ಕೋರ್ಟ್ ರಸ್ತೆಯಲ್ಲಿಲ್ಲ ಕಾನೂನಿಗೆ ಕಿಮ್ಮತ್ತು
ಕೋರ್ಟ್ ರಸ್ತೆಯಲ್ಲಿಲ್ಲ ಕಾನೂನಿಗೆ ಕಿಮ್ಮತ್ತು
ಮಂಗಳೂರು: ರಸ್ತೆ ಅಗಲವಾದಂತೆ ವಾಹನ ಸಂಚಾರ ಸುಗಮವಾಗಿ ಸಾಗೋದು ಸಾಮಾನ್ಯ. ಆದರೆ ಮಂಗಳೂರಿನ ನ್ಯಾಯಾಲಯಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ಮಾತ್ರ ಇದು ಕೊಂಚ ಡಿಫರೆಂಟ್. ಮಂಗಳೂರಿನ ನ್ಯಾಯಾಲಯಕ್ಕೆ ಹೊಸ ಕಟ್ಟಡ ನಿರ್ಮಾಣಗೊಂಡ ಬಳಿಕ ನ್ಯಾಯಾಲಯವನ್ನು ಸಂಪರ್ಕಿಸುವ ರಸ್ತೆಯನ್ನೂ ಅಭಿವೃದ್ಧಿಪಡಿಸಲಾಗಿದೆ.
ಸಂತ ಅಲೋಶಿಯಸ್ ಐಟಿಐ ಪಕ್ಕದಲ್ಲಿ ಹಾದುಹೋಗುವ ರಸ್ತೆಗೆ ಕಾಂಕ್ರೀಟು ಹಾಕಿ ನಾಲ್ಕು ವಾಹನಗಳು ಏಕಕಾಲಕ್ಕೆ ಹಾದು ಹೋಗಬಹುದಾದಂತ ರಸ್ತೆಯನ್ನು ನಿರ್ಮಿಸಲಾಗಿದೆ. ಆದರೆ ರಸ್ತೆ ನಿರ್ಮಾಣವಾದ ಬಳಿಕ ಈ ರಸ್ತೆಯಲ್ಲಿ ಕೆಲವು ಸಂದರ್ಭಗಳಲ್ಲಿ ಸೈಕಲ್ ಹೋಗಲೂ ದಾರಿ ಇಲ್ಲದಂತಹ ಸ್ಥಿತಿ ನಿರ್ಮಾಣಗೊಳ್ಳುತ್ತಿದೆ.
ನ್ಯಾಯಾಲಯಕ್ಕೆ ಬರುವ ವಕೀಲರು, ಗ್ರಾಹಕರು ಈ ರಸ್ತೆಯಲ್ಲಿ ಸಿಕ್ಕ ಸಿಕ್ಕಲ್ಲಿ ತಮ್ಮ ವಾಹನಗಳನ್ನು ನಿಲ್ಲಿಸಿ ಹೋಗುತ್ತಿದ್ದು, ಈ ರಸ್ತೆಯ ಮೂಲಕ ಹಾದುಹೋಗುವ ಇತರ ವಾಹನ ಸವಾರರಿಗೆ ಭಾರೀ ತೊಂದರೆಯಾಗುತ್ತಿದೆ. ಎಮರ್ಜೆನ್ಸಿಗೆಂದು ರಸ್ತೆಯ ಬದಿಯಲ್ಲಿ ಪಾರ್ಕ್ ಮಾಡಿದ ವಾಹನಗಳನ್ನು ಟೋಯ್ ವಾಹನದ ಮೂಲಕ ಸಾಗಿಸುವ ಸಂಚಾರಿ ಪೋಲೀಸರು ಮಾತ್ರ ಈ ರಸ್ತೆಯಲ್ಲಿ ರಸ್ತೆ ನಿಯಮಗಳನ್ನು ಗಾಳಿಗೆ ತೂರಾಡುತ್ತಿದ್ದರೂ, ಒಂದು ಬಾರಿಯೂ ಇತ್ತ ಬಂದು ರಸ್ತೆ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ ವಾಹನಗಳ ವಿರುದ್ಧ ಕ್ರಮ ಜರುಗಿಸಿಲ್ಲ.
ಕಾನೂನನ್ನು ಅರಿದು ಕುಡಿದವರ ವಾಹನಗಳೇ ಇಲ್ಲಿ ಅಡ್ಡಾದಿಡ್ಡಿಯಾಗಿ ನಿಲ್ಲುತ್ತಿದ್ದು, ತಮಗೆ ಯಾವುದೇ ಕಾನೂನು ಅನ್ವಯಿಸುವುದಿಲ್ಲ ಎನ್ನುವ ವಿಶ್ವಾಸವೂ ಇವರಲ್ಲಿದ್ದಂತೆ ಕಾಣುತ್ತಿದೆ. ಮಂಗಳೂರಿನ ನ್ಯಾಯಾಲಯಕ್ಕೆ ಘನಘೋರ ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಆರೋಪಿಗಳು ಬರುತ್ತಿದ್ದು, ರಸ್ತೆಯಲ್ಲಾಗುತ್ತಿರುವ ಈ ರೀತಿ ಸಂಚಾರಿ ಒತ್ತಡದ ಪ್ರಯೋಜನ ಪಡೆದು ಈ ಕೈದಿಗಳು ಒಂದು ವೇಳೆ ಪೋಲೀಸ್ ವಾಹನದಿಂದ ಹಾರಿ ಪರಾರಿಯಾದರೆ ಮತ್ತೆ ಅವರನ್ನು ಹಿಡಿಯಲು ಸಾಧ್ಯವೇ ಇಲ್ಲ ಎನ್ನುವ ಸ್ಥಿತಿಯೂ ನಿರ್ಮಾಣವಾಗುತ್ತಿದೆ.
ಸಂಬಂಧಪಟ್ಟ ಸಂಚಾರಿ ಪೋಲೀಸರು ಈ ಬಗ್ಗೆ ಸೂಕ್ತ ಕ್ರಮ ಜರುಗಿಸಬೇಕಿದ್ದು, ರಸ್ತೆಯ ಒಂದು ಬದಿಯಲ್ಲಿ ಮಾತ್ರ ವಾಹನ ನಿಲುಗಡೆಗೆ ಅವಕಾಶ ಮಾಡಿಕೊಡುವ ಮೂಲಕ ಇತರ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎನ್ನುವ ಒತ್ತಾಯ ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ.
FILM
ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ
ಉಡುಪಿ: ಇಂದು ಬೆಳಂಬೆಳಗ್ಗೆ ರಾಜಕೀಯ ನಾಯಕರು, ಜನಸಾಮಾನ್ಯರು ಮತಗಟ್ಟೆಗೆ ಬಂದು ಮತ ಚಲಾಯಿಸಿದರೆ ಉಡುಪಿಯ ಮತಗಟ್ಟೆಯಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಮತದಾನ ಮಾಡಿದ್ದಾರೆ.
ಕುಕ್ಕಿಕಟ್ಟೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸಂಖ್ಯೆ 197 ಕ್ಕೆ ಆಗಮಿಸಿ ಮತ ಚಲಾಯಿಸಿದರು. ರಕ್ಷಿತ್ ಶೆಟ್ಟಿ ಮನೆಯ ಮುಂಭಾಗದಲ್ಲೇ ಇರುವ ಮತಗಟ್ಟೆಗೆ ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದರು. ರಕ್ಷಿತ್ ಶೆಟ್ಟಿ ಈ ಸಂದರ್ಭದಲ್ಲಿ ಸೆಲೆಬ್ರೆಟಿಯನ್ನು ಕಂಡ ಇತರ ಮತದಾರರು ಹರ್ಷಚಿತ್ತರಾಗಿ ಸೆಲ್ಫೆ ಕ್ಲಿಕಿಸಲು ಮುಂದಾದ ಘಟನೆ ನಡೆಯಿತು.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
LATEST NEWS
ಅಯೋಧ್ಯೆಯ ಅಂಗಳದಲ್ಲಿ ಶೂಟಿಂಗ್ ಮಾಡಿದ ಮೊಟ್ಟ ಮೊದಲ ಕನ್ನಡ ಸೀರಿಯಲ್ ಇದು?
ಮಹಿಳೆಯರಿಗೆ ಸೀರಿಯಲ್ ನೋಡುವುದಂದರೆ ಒಂತಾರ ಹುಚ್ಚು. ಮನೆಯಲ್ಲೇ ಇರುವ ಮಹಿಳೆಯರು ಕೆಲವೊಮ್ಮೆ ಬೆಳಗ್ಗೆಯಿಂದ ಸಂಜೆಯವರೆಗೆ ಟಿವಿಯಲ್ಲಿ ಸೀರಿಯಲ್ ನೋಡುತ್ತಾ ಇರುತ್ತಾರೆ. ಸೀರಿಯಲ್ ನೋಡೊದು ಮಾತ್ರ ಅಲ್ಲ ಅದರ ಬಗ್ಗೆ ಸಂವಾದ ಕೂಡ ಮನೆಯವರಲ್ಲಿ ಮಾಡುತ್ತಾ ಇರುತ್ತಾರೆ.
ಈ ನಡುವೆ ಅಯೋಧ್ಯೆ ರಾಮಮಂದಿರ ನಿರ್ಮಾಣದ ನಂತರ ದೇಶದ ಜನರು ತುಂಬಾ ಸಂತೋಷದಲ್ಲಿದ್ದಾರೆ. ಅದೆಷ್ಟೋ ಜನ ಹಿಂದೂಗಳ ಕನಸು ನನಸಾದ ಕ್ಷಣ ಎಂದು ಹೇಳಬಹುದು. ಒಮ್ಮೆಯಾದ್ರೂ ಅಯೋಧ್ಯೆಗೆ ಹೋಗಿಬರಬೇಕು ಅಂತಾ ಪ್ಲಾನ್ ಅಂತೂ ಮಾಡ್ತಾ ಇರೋದು ಕಂಡಿತ. ಕೆಲವರು ಹೋಗಿ ಬಂದಿದ್ದಾರೆ ಕೂಡ ಆದರೆ ಇನ್ನು ಕೆಲವರು ಇನ್ನು ಹೋಗಬೇಕು. ಇದುವರೆಗೆ ಅಯೋಧ್ಯೆ ರಾಮಮಂದಿರದಲ್ಲಿ ಯಾವೂದೇ ರೀತಿದ ಫಿಲ್ಮ್ ಶೂಟಿಂಗ್, ಸೀರಿಯಲ್, ಕಿರುಚಿತ್ರ ಯಾವೂದು ಶೂಟಿಂಗ್ ಆಗಲಿಲ್ಲ. ಆದರೇ ಇದೇ ಮೊದಲ ಬಾರಿಗೇ ಕನ್ನಡ ಸೀರಿಯಲ್ ಇಂಡಸ್ಟ್ರಿಯಲ್ಲಿ ಕನ್ಯಾದಾನ ಸೀರಿಯಲ್ ಹೊಸ ದಾಖಲೆ ಬರೆದಿದೆ.
ಉದಯ ಟಿವಿಯಲ್ಲಿ ಪ್ರಸಾರವಾಗೋ ಕನ್ಯಾದಾನ ಧಾರಾವಾಹಿ ಈಗ ಹೊಸ ದಾಖಲೆ ಬರೆದಿದ್ದಾರೆ. ಕನ್ನಡ ಟೆಲಿವಿಷನ್ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಅಯೋಧ್ಯೆಯಲ್ಲಿ ಚಿತ್ರೀಕರಣಗೊಂಡ ಮೊಟ್ಟ ಮೊದಲ ಸೀರಿಯಲ್ ಎಂಬ ಹೆಗ್ಗಳಿಕೆಗೆ ಕನ್ಯಾದಾನ ಧಾರಾವಾಹಿ ಪಾತ್ರವಾಗಿದೆ.
ಜನವರಿ 22ರಂದು ಅಂದ್ರೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯಾದ ನಂತರ ಇಲ್ಲಿಯವೆರೆಗೂ ಯಾವುದೇ ಸಿನಿಮಾವಾಗ್ಲಿ, ಅಥವಾ ಸೀರಿಯಲ್ ಆಗ್ಲಿ ಶೂಟ್ ಮಾಡಿರಲಿಲ್ಲ. ಆದ್ರೆ, ಕನ್ಯಾದಾನ ಧಾರವಾಹಿ ತಂಡ ಫಸ್ಟ್ಟೈಮ್ ಅಯೋಧ್ಯೆಗೆ ಹೋಗಿ ಚಿತ್ರೀಕರಣ ಮಾಡಿದೆ.
ಈ ಸೀರಿಯಲ್ನಲ್ಲಿ ಬಹುತೇಕ ಪಾತ್ರಗಳು ಒಂದಲ್ಲ ಒಂದು ಸಮಸ್ಯೆ ಎದುರಿಸ್ತಿವೆ. ಹಾಗಾಗಿ ರಾಮನ ದರ್ಶನ ಪಡೆದು ಆ ಕಷ್ಟಗಳಿಂದ ಹೊರಬರಬೇಕು ಎಂದು ನಿರ್ಧರಿಸಿ, ರಾಮಮಂದಿರಕ್ಕೆ ಹೋಗಿ ಬಾಲರಾಮನ ದರ್ಶನ ಪಡೆದಿದ್ದಾರೆ. ಅಯೋಧ್ಯೆಯಲ್ಲಿ ಶೂಟಿಂಗ್ ಮಾಡಿರೋ ಬಗ್ಗೆ ಸೀರಿಯಲ್ ತಂಡ ಸಂತಸ ಹಂಚಿಕೊಂಡಿದೆ.