Connect with us

DAKSHINA KANNADA

ಮಂಗಳೂರು : ಕೊಣಾಜೆ ಪಳ್ಳಿಯಬ್ಬ ಕೊಲೆ  ಪ್ರಕರಣ -ಐವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

Published

on

ಮಂಗಳೂರು ಹೊರ ವಲಯದ ಕೊಣಾಜೆ ಠಾಣಾ ವ್ಯಾಪ್ತಿಯ ಪಾವೂರು ಗ್ರಾಮದ ಮಲಾರ್‌ನ ಪಳ್ಳಿಯಬ್ಬ ಕೊಲೆ ಪ್ರಕರಣದ ಐದು ಮಂದಿ ಅಪರಾಧಿಗಳಿಗೆ ಮಂಗಳೂರಿನ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಮಂಗಳೂರು : ಮಂಗಳೂರು ಹೊರ ವಲಯದ ಕೊಣಾಜೆ ಠಾಣಾ ವ್ಯಾಪ್ತಿಯ ಪಾವೂರು ಗ್ರಾಮದ ಮಲಾರ್‌ನ ಪಳ್ಳಿಯಬ್ಬ ಕೊಲೆ ಪ್ರಕರಣದ ಐದು ಮಂದಿ ಅಪರಾಧಿಗಳಿಗೆ ಮಂಗಳೂರಿನ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಕೊಲೆಯಾದ ಪಳ್ಳಿಯಬ್ಬ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಬಿ. ಜಕಾತಿ ಅವರು ಶುಕ್ರವಾರ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಮಲಾರ್‌ನ 47 ವರ್ಷ ಪ್ರಾಯದ ಮೊಹಮ್ಮದ್‌ ಹಂಝ, 29 ವರ್ಷ ಪ್ರಾಯದ ಅಝರುದ್ದೀನ್‌ ಯಾನೆ ಅಝರ್‌, ಸಜಿಪನಡು ಗ್ರಾಮದ 29 ವರ್ಷ ಪ್ರಾಯದ ಅಮೀರ್‌ ಯಾನೆ ಅಮ್ಮಿ, 23 ವರ್ಷ ಪ್ರಾಯದ ಮೊಹಮ್ಮದ್‌ ಅರ್ಫಾಜ್‌ ಮತ್ತು 23 ವರ್ಷ ಪ್ರಾಯದ ಅತಾವುಲ್ಲ ಯಾನೆ ಅಲ್ತಾಫ್ ಶಿಕ್ಷೆಗೊಳಗಾದವರು.

ಪಳ್ಳಿಯಬ್ಬ ಅವರು ಹಣಕಾಸಿನ ವ್ಯವಹಾರ ನಡೆಸುತ್ತಿದ್ದು, 2020ರ ಅ.29ರಂದು ಅವರು ನಾಪತ್ತೆಯಾಗಿದ್ದರು.

ಈ ಬಗ್ಗೆ ಅವರ ಸಹೋದರ ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆ ನಡೆಸಿದಾಗ ಅಝರುದ್ದೀನ್‌ನ ರಿಕ್ಷಾದಲ್ಲಿ ಪಳ್ಳಿಯಬ್ಬ ಅವರು ಹಂಝ, ಅಮೀರ್‌, ಅರ್ಫಾಜ್‌ ಮತ್ತು ಅಲ್ತಾಫ್ ಅವರ ಜತೆ ಹೋಗಿರುವುದು ಗೊತ್ತಾಗಿತ್ತು.

ಪಳ್ಳಿಯಬ್ಬ ಅವರು ಸಂಬಂಧಿ ಮಲಾರ್‌ನ ಹಂಝನಿಗೆ 72,000 ರೂ. ಸಾಲ ನೀಡಿದ್ದರು. ಅದನ್ನು ಆಗಾಗ್ಗೆ ವಾಪಸ್‌ ಕೇಳುತ್ತಿದ್ದರು.

ಈ ಬಗ್ಗೆ ಅವರಿಬ್ಬರೊಳಗೆ ತಕರಾರು ಇತ್ತು. ಇದೇ ಕಾರಣಕ್ಕೆ ಹಂಝ ಇತರ ಅಪರಾಧಿಗಳ ಜತೆ ಸೇರಿಕೊಂಡು ಪಳ್ಳಿಯಬ್ಬ ಅವರನ್ನು ಆಟೋರಿಕ್ಷಾದಲ್ಲಿ ಅಲ್ಕೀರುಪದವು ಎಂಬಲ್ಲಿರುವ ಗುಡ್ಡಕ್ಕೆ ಕರೆದೊಯ್ದು ಕೊಲೆ ಮಾಡಿ ಹೂತು ಹಾಕಿದ್ದು ಬೆಳಕಿಗೆ ಬಂದಿತ್ತು.

ಕೊಣಾಜೆ ಠಾಣೆಯ ಪೊಲೀಸ್‌ ಇನ್ಸ್‌ಪೆಕ್ಟರ್‌  ಮಧುಸೂದನ್‌ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಬಿ. ಜಕಾತಿ ಅವರು ಶುಕ್ರವಾರ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಅಲ್ಲದೆ ಪಳ್ಳಿಯಬ್ಬ ಅವರ ಪುತ್ರಿಗೆ 3 ಲಕ್ಷ ರೂಪಾಯಿ ಪರಿಹಾರ ನೀಡಲು ದ.ಕ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಆದೇಶಿಸಿದ್ದಾರೆ.

ಸರಕಾರದ ಪರವಾಗಿ ಪಬ್ಲಿಕ್‌ ಪ್ರಾಸಿಕ್ಯೂಟರ್‌  ನಾರಾಯಣ ಶೇರಿಗಾರ್‌ ಯು. ಅವರು ವಾದ ಮಂಡಿಸಿದ್ದರು.

DAKSHINA KANNADA

ಮಂಡ್ಯದಲ್ಲಿ ಅವಳಿ ಮಕ್ಕಳ ಸಾ*ವಿನ ಪ್ರಕರಣಕ್ಕೆ ಟ್ವಿಸ್ಟ್..! ತಾಯಿಯಿಂದ ಕೃತ್ಯ..!

Published

on

ಮಂಗಳೂರು,(ಮಂಡ್ಯ): ಮಂಡ್ಯದಲ್ಲಿ ಐಸ್‌ ಕ್ರೀಮ್‌ ತಿಂದು ಅವಳಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌ ಸಿಕ್ಕಿದೆ. ಬುಧವಾರ ಅವಳಿ ಮಕ್ಕಳು ಸಾವನ್ನಪ್ಪಿದ್ದರು. ಐಸ್ ಕ್ರೀಂ ತಿಂದು ಮಕ್ಕಳು ಇಹಲೋಕ ತ್ಯಜಿಸಿವೆ ಎನ್ನಲಾಗಿತ್ತು. ಆದರೆ, ಮರಣೋತ್ತರ ಪರೀಕ್ಷೆ ಬಳಿಕ ಸತ್ಯಾಂಶ ಬಯಲಾಗಿದೆ. ತಾಯಿಯೇ ಮಕ್ಕಳಿಗೆ ವಿಷ ಹಾಕಿ ಸಾಯಿಸಿದ್ದಾಳೆ ಎನ್ನುವುದು ಖಚಿತವಾಗಿದೆ.

ಹೆತ್ತ ಮಕ್ಕಳಿಗೆ ವಿಷವಿಕ್ಕಿದ ತಾಯಿ!

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಪೂಜಾ ಹಾಗೂ ಪ್ರಸನ್ನ ದಂಪತಿಗಳ ಒಂದೂವರೆ ವರ್ಷದ ಅವಳಿ ಕಂದಮ್ಮಗಳು ಸಾವನ್ನಪ್ಪಿದ್ದವು.

ಪೊಲೀಸ್‌ ತನಿಖೆಯ ಬಳಿಕ ತಾಯಿ ಪೂಜಾಳೇ ಮೂವರು ಮಕ್ಕಳಿಗೆ ವಿಷ ಹಾಕಿದ್ದಾಳೆಂಬುದು ಗೊತ್ತಾಗಿದೆ.

ತ್ರಿಶುಲ್, ತ್ರಿಶ ಅವಳಿ ಮಕ್ಕಳು ಹಾಗೂ ಮಗಳು ಬೃಂದಾಗೆ ಪೂಜಾ ಹಾಕಿದ್ದಳು. ಬಳಿಕ ಐಸ್ ಕ್ರೀಂ ತಿಂದು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಬಿಂಬಿಸಲಾಗಿತ್ತು. ಇದೀಗ ಪೊಲೀಸ್ ವಿಚಾರಣೆ ವೇಳೆ ಸತ್ಯಾಂಶ ಬಯಲಾಗಿದೆ.

ಪೂಜಾ ಪತಿ ಪ್ರಸನ್ನ ಪದೇ ಪದೇ ಜಗಳವಾಡುತ್ತಿದ್ದರು. ಈ ಜಗಳದಿಂದ ಬೇಸತ್ತು ಬುಧವಾರ ಮಕ್ಕಳಿಗೆ ತಾಯಿ ವಿಷ ಉಣಿಸಿದ್ದಾಳೆ. ಬಳಿಕ ತಾನೂ ಸೇವಿಸಿದ್ದಳು. ಕೂಡಲೇ ಮಕ್ಕಳು ಹಾಗೂ ಪೂಜಾಳನ್ನು ಮಂಡ್ಯ‌ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿ, ಆಸ್ಪತ್ರೆಯಲ್ಲಿ ಅವಳಿ ಜವಳಿ ಕಂದಮ್ಮಗಳು ಕೊನೆಯುಸಿರೆಳೆದಿದ್ದವು.

ಸದ್ಯ ತಾಯಿ ಹಾಗೂ ಮೊದಲ ಮಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Continue Reading

DAKSHINA KANNADA

ಕಾರ್ಪೋರೇಟರ್ ಮಗಳ ಹ*ತ್ಯೆ..! ಒಂಬತ್ತು ಬಾರಿ ಇರಿದ ಪಾಪಿ…!

Published

on

ಮಂಗಳೂರು (ಹುಬ್ಬಳ್ಳಿ) : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ. ನೇಹಾ ಹಿರೇಮಠ ಕೊಲೆಗೀಡಾದಾಕೆ. ಕಾಲೇಜ್ ಕ್ಯಾಂಪಸ್​ನಲ್ಲಿರುವ ಕ್ಯಾಂಟೀನ್​ನಲ್ಲಿ ಫೈಜಲ್ ಎಂಬಾತ 9 ಬಾರಿ ಚಾಕುವಿನಿಂದ ಇರಿದಿದ್ದಾನೆ. ತಕ್ಷಣ ನೇಹಾಳನ್ನು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನೇಹಾ ಮೃತಪಟ್ಟಿದ್ದಾಳೆ.

                  ತಂದೆ ನಿರಂಜನ್ ಹಿರೇಮಠ ಜೊತೆಗೆ ನೇಹಾ

ಪ್ರೀತಿ ನಿರಾಕರಣೆಗೆ ಪಾಪಿಯಿಂದ ಹೇಯ ಕೃತ್ಯ..!

ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿರುವ ನೇಹಾ ಹಿರೇಮಠಗೆ ಆರೋಪಿ ಫೈಜಲ್ ಎಂಬಾತ ಪ್ರೀತಿಸುವಂತೆ ಪೀಡಿಸಿದ್ದಾನೆ. . ಆದರೆ, ನೇಹಾ ಇದನ್ನು ನಿರಾಕರಿಸುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ.
ಆರೋಪಿ ಫೈಜಲ್ ಕೊಂಡಿಕೊಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಠಾಣೆ‌ ಪೊಲೀಸರಿಂದ ಆರೋಪಿಯ ವಿಚಾರಣೆ ನಡೆಸಲಾಗಿದೆ.ಇನ್ನು ನೇಹಾ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

 

Continue Reading

DAKSHINA KANNADA

“ಸೆಕ್ಸ್‌” ನನ್ನ ಸಾಮರ್ಥ್ಯದ ರಹಸ್ಯ…! ಮಾಜಿ ಸಂಸದೆಯ ಹೇಳಿಕೆ ವೈರಲ್‌..!

Published

on

ಮಂಗಳೂರು ( ಪಶ್ಚಿಮ ಬಂಗಾಳ ) : ಮಾಜಿ  ಸಂಸದೆ ಮಹುವಾ ಮೋಯಿತ್ರಾ ( Mahua Moitra ) ವಿವಾದದ ಕಾರಣದಿಂದ ಸಂಸತ್‌ನಿಂದ ಉಚ್ಚಾಟಿತರಾಗಿದ್ದರು. ಕೇಂದ್ರ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದಿದ್ದರು ಎಂಬ ಆರೋಪ ಅವರ ಮೇಲಿತ್ತು. ಈಗ ಅವರು ಮತ್ತೊಂದು ವಿವಾದಕ್ಕೆ ಸಿಲುಕಿದ್ದು ಅವರ ಹೇಳಿಕೆ ಬಾರಿ ವೈರಲ್ ಆಗಿದೆ. ಕೃಷ್ಣ ನಗರ ಲೋಕಸಭಾ ಕ್ಷೇತ್ರದಿಂದ ಟಿಎಂಸಿ ಅಭ್ಯರ್ಥಿಯಾಗಿ ಅವರು ಕಣಕ್ಕೆ ಇಳಿದಿದ್ದಾರೆ. ಭರ್ಜರಿ ಪ್ರಚಾರ ನಡೆಸುತ್ತಿರುವ ಅವರನ್ನ ಪತ್ರಕರ್ತರೊಬ್ಬರು ಸಂದರ್ಶನ ನಡೆಸಿದ್ದಾರೆ. ಈ ವೇಳೆ ಪತ್ರಕರ್ತ ನಿಮ್ಮ ಸಾಮಾರ್ಥ್ಯದ ರಹಸ್ಯ ಏನು ಎಂಬ ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ಮೊಯಿತ್ರಾ ಅವರು “ಸೆಕ್ಸ್‌” ಎಂದು ಹೇಳಿರುವ ವಿಡಿಯೋವನ್ನು ಮೋದಿ ಕಾ ಪರಿವಾರ ವೈರಲ್ ಮಾಡಿದೆ. ವಿಡಿಯೊ ವೈರಲ್‌ ಆಗುತ್ತಲೇ ಜನ ಟೀಕೆ ವ್ಯಕ್ತಪಡಿಸಿದ್ದಾರೆ. ಒಬ್ಬ ಸಂಸದೆಯಾಗಿ ಬಹಿರಂಗವಾಗಿ ಹೀಗೆ ಹೇಳುವುದು ತಪ್ಪು ಎಂದು ಖಂಡಿಸಿದ್ದಾರೆ.

ನ್ಯೂಸ್‌ ದಿ ಟ್ರುತ್‌ ಎಂಬ ಮಾದ್ಯಮ ಮಾಡಿದ ಸಂದರ್ಶನ

ಸ್ಪಷ್ಟನೆ ನೀಡಿದ ಸಂದರ್ಶನ ನೀಡಿದ ವರದಿಗಾರ..!

“ಮಹುವಾ ಮೊಯಿತ್ರಾ ಅವರನ್ನು ಸಂದರ್ಶನ ಮಾಡಿದ್ದು ನಾನೇ. ನಿಮ್ಮ ಸಾಮರ್ಥ್ಯದ ಗುಟ್ಟೇನು ಎಂಬುದಾಗಿ ಕೇಳಿದೆ. ಅದಕ್ಕೆ ಅವರು, ಎಗ್ಸ್‌ (ಮೊಟ್ಟೆಗಳು) ಎಂಬುದಾಗಿ ಎರಡು ಬಾರಿ ಉತ್ತರಿಸಿದರು. ಆದರೆ, ಭಕ್ತ ಮಂಡಳಿಯು ಎಗ್ಸ್‌ ಎಂಬುದನ್ನು ಸೆಕ್ಸ್‌ ಎಂಬುದಾಗಿ ತಿರುಚಿದೆ” ಎಂಬುದಾಗಿ ನ್ಯೂಸ್‌ ದಿ ಟ್ರುತ್‌ ಎಂಬ ಮಾಧ್ಯಮ ಸಂಸ್ಥೆ ವರದಿಗಾರ ತಮಲ್‌ ಸಾಹ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಆದರೆ, ವರದಿಗಾರ ಸ್ಪಷ್ಟನೆ ನೀಡುವ ಹೊತ್ತಿಗೆ ವಿಡಿಯೊ ಭಾರಿ ವೈರಲ್‌ ಆಗಿದ್ದು, ಟೀಕೆಗಳು ವ್ಯಕ್ತವಾಗಿವೆ.

49 ವರ್ಷದ ಮಹುವಾ ಮೊಯಿತ್ರಾ ಅವರು ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುವ ಪ್ರಶ್ನೆಗಳನ್ನು ಕೇಳಲು 2 ಕೋಟಿ ರೂ. ನಗದು ಸೇರಿದಂತೆ ಲಂಚ ಪಡೆದ ಆರೋಪ ಹೊತ್ತಿದ್ದಾರೆ. ಮೊಯಿತ್ರಾ ಅವರು ತಮ್ಮ ಸಂಸತ್ತಿನ ಲಾಗ್-ಇನ್ ವಿವರಗಳನ್ನು ಉದ್ಯಮಿ ದರ್ಶನ್ ಹಿರಾನಂದಾನಿಗೆ ನೀಡಿದ್ದನ್ನು ಮೋಯಿತ್ರಾ ಒಪ್ಪಿಕೊಂಡಿದ್ದರು.  ಈ ಹಿನ್ನೆಲೆಯಲ್ಲಿ ಅವರನ್ನು ಡಿಸೆಂಬರ್ 8, 2023ರಂದು ಲೋಕಸಭೆಯಿಂದ ಉಚ್ಚಾಟಿಸಲಾಗಿತ್ತು.

 

Continue Reading

LATEST NEWS

Trending