವಾದ ಡಿಡಿ ನ್ಯೂಸ್..! ಚರ್ಚೆಗೆ ಕಾರಣವಾದ ಹೊಸ ಲೋಗೋ..!

Published

on

ಮಂಗಳೂರು : ಚುನಾವಣಾ ಸಮಯದಲ್ಲೇ ದೇಶದ ಸರ್ಕಾರಿ ಚಾನೆಲ್ ದೂರದರ್ಶನ ತನ್ನ ಲೋಗೋದ ಬಣ್ಣವನ್ನು ಬದಲಾಯಿಸಿದೆ. ಡಿಡಿ ನ್ಯೂಸ್‌ ತನ್ನ ಲೋಗೋ ಬಣ್ಣವನ್ನು ಕೇಸರಿ ಬಣ್ಣಕ್ಕೆ ಬದಲಾಯಿಸಿರುವುದು ಈಗ ಚರ್ಚೆಗೆ ಕಾರಣವಾಗಿದೆ. 1959 ರಲ್ಲಿ ಆರಂಭವಾಗಿದ್ದ ದೂರದರ್ಶನದ ಲೋಗೋ ನೀಲಿ ಬಣ್ಣದಾಗಿದ್ದು, ಇದೀಗ ಚುನಾವಣೆಯ ಹೊಸ್ತಿಲಲ್ಲಿ ಕೇಸರಿ ಬಣ್ಣಕ್ಕೆ ಬದಲಾಯಿಸಿದ ಬಗ್ಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿದೆ. ದೇಶದಲ್ಲಿ ಎಲ್ಲವನ್ನೂ ಕೇಸರಿಕರಣ ಮಾಡುವ ಭಾಗವಾಗಿ ಈ ಬದಲಾವಣೆ ಮಾಡಲಾಗಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿದೆ.

ಕೇಂದ್ರ ಸರ್ಕಾರದ ಪ್ರಸಾರಭಾರತಿ ಅಡಿಯಲ್ಲಿ ಬರುವ ದೂರದರ್ಶನ ಏಕಾಏಕಿ ತನ್ನ ಲೋಗೋವನ್ನು ಕೇಸರಿ ಬಣ್ಣಕ್ಕೆ ಬದಲಾಯಿಸಿದೆ. ಇದನ್ನು ದೂರದರ್ಶನ ತನ್ನ ಅಧಿಕೃತ ‘X’ ಖಾತೆಯಲ್ಲಿ ಹಂಚಿಕೊಂಡಿದ್ದು, ಲೋಗೋ ಕೇವಲ ದೃಶ್ಯ ಸೌಂದರ್ಯದ ಬದಲಾವಣೆಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.

“ನಮ್ಮ ಮೌಲ್ಯಗಳು ಒಂದೇ ಆಗಿರುವಾಗ, ನಾವು ಈಗ ಹೊಸ ಅವತಾರದಲ್ಲಿ ಸಿಗಲಿದ್ದೇವೆ. ಹಿಂದೆಂದಿಗಿಂತಲೂ ಉತ್ತಮ ಸುದ್ದಿ ಪ್ರಯಾಣಕ್ಕೆ ಸಿದ್ಧರಾಗಿ. ಎಲ್ಲಾ ಹೊಸ ಡಿಡಿ ನ್ಯೂಸ್ ಅನ್ನು ಅನುಭವಿಸಿ! ” ಎಂದು DD News ತನ್ನ ಅಧಿಕೃತ ‘X’ ಹ್ಯಾಂಡಲ್‌ನಲ್ಲಿ ಅದರ ಹೊಸ ಲೋಗೋದ ವೀಡಿಯೊದೊಂದಿಗೆ ಪೋಸ್ಟ್ ಮಾಡಿದೆ. ಜೊತೆಗೆ “ಕೇವಲ ಧೈರ್ಯದ ಬರವಸೆಯಲ್ಲ..ವೇಗದ ಮತ್ತು ನಿಖರತೆಯ ಬರವಸೆ ; ಹಕ್ಕುಗಳ ಮತ್ತು ಸತ್ಯದ ಬರವಸೆ ; ಸಂವೇದನೆಯ ಹಾಗೂ ಸತ್ಯದ ಬರವಸೆ ;  ಯಾಕೆಂದರೆ ಡಿಡಿ ನ್ಯೂಸ್ ನಲ್ಲಿ ಬಂದರೆ ಅದು ಸತ್ಯ! ಡಿಡಿ ನ್ಯೂಸ್ – ಭರೋಸಾ ಸಚ್ ಕಾ..” ಎಂದು ಹೇಳಿಕೊಂಡಿದ್ದಾರೆ.

2012 ಮತ್ತು 2014 ರ ನಡುವೆ ಪ್ರಸಾರ ಭಾರತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (CEO) ಸೇವೆ ಸಲ್ಲಿಸಿದ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (AITC) ರಾಜ್ಯಸಭಾ ಸಂಸದ ಜವಾಹರ್ ಸಿರ್ಕಾರ್ ಈ ಬೆಳವಣಿಗೆಯನ್ನು ಟೀಕಿಸಿದ್ದಾರೆ. ಪ್ರಸಾರ ಭಾರತಿ ದೂರದರ್ಶನ ಮತ್ತು ಆಲ್ ಇಂಡಿಯಾ ರೇಡಿಯೊ (AIR) ಮೇಲ್ವಿಚಾರಣೆ ಮಾಡುವ ಶಾಸನಬದ್ಧ ಸಂಸ್ಥೆಯಾಗಿದೆ.”ರಾಷ್ಟ್ರೀಯ ಬ್ರಾಡ್‌ಕಾಸ್ಟರ್ ತನ್ನ ಬ್ರ್ಯಾಂಡಿಂಗ್‌ಗಾಗಿ ಕೇಸರಿ ಬಣ್ಣವನ್ನು ಆಯ್ಕೆ ಮಾಡಿರುವುದು ಸರಿಯಲ್ಲ” ಎಂದು ಸಿರ್ಕಾರ್ ಸಾಮಾಜಿಕ ಮಾಧ್ಯಮ ಸೈಟ್ ‘X’ ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಹೇಳಿದ್ದಾರೆ “ಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಎಂದು ನಾನು ಪರಿಗಣಿಸುತ್ತೇನೆ” ಎಂದು ಸಿರ್ಕಾರ್ ಹೇಳಿದ್ದಾರೆ, ಲೋಗೋ ಬದಲಾವಣೆ ಮಾಡಿರುವ ಸಮಯವನ್ನು ಪ್ರಶ್ನಿಸಿದ ಅವರು. “ಇದು ರಾಜ್ಯಗಳಲ್ಲಿ ಪ್ರಭಾವ ಬೀರುತ್ತದೆ ಎಂದು ಹೇಳಿದ್ದಾರೆ. ಕೇಸರಿ ಒಂದು ನಿರ್ಧಿಷ್ಟ ಧರ್ಮವನ್ನು ಸೂಚಿಸುವ ಬಣ್ಣವಾಗಿದ್ದು ಅದನ್ನು ದೂರದರ್ಶನ ಬಳಸಿಕೊಂಡಿದ್ದು ತಪ್ಪು” ಎಂದಿದ್ದಾರೆ.

ದೂರದರ್ಶನದ ಈ ಬೆಳವಣಿಗೆಯ ಬಗ್ಗೆ ವಿರೋಧ ಪಕ್ಷಗಳು ಸಾಕಷ್ಟು ಟೀಕೆ ವ್ಯಕ್ತಪಡಿಸಿದ್ದು, ಹೊಸ ಸಂಸತ್‌ನಲ್ಲಿ ಒಳಗೆ ಎಲ್ಲಾ ಕಡೆ ಕೇಸರಿಕರಣ ಮಾಡಲಾಗಿದೆ. ಇದೀಗ ದೇಶದ ಜನರನ್ನು ದೂರದರ್ಶನದ ಮೂಲಕ ಕೇಸರಿಕರಣ ಮಾಡಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದ್ದಾರೆ.

Continue Reading

LATEST NEWS

Trending