Connect with us

DAKSHINA KANNADA

ಮಂಗಳೂರು ಡ್ರಗ್‌ ಪೂರೈಕೆ, ಸೇವನೆ ಪ್ರಕರಣ : ವೈದ್ಯರು- ಮೆಡಿಕಲ್ ವಿದ್ಯಾರ್ಥಿಗಳ ಬಂಧನ, ಪೊಲೀಸ್ ಕಮಿಷನರ್ ನಡೆಗೆ ತೀವ್ರ ವಿರೋಧ..!

Published

on

ಮಂಗಳೂರು :  ಮಂಗಳೂರಿನಲ್ಲಿ ಡ್ರಗ್ ಪೂರೈಕೆ ಮತ್ತು ಸೇವನೆಯಲ್ಲಿ ಸಿಕ್ಕಿ ಬಿದ್ದ ನಗರದ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನ ವೈದ್ಯರು ಮತ್ತು ವಿದ್ಯಾರ್ಥಿಗಳನ್ನು ಸೂಕ್ತ ವಿಚಾರಣೆ ನಡೆಸದೇ ಮಂಗಳೂರು ನಗರ ಪೊಲೀಸ್ ಕಮಿಷನರ್‌ ಕರ್ತವ್ಯಲೋಪ ಎಸಗಿದ್ದಾರೆ ಎಂದು ನ್ಯಾಯವಾದಿ ಹಾಗು ಬಾರ್ ಅಸೋಸಿಯೇಶನ್‌ನ ಉಪಾಧ್ಯಕ್ಷ ಮನೋ ರಾಜ್‌ ಮತ್ತು ವಿಧಿವಿಜ್ಞಾನ ತಜ್ಞ ಡಾ ಮಹಬಲೇಶ್‌ ಶೆಟ್ಟಿ ಆರೋಪಿಸಿದ್ದಾರೆ.

ಮಂಗಳೂರಿನ ಪತ್ರಿಕಾ ಭವನದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಇಬ್ಬರೂ, ನಗರ ಪೊಲೀಸ್ ಕಮಿಷನರ್ ಅವರ ನಡೆಯನ್ನು ಟೀಕಿಸಿದ್ದಾರೆ.

ವಶಕ್ಕೆ ಪಡೆದುಕೊಂಡ ಆರೋಪಿಗಳನ್ನು ಕಮಿಷನರ್ ಅವರು ಸರಿಯಾಗಿ ವಿಚಾರಣೆ ಮಾಡಿದ್ದಾರೋ ಇಲ್ಲವೋ ಎಂಬ ಬಗ್ಗೆ ನಮಗೆ ಡೌಟ್ ಇದೆ.

ಕೆಲವೊಂದು ಪ್ರೊಸೀಜರ್ ಲ್ಯಾಪ್ಸ್ ಆಗಿದೆ. ನಮಗೆ ಕೆಲವೊಂದು ಅನುಮಾನಗಳಿವೆ.

ಅವರು ಡ್ರಗ್‌ ಸೇವನೆ ಮಾತ್ರ ಮಾಡಿದ್ದರೆ ಅವರನ್ನು ರಿಹ್ಯಾಬ್ಲಿಟೇಶನ್ ಸೆಂಟರ್ ಗೆ ಕಳುಹಿಸಬೇಕಾಗಿತ್ತು.

ಈ ಪ್ರಕರಣದ ಬಗ್ಗೆ ನಾವು ಹೈಕೋರ್ಟ್‌ಗೆ ರಿಟ್‌ ಹಾಕಲಿಕ್ಕೆ ರೆಡಿ ಆಗಿದ್ದೇವೆ. ಹಾಲಿ ನ್ಯಾಯಾಧೀಶರಿಂದ ಪ್ರಕರಣದ ಬಗ್ಗೆ ತನಿಖೆ ನಡೆಸಲು ಮನವಿ ಮಾಡುತ್ತಿದ್ದೇವೆ ಎಂಧರು.

ಕಮಿಷನರ್ ಅವರು  ಡ್ರಗ್ ಅಬ್ಯೂಶರನ್ನು(abuser)  ಪೆಡ್ಲರ್ ಎಂದು ಹೇಳಿದ್ದಾರೆ.

20 ದಿನ ಕಾಲ ಬಂಧನದಲ್ಲಿಟ್ಟಿದ್ದಾರೆ. ವಿದ್ಯಾರ್ಥಿಗಳ, ಅವರ ತಂದೆ ತಾಯಿಯರ ವಿವರಣೆ ಪತ್ರಿಕೆಗಳಿಗೆ ಕೊಟ್ಟು ಅವರ ಪ್ರತಿಷ್ಟೆ ಹಾಳಾಗಿದೆ.

ನಿಜವಾಗಿಯೂ ಈ ಪ್ರಕರಣದಲ್ಲಿ ತಪ್ಪಿತಸ್ಥರಿದ್ದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಿ ನಮ್ಮ ಅಡ್ಡಿ ಏನೂ ಇಲ್ಲ. ಆದರೆ ಅಮಾಯಕರನ್ನು ಕಸ್ಟಡಿಗೆ ಕಳಿಸಿರುವುದು ಸರಿಯಲ್ಲ ಎಂದು ಹರಿಹಾಯ್ದಿದ್ದಾರೆ.

ಮಂಗಳೂರು ಪೊಲೀಸರ ಈ ಕ್ರಮ ಬಗ್ಗೆ ನಾವು ಉಚ್ಚ ನ್ಯಾಯಾಲಯದ ಕದ ತಟ್ಟಿ ನ್ಯಾಯಾಕ್ಕಾಗಿ ಮನವಿ ಮಾಡಲಿದ್ದೇವೆ ಮತ್ತು ಪ್ರಕರಂ ಸಮಗ್ರ ತನಿಖೆಗೆ ಒತ್ತಾಯ ಮಾಡಲಿದ್ದೇವೆ ಎಂದರು.

2 Comments

2 Comments

  1. Dr prakyatha shetty

    24/01/2023 at 4:36 PM

    What’s so wrong in what police has done.. Wrong is a wrong whoever does it and if a doctor does it he should by punished the worst more than a common man actually

  2. Dr prakyatha shetty

    24/01/2023 at 4:37 PM

    Will these people make press meet if a common man is taken into custody? Degree has no connection to the crime they commit

Leave a Reply

Your email address will not be published. Required fields are marked *

DAKSHINA KANNADA

Sullia: ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿ ಶವವಾಗಿ ಪತ್ತೆ..!

Published

on

ಸುಳ್ಯ: ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂದು ಗುರುತಿಸಲಾಗಿದೆ.

ಸುಳ್ಯದಲ್ಲಿರುವ ಆರಂಬೂರು ಸೇತುವೆ ಬಳಿಯ ಪಯಸ್ವಿನಿ ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿಯು ಕಾಣೆಯಾಗಿದ್ದಾರೆ. ಬಳಿಕ ಅವರ ಹುಡುಕಾಟ ನಡೆಸಲಾಗಿದೆ. ಆದರೆ ಎಷ್ಟು ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಆ ಕಾರಣದಿಂದ ಸುಳ್ಯದ ಪೈಚಾರ್ ನ ಮುಳುಗು ತಜ್ಞರ ತಂಡವು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮೇಳಕ್ಕೆತ್ತುವಲ್ಲಿ ಯಶಸ್ವಿಯಾಗಿದೆ. ಸುಳ್ಯ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ

Continue Reading

DAKSHINA KANNADA

Sullia: ಮದ್ಯ ಸೇವಿಸಿ ಅಡ್ಡಾದಿಡ್ಡಿ ವಾಹನ ಚಲಾವಣೆ- ಎಪಿಎಂಸಿ ಕಾರ್ಯದರ್ಶಿ ಅಮಾನತು

Published

on

ಸುಳ್ಯ: ಮದ್ಯಪಾನ ಮಾಡಿ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಸರಕಾರಿ ವಾಹನ ಚಲಾಯಿಸಿದ ಪ್ರಕರಣದ ಆರೋಪಿ ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್‌ ಕುಮಾರ್‌ನನ್ನು ಅಮಾನತುಗೊಳಿಸಿ ಇಲಾಖೆ ಆದೇಶ ಹೊರಡಿಸಿದೆ.

ನವೀನ್‌ ಕುಮಾರ್ ಮಂಗಳವಾರ ರಾತ್ರಿ ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ಇಲಾಖೆಯ ನಾಮಫ‌ಲಕವಿರುವ ವಾಹನವನ್ನು ಅಪಾಯಕಾರಿಯಾಗಿ ಚಲಾಯಿಸಿದ್ದನೆಂದು ಆರೋಪಿಸಲಾಗಿದೆ. ಅಡ್ಡಾದಿಡ್ಡಿಯಾಗಿ ವಾಹನ ಚಲಾಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದ್ದರು. ಈ ಸಂದರ್ಭ ತಾನು ಸುಳ್ಯ ಎಪಿಎಂಸಿ ಕಾರ್ಯದರ್ಶಿ, ನನ್ನದು ತಪ್ಪಾಯಿತು ಎಂದು ಕ್ಷಮೆ ಯಾಚಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಎಪಿಎಂಸಿ ಕಾರ್ಯದರ್ಶಿಯವರನ್ನು ಅಮಾನತುಗೊಳಿಸಿ ಆದೇಶ ಮಾಡಲಾಗಿದೆ. ಬೆಳ್ತಂಗಡಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಅವರಿಗೆ ಸುಳ್ಯ ಎಪಿಎಂಸಿ ಪ್ರಭಾರ ವಹಿಸಲಾಗಿದೆ.

 

Continue Reading

DAKSHINA KANNADA

ಕಟೀಲು ಕ್ಷೇತ್ರಕ್ಕೆ ಮಾಜಿ ಸಚಿವ, ಶಾಸಕ ಶ್ರೀರಾಮುಲು ಭೇಟಿ

Published

on

ಕಿನ್ನಿಗೋಳಿ: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಮಾಜಿ ಸಚಿವ, ಶಾಸಕ ಶ್ರೀರಾಮುಲು ಭೇಟಿ ನೀಡಿದರು.

ದೇವಳದ ವತಿಯಿಂದ ಶ್ರೀ ರಾಮುಲು ಅವರನ್ನು ಗೌರವಿಸಲಾಯಿತು.

ಈ ಸಂದರ್ಭ ವೆಂಕಟರಮಣ ಆಸ್ರಣ್ಣ, ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರುಗುತ್ತು ಉಪಸ್ಥಿತರಿದ್ದರು.

ಕ್ಷೇತ್ರದಲ್ಲಿ ಅವರು ಅನ್ನಪ್ರಸಾದವನ್ನು ಸ್ವೀಕರಿಸಿ ಸರಳತೆ ಮೆರೆದರು. ಬಳಿಕ ಕ್ಷೇತ್ರದ ಕುರಿತಂತೆ ಹೆಚ್ಚಿನ ಮಾಹಿತಿ ಪಡೆದುಕೊಂಡರು.

Continue Reading

LATEST NEWS

Trending