Thursday, March 23, 2023

ಮಂಗಳೂರಿನಲ್ಲಿ ನರ್ಸಿಂಗ್ ಓದುತ್ತಿದ್ದ ಕಾಸರಗೋಡಿನ ವಿದ್ಯಾರ್ಥಿನಿ ಆತ್ಮಹತ್ಯೆ..!

ಮಂಗಳೂರಿನಲ್ಲಿ ನರ್ಸಿಂಗ್ ಓದುತ್ತಿದ್ದ ವಿದ್ಯಾರ್ಥಿನಿ ನೇಣು ಬಿಗುದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡಿನ ಪುಲ್ಲೂರು ಪೆರಿಯಾದಲ್ಲಿ ನಡೆದಿದೆ.

ಕಾಸರಗೋಡು: ಮಂಗಳೂರಿನಲ್ಲಿ ನರ್ಸಿಂಗ್ ಓದುತ್ತಿದ್ದ ವಿದ್ಯಾರ್ಥಿನಿ ನೇಣು ಬಿಗುದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡಿನ ಪುಲ್ಲೂರು ಪೆರಿಯಾದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಪೆರಿಯ ಚಾಳಿಂಗಲ್ ಎನ್ನಪಾರ ನಿವಾಸಿ ಫಾತಿಮಾ(18) ಎಂದು ಗುರುತಿಸಲಾಗಿದೆ. ಫಾತಿಮಾ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ಮಂಗಳೂರಿನಲ್ಲಿ ನರ್ಸಿಂಗ್ ಓದುತ್ತಿದ್ದ ಫಾತಿಮಾ ಶುಕ್ರವಾರ ಕಾಲೇಜಿಗೆ ಹೋಗಿರಲಿಲ್ಲ.

ಸಂಜೆ ಕಾಞಂಗಾಡ್‌ನಿಂದ ತಾಯಿ ಮತ್ತು ಅವರ ಸಹೋದರಿ ಹಿಂದಿರುಗಿದಾಗ ಫಾತಿಮಾ ಮಲಗುವ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.


ಫಾತಿಮಾಳಿಗೆ ಇತ್ತೀಚೆಗಷ್ಟೇ ಗಲ್ಫ್ ವ್ಯಕ್ತಿಯೊಂದಿಗೆ ವಿವಾಹ ನಿಶ್ಚಯವಾಗಿತ್ತು.

ಮದುವೆಯ ನಂತರ ನನ್ನ ಓದು ನಿಲ್ಲುತ್ತದೆ ಎಂಬ ಆತಂಕದಿಂದ ಮನನೊಂದ ಆಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಫಾತಿಮಾಳ ತಂದೆ ಶಂಶುದ್ದೀನ್ ಕೋವಿಡ್ ಸಮಯದಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದರು. ಮನೆಮಗಳ ಅಗಲುವಿಕೆ ಕುಟುಂಬಸ್ಥರನ್ನು ಕಣ್ಣೀರಲ್ಲಿ ಮುಳುಗಿಸಿದೆ.

LEAVE A REPLY

Please enter your comment!
Please enter your name here

Hot Topics

ಓಮನ್‌ನಲ್ಲಿ ಹೃದಯಾಘಾತದಿಂದ ಅನಿವಾಸಿ ಭಾರತೀಯ ಮಹಿಳೆ ಮೃತ್ಯು..!

ಓಮನ್‌ ನಲ್ಲಿ ಭಾರತೀಯ ಮೂಲದ ಮಹಿಳೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕೇರಳ ಕೊಟ್ಟಾಯಂನ ಮಹಿಳೆ ಸೈಮಾ ಬಾಲಕೃಷ್ಣ ಮೃತ ಮಹಿಳೆಯಾಗಿದ್ದಾಳೆ.ಓಮನ್ : ಓಮನ್‌ ನಲ್ಲಿ ಭಾರತೀಯ ಮೂಲದ ಮಹಿಳೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕೇರಳ ಕೊಟ್ಟಾಯಂನ...

ಚಿಕ್ಕಮಗಳೂರು : ಬೈಕಿಗೆ ಬಸ್ ಡಿಕ್ಕಿ – ಇಬ್ಬರು ಸವಾರರು ಸ್ಥಳದಲ್ಲೇ ಮೃತ್ಯು..!

ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ. ಚಿಕ್ಕಮಗಳೂರು: ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು...

ಉಡುಪಿ : ಕಳವಾದ 74 ಲಕ್ಷ ರೂಪಾಯಿ ಸೊತ್ತುಗಳು ಮರಳಿ ಮಾಲಕರಿಗೆ ಹಸ್ತಾಂತರಿಸಿದ ಪೊಲೀಸರು.!

ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳ್ಳತನ ,ದರೋಡೆ ಮತ್ತಿತರ ಕಾರಣಗಳಿಂದ ಸುತ್ತುಗಳನ್ನು ಕಳೆದುಕೊಂಡವರಿಗೆ ಅವರ ಚಿನ್ನಾಭರಣ ಸೊತ್ತು ಮತ್ತು ನಗದನ್ನು ಹಸ್ತಾಂತರಿಸಲಾಯಿತು.ಉಡುಪಿ : ಉಡುಪಿ ಜಿಲ್ಲೆಯ ವಿವಿಧ ಪೊಲೀಸ್...