DAKSHINA KANNADA
ಮಂಗಳೂರು : ಕಿನ್ನಿಗೋಳಿಯಲ್ಲಿ ಚಿನ್ನದ ಒಡವೆಗಳನ್ನು ತೊಳೆದು ಕೊಡುವ ನೆಪದಲ್ಲಿ ಹಗಲು ದರೋಡೆ..!
ಮಂಗಳೂರು ಸಮೀಪದ ಕಿನ್ನಿಗೋಳಿಯ ಸುತ್ತ ಮುತ್ತ ಮನೆ ಮನೆಗೆ ತೆರಳಿ ಚಿನ್ನದ ಒಡವೆಗಳನ್ನು ತೊಳೆದು ಕೊಡುವ ನೆಪದಲ್ಲಿ ಹಗಲು ದರೋಡೆಗೆ ಇಳಿಯುವ ತಂಡಗಳು ಕಾರ್ಯಾಚರಿಸುತ್ತಿವೆ ಎಂಬ ಆರೋಪಗಳು ಕೇಳಿ ಬಂದಿದೆ.
ಮಂಗಳೂರು : ಮಂಗಳೂರು ಸಮೀಪದ ಕಿನ್ನಿಗೋಳಿಯ ಸುತ್ತ ಮುತ್ತ ಮನೆ ಮನೆಗೆ ತೆರಳಿ ಚಿನ್ನದ ಒಡವೆಗಳನ್ನು ತೊಳೆದು ಕೊಡುವ ನೆಪದಲ್ಲಿ ಹಗಲು ದರೋಡೆಗೆ ಇಳಿಯುವ ತಂಡಗಳು ಕಾರ್ಯಾಚರಿಸುತ್ತಿವೆ ಎಂಬ ಆರೋಪಗಳು ಕೇಳಿ ಬಂದಿದೆ.
ಸದ್ಯ ಇಲ್ಲಿನ ಕಿನ್ನಿಗೋಳಿ ಪರಿಸರದಲ್ಲಿ ನಡೆದಿರುವ ಈ ಕುರಿತಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.
ವೈರಲ್ ಆಗಿರುವ ಈ ವಿಡಿಯೋದಲ್ಲಿ ಮನೆಯೊಂದಕ್ಕೆ ಭೇಟಿ ನೀಡುವ ಯುವಕನೋರ್ವ ಚಿನ್ನದ ಒಡವೆಗಳನ್ನು ತೊಳೆಯುವ ನೆಪದಲ್ಲಿ ಪಡೆದುಕೊಳ್ಳುತ್ತಾನೆ.
ಬಳಿಕ ತಾನೇ ತಂದಿರುವ ಪಾತ್ರೆಯಲ್ಲಿ ಪುಡಿಯೊಂದನ್ನು ಹಾಕಿ ನೀರಿನಲ್ಲಿ ತೊಳೆಯುತ್ತಾನೆ.
ಆಗ ಚಿನ್ನದ ಒಡವೆಗಳಿಗೆ ಹೊಳಪು ಬರುತ್ತದೆ. ಅದರೆ ಒಡವೆಯ ಸುಮಾರು 25 % ನಷ್ಟು ಕರಗಿ ಅವನು ತಂದಿರುವ ನೀರಿನಲ್ಲಿರುತ್ತದೆ.
ಕಿನ್ನಿಗೋಳಿ ಸುತ್ತಮುತ್ತ ಎರಡು ಮೂರು ಕಡೆಗಳಲ್ಲಿ ಇಂತಹ ಪ್ರಕರಣ ಬೆಳಕಿಗೆ ಬಂದಿದೆ. ಚಿನ್ನದ ಒಡವೆಗಳನ್ನು ತೊಳೆದ ಮೂರು ನಾಲ್ಕು ಗಂಟೆಗಳಲ್ಲಿ ತುಂಡು ತುಂಡಾಗುತ್ತದೆ ಎಂದು ಮೋಸ ಹೋದವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಕಿನ್ನಿಗೋಳಿ ಸಮೀಪದಲ್ಲಿ ಮನೆಯೊಂದರಲ್ಲಿ ಬಂಗಾರ ತೊಳೆಯುವಾಗ ಯುವಕನೋರ್ವ ಈ ದೃಶ್ಯವನ್ನು ತಮ್ಮ ಮೊಬೈನಲ್ಲಿ ಸೆರೆ ಹಿಡಿದಿದ್ದು, ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.
ಜಿಲ್ಲೆಯ ಹಲವು ಭಾಗಗಳಲ್ಲಿ ಇವರು ತಂಡಗಳಿದ್ದು, ಒಬ್ಬಂಟಿಯಾಗಿ ಮನೆ ಮನೆಗೆ ತೆರಳಿ ಕಾರ್ಯಾಚರಿಸುತ್ತಿವೆ ಎಂಬ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸುತ್ತಿದ್ದಾರೆ.
DAKSHINA KANNADA
ಆಸ್ಪತ್ರೆ ಸೆಲ್ ನಲ್ಲಿ ಕುಣಿಕೆಗೆ ಕೊರೊಳೊಡ್ಡಿದ ಖೈದಿ..!
ಮಂಗಳೂರು: ಮಂಗಳೂರು ಸಬ್ ಜೈಲಿನಲ್ಲಿದ್ದ ಕೇರಳ ಮೂಲದ ಖೈದಿಯೊಬ್ಬ ಆಸ್ಪತ್ರೆಯಲ್ಲೇ ಕುಣಿಕೆಗೆ ಕೊರಳೊಡ್ಡಿ ಜೀವಾಂತ್ಯಗೊಳಿಸಿದ್ದಾನೆ. ಕೊಣಾಜೆಯ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 2022 ರಲ್ಲಿ ಈತ ಬಂಧಿತನಾಗಿದ್ದ . ಕೇರಳ ಮೂಲದವನಾಗಿದ್ದ ಮಹಮ್ಮದ್ ನೌಫಲ್ ಜೀವಾಂತ್ಯಗೊಳಿಸಿದ ಖೈದಿಯಾಗಿದ್ದಾನೆ. ಕೆಲ ಸಮಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಈತನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಏಪ್ರಿಲ್ 25 ರಂದು ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಯ ಸೆಲ್ ವಾರ್ಡ್ ಗೆ ದಾಖಲಿಸಲಾಗಿತ್ತು. ಸೆಲ್ ವಾರ್ಡನಲ್ಲಿ ಇರುವಾಗಲೇ ಈತ ಜೀವಾಂತ್ಯಗೊಳಿಸಿದ್ದಾನೆ. ಈತನನ್ನು ಉಳಿಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನಗಳ ನಡೆಸಿದರಾದ್ರೂ ಸಾದ್ಯವಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
DAKSHINA KANNADA
15 ಸಾವಿರ ಸಂಬಳ..! ಮನೆಯಲ್ಲಿ ಕಂತೆ ಕಂತೆ ನೋಟು..! ED ಅಧಿಕಾರಿಗಳೇ ಶಾಕ್..!
ಮಂಗಳೂರು ( ಜಾರ್ಖಂಡ್ ): ಆತ ತಿಂಗಳಿಗೆ 15 ಸಾವಿರ ಸಂಬಳ ಪಡೆಯುವ ಒಬ್ಬ ಸಾಮಾನ್ಯ ನೌಕರ. ಆದ್ರೆ ಆತನ ಮನೆಗೆ ಇಡಿ ದಾಳಿ ಮಾಡಿ ಬರೋಬ್ಬರಿ 30 ಕೋಟಿ ಹಣವನ್ನು ಜಪ್ತಿ ಮಾಡಿದೆ. ಇದು ಜಾರ್ಖಂಡ್ನಲ್ಲಿ ನಡೆದ ಘಟನೆಯಾಗಿದ್ದು, ಹತ್ತು ಸಾವಿರ ಲಂಚ ಪ್ರಕರಣದ ಸಂಬಂಧ ತನಿಖೆ ನಡೆಸಿದ್ದ ಇಡಿ ಸಾಮಾನ್ಯ ನೌಕರನ ಮನಗೆ ದಾಳಿ ಮಾಡಿತ್ತು. ಅಲ್ಲಿ ಅಡಗಿಸಿಟ್ಟಿದ್ದ ಹಣ ನೋಡಿ ಇಡಿ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಹಣ ಎಣಿಸಲು ಮೆಷಿನ್ ಹಾಗೂ ಹೆಚ್ಚುವರಿ ನೌಕರರನ್ನು ಮನೆಗೆ ಕರೆಸಿಕೊಂಡಿದ್ದಾರೆ.
ನೌಕರನ ಮನೆಗೆ ಲಂಚದ ಹಣ…!
ಜಾರ್ಖಂಡ್ ನ ಸಚಿವ ಅಲಂಗೀರ್ ಆಲಂ ಅವರ ಖಾಸಗಿ ಕಾರ್ಯದರ್ಶಿ ಮನೆ ಮೇಲೆ ರಾಂಚಿಯ ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಅಲಂಗೀರ್ ಆಲಂ ಅವರ ಸಚಿವಾಲಯದಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಅಲ್ಲಿನ ಲಂಚದ ಹಣ ನೌಕರನ ಮನೆಗೆ ಹೋಗುತ್ತದೆ ಅನ್ನೋ ಮಾಹಿತಿ ಸಿಕ್ಕಿತ್ತು. ಹೀಗಾಗಿ ಸಚಿವರ ಆಪ್ತ ಕಾರ್ಯದರ್ಶಿಯ ಅಡಿಯಲ್ಲಿ ಮಾಸಿಕ 15 ಸಾವಿರಕ್ಕೆ ಕೆಲಸ ಮಾಡುತ್ತಿದ್ದ ನೌಕರನ ಮನೆಗೆ ದಾಳಿ ಮಾಡಿದಾಗ ಇಷ್ಟೊಂದು ಪ್ರಮಾಣದ ಹಣ ಪತ್ತೆಯಾಗಿದೆ.
ವಿಡಿಯೋ ನೋಡಿ :
ಹತ್ತು ಸಾವಿರ ಲಂಚದ ಹಿಂದೆ ಬಿದ್ದಿದ್ದ ಇಡಿ..!
ಕಳೆದ ವರ್ಷ ಹತ್ತು ಸಾವಿರ ರೂಪಾಯಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಇಂಜೀನಿಯರ್ ಮನೆ ಮೇಲೆ ಇಡಿ ದಾಳಿ ನಡೆಸಿತ್ತು. ಈ ವೇಳೆ ಇಂಜೀನಿಯರ್ ಅವರ ಹೇಳಿಕೆಯನ್ನು ದಾಖಲಿಸಿದಾಗ ಲಂಚದ ಹಣ ಸಚಿವರಿಗೆ ತಲುಪಿಸಲಾಗುತ್ತದೆ ಎಂಬ ಸ್ಪೋಟಕ ಹೇಳಿಕೆ ನೀಡಿದ್ದರು. ಬಳಿಕ ಜಾರ್ಖಂಡ್ನ ಗ್ರಾಮೀಣ ಅಭಿವೃದ್ದಿ ಸಚಿವ ಅಲಂಗೀರ್ ಆಲಂ ಹಾಗೂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಹೆಸರು ಮುನ್ನಲೆಗೆ ಬಂದಿತ್ತು . ಹೀಗಾಗಿ ಸಂಜೀವ್ ಲಾಲ್ ಅವರ ಬಳಿ ನೌಕರನಾಗಿದ್ದ ವ್ಯಕ್ತಿಯ ಮನೆಗೆ ದಾಳಿ ಮಾಡಲಾಗಿದೆ.
ಇದನ್ನೂ ಓದಿ : ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು..!
ಜಾರ್ಖಂಡ್ ಕಾಂಗ್ರೆಸ್ ಸರ್ಕಾರದ ಸಚಿವ…!
ಅಲಂಗೀರ್ ಆಲಂ ಜಾರ್ಖಂಡ್ನ ಪಾಕುರ್ ಕ್ಷೇತ್ರದಿಂದ ನಾಲ್ಕು ಬಾರಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈಗ ಸರ್ಕಾರದಲ್ಲಿ ಸಂಸದೀಯ ವ್ಯವಹಾರ ಮತ್ತು ಗ್ರಾಮೀಣಾಭಿವೃದ್ದಿ ಸಚಿವರಾಗಿದ್ದಾರೆ. ಈ ಹಿಂದೆ 2006 ರಿಂದ 2009 ರ ವರೆಗೆ ಅವರು ಸ್ಪೀಕರ್ ಕೂಡಾ ಆಗಿದ್ದರು. 2023ರ ಡಿಸೆಂಬರ್ ತಿಂಗಳಲ್ಲಿ ಜಾರ್ಖಂಡ್ನ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಉದ್ಯಮಿ ಧೀರಜ್ ಸಾಹು ಮನೆ ಮೇಲೂ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ಮನೆಯಲ್ಲಿ 350 ಕೋಟಿಯಷ್ಟು ಹಣ ಪತ್ತೆಯಾಗಿತ್ತು. ಈ ವೇಳೆ ಧೀರಜ್ ಸಾಹು ಅದು ಮದ್ಯದ ವ್ಯವಹಾರದ ಹಣವಾಗಿದ್ದು, ಅದಕ್ಕೂ ಪಕ್ಷಕ್ಕೂ ಸಂಬಂಧ ಇಲ್ಲ ಎಂದು ಹೇಳಿದ್ದರು.
DAKSHINA KANNADA
ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು..!
ಬಂಟ್ವಾಳ : ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಬಂಟ್ವಾಳದ ನಾವೂರು ಎಂಬಲ್ಲಿ ಭಾನುವಾರ(ಎ.5) ಸಂಜೆ ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಮತ್ತು ಇಲಿಯಾಸ್ ಅವರ ಪುತ್ರಿ ಮರಿಯಮ್ ನಾಶೀಯಾ (14 )ಮೃತಪಟ್ಟ ಬಾಲಕಿಯರು.
ಮುಂದೆ ಓದಿ..; ಬರ್ಬರ ಹತ್ಯೆಯಾದ ಬ್ಯೂಟಿ ಕ್ವೀನ್.!! ಮುಳುವಾಯಿತಾ ಇನ್ಸ್ಟಾಗ್ರಾಮ್ ಪೋಸ್ಟ್..! ಸಿಸಿಟಿವಿಯಲ್ಲಿ ಸೆರೆಯಾದ ಭಯಾನಕ ದೃಶ್ಯ
ಮೂಲತಃ ನಾವೂರ ನಿವಾಸಿಯಾದ ಇಲಿಯಾಸ್ ಅವರು ಇತ್ತೀಚಿಗೆ ಉಳ್ಳಾಲದಲ್ಲಿ ಮನೆ ಕಟ್ಟಿಸಿದ್ದರು. ನಿನ್ನೆ ನಾವೂರು ಮೈಂದಾಳದಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದರು. ಸಂಜೆ ವೇಳೆ ಮನೆಯವರ ಜತೆಗೆ ನಾವೂರಿನ ನೀರಕಟ್ಟೆ ಎಂಬಲ್ಲಿ ನೇತ್ರಾವತಿ ನದಿಗೆ ತೆರಳಿದ್ದರು. ಈ ವೇಳೆ ಮನೆ ಮಂದಿ ಇರುವಾಗಲೇ ಮಕ್ಕಳು ನೀರಿನಲ್ಲಿ ಆಟ ಆಡುತ್ತಾ ಇದ್ದರು. ಈ ಸಂದರ್ಭದಲ್ಲಿ ಇಬ್ಬರು ಮಕ್ಕಳು ಏಕಾ ಏಕಿ ನೀರಿನಲ್ಲಿ ಮುಳುಗಿದ್ದಾರೆ. ನೀರಿನಲ್ಲಿ ಮುಳುಗುವುದನ್ನು ಕಣ್ಣಾರೆ ಕಂಡರೂ ಈಜು ಬಾರದ ಕಾರಣ ಮಕ್ಕಳನ್ನು ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
- DAKSHINA KANNADA4 days ago
ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್ಗಳ ಹಗಲು ದರೋಡೆ..! ಏನಿದು ಘಟನೆ?
- FILM6 days ago
ಬಿಗ್ ಬಾಸ್ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ನಮ್ರತಾ ಗೌಡ!
- dehali5 days ago
ನಾಯಿಗಳಿಗೂ ಬಂತು ಆಧಾರ್ ಕಾರ್ಡ್.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?
- BELTHANGADY5 days ago
ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು