Connect with us

DAKSHINA KANNADA

ಮಂಗಳೂರು : ಮುಲ್ಕಿ ಅಂಗಾರಗುಡ್ಡೆಯ ಅಕ್ರಮ ಗೋಅಡ್ಡೆಗೆ ಹಿಂದೂ ಸಂಘಟನೆ ದಾಳಿ-19 ಗೋವುಗಳ ರಕ್ಷಣೆ..!

Published

on

ಮಂಗಳೂರು ಹೊರವಲಯದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ತಾಳಿಪ್ಪಾಡಿ ಗ್ರಾಮದ ಅಂಗಾರಗುಡ್ಡೆ ಎಂಬಲ್ಲಿ ಅಕ್ರಮ ಗೋವಿನ ಅಡ್ಡೆ ಪತ್ತೆ ಹಚ್ಚಿದ್ದ ಹಿಂದೂ ಸಂಘಟನೆಯ ಯುವಕರು ಸುಮಾರು 19 ಗೋವುಗಳನ್ನು ರಕ್ಷಣೆ ಮಾಡಿದ್ದಾರೆ.

ಮಂಗಳೂರು :  ಮಂಗಳೂರು ಹೊರವಲಯದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ತಾಳಿಪ್ಪಾಡಿ ಗ್ರಾಮದ ಅಂಗಾರಗುಡ್ಡೆ ಎಂಬಲ್ಲಿ ಅಕ್ರಮ ಗೋವಿನ ಅಡ್ಡೆ ಪತ್ತೆ ಹಚ್ಚಿದ್ದ ಹಿಂದೂ ಸಂಘಟನೆಯ ಯುವಕರು ಸುಮಾರು 19 ಗೋವುಗಳನ್ನು ರಕ್ಷಣೆ ಮಾಡಿದ್ದಾರೆ.

ಈ ಅಕ್ರಮ ಗೋ ಅಡ್ಡೆ ಆರೋಪಿ ಸಂಶುದ್ದೀನ್ ಅವರನ್ನೂ ಪೊಲೀಸರಿಗೆ ಒಪ್ಪಿಸಿದ್ದಾರೆ.

ಆರೋಪಿ ಸಂಶುದ್ದೀನ್ ಸುಮಾರು 19 ಗೋವುಗಳನ್ನು ಸಾಕುವ ರೀತಿಯಲ್ಲಿ ಮೇಯಲು ಬಿಟ್ಟಿದ್ದು ಖಚಿತ ವರ್ತಮಾನದ ಹಿನ್ನೆಲೆಯಲ್ಲಿ  ಹಿಂದೂ ಸಂಘಟನೆಗಳಾದ ಭಜರಂಗ ದಳ ಮತ್ತು ಹಿಂದೂ ಯುವ ಸೇನೆ ಪತ್ತೆ ಹಚ್ಚಿ ಪರಿಶೀಲಿಸಿದಾಗ ಆರೋಪಿಯು ಸಂಶಯಾತ್ಮಕ ರೀತಿಯಲ್ಲಿ ವರ್ತಿಸಿದ ಹಿನ್ನೆಲೆಯಲ್ಲಿ ಕೂಡಲೇ ಮುಲ್ಕಿ ಪೊಲೀಸರಿಗೆ ಮಾಹಿತಿ ನೀಡಿದ್ದು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಮುಲ್ಕಿ ಪೊಲೀಸರು ಬಂಧಿತ ಆರೋಪಿಯನ್ನು ವಿಚಾರಣೆ ನಡೆಸುತ್ತಿದ್ದಾರೆ.

DAKSHINA KANNADA

ಕಬಕ-ಮುರ ರೈಲ್ವೇ ಹಳಿಯಲ್ಲಿ ವ್ಯಕ್ತಿಯ ಶ*ವ ಪತ್ತೆ

Published

on

ಪುತ್ತೂರು: ಇಲ್ಲಿನ ಮುರ ಎಂಬಲ್ಲಿ ಕಬಕ-ಪುತ್ತೂರು ರೈಲು ಸಂಚಾರದ ರೈಲ್ವೇ ಹಳಿಯಲ್ಲಿ ವ್ಯಕ್ತಿಯೊಬ್ಬರ ಮೃ*ತದೇಹ ಪತ್ತೆಯಾಗಿರುವ ಘಟನೆ ಎ.23ರಂದು ಬೆಳಗಿನ ಜಾವ ಬೆಳಕಿಗೆ ಬಂದಿದೆ.

death

ಮೃತಪಟ್ಟ ವ್ಯಕ್ತಿಯ ದೇಹ ಹಳಿಯಿಂದ ಸ್ವಲ್ಪ ದೂರಕ್ಕೆ ಎಸೆಯಲ್ಪಟ್ಟಿದ್ದು ಕಾಲು ತುಂಡಾದ ಸ್ಥಿತಿಯಲ್ಲಿ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ಇದು ಆತ್ಮಹ*ತ್ಯೆಯೋ? ಅಥವಾ ರೈಲು ಡಿಕ್ಕಿಯಾಗಿ ಸಂಭವಿಸಿದ ಘಟನೆಯೋ ಅನ್ನುವುದು ತನಿಖೆ ವೇಳೆ ಬೆಳಕಿಗೆ ಬರಲಿದೆ.

ಮುಂದೆ ಓದಿ..; ಬೆಳ್ತಂಗಡಿ: ಕೆರೆಗೆ ಬಿದ್ದು ಕಾಡುಕೋಣ ಸಾವು.. ಸಾರ್ವಜನಿಕರಿಂದ ಅಂತ್ಯಸಂಸ್ಕಾರ

death

Continue Reading

BELTHANGADY

ಬೆಳ್ತಂಗಡಿ: ಕೆರೆಗೆ ಬಿದ್ದು ಕಾಡುಕೋಣ ಸಾ*ವು.. ಸಾರ್ವಜನಿಕರಿಂದ ಅಂತ್ಯಸಂಸ್ಕಾರ

Published

on

ಬೆಳ್ತಂಗಡಿ: ಇಲ್ಲಿನ ಬೆಳಾಲು ಗ್ರಾಮಕ್ಕೆ ಸಂಬಂಧಪಟ್ಟಂತೆ ಕೊಯ್ಯೂರು ರಸ್ತೆಯ ಬದ್ಯಾರು ಎಂಬಲ್ಲಿ ಹೆಚ್ ಪದ್ಮ‌ಗೌಡ ಎಂಬವರ ತೋಟದ ಕೆರೆಯಲ್ಲಿ ಬೃಹತ್ ಗಾತ್ರದ ಕಾಡುಕೋಣದ ಮೃತ*ದೇಹ ಪತ್ತೆಯಾಗಿದೆ.

bison

ಮುಂದೆ ನೋಡಿ..; ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಕೆಎಸ್ ಈಶ್ವರಪ್ಪ ಬಿಜೆಪಿ ಪಕ್ಷದಿಂದ ಉಚ್ಛಾಟನೆ..!

ಈ ಕೆರೆಗೆ ಸುತ್ತ ಕಾಂಕ್ರೀಟ್ ರಿಂಗ್ ಅಳವಡಿಸಿದ್ದು ನೀರು ಕುಡಿಯಲು ಬಂದ ಕಾಡುಕೋಣ ಮೂರ್ನಾಲ್ಕು ದಿನಗಳ ಹಿಂದೆಯೇ ಬಿದ್ದು ಸಾವನ್ನಪ್ಪಿರುವ ಸಾಧ್ಯತೆ ಇದೆ. ಹೆಚ್ಚೂ ಕಮ್ಮಿ 10 ಕ್ವಿಂಟಾಲ್ ತೂಕ ಹೊಂದಿರಬಹುದೆಂದು ಅಂದಾಜಿಸಲಾಗಿದ್ದು, ಕೊಳೆತು ವಾಸನೆ ಬೀರುತ್ತಿತ್ತು. ಶೌರ್ಯ ವಿಪತ್ತು ತಂಡಕ್ಕೆ ಬಂದ ಮಾಹಿತಿಯಂತೆ ಉಜಿರೆ- ಬೆಳಾಲು ಘಟಕದ ಸಂಯೋಜಕ ಸುಲೈಮಾನ್ ಬೆಳಾಲು, ಮುಳುಗು ಪರಿಣತ ಹರೀಶ ಕೂಡುಗೆ, ಮುಹಮ್ಮದ್ ಶರೀಫ್ ಬೆಳಾಲು, ಅವಿನಾಶ್ ಭಿಡೆ ಅರಸಿಮನಕ್ಕಿ, ರವೀಂದ್ರ ಉಜಿರೆ, ಸುರೇಂದ್ರ ಉಜಿರೆ, ಅನಿಲ್ ಚಾರ್ಮಾಡಿ, ಶೌರ್ಯ ಘಟಕದ ಮಾಸ್ಟರ್ ಪ್ರಕಾಶ್ ಧರ್ಮಸ್ಥಳ, ನಳಿನ್ ಕುಮಾರ್ ಧರ್ಮಸ್ಥಳ ಮೊದಲಾದವರು ಸಾರ್ವಜನಿಕರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿ ಕಾಡುಕೋಣದ ಕಳೇಬರವನ್ನು ಮೇಲೆತ್ತಿದ್ದಾರೆ. ಬಳಿಕ ಪಶುವೈದ್ಯಾಧಿಕಾರಿ ಮರಣೋತ್ತರ ಪರೀಕ್ಷೆ ಪ್ರಕ್ರೀಯೆ ನಡೆಸಿದ್ದು, ತೋಟದಲ್ಲೇ ಹೊಂಡ ತೋಡಿ ಅಂತ್ಯಸಂಸ್ಕಾರ ನಡೆಸಲಾಗಿದೆ.

Continue Reading

DAKSHINA KANNADA

ಕಾಗೆ ನಿಜಕ್ಕೂ ನಮ್ಮ ಪಿತೃನಾ..?

Published

on

ಹಿಂದೂ ಸಂಪ್ರದಾಯದ ಪ್ರಕಾರ ಕಾಗೆಗೆ ವಿಶೇಷವಾದ ಸ್ಥಾನಮಾನವಿದೆ. ಪಕ್ಷಿ ಜಾತಿಗೆ ಸೇರಿದ ಕಾಗೆಯನ್ನ ಹಿಂದಿನ ಕಾಲದಲ್ಲಿ ಸಂಪರ್ಕ ಸಾಧನವಾಗಿ ಬಳಸಲಾಗುತ್ತಿತ್ತು. ಯಾವೂದೇ ರೀತಿಯ ತಂತ್ರಜ್ಞಾನ ಹಾಗೂ ದೂರವಾಣಿ ಇಲ್ಲದಂತಹ ಸಮಯದಲ್ಲಿ ಕಾಗೆಯನ್ನೇ ಸಂದೇಶ ರವಾನಿಸಲು ಬಳಸಲಾಗುತ್ತಿತ್ತು. ನಮ್ಮ ಹಿರಿಯರ ಪ್ರಕಾರ ಕಾಗೆಗೂ ಮನುಷ್ಯರಿಗೂ ಅವೀನಾಭಾವ ಸಂಬಂಧ ಇದೆ ಎಂದು ಹೇಳಲಾಗುತ್ತದೆ. ಹಿಂದೂಗಳ ಆಚರಣೆಯಲ್ಲಿ ಕಾಗೆಗೆ ಪಿಂಡ ಕೂಡ ಇಡುತ್ತಾರೆ.

ಪಿತೃ ಪಕ್ಷದ ಶ್ರಾದ್ಧ ಸಮಯದಲ್ಲಿ ಕಾಗೆಗೆ ಪಿಂಡ ಇಡುತ್ತೇವೆ. ಕಾರಣ ಇಷ್ಟೇ, ಕಾಗೆಯನ್ನ ‘ಮೇಸೆಂಜರ್ ಆಫ್ ಪಿತೃಲೋಕ’ ಎಂದು ಪರಿಗಣಿಸಲಾಗುತ್ತೆ. ಇನ್ನು, ಅದೇ ಪಿತೃಲೋಕದಲ್ಲಿ ನಮ್ಮ ಪಿತೃಗಳು ಇರುವುದು. ನಮ್ಮ ಪಿತೃಗಳ ಆತ್ಮ ಕಾಗೆಯಲ್ಲಿ ಇದೆ ಎನ್ನುವ ನಂಬಿಕೆಯಿಂದ. ಕಾಗೆ ಸ್ವೀಕಾರ ಮಾಡಿದ ಆಹಾರ ನಮ್ಮ ಪಿತೃಗಳನ್ನ ಖುಷಿ ಪಡಿಸುತ್ತೆ ಎನ್ನುವ ನಂಬಿಕೆ ಕೂಡ ಇದೆ.

ಪಿತೃಗಳಂತೆ ಕಾಗೆ..!

ಕಾಗೆ ಎದ್ದೇಳೋದು ಬ್ರಾಹ್ಮಿ ಮುಹೂರ್ತದಲ್ಲಿ. ಕೋಳಿ ಅಲ್ವಾ ಮುಂಜಾನೆ ಬೇಗ ಏಳೋದು ಅಂತ ಕೇಳಿದ್ರೆ ನೀವು, ಕೋಳಿ ಸೂರ್ಯೋದಯದ ಸಮಯದಲ್ಲಿ ಎದ್ದೇಳುತ್ತೆ. ಆದ್ರೆ, ಬ್ರಾಹ್ಮಿ ಮೂಹೂರ್ತದಲ್ಲಿ ಅಂದ್ರೆ ಸೂರ್ಯೋದಯಕ್ಕೂ ಮುಂಚೆ ಎದ್ದೇಳೋದು ಕಾಗೆ. ಇನ್ನು ಸೂರ್ಯಾಸ್ತ ಆದ ನಂತರ ಅದು ಏನನ್ನು ಸೇರಿಸೋದಿಲ್ಲ. ಇವೆಲ್ಲಾ ಶಾಸ್ತ್ರದ ಪ್ರಕಾರ ಇದೆ.

ನಾವು ಏನೇ ಆಹಾರ ಕೊಟ್ರು ಕಾಗೆಗಳು ಅದನ್ನ ಹಂಚಿ ತಿನ್ನುತ್ತವೆ. ನಮ್ಮ ಪಿತೃಗಳು ಇದ್ದದ್ದೂ ಹಾಗೇ ಅಲ್ವಾ.. ಈಗ ಹಂಚಿ ತಿನ್ನೋದು, ಬ್ರಾಹ್ಮಿ ಮೂಹೂರ್ತಕ್ಕೆ ಏಳೋದು, ಸೂರ್ಯಾಸ್ತ ಆಗುವ ಮೊದಲು ಊಟ ಮುಗಿಸೋದು ಈ ಎಲ್ಲವೂ ಕಮ್ಮಿ ಆಗಿದೆ. ಅದಕ್ಕೆ ಕಾಗೆಗಳು ಕೂಡ ಮೊದಲಿನ ಹಾಗೇ ಹೆಚ್ಚು ಕಂಡು ಬರುವುದಿಲ್ಲ.

ಕಾ..ಕಾ…ಅಂದ್ರೇನು..?

ಕಾಗೆ ಶನಿಯ ವಾಹನ ಕೂಡ ಹೌದು. ಹಾಗಾಗಿ ಕಾಗೆ ಜೀವನದಲ್ಲಿ ಬರುವ ಒಳ್ಳೆಯ ಅಥವಾ ಕೆಟ್ಟ ಸೂಚನೆಗಳನ್ನ ಕೊಡುವ ಒಂದು ಮಾಧ್ಯಮ ಕೂಡ ಹೌದು. ಕಾಗೆಯನ್ನು ನಾವು ಕರೆಯುವಾಗ ಕಾ… ಕಾ… ಅಂತ ಕರೆಯುತ್ತೇವೆ. ಈ ಕಾ ಅಂದ್ರೆ ಕಾಪಾಡು ಅನ್ನೋ ಅರ್ಥ ಕೂಡ ಬರುತ್ತೆ. ಒಂದು ಲೆಕ್ಕದಲ್ಲಿ ನೋಡಲು ಹೋದರೆ ಪಿತೃಗಳಲ್ಲಿ ನಾವು ಕೇಳೋ ಮೊರೆ ಇದು. ‘ನಮ್ಮನ್ನು ಕಾಪಾಡಿ’ ಎಂದು. ಇದಕ್ಕೆ ಉತ್ತರವಾಗಿ ಕಾಗೆ ಕೂಡ ‘ಕಾ ಕಾ’ ಅನ್ನುತ್ತದೆ.

ಕಾ ಅಂದ್ರೆ ಸಂಸ್ಕೃತದಲ್ಲಿ ಯಾರು ಎಂದು ಅರ್ಥ. ನೀನ್ಯಾರು..? ನಿನ್ನೊಂದಿಗೆ ಇರೋರು ಯಾರು..? ನೀನು ಸತ್ತ ಮೇಲೆ ನಿನ್ನೊಂದಿಗೆ ಬರುವವರು ಯಾರು..? ಯೋಚಿಸು ಅನ್ನೋ ಸಂದೇಶ ಕೂಡ ಇದರಲ್ಲಿ ಗೌಪ್ಯವಾಗಿ ಅಡಗಿದೆ. ಹೆಚ್ಚಿನ ಜನರಿಗೆ ನಿಮ್ಮ ಪಿತೃಗಳು ಕಾಗೆಯ ರೂಪದಲ್ಲಿ ಬಂದು ನಿಮಗೆ ಸೂಚನೆ ಕೊಟ್ಟದ್ದು ಇರಬಹುದು. ಒಟ್ಟಾರೆಯಾಗಿ, ಹೇಳುವುದಾದರೆ ಕಾಗೆಗೇ ತನ್ನದೇ ಆದಂತಹ ವೈಶಿಷ್ಟ್ಯಗಳು ಇವೆ.

Continue Reading

LATEST NEWS

Trending