LATEST NEWS
ಊರಿಗೆ ಅರಸನಾದರೂ ತಾಯಿಗೆ ಮಗ: ಅಮ್ಮನ ಕಾಲಿಗಡ್ಡ ಬಿದ್ದು ಆಶೀರ್ವಾದ ಪಡೆದ ಮಂಗಳೂರು ಮೇಯರ್
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಆಯ್ಕೆಗೊಂಡಿರುವ ಬಿಜೆಪಿ ಹಿರಿಯ ಸದಸ್ಯ, ಕೊಡಿಯಾಲ್ ಬೈಲ್ ಕಾರ್ಪೋರೇಟರ್ ಸುಧೀರ್ ಶೆಟ್ಟಿ ಕಣ್ಣೂರು ಅವರು ಕಣ್ಣೂರಿನ ವಿಠಲ್ ಶೆಟ್ಟಿ ಗುತ್ತಿಗೆ ಮನೆ ಕೋಡೆಕಲ್ಗೆ ಭೇಟಿ ನೀಡಿ ತಮ್ಮ ತಾಯಿ ಗುಲಾಬಿ ಅವರ ಕಾಲಿಗೆ ಅಡ್ಡ ಬಿದ್ದು ಆಶೀರ್ವಾದವನ್ನು ಬೇಡಿಕೊಂಡರು.
ಈ ವೇಳೆ ತಾಯಿ, ಪುತ್ರನನ್ನು ಮನತುಂಬಿ ಹರಸಿದರಲ್ಲದೇ ಸಿಹಿ ತಿನ್ನಿಸಿದರು. ಪತ್ನಿ ಉಷಾ ಶೆಟ್ಟಿ, ಹಿರಿಯ ಸಹೋದರ ಲೋಕೇಶ್ ಶೆಟ್ಟಿ, ಅತ್ತಿಗೆ ಶಕುಂತಲಾ ಶೆಟ್ಟಿ, ಸ್ನೇಹಿತರು, ಹಿತೈಷಿಗಳು ಕೂಡಾ ಸುಧೀರ್ ಶೆಟ್ಟಿ ಅವರನ್ನು ಅಭಿನಂದಿಸಿದರು.
ಬಿಜೆಪಿ ಸಾಮಾನ್ಯ ಕಾರ್ಯಕರ್ತನಾಗಿ, ಇದೀಗ ಪಾಲಿಕೆಯಲ್ಲಿ ಹಿರಿಯ ಕಾರ್ಪೋರೇಟರ್ ಆಗಿ ಗುರುತಿಸಿಕೊಂಡಿರುವ ಸುಧೀರ್ ಶೆಟ್ಟಿ ನಿನ್ನೆ ನಡೆದ ಚುನಾವಣೆಯಲ್ಲಿ ಮೇಯರ್ ಆಗಿ ಆಯ್ಕೆಗೊಂಡಿದ್ದರು. ಸುಧೀರ್ ಶೆಟ್ಟಿ ಕಣ್ಣೂರು ಸತತ ಮೂರನೇ ಬಾರಿ ಮಹಾನಗರ ಪಾಲಿಕೆಗೆ ಆಯ್ಕೆಯಾಗಿದ್ದು, ಆರ್ ಎಸ್ ಎಸ್ ಗರಡಿಯಲ್ಲಿ ಪಳಗಿದ ಚತುರ ಸಂಘಟಕ. ಸುರತ್ಕಲ್ ಗೋವಿಂದ ದಾಸ ಕಾಲೇಜಿನಲ್ಲಿ ಬಿಕಾಂ ಪದವಿ ಶಿಕ್ಷಣ ಪಡೆದಿರುವ 52ರ ಹರೆಯದ ಸುಧೀರ್ ಶೆಟ್ಟಿ ವೃತ್ತಿಯಲ್ಲಿ ಸಾರಿಗೆ ಉದ್ಯಮಿಯಾಗಿದ್ದಾರೆ.
ಕಣ್ಣೂರು ಗ್ರಾಮ ಪಂಚಾಯತಿ ಸದಸ್ಯರಾಗಿ ರಾಜಕೀಯ ಪ್ರವೇಶಿಸಿದ ಇವರು, ಕಣ್ಣೂರು ಪ್ರದೇಶ ಮಹಾನಗರ ಪಾಲಿಕೆ ವ್ಯಾಪ್ತಿಯಗೆ ಸೇರ್ಪಡೆಯಾದ ಸತತ ಎರಡು ಬಾರಿ ಆ ವಾರ್ಡಿನ ಕಾರ್ಪೋರೇಟರ್ ಆಗಿ ಚುನಾಯಿತರಾಗಿದ್ದರು. 2019ರಲ್ಲಿ ಕೊಡಿಯಾಲ್ಬೈಲು ವಾರ್ಡಿನಿಂದ ಸ್ಪರ್ಧಿಸಿ ಚುನಾಯಿತರಾದರು. ಪಾಲಿಕೆ ಪ್ರತಿಪಕ್ಷ ನಾಯಕರಾಗಿ, ಮುಖ್ಯ ಸಚೇತಕರಾಗಿ, ನಗರ ಯೋಜನೆ ಸ್ಥಾಯಿ ಸಮಿತಿ ಪ್ರಧಾನ ಕಾರ್ಯದರ್ಶೀಯಾಗಿದ್ದರು. ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯೂ ಅಗಿದ್ದಾರೆ.
DAKSHINA KANNADA
ಮಂಗಳೂರು : ‘ಮಹೇಶ್’ ಬಸ್ ಮಾಲೀಕ ಆತ್ಮಹತ್ಯೆ..!
ಮಂಗಳೂರು: ಮಂಗಳೂರಿನ ಖಾಸಗಿ ಬಸ್ ನ ಮಾಲೀಕರೊಬ್ಬರು ತಾವು ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತರನ್ನು ಮಹೇಶ್ ಬಸ್ ಮಾಲೀಕ ಪ್ರಕಾಶ್ ಶೇಖ ಎಂದು ಗುರುತಿಸಲಾಗಿದೆ. ಅವರು ಕದ್ರಿ ಕಂಬಳ ಸಮೀಪ ಇರುವ ಅಪಾರ್ಟ್ ಮೆಂಟ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಹೇಶ್ ಹೆಸರಿನಲ್ಲಿ ಹಲವಾರು ಸಿಟಿ ಬಸ್ ಗಳು ದಿನನಿತ್ಯ ಸಂಚರಿಸುತ್ತಿದ್ದು, ಜನಮನ್ನಣೆ ಪಡೆದಿದೆ.
ಬಸ್ ಉದ್ಯಮದ ಬಗ್ಗೆ ಭಾರೀ ಪ್ರೀತಿ ಇಟ್ಟುಕೊಂಡಿದ್ದ ಪ್ರಕಾಶ್ ಯಾಕಾಗಿ ಸಾವಿಗೆ ಶರಣಾಗಿದ್ದಾರೆ ಎನ್ನುವುದು ಆಪ್ತ ಬಳಗಕ್ಕೆ ಶಾಕ್ ನೀಡಿದೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
ಬೈಕ್ ಅಪಘಾತ: ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಲೆ ಹರಿದ ಲಾರಿ- ಮೂವರು ಸ್ಥಳದಲ್ಲೇ ಸಾವು..!
ಶಿವಮೊಗ್ಗ: ಬೈಕ್ ಗಳ ಮದ್ಯೆ ನಡೆದ ಅಪಘಾತದಿಂದ ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಳೆ ಲಾರಿ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಹತೊಳಲು ಗ್ರಾಮದಲ್ಲಿ ನಡೆದಿದೆ.
ಹಳೆ ಜಂಬರಗಟ್ಟ ನಿವಾಸಿ ವಿಕಾಸ್ (18), ಯಶ್ವಂತ್ (17), ಹಾಗೂ ಶಶಾಂಕ್ (17) ಮೃತ ದುರ್ದೈವಿಗಳು.
ಎರಡು ಬೈಕ್ ಗಳ ಮಧ್ಯೆ ನಡೆದ ಅಪಘಾತದಲ್ಲಿ ಸವಾರರ ರಸ್ತೆ ಮೇಲೆ ಬಿದ್ದಿದ್ದಾರೆ.
ಇದೇ ವೇಳೆ ರಭಸವಾಗಿ ಬಂದ ಲಾರಿ ಆ ವ್ಯಕ್ತಿಗಳ ಮೇಲೆ ಹರಿದಿದೆ.
ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಒಬ್ಬನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
FILM
ಮೋದಿಗೆ ರಕ್ತದಲ್ಲಿ ಪತ್ರ ಬರೆದ ಚಿತ್ರ ನಟ ಪ್ರೇಮ್..!
ಚಿಕ್ಕಮಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಯಬಿಡುವುದನ್ನು ಖಂಡಿಸಿದ ಕನ್ನಡ ಚಿತ್ರನಟ ಪ್ರೇಮ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.
ಕಾವೇರಿ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ರಾಜ್ಯದಾದ್ಯಂತ ಹೋರಾಟ ನಡೆಯುತ್ತಿದ್ದು, ಚಿತ್ರನಟ ನೆನಪಿರಲಿ ಪ್ರೇಮ್ ಸಾಥ್ ನೀಡಿದ್ದಾರೆ.
‘ಕಾವೇರಿ ನಮ್ಮದು’ ಎಂದು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
ಕಾವೇರಿ ನೀರಿನಿಂದ ರಾಜ್ಯಕ್ಕೆ ನ್ಯಾಯ ನೀಡಬೇಕೆಂದು ಪತ್ರದ ಮೂಲಕ ಪ್ರೇಮ್ ಅವರು ಮನವಿ ಮಾಡಿದ್ದಾರೆ.
ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
- DAKSHINA KANNADA6 days ago
2ನೇ ಮದುವೆಯಾದ ಕಿರುತೆರೆ ನಟಿ ಜ್ಯೋತಿ ರೈ …!
- LATEST NEWS6 days ago
ವಾರವಿಡೀ ಕಾಡಿನಲ್ಲಿ ಸಿಲುಕಿದ್ದ ಯುವಕ- ಮನೆಗೆ ವಾಪಸ್ ಆಗುವಂತೆ ರಕ್ಷಣೆ ಮಾಡಿದ ಸಾಕುನಾಯಿ..!
- DAKSHINA KANNADA6 days ago
Puttur: ಕಾಲೇಜು ವಿದ್ಯಾರ್ಥಿನಿ ಜಿವಾಂತ್ಯ..!
- DAKSHINA KANNADA6 days ago
Ullala: ರೈಲಿನಡಿಗೆ ತಲೆಯಿಟ್ಟು ಅವಿವಾಹಿತ ವ್ಯಕ್ತಿ ಜೀವಾಂತ್ಯ..!