DAKSHINA KANNADA
ಮಂಗಳೂರು: ಕುಡುಕನಿಗೆ ಸಿಕ್ಕಿದ ಲಕ್ಷ ರೂಪಾಯಿಗಳ ನೋಟಿನ ಬಂಡಲ್ ಪ್ರಕರಣದಲ್ಲಿ ಪೊಲೀಸ್ ಕಮಿಷನರ್ ಹೇಳಿದಿಷ್ಟು..!
ಪಂಪ್ವೆಲ್ ಬಳಿ ಕೆಲವು ದಿನಗಳ ಹಿಂದೆ ಮೆಕ್ಯಾನಿಕ್ ಶಿವರಾಜ್ ಎಂಬವರಿಗೆ ಸಿಕ್ಕಿದ್ದ ವಾರಿಸುದಾರರಿಲ್ಲದ ಹಣದ ಬಂಡಲ್ಗೆ ಸಂಬಂಧಿಸಿ ಸದ್ಯ 3.5 ಲಕ್ಷ ರೂಪಾಯಿ ಹಣ ಪೊಲೀಸರ ವಶದಲ್ಲಿದ್ದು ಈ ಬಗ್ಗೆ ತನಿಖೆ ಮುಂದುವರೆದಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಹೇಳಿದ್ದಾರೆ.
ಮಂಗಳೂರು: ಪಂಪ್ವೆಲ್ ಬಳಿ ಕೆಲವು ದಿನಗಳ ಹಿಂದೆ ಮೆಕ್ಯಾನಿಕ್ ಶಿವರಾಜ್ ಎಂಬವರಿಗೆ ಸಿಕ್ಕಿದ್ದ ವಾರಿಸುದಾರರಿಲ್ಲದ ಹಣದ ಬಂಡಲ್ಗೆ ಸಂಬಂಧಿಸಿ 3.5 ಲಕ್ಷ ಪೊಲೀಸರ ವಶದಲ್ಲಿದ್ದು ಈ ಬಗ್ಗೆ ತನಿಖೆ ಮುಂದುವರೆದಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಹೇಳಿದ್ದಾರೆ.
ತನ್ನನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈವರೆಗೂ ಈ ಹಣ ಯಾರದ್ದು, ದಾರಿ ಮಧ್ಯೆ ಹೇಗೆ ಬಿದ್ದು ಸಿಕ್ಕಿತು ? ಇನ್ನು ಸ್ಪಷ್ಟವಾಗಿಲ್ಲ.
ಈ ಅನಾಮಧೇಯ ಹಣದ ಕಟ್ಟುಗಳ ವಾರಿಸುದಾರರು ಇದ್ದಲ್ಲಿ, ಸಂಬಂಧಪಟ್ಟ ಠಾಣೆಗೆ ಸೂಕ್ತ ಮಾಹಿತಿಯೊಂದಿಗೆ ಭೇಟಿ ನೀಡಿದರೆ ವಾಪಾಸು ನೀಡುವ ಪ್ರಕ್ರಿಯೆ ನಡೆಯಲಿದೆ ಎಂದರು.
ನ. 26ರಂದು ಶಿವರಾಜ್ ಎಂಬವರಿಗೆ ಬೆಳಗ್ಗಿನ ಹೊತ್ತು ಪಂಪ್ವೆಲ್ ಬಳಿ ಬಾಕ್ಸ್ ಹಾಗೂ ಪ್ಲಾಸ್ಟಿಕ್ ಚೀಲದಲ್ಲಿ ಹಣದ ಬಂಡಲ್ಗಳು ಸಿಕ್ಕಿತ್ತು.
ಅದರಲ್ಲಿ ಎಷ್ಟು ಹಣ ಇತ್ತೆಂಬ ಬಗ್ಗೆ ಸ್ಪಷ್ಟವಾಗಿ ಅವನು ಹೇಳುತ್ತಿಲ್ಲ. ಮಾಧ್ಯಮದಲ್ಲಿ 10 ಲಕ್ಷ ರೂ. ಹಣದ ಕವರ್ ಸಿಕ್ಕಿರುವುದಾಗಿ ವರದಿಯಾಗಿರುವ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ.
ಹಣ ದೊರೆತಿರುವ ಪ್ರದೇಶದ ಸಿಸಿ ಕ್ಯಾಮರಾ ಕೂಡಾ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.
ಶಿವರಾಜ್ ಹಣದ ಕಟ್ಟು ಸಿಕ್ಕಿದ ತನ್ನ ಜತೆ ಮದ್ಯಪಾನ ಮಾಡುವ ವ್ಯಕ್ತಿ ತುಕರಾಂ ಎಂಬವರಿಗೆ 500 ರೂ.ಗಳ ಆರು ಕಟ್ಟು ಹಣವನ್ನು ನೀಡಿದ್ದಾಗಿ ಹೇಳಿಕೊಂಡಿದ್ದ. ಈ ಬಗ್ಗೆ ಮಾದ್ಯಮದಲ್ಲಿ ಮಾಹಿತಿ ಬಂದ ಹಿನ್ನೆಲೆಯಲ್ಲಿ ತುಕರಾಂ 2,99,500 ರೂ.ಗಳನ್ನು ಠಾಣೆಗೆ ತಂದು ನೀಡಿದ್ದಾನೆ.
ಶಿವರಾಜ್ನಿಂದ ಹಣದ ಕಟ್ಟುಗಳನ್ನು ಪಡೆದಿದ್ದ ತುಕಾರಾಂ ಒಂದು ಕಟ್ಟಿನಿಂದ 500 ರೂ. ತೆಗೆದು ಮದ್ಯಪಾನ ಮಾಡಿರುವುದಾಗಿ ಹೇಳಿಕೊಂಡಿದ್ದಾನೆ.
ಈ ಬಗ್ಗೆ ಶಿವರಾಜ್ “ಹಣದ ಕಟ್ಟು ಹಿಡಿದುಕೊಂಡು ಮಲಗಿದ್ದೆ. ತನ್ನದಲ್ಲಿದ್ದ ಹಣದ ಒಂದು ಕಟ್ಟಿನಿಂದ ಒಂದು ನೋಟು ತೆಗೆದು ಮದ್ಯಪಾನ ಮಾಡಿ ಮಲಗಿದ್ದೆ. ಬಳಿಕ ಎಚ್ಚರವಾದಾಗ ಒಂದು ನೋಟು ತೆಗೆದ ಕಟ್ಟು ಬಿಟ್ಟು ಬೇರೆ ಯಾವುದೇ ಹಣ ಇರಲಿಲ್ಲ” ಎನ್ನುತ್ತಾನೆ.
ಒಟ್ಟು ಇದೀಗ ತುಕರಾಂ ತಂದು ಕೊಟ್ಟ 2,99,500 ಮತ್ತು 49,000 ರೂ. ಪೊಲೀಸರ ವಶದಲ್ಲಿದೆ. ಅದನ್ನು ಸೂಕ್ತ ದಾಖಲೀಕರಣದೊಂದಿಗೆ ಪೊಲೀಸರ ವಶದಲ್ಲಿರಿಸಲಾಗಿದೆ.
ವಾರಿಸುದಾರರು ಬಾರದಿದ್ದಲ್ಲಿ ಮುಂದಿನ ಕ್ರಮ ವಹಿಸಲಾಗುವುದು. ಈಗಾಗಲೇ ಅದರಲ್ಲಿ 10 ಲಕ್ಷ ಇತ್ತೆಂದು ಹೇಳಲಾಗಿರುವಂತೆ, ಯಾರಾದರೂ ಶಿವರಾಜ್ ಬಳಿ ಇದ್ದ ಹಣವನ್ನು ಕೊಂಡು ಹೋಗಿದ್ದಲ್ಲಿ ಅದನ್ನು ಠಾಣೆಗೆ ಒಪ್ಪಿಸಿದರೆ ಅವರ ಮೇಲೆ ಯಾವುದೇ ರೀತಿಯ ಪ್ರಕರಣ ದಾಖಲಿಸಲಾಗುವುದಿಲ್ಲ.
ಒಂದು ವೇಳೆ ತನಿಖೆಯ ವೇಳೆ, ಸಿಸಿ ಕ್ಯಾಮರಾ ಫೂಟೇಜ್ ತಪಾಸಣೆಯ ಸಂದರ್ಭ ಯಾರಾದರೂ ಶಿವರಾಜ್ ಬಳಿ ಇದ್ದ ಹಣ ಕದ್ದುಕೊಂಡು ಹೋಗಿರುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಸುಲಿಗೆ, ದರೋಡೆ ಪ್ರಕರಣ ದಾಖಲಾಗುತ್ತದೆ.
ಉಳಿದಂತೆ ಶಿವರಾಜ್ ಅಥವಾ ತುಕರಾಂ ಮೇಲೆ ಯಾವುದೇ ರೀತಿಯ ಅಪರಾಧ ಪ್ರಕರಣ ದಾಖಲಿಸಲಾಗಿಲ್ಲ.
ಪೊಲೀಸರು ತಡವಾಗಿ ಈ ಪ್ರಕರಣದಲ್ಲಿ ಮಾಡಿದ ಬಗ್ಗೆ ವರದಿ ತರಿಸುತ್ತೇನೆ ಈ ವಿಚಾರದಲ್ಲಿ 75KP ಆಕ್ಟ್ ನಡಿ ವಾರೀಸುದಾರರಿಲ್ಲದ ಹಣದ ಪ್ರಕರಣ ಮಾಡಿದ್ದೇವೆ ಎಂದು ಆಯಕ್ತರು ಸ್ಪಷ್ಟಪಡಿಸಿದ್ದಾರೆ.
BANTWAL
ಅನಾರೋಗ್ಯದ ನಡುವೆಯೂ ಮತ ಚಲಾಯಿಸಿ ಕೊ*ನೆಯುಸಿರೆಳೆದ ನಿವೃತ್ತ ಯೋಧ
ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಅಸ್ಪತ್ರೆಗೆ ದಾಖಲಾಗಿದ್ದು, ಈಗ ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ.
ಬಂಟ್ವಾಳ ವಗ್ಗ ನಿವಾಸಿ, ನಿವೃತ್ತ ಯೋಧ ಮಾಧವ ಪ್ರಭು (83) ಅನಾರೋಗ್ಯದ ನಡುವೆಯೂ ಪವಿತ್ರ ಮತದಾನ ಕರ್ತವ್ಯ ಪೂರೈಸಿದವರು.
ಮಾಧವ ಪ್ರಭುಗಳು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 85 ವರ್ಷ ಮತ್ತು ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಮಾಧವ ಪ್ರಭುಗಳು ವೈದ್ಯರ ಅನುಮತಿ ಪಡೆದು ನೇರವಾಗಿ ಮನೆಗೆ ತೆರಳಿ ಅಲ್ಪಿ ಏ.15 ರಂದು ಮತದಾನ ಕರ್ತವ್ಯ ಪೂರೈಸಿ ಆಸ್ಪತ್ರೆಗೆ ಮರಳಿದ್ದರು. ಮಾಧವ ಪ್ರಭುಗಳು ಆಸ್ಪತ್ರೆಯಲ್ಲಿ ಬುಧವಾರ ಮೃ*ತಪಟ್ಟಿದ್ದಾರೆ.
ಸೈನ್ಯಕ್ಕೆ ಸೇರುವ ಮೊದಲು ಮಲೇರಿಯಾ ನಿರ್ಮೂಲನಾ ವಿಭಾಗದ ಇನ್ಸ್ಪೆಕ್ಟರ್ ಆಗಿದ್ದರು. ಸೈನ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ನಂತರ ಇವರು ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾಗಿದ್ದರು. ಮೃ*ತರು ಪತ್ನಿ ಹಾಗೂ ಇಬ್ಬರು ಪುತ್ರಿ ಮತ್ತು ಪುತ್ರರನ್ನು ಅ*ಗಲಿದ್ದಾರೆ.
DAKSHINA KANNADA
ಕೇರಳದ ಹಕ್ಕಿ ಜ್ವರ…ದಕ್ಷಿಣ ಕನ್ನಡದ ಗಡಿಯಲ್ಲಿ ಕಟ್ಟೆಚ್ಚರ..!
ಮಂಗಳೂರು: ಕೇರಳದ ಅಲಪ್ಪುಳ ಜಿಲ್ಲೆಯ ಎರಡು ಗ್ರಾಮ ಪಂಚಾಯಿತಿಗಳಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿಗೆ ಹೊಂದಿಕೊಂಡಿರುವ ಕೇರಳದ ಗಡಿ ಭಾಗಗಳಲ್ಲಿ ವಿಸೇಷ ನಿಗಾ ವಹಿಸಲಾಗಿದೆ.
ಇಂದಿನಿಂದ ತಲಪಾಡಿ, ಜಾಲ್ಸೂರು ಮತ್ತು ಸಾರಡ್ಕದಲ್ಲಿ ವಿಶೇಷ ಚೆಕ್ ಪೋಸ್ಟ್ಗಳನ್ನು ಸ್ಥಾಪಿಸಲಾಗುವುದು. ಈ ಚೆಕ್ ಪೋಸ್ಟ್ಗಳಲ್ಲಿ ಕೋಳಿ ಉತ್ಪನ್ನಗಳನ್ನು ಕೇರಳಕ್ಕೆ ತಲುಪಿಸಿದ ನಂತರ ದಕ್ಷಿಣ ಕನ್ನಡಕ್ಕೆ ಹಿಂದಿರುಗುವ ವಾಹನಗಳನ್ನು ಸ್ಯಾನಿಟೈಸ್ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.
ಮಂಗಳೂರಿನಿಂದ ಸುಮಾರು 400 ಕಿಲೋಮೀಟರ್ ದೂರದಲ್ಲಿರುವ ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ. ಆ ಜಿಲ್ಲೆಯಲ್ಲಿ ಇದು ಎರಡನೇ ಪ್ರಕರಣವಾಗಿದೆ. ಇದುವರೆಗೆ ದಕ್ಷಿಣ ಕನ್ನಡದಲ್ಲಿ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ನಾವು ಜಾಗರೂಕರಾಗಿರುತ್ತೇವೆ ಮತ್ತು ಮೂರು ಆಯಕಟ್ಟಿನ ಸ್ಥಳಗಳಲ್ಲಿ ಚೆಕ್ ಪೋಸ್ಟ್ಗಳನ್ನು ಸ್ಥಾಪಿಸುತ್ತೇವೆ ಎಂದು ಕರ್ನಾಟಕ ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ ಇದು ಕೋವಿಡ್ಗಿಂತ ಭೀಕರ ಸೋಂಕು…ಜಗತ್ತಿಗೆ ಹರಡುವ ಆತಂಕದಲ್ಲಿ ತಜ್ಞರು..!
ಏನಿದು ಹಕ್ಕಿ ಜ್ವರ?
ಹೆಚ್5ಎನ್1 ವೈರಸ್ನಿಂದ ಹರಡುವ ಸೋಂಕನ್ನು ಹಕ್ಕಿ ಜ್ವರ ಎಂದು ಕರೆಯಲಾಗುತ್ತದೆ. ಈ ವೈರಸ್ ಹೆಚ್ಚಿನ ಮರಣ ಪ್ರಮಾಣದೊಂದಿಗೆ ತೀವ್ರವಾದ ಜ್ವರವನ್ನು ಉಂಟುಮಾಡಬಲ್ಲದ್ದಾಗಿದೆ. ಆದರೆ, ಮನುಷ್ಯರಲ್ಲಿ ಈ ರೋಗದ ಹರಡುವಿಕೆ ಬಹಳ ಅಪರೂಪ. ಇಲ್ಲಿಯವರೆಗೆ, ಈ ವೈರಸ್ ಮಾನವರಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಹರಡಿದ ಬಗ್ಗೆ ವರದಿಯಾಗಿಲ್ಲ. ಆದರೂ ಈ ಬಗ್ಗೆ ನಿರ್ಲಕ್ಷ್ಯ ತೋರುವಂತಿಲ್ಲ.
ಹಕ್ಕಿ ಜ್ವರ ವಿಶಿಷ್ಟವಾಗಿ ವಲಸೆ ಹಕ್ಕಿಗಳ ಮೇಲೆ ಪರಿಣಾಮ ಬೀರುತ್ತದೆ. ಆದರೆ ಪ್ರಸ್ತುತ ಬೇಸಿಗೆಯಲ್ಲಿ ಹಕ್ಕಿಗಳ ವಲಸೆ ಸಾಮಾನ್ಯವಾಗಿ ಕಡಿಮೆ ಇರುತ್ತದೆ. ವೈರಸ್ ಸೋಂಕಿತ ಕೋಳಿಗಳಿಂದ ಇತರ ಪಕ್ಷಿಗಳಿಗೆ ಮತ್ತು ಮನುಷ್ಯರಿಗೆ, ವಿಶೇಷವಾಗಿ ಕೋಳಿ ಸಾಕಣೆ ಕೇಂದ್ರಗಳು ಮತ್ತು ಮಾಂಸ ಸಂಸ್ಕರಣಾ ಘಟಕಗಳಲ್ಲಿ ಕೆಲಸ ಮಾಡುವವರಿಗೆ ಹರಡಬಹುದು. ಆದಾಗ್ಯೂ, ಇದು ವ್ಯಕ್ತಿಯಿಂದ ವ್ಯಕ್ತಿಗೆ ಹರಡುವುದಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.
DAKSHINA KANNADA
ಮತದಾರರ ಚೀಟಿಯಲ್ಲಿ ಕ್ಯೂಆರ್ ಕೋಡ್! ಮಂಗಳೂರು ದಕ್ಷಿಣ ಉತ್ತರದಲ್ಲಿ ಅನುಷ್ಠಾನ
ಮಂಗಳೂರು: ನಗರದಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಚುನಾವಣ ಆಯೋಗ ಕೊನೇ ಹಂತದ ಕಸರತ್ತು ಮುಂದುವರಿಸಿದೆ. ನಗರದ ಜನತೆಗೆ ಮತಗಟ್ಟೆಗಳ ಮಾಹಿತಿ ನೀಡಲು ಚುನಾವಣೆ ಸ್ಲಿಪ್ಗಳಲ್ಲಿ ಕ್ಯೂಆರ್ ಓಡ್ ನೀಡಲಾಗಿದ್ದು, ಆ ಮೂಲಕ ಮತದಾನ ಕೇಂದ್ರದ ಮಾಹಿತಿ ನೀಡಲು ಮುಂದಾಗಿದೆ.
ಕರ್ನಾಟಕದಲ್ಲಿ ಇದು ಮೊದಲ ಪ್ರಯೋಗವಾಗಿದ್ದು, ದ.ಕ. ಜಿಲ್ಲೆಯ ನಗರಕ್ಕೆ ಹೊಂದಿಕೊಂಡಿರುವ ಎರಡು ಕ್ಷೇತ್ರಗಳಲ್ಲಿ ಮಾತ್ರ ಜಾರಿಗೊಳಿಸಲಾಗಿದೆ. ಇದರಂತೆ ಮಂಗಳೂರು ದಕ್ಷಿಣ ಹಾಗೂ ಉತ್ತರ ಕ್ಷೇತ್ರದಲ್ಲಿ ಸ್ಲಿಪ್ ಮೂಲಕ ಮತದಾರರಿಗೆ ಮತಗಟ್ಟೆಯ ವಿವರ ಒದಗಿಸಲಾಗುತ್ತಿದ್ದು, ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತ ಚಲಾವಣೆಯಾಗುವ ನಿರೀಕ್ಷೆ ಹೊಂದಲಾಗಿದೆ.
ಮತದಾರರ ಸ್ಲಿಪ್ನಲ್ಲಿ ಮತಗಟ್ಟೆಯ ವಿವರ ನಗರದಲ್ಲಿನ ಅನೇಕರಿಗೆ ಮತಗಟ್ಟೆಯ ಬಗ್ಗೆ ಮಾಹಿತಿ ಇರುವುದಿಲ್ಲ. ಮತದಾನಕ್ಕಾಗಿ ಮತಗಟ್ಟೆಗಳನ್ನು ಅರಸಿಕೊಂಡು ಹೋಗಬೇಕಾಗುತ್ತದೆ. ಇದನ್ನು ನೀಗಿಸಲು ಕ್ಯೂಆರ್ ಕೋಡ್ ನೀಡಲಾಗಿದ್ದು, ಸ್ಕ್ಯಾನ್ ಮಾಡಿದ ವೇಳೆ ಮಯಗಟ್ಟೆಯ ಲೊಕೇಷನ್ ಪಡೆಯಬಹುದು. ಈ ಮೂಲಕ ಮತಗಟ್ಟೆ ಹುಡುಕಿ ತೆರಳುವುದನ್ನು ತಪ್ಪಿಸಲು ಸಾಧ್ಯವಾಗಲಿದೆ.
- DAKSHINA KANNADA7 days ago
“ಸೆಕ್ಸ್” ನನ್ನ ಸಾಮರ್ಥ್ಯದ ರಹಸ್ಯ…! ಮಾಜಿ ಸಂಸದೆಯ ಹೇಳಿಕೆ ವೈರಲ್..!
- DAKSHINA KANNADA7 days ago
ಕೊರಗಜ್ಜನ ಫೋಟೋವನ್ನು ಮನೆಯಲ್ಲಿ ಇಟ್ಟು ಆರಾಧಿಸಬಹುದಾ?
- LATEST NEWS6 days ago
ಆಲದ ಮರದ ಪೊಟರೆಯಲ್ಲಿ ಪತ್ತೆಯಾಯ್ತು 64 ಲಕ್ಷ ರೂ.!
- FILM3 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ