DAKSHINA KANNADA
ಮಂಗಳೂರು : ಭಾನುವಾರದ ಬೀದಿವ್ಯಾಪಾರಿಗಳ ಪಾಲಿಕೆ ಅಧಿಕಾರಿಗಳಿಂದ ಅಮಾನವೀಯತೆಯ ಕ್ರೌರ್ಯ..!?
ಮಂಗಳೂರು ನಗರದಲ್ಲಿ ಭಾನುವಾರದ ಬೀದಿ ಬದಿ ವ್ಯಾಪಾರಿಗಳ ಸರಕುಗಳ ಮೇಲೆ ಪುರಭವನದ ಒಳಗಿಂದ ಪೈಪ್ ಮೂಲಕ ನೀರು ಹಾಯಿಸಿ ವ್ಯಾಪಾರಿಗಳ ಸರಕುಗಳನ್ನು ಹಾನಿಗೊಳಿಸುವ ಅಮಾನವೀಯತೆಯನ್ನು ಮಂಗಳೂರು ಪಾಲಿಕೆ ಅಧಿಕಾರಿಗಳು ತೋರಿದ್ದಾರೆ ಎಂದು ಆರೋಪಿಸಲಾಗಿದೆ.
ಮಂಗಳೂರು : ಮಂಗಳೂರು ನಗರದಲ್ಲಿ ಭಾನುವಾರದ ಬೀದಿ ಬದಿ ವ್ಯಾಪಾರಿಗಳ ಸರಕುಗಳ ಮೇಲೆ ಪುರಭವನದ ಒಳಗಿಂದ ಪೈಪ್ ಮೂಲಕ ನೀರು ಹಾಯಿಸಿ ವ್ಯಾಪಾರಿಗಳ ಸರಕುಗಳನ್ನು ಹಾನಿಗೊಳಿಸುವ ಅಮಾನವೀಯತೆಯನ್ನು ಮಂಗಳೂರು ಪಾಲಿಕೆ ಅಧಿಕಾರಿಗಳು ತೋರಿದ್ದಾರೆ ಎಂದು ಆರೋಪಿಸಲಾಗಿದೆ.
ನಗರದ ಪುರಭವನ ಮತ್ತು ಮೈದಾನ ರಸ್ತೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ಭಾನುವಾರದ ರಜಾದಿನ ಬಟ್ಟೆ, ತರಕಾರಿ, ಹಣ್ಣು, ರೇಷನ್ ಸಾಮಾಗ್ರಿಗಳನ್ನು ಮಾರಾಟ ಮಾಡಿ ಬದುಕುತ್ತಿರುವ ಬಡ ಬೀದಿ ವ್ಯಾಪಾರಿಗಳಿಗೆ ಕಳೆದ ಭಾನುವಾರ ವ್ಯಾಪಾರ ಮಾಡಲು ನಗರಪಾಲಿಕೆಯ ಕೆಲವು ಅಧಿಕಾರಿಗಳು ಕಿರುಕುಳ ನೀಡುತ್ತಿದ್ದು ಅವರ ಸರಕುಗಳನ್ನು ವಶಪಡಿಸಿದ್ದರು.
ಈ ದಿನ ಭಾನುವಾರ ಮುಂಜಾನೆ ಸಮಯ ವ್ಯಾಪಾರ ಆರಂಭಿಸಿದಾಗ ನಗರಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿಗಳು ಪೊಲೀಸ್ ಮತ್ತು ಪಾಲಿಕೆಯ ಪೌರ ಕಾರ್ಮಿಕರನ್ನು ಮತ್ತು ಬಡ ಬೀದಿ ವ್ಯಾಪಾರಿಗಳ ವಸ್ತುಗಳನ್ನು ವಶಪಡಿಸಿ ಸಾಗಿಸಲು ಕಸ ವಿಲೇವಾರಿಯ ಲಾರಿಗಳನ್ನು ತಂದು ಧಾಳಿ ಮಾಡಲು ಮುಂದಾದಾಗ ದಕ್ಷಿಣಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ಮುಖಂಡರು ಅಲ್ಲಿಗೆ ಬಂದು ಪಾಲಿಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದು, ಧಾಳಿ ಮಾಡಲು ಆಯುಕ್ತರ ಲಿಖಿತ ಆದೇಶವನ್ನು ಕೇಳಿದ್ದಾರೆ,
ಪಟ್ಟಣ ವ್ಯಾಪಾರ ಸಮಿತಿಯಲ್ಲಿ ತೀರ್ಮಾನ ಆಗದೇ ಯಾವುದೇ ಧಾಳಿ ನಡೆಸುವುದು ಕಾನೂನಿನ ಉಲ್ಲಂಘನೆ ಆಗುತ್ತದೆ ಕಳೆದ ಭಾನುವಾರ ವಶಪಡಿಸಿದ ಲಕ್ಷಾಂತರ ರೂಪಾಯಿ ಬೆಲೆಬಾಳುವ ಸರಕುಗಳನ್ನು ವಾಪಾಸು ನೀಡದೆ ನಿಯಮ ಮೀರಿ ವಿಲೇವಾರಿ ಮಾಡಿರುತ್ತೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ ಸಂಘದ ಮುಖಂಡರು ಬಡ ಬೀದಿವ್ಯಾಪಾರಿಗಳಿಗೆ ಅನ್ಯಾಯ ಮಾಡಲು ಬಿಡುವುದಿಲ್ಲ ಪಟ್ಟು ಹಿಡಿದರು.
ಈ ಮಧ್ಯೆ ಅಧಿಕಾರಿಗಳು ಪುರಭವನದ ಒಳಗಿಂದ ಪೈಪ್ ಮೂಲಕ ನೀರು ಹಾಯಿಸಿ ವ್ಯಾಪಾರಿಗಳ ಸರಕುಗಳನ್ನು ಹಾನಿಗೊಳಿಸುವ ಅಮಾನವೀಯತೆಯನ್ನು ತೋರಿದ ಅಧಿಕಾರಿಗಳಿಗೆ ವ್ಯಾಪಾರಿಗಳು ಹಿಡಿಶಾಪ ಹಾಕಿದರು. ವ್ಯಾಪಾರಿಗಳ ಪ್ರತಿಭಟನೆ ತೀವ್ರವಾಗುತ್ತಿದ್ದಂತೆ ಅಧಿಕಾರಿಗಳು ಕಾಲ್ಕಿತ್ತಿದ್ದಾರೆ.
ಈ ಸಂಧರ್ಭ ಮಾತನಾಡಿದ ಸಂಘದ ಗೌರವಧ್ಯಕ್ಷ ಬಿ.ಕೆ ಇಮ್ತಿಯಾಝ್ ಮಾತನಾಡಿ ಅಮಾನವೀಯವಾಗಿ ವರ್ತಿಸಿದ ಅಧಿಕಾರಿಗಳ ವಿರುದ್ಧ ಆಯುಕ್ತರು ಕ್ರಮ ಕೈಗೊಳ್ಳಬೇಕು,
ವಾರದ ಸಂತೆ ಮತ್ತು ಭಾನುವಾರದ ರಜಾದಿನಗಳಲ್ಲಿ ವ್ಯಾಪಾರ ಮಾಡುವ ಬಡ ಬೀದಿ ವ್ಯಾಪಾರಿಗಳನ್ನು ಸಮೀಕ್ಷೆ ನಡೆಸಿ ಅವರಿಗೂ ಗುರುತಿನ ಚೀಟಿ, ಪ್ರಮಾಣ ಪತ್ರ ವಿತರಣೆಗೆ ಕ್ರಮ ವಹಿಸಬೇಕು, ಬೀದಿಬದಿ ವ್ಯಾಪಾರಿಗಳ ಜೀವನೋಪಾಯ ಸಂರಕ್ಷಣೆ ಮತ್ತು ನಿಯಂತ್ರಣ ಕಾಯಿದೆ 2014 ಮತ್ತು ಕರ್ನಾಟಕ ಬೀದಿ ವ್ಯಾಪಾರದ ನಿಯಮಗಳು 2019 ರಲ್ಲಿ ವಾರದ ಸಂತೆ, ಬಜಾರ್ ಗಳಲ್ಲಿ ಭಾನುವಾರದ ವ್ಯಾಪಾರ, ಜಾತ್ರೆ, ಉತ್ಸವಗಳಲ್ಲಿ ವ್ಯಾಪಾರ ಮಾಡುವ ವ್ಯಾಪಾರ ಮಾಡುವವರನ್ನು ಒಳಗೊಂಡಿದ್ದು ಅದರಂತೆ ಅವರಿಗೂ ಕಾನೂನಿನ ಮಾನ್ಯತೆ ನೀಡಿ ನೀತಿಗಳನ್ನು ರೂಪಿಸಬೇಕೆಂದು ಒತ್ತಾಯಿಸಿ ಅವರು ಬಡ ಬೀದಿ ವ್ಯಾಪಾರಿಗಳ ಮೇಲೆ ದೌರ್ಜನ್ಯ ನಡೆಸಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಸಂಘದ ಅಧ್ಯಕ್ಷರಾದ ಮೊಹಮ್ಮದ್ ಮುಸ್ತಫಾ, ಮುಖಂಡರಾದ ಹರೀಶ್ ಪೂಜಾರಿ, ಶ್ರೀಧರ ಭಂಡಾರಿ, ಸಿದ್ದಮ್ಮ, ರೂಪೇಶ್, ಮಹೇಶ್, ಸಯ್ಯದ್ ಪಾಷ, ಆಸೀಫ್ ಬಾವ ಉರುಮನೆ, ನೌಶಾದ್ ಉಳ್ಳಾಲ, ರಿಯಾಜ್ ಎಲ್ಯರ್ ಪದವು, ರಝಕ್ ಮತ್ತಿತರರು ಉಪಸ್ಥಿತರಿದ್ದರು.
DAKSHINA KANNADA
ಆಸ್ಪತ್ರೆ ಸೆಲ್ ನಲ್ಲಿ ಕುಣಿಕೆಗೆ ಕೊರೊಳೊಡ್ಡಿದ ಖೈದಿ..!
ಮಂಗಳೂರು: ಮಂಗಳೂರು ಸಬ್ ಜೈಲಿನಲ್ಲಿದ್ದ ಕೇರಳ ಮೂಲದ ಖೈದಿಯೊಬ್ಬ ಆಸ್ಪತ್ರೆಯಲ್ಲೇ ಕುಣಿಕೆಗೆ ಕೊರಳೊಡ್ಡಿ ಜೀವಾಂತ್ಯಗೊಳಿಸಿದ್ದಾನೆ. ಕೊಣಾಜೆಯ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 2022 ರಲ್ಲಿ ಈತ ಬಂಧಿತನಾಗಿದ್ದ . ಕೇರಳ ಮೂಲದವನಾಗಿದ್ದ ಮಹಮ್ಮದ್ ನೌಫಲ್ ಜೀವಾಂತ್ಯಗೊಳಿಸಿದ ಖೈದಿಯಾಗಿದ್ದಾನೆ. ಕೆಲ ಸಮಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಈತನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಏಪ್ರಿಲ್ 25 ರಂದು ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಯ ಸೆಲ್ ವಾರ್ಡ್ ಗೆ ದಾಖಲಿಸಲಾಗಿತ್ತು. ಸೆಲ್ ವಾರ್ಡನಲ್ಲಿ ಇರುವಾಗಲೇ ಈತ ಜೀವಾಂತ್ಯಗೊಳಿಸಿದ್ದಾನೆ. ಈತನನ್ನು ಉಳಿಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನಗಳ ನಡೆಸಿದರಾದ್ರೂ ಸಾದ್ಯವಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
DAKSHINA KANNADA
15 ಸಾವಿರ ಸಂಬಳ..! ಮನೆಯಲ್ಲಿ ಕಂತೆ ಕಂತೆ ನೋಟು..! ED ಅಧಿಕಾರಿಗಳೇ ಶಾಕ್..!
ಮಂಗಳೂರು ( ಜಾರ್ಖಂಡ್ ): ಆತ ತಿಂಗಳಿಗೆ 15 ಸಾವಿರ ಸಂಬಳ ಪಡೆಯುವ ಒಬ್ಬ ಸಾಮಾನ್ಯ ನೌಕರ. ಆದ್ರೆ ಆತನ ಮನೆಗೆ ಇಡಿ ದಾಳಿ ಮಾಡಿ ಬರೋಬ್ಬರಿ 30 ಕೋಟಿ ಹಣವನ್ನು ಜಪ್ತಿ ಮಾಡಿದೆ. ಇದು ಜಾರ್ಖಂಡ್ನಲ್ಲಿ ನಡೆದ ಘಟನೆಯಾಗಿದ್ದು, ಹತ್ತು ಸಾವಿರ ಲಂಚ ಪ್ರಕರಣದ ಸಂಬಂಧ ತನಿಖೆ ನಡೆಸಿದ್ದ ಇಡಿ ಸಾಮಾನ್ಯ ನೌಕರನ ಮನಗೆ ದಾಳಿ ಮಾಡಿತ್ತು. ಅಲ್ಲಿ ಅಡಗಿಸಿಟ್ಟಿದ್ದ ಹಣ ನೋಡಿ ಇಡಿ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಹಣ ಎಣಿಸಲು ಮೆಷಿನ್ ಹಾಗೂ ಹೆಚ್ಚುವರಿ ನೌಕರರನ್ನು ಮನೆಗೆ ಕರೆಸಿಕೊಂಡಿದ್ದಾರೆ.
ನೌಕರನ ಮನೆಗೆ ಲಂಚದ ಹಣ…!
ಜಾರ್ಖಂಡ್ ನ ಸಚಿವ ಅಲಂಗೀರ್ ಆಲಂ ಅವರ ಖಾಸಗಿ ಕಾರ್ಯದರ್ಶಿ ಮನೆ ಮೇಲೆ ರಾಂಚಿಯ ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಅಲಂಗೀರ್ ಆಲಂ ಅವರ ಸಚಿವಾಲಯದಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಅಲ್ಲಿನ ಲಂಚದ ಹಣ ನೌಕರನ ಮನೆಗೆ ಹೋಗುತ್ತದೆ ಅನ್ನೋ ಮಾಹಿತಿ ಸಿಕ್ಕಿತ್ತು. ಹೀಗಾಗಿ ಸಚಿವರ ಆಪ್ತ ಕಾರ್ಯದರ್ಶಿಯ ಅಡಿಯಲ್ಲಿ ಮಾಸಿಕ 15 ಸಾವಿರಕ್ಕೆ ಕೆಲಸ ಮಾಡುತ್ತಿದ್ದ ನೌಕರನ ಮನೆಗೆ ದಾಳಿ ಮಾಡಿದಾಗ ಇಷ್ಟೊಂದು ಪ್ರಮಾಣದ ಹಣ ಪತ್ತೆಯಾಗಿದೆ.
ವಿಡಿಯೋ ನೋಡಿ :
ಹತ್ತು ಸಾವಿರ ಲಂಚದ ಹಿಂದೆ ಬಿದ್ದಿದ್ದ ಇಡಿ..!
ಕಳೆದ ವರ್ಷ ಹತ್ತು ಸಾವಿರ ರೂಪಾಯಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಇಂಜೀನಿಯರ್ ಮನೆ ಮೇಲೆ ಇಡಿ ದಾಳಿ ನಡೆಸಿತ್ತು. ಈ ವೇಳೆ ಇಂಜೀನಿಯರ್ ಅವರ ಹೇಳಿಕೆಯನ್ನು ದಾಖಲಿಸಿದಾಗ ಲಂಚದ ಹಣ ಸಚಿವರಿಗೆ ತಲುಪಿಸಲಾಗುತ್ತದೆ ಎಂಬ ಸ್ಪೋಟಕ ಹೇಳಿಕೆ ನೀಡಿದ್ದರು. ಬಳಿಕ ಜಾರ್ಖಂಡ್ನ ಗ್ರಾಮೀಣ ಅಭಿವೃದ್ದಿ ಸಚಿವ ಅಲಂಗೀರ್ ಆಲಂ ಹಾಗೂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಹೆಸರು ಮುನ್ನಲೆಗೆ ಬಂದಿತ್ತು . ಹೀಗಾಗಿ ಸಂಜೀವ್ ಲಾಲ್ ಅವರ ಬಳಿ ನೌಕರನಾಗಿದ್ದ ವ್ಯಕ್ತಿಯ ಮನೆಗೆ ದಾಳಿ ಮಾಡಲಾಗಿದೆ.
ಇದನ್ನೂ ಓದಿ : ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು..!
ಜಾರ್ಖಂಡ್ ಕಾಂಗ್ರೆಸ್ ಸರ್ಕಾರದ ಸಚಿವ…!
ಅಲಂಗೀರ್ ಆಲಂ ಜಾರ್ಖಂಡ್ನ ಪಾಕುರ್ ಕ್ಷೇತ್ರದಿಂದ ನಾಲ್ಕು ಬಾರಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈಗ ಸರ್ಕಾರದಲ್ಲಿ ಸಂಸದೀಯ ವ್ಯವಹಾರ ಮತ್ತು ಗ್ರಾಮೀಣಾಭಿವೃದ್ದಿ ಸಚಿವರಾಗಿದ್ದಾರೆ. ಈ ಹಿಂದೆ 2006 ರಿಂದ 2009 ರ ವರೆಗೆ ಅವರು ಸ್ಪೀಕರ್ ಕೂಡಾ ಆಗಿದ್ದರು. 2023ರ ಡಿಸೆಂಬರ್ ತಿಂಗಳಲ್ಲಿ ಜಾರ್ಖಂಡ್ನ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಉದ್ಯಮಿ ಧೀರಜ್ ಸಾಹು ಮನೆ ಮೇಲೂ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ಮನೆಯಲ್ಲಿ 350 ಕೋಟಿಯಷ್ಟು ಹಣ ಪತ್ತೆಯಾಗಿತ್ತು. ಈ ವೇಳೆ ಧೀರಜ್ ಸಾಹು ಅದು ಮದ್ಯದ ವ್ಯವಹಾರದ ಹಣವಾಗಿದ್ದು, ಅದಕ್ಕೂ ಪಕ್ಷಕ್ಕೂ ಸಂಬಂಧ ಇಲ್ಲ ಎಂದು ಹೇಳಿದ್ದರು.
DAKSHINA KANNADA
ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು..!
ಬಂಟ್ವಾಳ : ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಬಂಟ್ವಾಳದ ನಾವೂರು ಎಂಬಲ್ಲಿ ಭಾನುವಾರ(ಎ.5) ಸಂಜೆ ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಮತ್ತು ಇಲಿಯಾಸ್ ಅವರ ಪುತ್ರಿ ಮರಿಯಮ್ ನಾಶೀಯಾ (14 )ಮೃತಪಟ್ಟ ಬಾಲಕಿಯರು.
ಮುಂದೆ ಓದಿ..; ಬರ್ಬರ ಹತ್ಯೆಯಾದ ಬ್ಯೂಟಿ ಕ್ವೀನ್.!! ಮುಳುವಾಯಿತಾ ಇನ್ಸ್ಟಾಗ್ರಾಮ್ ಪೋಸ್ಟ್..! ಸಿಸಿಟಿವಿಯಲ್ಲಿ ಸೆರೆಯಾದ ಭಯಾನಕ ದೃಶ್ಯ
ಮೂಲತಃ ನಾವೂರ ನಿವಾಸಿಯಾದ ಇಲಿಯಾಸ್ ಅವರು ಇತ್ತೀಚಿಗೆ ಉಳ್ಳಾಲದಲ್ಲಿ ಮನೆ ಕಟ್ಟಿಸಿದ್ದರು. ನಿನ್ನೆ ನಾವೂರು ಮೈಂದಾಳದಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದರು. ಸಂಜೆ ವೇಳೆ ಮನೆಯವರ ಜತೆಗೆ ನಾವೂರಿನ ನೀರಕಟ್ಟೆ ಎಂಬಲ್ಲಿ ನೇತ್ರಾವತಿ ನದಿಗೆ ತೆರಳಿದ್ದರು. ಈ ವೇಳೆ ಮನೆ ಮಂದಿ ಇರುವಾಗಲೇ ಮಕ್ಕಳು ನೀರಿನಲ್ಲಿ ಆಟ ಆಡುತ್ತಾ ಇದ್ದರು. ಈ ಸಂದರ್ಭದಲ್ಲಿ ಇಬ್ಬರು ಮಕ್ಕಳು ಏಕಾ ಏಕಿ ನೀರಿನಲ್ಲಿ ಮುಳುಗಿದ್ದಾರೆ. ನೀರಿನಲ್ಲಿ ಮುಳುಗುವುದನ್ನು ಕಣ್ಣಾರೆ ಕಂಡರೂ ಈಜು ಬಾರದ ಕಾರಣ ಮಕ್ಕಳನ್ನು ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
- DAKSHINA KANNADA4 days ago
ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್ಗಳ ಹಗಲು ದರೋಡೆ..! ಏನಿದು ಘಟನೆ?
- FILM6 days ago
ಬಿಗ್ ಬಾಸ್ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ನಮ್ರತಾ ಗೌಡ!
- dehali4 days ago
ನಾಯಿಗಳಿಗೂ ಬಂತು ಆಧಾರ್ ಕಾರ್ಡ್.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?
- BELTHANGADY5 days ago
ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು