Connect with us

DAKSHINA KANNADA

ಮಂಗಳೂರು ಕಮೀಷನರ್‌ ಮುಂದಿದೆ ಹೊಸ ಸವಾಲು: ಬೇಕಿದೆ ‘ನೇರ ಫೋನ್‌ ಇನ್‌ ಕಾರ್ಯಕ್ರಮ’..!

Published

on

ರಾಜ್ಯದಲ್ಲೇ ಮೊದಲ ಬಾರಿಗೆ ಜನಸ್ನೇಹಿ ಪೊಲೀಸ್‌ ವ್ಯವಸ್ಥೆ ಜಾರಿಗೆ ತಂದು ಮಾದರಿಯಾಗಿದ್ದ ಮಂಗಳೂರು ನಗರ ಪೊಲೀಸ್‌ ಆಯುಕ್ತರ ‘ನೇರ ಫೋನ್‌ ಇನ್‌ ಕಾರ್ಯಕ್ರಮ’ ಹೇಳ ಹೆಸರಿಲ್ಲದಂತೆ ಕಾಣೆಯಾಗಿದೆ.

ಮಂಗಳೂರು: ರಾಜ್ಯದಲ್ಲೇ ಮೊದಲ ಬಾರಿಗೆ ಜನಸ್ನೇಹಿ ಪೊಲೀಸ್‌ ವ್ಯವಸ್ಥೆ ಜಾರಿಗೆ ತಂದು ಮಾದರಿಯಾಗಿದ್ದ ಮಂಗಳೂರು ನಗರ ಪೊಲೀಸ್‌ ಆಯುಕ್ತರ ‘ನೇರ ಫೋನ್‌ ಇನ್‌ ಕಾರ್ಯಕ್ರಮ’ ಹೇಳ ಹೆಸರಿಲ್ಲದಂತೆ ಕಾಣೆಯಾಗಿದೆ.

ಮಂಗಳೂರಿಗೆ ಇದೀಗ ನೂತನ ಪೊಲೀಸ್ ಕಮೀಷನರ್‌ ಆಗಿ ಅಧಿಕಾರ ವಹಿಸಿರುವ ಕುಲ್‌ದೀಪ್‌ ಕುಮಾರ್‌ ಆರ್‌. ಜೈನ್‌ ಮರುಜೀವ ಕೊಟ್ಟು ಜನಸಾಮಾನ್ಯರಿಗೆ ಕಿವಿಯಾಗಬೇಕೆಂಬುವುದು ಪ್ರಜ್ಞಾವಂತ ನಾಗರೀಕರ ಆಶಯವಾಗಿದೆ.

ಕುಲ್‌ದೀಪ್‌ ಕುಮಾರ್‌ ಆರ್‌. ಜೈನ್‌

ರಾಜ್ಯದಲ್ಲೇ ಮೊದಲ ಬಾರಿಗೆ ಜಾರಿಯಾಗಿದ್ದ ವಿನೂತನವಾಗಿ ‘ನೇರ ಫೋನ್‌ ಇನ್‌ ಕಾರ್ಯಕ್ರಮ’ ಮಾದರಿಯನ್ನು ಬೆಂಗಳೂರು ನಗರ ಸೇರಿದಂತೆ ಇತರ ಜಿಲ್ಲಾ ಪೊಲೀಸ್‌ ಅಧಿಕಾರಿಗಳು ಜಾರಿಗೆ ತರುವ ಮೂಲಕ ಪೊಲೀಸರು ಹೇಗೆ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬಹುದೆಂಬುವುದನ್ನು ತೋರಿಸಿಕೊಟ್ಟವರು ಹೆಮ್ಮೆಯ ಮಂಗಳೂರು ಪೊಲೀಸರು.

100ಕ್ಕೂ ಅಧಿಕ ಸಂಚಿಕೆಗಳನ್ನು ಯಶಸ್ವಿಯಾಗಿ ಪೂರೈಸಿದ್ದ ಇದೇ ಫೋನ್‌ ಇನ್‌ ಕಾರ್ಯಕ್ರಮ ಇದೀಗ ನಿಂತು ಬರೋಬ್ಬರಿ 3 ವರ್ಷಗಳೇ ಸಂದಿವೆ.

ಮಂಗಳೂರು ಮಾದರಿಯನ್ನು ಇಟ್ಟುಕೊಂಡು ಬೇರೆ ಬೇರೆ ಜಿಲ್ಲೆಗಳಲ್ಲಿ ಪ್ರಾರಂಭಿಸಿದ ಈ ಕಾರ್ಯಕ್ರಮ ಇಂದಿಗೂ ಯಶಸ್ವಿಯಾಗಿ ಮುಂದುವರಿಯುತ್ತಿದೆ.

ಮಂಗಳೂರಿಗರು ಈಗಲೂ ನೆನಪಿಡುವ ಅಂದಿನ ನಗರ ಪೊಲೀಸ್‌ ಆಯುಕ್ತರಾದ ಡಾ. ಎಂ.ಚಂದ್ರಶೇಖರ್‌ 2016ರ ಆ.5 ರಂದು ಮೊದಲ ಫೋನ್‌ ಇನ್‌ ಕಾರ್ಯಕ್ರವನ್ನು ಆರಂಭಿಸಿದ್ದರು.

ಪ್ರತೀ ಶುಕ್ರವಾರ ಬೆಳಗ್ಗೆ 10 ರಿಂದ 11 ಗಂಟೆವರೆಗಿನ ಒಂದು ಗಂಟೆ ಸಮಯವನ್ನು ಸಾರ್ವಜನಿಕರ ಅಹವಾಲು ಕೇಳಲು ಮೀಸಲಿರಿಸಿದ್ದರು.

ಈ ಮೂಲಕ ಜನಸಾಮಾನ್ಯನ ದುಗುಡ ದುಮ್ಮಾನವನ್ನು ದೊರೆ ಸಮಾನವಾಗಿರುವ ಪೊಲೀಸ್‌ ಆಯುಕ್ತರೇ ಖುದ್ದು ಕೇಳಿ ಅದಕ್ಕೆ ಸೂಕ್ತ ಪರಿಹಾರವನ್ನು ಆನ್‌ ದಿ ಸ್ಪಾಟ್‌ ನೀಡುವುದು ಇದರ ಮುಖ್ಯ ಉದ್ದೇಶವಾಗಿತ್ತು.

ಜನ ಸ್ನೇಹಿಯಾಗಿದ್ದ ಈ ಉದ್ದೇಶವು ಬಹುತೇಕ ಯಶಸ್ವಿಯಾಗಿ ಮಂಗಳೂರು ನಾಗರೀಕರ ಹಲವು ಸಮಸ್ಯೆಗಳಿಗೆ ಪರಿಹಾರ ಕಾಣುವ ಪ್ರಮುಖ ವೇದಿಕೆಯಾಗಿ ಮಾರ್ಪಟ್ಟಿತ್ತು.

ಜನ ಸಾಮಾನ್ಯ ತನ್ನ ದುಗುಡ ದುಮ್ಮಾನಗಳನ್ನು ಫೋನ್ ಮೂಲಕ ನಿರ್ಭಿತಿಯಿಂದ ನೇರವಾಗಿ ಪೊಲೀಸ್ ಆಯುಕ್ತರಿಗೆ ತಿಳಿಸುವ ಮತ್ತು ಆ ಮೂಲಕ ಅದಕ್ಕೇ ಸೂಕ್ತ ಪರಿಹಾರ ನೀಡುವ ಅಥವಾ ದೂರಿನ ಆಧಾರದಲ್ಲಿ ಪರಿಹಾರ ಕೊಡುವ ಅತ್ಯಂತ ಯಶಸ್ವಿ ಕಾರ್ಯಕ್ರಮ ಅದಾಗಿತ್ತು.

ಸಾರ್ವಜನಿಕರ ಅಹವಾಲನ್ನು ಸ್ವತಃ ಪೊಲೀಸ್‌ ಕಮೀಷನರೇ ಕೇಳುತ್ತಿದ್ದುದು ಈ ಕಾರ್ಯಕ್ರಮದ ವಿಶೇಷ.

ಇವರ ಜೊತೆ ಡಿಸಿಪಿ, ಎಸಿಪಿ, ಸಂಚಾರಿ ವಿಭಾಗದ ಹಿರಿಯ ಅಧಿಕಾರಿಗಳು, ಬಸ್‌ ಮಾಲಕರ ಸಂಘದ ಪದಾಧಿಕಾರಿಗಳು, ಆರ್‌ಟಿಓ ಅಧಿಕಾರಿಗಳು ಸೇರಿ ವಿವಿಧ ಅಧಿಕಾರಿಗಳ ಸಮ್ಮುಖದಲ್ಲೇ ಸಮಸ್ಯೆಗಳು ಆನ್‌ ದಿ ಸ್ಪಾಟ್‌ ಪರಿಹಾರ ಕಾಣುತ್ತಿದ್ದವು.


ಡಾ. ಚಂದ್ರಶೇಖರ್‌ ಯಾವ ಬದ್ದತೆಯೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಿದರೋ ಅದೇ ಬದ್ದತೆಯಿಂದ ತನ್ನ ವರ್ಗಾವಣೆಯವರೆಗೆ ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು.
ತದನಂತರ ಬಂದ ಪೊಲೀಸ್‌ ಆಯುಕ್ತರುಗಳಾದ ಟಿ. ಆರ್‌. ಸುರೇಶ್‌, ಸಂದೀಪ್‌ ಪಾಟೀಲ್‌, ಪಿ.ಎಸ್‌ ಹರ್ಷವರೆಗೂ ಈ ಕಾರ್ಯಕ್ರಮ ಚೆನ್ನಾಗಿ ಮೂಡಿಬಂದಿತ್ತು.

ಈ ಸಂದರ್ಭದಲ್ಲಿ ಮಂಗಳೂರು ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಹೆಚ್ಚು ಕಡಿಮೆ ಸಂಪೂರ್ಣ ಹತೋಟಿಯಲ್ಲಿತ್ತು.

ಮತ್ತು ಜನರ ನೈಜ ದೂರುಗಳಿಗೆ ಪೊಲೀಸ್‌ ಆಯುಕ್ತರೇ ಖುದ್ದಾಗಿ ಕೇವಲ ಒಂದು ಫೋನ್‌ ಮೂಲಕ ಪರಿಹಾರ ಸೂಚಿಸುತ್ತಿದ್ದರು. ಈ ಕಾರ್ಯಕ್ರಮ ಪೊಲೀಸ್‌ ಇಲಾಖೆ ಮತ್ತು ನಾಗರಿಕರ ಮಧ್ಯೆ ವಿಶ್ವಾಸದ ಕೊಂಡಿಯಾಗಿ ಕಾರ್ಯ ನಿರ್ವಹಿಸುತ್ತಿತ್ತು.

ಪ್ರತೀ ಫೋನ್‌ ಇನ್‌ ಕಾರ್ಯಕ್ರಮದಲ್ಲಿ ಕೇವಲ ಒಂದು ಘಂಟೆಯಲ್ಲೇ ಕಡಿಮೆ ಪಕ್ಷ 30 ರಿಂದ 50 ಕರೆಗಳು ಬರುತ್ತಿತ್ತು. ಜೊತೆಗೆ ಅದಕ್ಕೆ ಅಧಿಕಾರಿಗಳು ಕೂಡಾ ಉತ್ತಮ ಸ್ಪಂದನೆ ನೀಡುತ್ತಿದ್ದರು.

ಕಾರ್ಯಕ್ರಮದಲ್ಲಿ ದೂರು ನೀಡಿದ ವ್ಯಕ್ತಿಯ ಗೌಪ್ಯತೆಯನ್ನು ಕಾಪಾಡುತ್ತಿದ್ದುದು ಇದರ ಮತ್ತೊಂದು ವಿಶೇಷ.

ಜೊತೆಗೆ ಈ ಕಾರ್ಯಕ್ರಮ ಪಾರದರ್ಶಕವಾಗಿದ್ದು, ಸಮಸ್ಯೆಗಳು ಮತ್ತು ಪರಿಹಾರವನ್ನು ಸ್ಥಳೀಯ ಹಾಗೂ ರಾಜ್ಯಮಟ್ಟದ ಪತ್ರಿಕೆ- ಮಾದ್ಯಮಗಳು ಬಿತ್ತರಿಸುತ್ತಿದ್ದುದರಿಂದ ವಿಶೇಷ ಮಹತ್ವ ಪಡೆದಿತ್ತು.

ಇದಕ್ಕಾಗಿ ಸಾರ್ವಜನಿಕರು ನಿರ್ಭೀತಿಯಿಂದ ಆಯುಕ್ತರಿಗೆ ತಮ್ಮ ದೂರುಗಳನ್ನು ಸಲ್ಲಿಸುತ್ತಿದ್ದರು.

ಆದರೆ ಕಳೆದ 3 ವರ್ಷದಿಂದ ಈ ಕಾರ್ಯಕ್ರಮ ನಿಂತು ಸಾರ್ವಜನಿಕರ ದೂರುಗಳಿಗೆ ಅದರಲ್ಲೂ ಹಿರಿಯ ನಾಗರಿಕರಿಗೆ, ಅಶಕ್ತರಿಗೆ, ನೊಂದವರಿಗೆ ಸ್ಪಂದನೆಯೇ ಇಲ್ಲದಂತಾಗಿದೆ.

ಇಂದು ತಮ್ಮ ಹಾಗೂ ಸಮಾಜದ ಪ್ರತಿಯೊಂದು ಸಮಸ್ಯೆಗೂ ಪೊಲೀಸ್‌ ಕಚೇರಿಗಳನ್ನು ತಡಕಾಡಬೇಕಿದೆ. ಕೆಲವು ದೂರುಗಳು ಠಾಣೆಯ ಫೈಲ್‌ ಸೇರುವ ಬದಲು ಕಸದ ಬುಟ್ಟಿಗೆ ಸೇರುತ್ತಿದೆ.

ಆದ್ದರಿಂದ ಮತ್ತೆ ಪೊಲೀಸ್‌ ಆಯುಕ್ತರು ಜನಸ್ನೇಹಿ ಕಾರ್ಯಕ್ರಮವಾಗಿರುವ ಫೋನ್‌ ಇನ್‌ ಅನ್ನು ಮತ್ತೆ ಆರಂಭಿಸಬೇಕು ಎಂದು ಸಾರ್ವಜನಿಕರ ಆಗ್ರಹವಾಗಿದೆ.
ಕೇವಲ ಸೋಷಿಯಲ್‌ ಮೀಡಿಯಾಗಳಿಂದ ಜನಸ್ನೇಹಿ ಪೊಲೀಸ್‌ ಆಗಲು ಸಾಧ್ಯವಿಲ್ಲ ಎಂಬುವುದನ್ನು ಹಿರಿಯ ಅಧಿಕಾರಿಗಳು ಮನಗಾಣಬೇಕು.

ಎಷ್ಟೋ ಹಿರಿಯ ನಾಗರಿಕರಿಗೆ ಸಾಮಾಜಿಕ ಜಾಲತಾಣಗಳ ಅರಿವೇ ಇಲ್ಲ. ಜಿಲ್ಲಾ ಹಾಗೂ ನಗರ ಮಟ್ಟದಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸುತ್ತಿದ್ದ ತುರ್ತು ಸಂದರ್ಭಗಳಲ್ಲಿ ಕರೆ ಮಾಡಬಹುದಾಗಿದ್ದ ಡಯಲ್‌ 100 ಇದೀಗ ಸರಕಾರದ ನಿರ್ದೇಶದನ್ವಯ ಡಯಲ್‌ 112 ಆಗಿದ್ದು, ಈ ವ್ಯವಸ್ಥೆಯನ್ನು ಏಕಗವಾಕ್ಷಿ ಯೋಜನೆಯನ್ನಾಗಿ ರೂಪಿಸಿ ರಾಜ್ಯ ಮಟ್ಟದಲ್ಲಿ ಜಾರಿಗೊಳಿಸಿದ್ದಾರೆ.

ಆದರೆ ಈ ಸಂಖ್ಯೆಗೆ ಕರೆ ಮಾಡಿದಾಗ ಅದು ಬೆಂಗಳೂರು ಪೊಲೀಸ್‌ ಇಲಾಖೆ ನಿರ್ವಹಿಸುವ ಕಾಲ್‌ ಸೆಂಟರ್‌ಗೆ ತಲುಪಿ ಬಳಿಕ ಆಯಾಯ ಜಿಲ್ಲಾ ವ್ಯಾಪ್ತಿಗೆ ವರ್ಗಾವಣೆಯಾಗುತ್ತಿದೆ.

ಈ ವ್ಯವಸ್ಥೆ ಜನಸಾಮಾನ್ಯನಿಗೆ ತೀರಾ ತ್ರಾಸದಾಯಕವಾಗಿದೆ ಎಂಬುವುದು ಕೂಡ ಅಷ್ಟೇ ಸತ್ಯ.

ಆದ್ದರಿಂದ ತಮ್ಮ ಅಹವಾಲುಗಳನ್ನು ನೇರವಾಗಿ ಪೊಲೀಸ್‌ ಆಯುಕ್ತರಿಗೆ ತಿಳಿಸುವ ನೇರ ಫೋನ್‌ ಕಾರ್ಯಕ್ರಮದಂತಹ ವೇದಿಕೆ ಮಂಗಳೂರಿನಂತಹ ಸೂಕ್ಷ್ಮ ಪ್ರದೇಶಕ್ಕೆ ಅತ್ಯಗತ್ಯ.
ಸದ್ಯ ಕರ್ನಾಟಕ ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿದೆ ಜೊತೆಗೆ ಒಂದಷ್ಟು ಸಮಸ್ಯೆಗಳನ್ನು ಅದು ಹೊತ್ತು ತರುತ್ತಿದೆ.

ಇದರೊಟ್ಟಿಗೆ ನಗರದಲ್ಲಿ ಸಮಸ್ಯೆಗಳ ರಾಶಿ ಇದೆ. ಬಸ್‌ ಸಂಚಾರ, ಟ್ರಾಫಿಕ್‌, ಫುಟ್‌ಪಾತ್‌, ಅಪರಾಧ, ಡ್ರಗ್‌ ಮಾಫಿಯಾ, ಕಳ್ಳತನ, ಅಕ್ರಮ ಗೋಸಾಟ ಪ್ರಕರಣಗಳು ಹೆಚ್ಚಾಗುತ್ತಿದೆ.

ಇದನ್ನು ತಡೆಗಟ್ಟುವ ಉದ್ದೇಶದಿಂದ ನೂತನ ಆಯುಕ್ತರು ಈ ಕಾರ್ಯಕ್ರಮವನ್ನು ಮುಂದುವರೆಸಬೇಕಾಗಿ ಪ್ರಜ್ಞಾವಂತ ನಾಗರೀಕರ ಒತ್ತಾಯವಾಗಿದೆ.

DAKSHINA KANNADA

ಪ್ರವಾಸಿಗರಿಗೆ ಗುಡ್ ನ್ಯೂಸ್ : ಮತ್ತೆ ಆರಂಭವಾಯ್ತು ಲಕ್ಷದ್ವೀಪ – ಮಂಗಳೂರು ಸ್ಪೀಡ್ ಪ್ಯಾಸೆಂಜರ್ ಹಡಗು

Published

on

ಮಂಗಳೂರು : ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ಲಕ್ಷದ್ವೀಪದ ಬೀಚ್‌ನಲ್ಲಿ ವಾಯುವಿಹಾರ ನಡೆಸುವ ಮೂಲಕ ಲಕ್ಷದ್ವೀಪ ಬಾರಿ ಸುದ್ದಿಯಾಗಿತ್ತು. ಈ ವೇಳೆ ಮಂಗಳೂರು ಲಕ್ಷದ್ವೀಪ ನಡುವೆ ಈ ಹಿಂದೆ ಇದ್ದ ಪ್ರಯಾಣಿಕರ ಹಡಗು ಆರಂಭಿಸಲು ಬೇಡಿಕೆ ಕೂಡಾ ಆರಂಭವಾಗಿತ್ತು.

ಇದೀಗ ಲಕ್ಷದ್ವೀಪದ ಆಡಳಿತ ಮಂಗಳೂರಿಗೆ ಸ್ಪೀಡ್ ಪ್ಯಾಸೆಂಜರ್ ಹಡಗನ್ನು ಆರಂಭಿಸಿದೆ. ಗುರುವಾರ ಸಂಜೆ ಮಂಗಳೂರಿಗೆ ಆಗಮಿಸಿದ ಸ್ಪೀಡ್ ಪ್ಯಾಸೆಂಜರ್ ಬೋಟ್‌ನಲ್ಲಿ 150 ಜನ ಲಕ್ಷದ್ವೀಪವಾಸಿಗಳು ಆಗಮಿಸಿದ್ದಾರೆ.

ಪ್ರಯಾಣ ದರ ಎಷ್ಟು?


ಮಂಗಳೂರು ಲಕ್ಷದ್ವೀಪದ ನಡುವೆ ಮತ್ತೆ ಸಂಪರ್ಕ ಸೇತುವೆ ನಿರ್ಮಿಸಲು ಲಕ್ಷದ್ವೀಪ ಆಡಳಿತ ಸ್ಪೀಡ್ ಪ್ಯಾಸೆಂಜರ್ ಹಡಗು ಆರಂಭಿಸಿದೆ. ಕೋವಿಡ್ ಆರಂಭಕ್ಕೂ ಮೊದಲು ಮಂಗಳೂರು ಲಕ್ಷದ್ವೀಪದ ನಡುವೆ ಎರಡು ಪ್ರಯಾಣಿಕ ಹಡಗುಗಳು ಸಂಚಾರ ಮಾಡುತ್ತಿತ್ತು. ಸಾಕಷ್ಟು ಪ್ರಯಾಣಿಕರು ಮಂಗಳೂರು ಲಕ್ಷದ್ವೀಪ ನಡುವೆ ಪ್ರಯಾಣ ಮಾಡುವ ಮೂಲಕ ಅದರ ಅನುಕೂಲ ಪಡೆದುಕೊಂಡಿದ್ದರು.


ಲಕ್ಷದ್ವೀಪದವರಿಗೆ ತಮ್ಮ ದೈನಂದಿನ ಅವಶ್ಯಕತೆಗೆ ಮಂಗಳೂರು ಅವಲಂಬಿತರಾಗಿದ್ದರೆ, ಮಂಗಳೂರಿನ ಜನರಿಗೆ ಲಕ್ಷದ್ವೀಪ ವೀಕೆಂಡ್ ಪಾಯಿಂಟ್. ಆದ್ರೆ ಕೋವಿಡ್ ಕಾರಣದಿಂದ ಲಕ್ಷಾದ್ವೀಪಕ್ಕೆ ಇದ್ದ ಹಡಗಿನ ವ್ಯವಸ್ಥೆ ನಿಂತು ಹೋಗಿದ್ದು, ಈಗ ಮತ್ತೆ ಆರಂಭವಾಗಿದೆ. ಹಿಂದೆ 24 ಗಂಟೆ ಇದ್ದ ಪ್ರಯಾಣ ಕೇವಲ 5.30 ರಿಂದ 6 ಗಂಟೆಗಳಿಗೆ ಇಳಿದಿದೆ. ಹಡಗಿನಲ್ಲಿ ಎಲ್ಲಾ ವ್ಯವಸ್ಥೆ ಇರೋ ಕಾರಣದಿಂದ ಜನರು ಕೂಡಾ ಉತ್ಸಾಹದಿಂದ ಟಿಕೆಟ್ ಬುಕ್ ಮಾಡಿಕೊಂಡಿದ್ದಾರೆ. ಅಂದಹಾಗೆ, ಈ ಹೈ-ಸ್ಪೀಡ್ ಪ್ರಯಾಣಿಕ ಹಡಗಿನ ದರ ಕೇವಲ 450 ರೂ. ಆಗಿದೆ.

ಹೆಚ್ಚಿನ ಹಡಗಿಗೆ ಬೇಡಿಕೆ :


ಲಕ್ಷದ್ವೀಪದ ನಡುವೆ ಪ್ರಯಾಣಿಕರ ಹಡಗು ಆರಂಭದಿಂದ ಮಂಗಳೂರಿನಲ್ಲಿ ವ್ಯಾಪಾರ ವಹಿವಾಟು ಇನ್ನಷ್ಟು ಹೆಚ್ಚಾಗಲಿದೆ. ಅಷ್ಟೇ ಅಲ್ಲದೆ, ಲಕ್ಷದ್ವೀಪಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಮಂಗಳೂರಿನಿಂದ ತೆರಳುವ ಮೂಲಕ ಅಲ್ಲೂ ಕೂಡಾ ಆರ್ಥಿಕ ಅಭಿವೃದ್ದಿ ಆಗಲಿದೆ.


ಸ್ಪೀಡ್ ಪ್ಯಾಸೆಂಜರ್ ಹಡಗು ಕನಿಷ್ಟ ಎರಡು ದಿನಕ್ಕೊಮ್ಮೆ ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಹೋಗುವ ವ್ಯವಸ್ಥೆ ಮಾಡಬೇಕು ಅನ್ನೋದು ಸ್ಥಳೀಯರ ಆಗ್ರಹ. ಈಗ ಆರಂಭವಾಗಿರೋ ಹಡಗಿನಲ್ಲಿ ಸುಖಕರ ಪ್ರಯಾಣಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಪ್ರಯಾಣಿಕರಿಗೆ ಟಿವಿ, ಎಸಿ, ಸೇರಿದಂತೆ ಅಗತ್ಯ ಸೇವೆಗಳು ಲಭ್ಯವಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಈ ಹಡಗಿನ ಬಳಕೆ ಮಾಡುವ ಸಾಧ್ಯತೆ ಇರುವ ಕಾರಣ ಹೆಚ್ಚಿನ ಹಡಗಿನ ವ್ಯವಸ್ಥೆ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಇದೀಗ ಆರಂಭಗೊಂಡಿರೋ ಪ್ರಯಾಣಿಕರ ಹಡಗು ಸೇವೆ ಜೂನ್ ತಿಂಗಳ ಬಳಿಕ ಸ್ಥಗಿತವಾಗಲಿದೆ.

ಇದನ್ನೂ ಓದಿ :  ‘ಅರ್ಜುನ’ ಆನೆಯನ್ನು ನೆನೆದ ಡಿಬಾಸ್; ದರ್ಶನ್ ಕೋರಿಕೆ ಏನು?

ಮಳೆಗಾಲ ಕಳೆದ ಬಳಿಕ ಇದು ಮತ್ತೆ ಆರಂಭವಾಗುತ್ತದೆಯೋ ಇಲ್ಲವೋ ಅನ್ನೋದು ಇನ್ನೂ ನಿರ್ಧಾರವಾಗಿಲ್ಲ. ಆದ್ರೆ, ಮತ್ತೆ ಆರಂಭಿಸುವ ಬಗ್ಗೆ ಲಕ್ಷಾದ್ವೀಪ ಆಡಳಿತ ಭರವಸೆ ನೀಡಿದೆ. ಒಟ್ಟಾರೆ ಹೇಳೋದಾದ್ರೆ ಸದ್ಯಕ್ಕಂತೂ ಲಕ್ಷದ್ವೀಪಕ್ಕೆ ಸ್ಪೀಡ್ ಪ್ಯಾಸೆಂಜರ್ ಹಡಗು ಆರಂಭದಿಂದ ಮಂಗಳೂರಿನ ಜನರಿಗಂತೂ ಸಾಕಷ್ಟು ಖುಷಿಯಾಗಿರೋದಂತು ನಿಜ.

Continue Reading

BELTHANGADY

ಮುಂದಿನ ನಾಲ್ಕು ದಿನ ಕರಾವಳಿಯಲ್ಲಿ ಮಳೆಯ ಸಿಂಚನ..! ಹವಾಮಾನ ಇಲಾಖೆ ಮುನ್ಸೂಚನೆ

Published

on

ಮಂಗಳೂರು: ಕಳೆದ ಕೆಲವು ದಿನಗಳಿಂದ ಸುಡು ಬಿಸಿಲಿಗೆ ಬಸವಳಿದು ಜನರು ಕಂಗಾಲಾಗಿದ್ದು, ಕೆಲವೊಂದು ಕಡೆ ವರುಣನ ಕೃಪೆಗಾಗಿ ಜನರು ದೇವರಿಗೆ ಪ್ರಾರ್ಥನೆ ಸಲ್ಲಿಸಿ ಪೂಜಾ ಕಾರ್ಯಗಳನ್ನು ನೆರವೇರಿಸುತ್ತಿದ್ದಾರೆ.

rain

ಈ ನಡುವೆ ಬಿಸಿ ಶಾಖದಿಂದ ಕಂಗೆಟ್ಟಿದ್ದ ರಾಜಧಾನಿ ಬೆಂಗಳೂರಿನ ಜನರು ನಿನ್ನೆ ಕೆಲವೆಡೆ ಸುರಿದ ಮಳೆಯಿಂದಾಗಿ ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಇನ್ನು ಬೆಂಗಳೂರಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಅಲ್ಲಲ್ಲಿ ಅಲ್ಪಾ ಸ್ವಲ್ಪ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಇದೇ ವೇಳೆ ರಾಜ್ಯದ ​ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ.

ಮುಂದೆ ಓದಿ..; ಈ ಸರ್ವಾಧಿಕಾರಿಗೆ ಬೇಕಂತೆ ವರ್ಷಕ್ಕೆ 25 ಕನ್ಯೆಯರು..!! ಏನಿದು ಕಾಮಕಾಂಡ?

ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಹಗುರ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ. ಅದರಲ್ಲೂ ಬೆಂಗಳೂರಿನಲ್ಲಿ ಗುಡುಗು, ಮಿಂಚಿನ ಜತೆಗೆ ಅಲ್ಲಲ್ಲಿ ಚದುರಿದ ಮಳೆ ಬೀಳುವ ಸಂಭವವಿದೆ. ಮೇ 6 ಮತ್ತು 7 ರಂದು ಸಾಧಾರಣ ಅಥವಾ ಅದಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಿಜಾಪುರ, ಬಾಗಲಕೋಟೆ, ಕೊಪ್ಪಳ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳವರೆಗೆ ಬಿಸಿಗಾಳಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Continue Reading

DAKSHINA KANNADA

ಕೋಸ್ಟಲ್ ವುಡ್ ಅಂಗಳದಲ್ಲಿ ‘ಗಬ್ಬರ್ ಸಿಂಗ್’ ಹವಾ ಶುರು

Published

on

ಮಂಗಳೂರು : ಬಹುನಿರೀಕ್ಷಿತ ಚಿತ್ರ ‘ಗಬ್ಬರ್ ಸಿಂಗ್’ ಇಂದು (ಮೇ 3) ತೆರೆಗಪ್ಪಳಿಸಿದೆ. ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ಚಂದ್ರಶೇಖರ ನಾನಿಲ್, ನಾಗೇಶ್ ಪೂಜಾರಿ ಅರ್ಪಿಸುವ ಸತೀಶ್ ಪೂಜಾರಿ ಬಾರ್ಕೂರು ನಿರ್ಮಾಣದ “ಗಬ್ಬರ್ ಸಿಂಗ್” ಮಂಗಳೂರಿನ ಭಾರತ್ ಸಿನಿಮಾಸ್ ಚಿತ್ರಮಂದಿರದಲ್ಲಿ ತೆರೆಕಂಡಿದೆ.


ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಟ್ರಸ್ಟಿ ಎಂ.ಶೇಖರ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಚಲನಚಿತ್ರಕ್ಕೆ ಶುಭ ಹಾರೈಸಿದರು. ಮುಖ್ಯ ಅತಿಥಿ ನಿರ್ಮಾಪಕ ನಿರ್ದೇಶಕ ಪ್ರಕಾಶ್ ಪಾಂಡೇಶ್ವರ್ ಮಾತನಾಡಿ, ತುಳು ಸಿನಿಮಾ ತೆರೆಕಾಣದೆ ಕೆಲವು ಸಮಯ ಆಗಿದೆ. ಬೇಸಿಗೆ ಕಾಲದಲ್ಲಿ ತರೆಕಾಣುತ್ತಿರುವ ಗಬ್ಬರ್ ಸಿಂಗ್ ಸಿನಿಮಾ ಹಾಸ್ಯಭರಿತವಾಗಿದ್ದು, ಪ್ರೇಕ್ಷಕರಿಗೆ ಸಂಪೂರ್ಣ ಮನರಂಜನೆ ಒದಗಿಸಿದೆ. ಭೋಜರಾಜ್ ವಾಮಂಜೂರು ಅವರ ಹಾಸ್ಯಕ್ಕೆ ಒತ್ತು ಕೊಟ್ಟ ಪಾತ್ರ ಜೊತೆಗೆ ಗಿರೀಶ್ ಶೆಟ್ಟಿಯವರ ಖಡಕ್ ವಿಲನ್ ಪಾತ್ರ, ನಾಯಕ ಶರಣ್ ಶೆಟ್ಟಿ, ನಾಯಕಿ ವೆನ್ಸಿಟಾ ಡಯಾಸ್ ಪಾತ್ರಗಳು ಗಮನ ಸೆಳೆಯುತ್ತದೆ ಎಂದರು.

ಸಮಾರಂಭದಲ್ಲಿ ಡಾ ಮೆಲ್ವಿನ್ ಡಿ ಸೋಜಾ, ರಂಜಿತಾ ಹೇಮನಾಥ ಶೆಟ್ಟಿ ಕಾವು, ಭೋಜರಾಜ ವಾಮಂಜೂರು, ತುಳು ಚಲನ ಚಿತ್ರನಿರ್ಮಾಪಕರ ಸಂಘದ ಅಧ್ಯಕ್ಷ ಆರ್ ಧನರಾಜ್, ಉದ್ಯಮಿ ಗಿರೀಶ್ ಎಂ ಶೆಟ್ಟಿಕಟೀಲ್, ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಮೋಹನ್ ಕೊಪ್ಪಲ, ತಮ್ಮಲಕ್ಷ್ಮಣ, ಮಧು ಸುರತ್ಕಲ್, ಚಂದ್ರಶೇಖರ ನಾನಿಲ್ ಹಳೆಯಂಗಡಿ, ಜಯಾನಂದ ಅಮೀನ್, ನಿರ್ಮಾಪಕ ಸತೀಶ್ ಪೂಜಾರಿ ಬಾರ್ಕೂರು, ನಟ ಶರಣ್ ಶೆಟ್ಟಿ, ನಟಿ ವೆನ್ಸಿಟಾ ಡಯಾಸ್, ರಾಹುಲ್ ಅಮೀನ್ ಮೊದಲಾದವರು ಉಪಸ್ಥಿತರಿದ್ದರು.

ಎಲ್ಲೆಲ್ಲಿ ತೆರೆಗೆ?

ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಸಿನಿಪೊಲೀಸ್, ಪಿವಿಆರ್, ಉಡುಪಿಯಲ್ಲಿ ಕಲ್ಪನಾ ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್, ಬೆಳ್ತಂಗಡಿಯಲ್ಲಿ ಭಾರತ್ ಚಿತ್ರ ಮಂದಿರಗಳಲ್ಲಿ “ಗಬ್ಬರ್ ಸಿಂಗ್” ಸಿನಿಮಾ ತೆರೆ ಕಂಡಿದೆ.

ನೈಜಘಟನೆಯಾಧಾರಿತ ಚಿತ್ರ :


‘ಗಬ್ಬರ್ ಸಿಂಗ್’ ಸಿನಿಮಾ ವಿಭಿನ್ನ ಕತೆಯನ್ನೊಳಗೊಂಡಿದ್ದು, ಉತ್ತರ ಪ್ರದೇಶದಲ್ಲಿ ನಡೆದ ಘಟನೆಯೊಂದನ್ನು ಆಧರಿಸಿ ಪ್ರೇಕ್ಷಕರಿಗೆ ಇಷ್ಟವಾಗುವ ರೀತಿಯಲ್ಲಿ ಕತೆಯನ್ನು ಹೆಣೆಯಲಾಗಿದೆ. ಉತ್ತಮ‌ ಕತೆ, ನವಿರಾದ ಹಾಸ್ಯದೊಂದಿಗೆ ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ. ಸಿನಿಮಾದಲ್ಲಿ ಆರು ಹಾಡು, ನಾಲ್ಕು ಫೈಟ್ಸ್ ಇದೆ. ಸಿನಿಮಾಕ್ಕೆ ಸುರತ್ಕಲ್, ಚಿತ್ರಾಪುರ, ಬೈಕಂಪಾಡಿ ಮೊದಲಾದ ಪ್ರದೇಶಗಳಲ್ಲಿ ಸಿನಿಮಾಕ್ಕೆ ಮೂರು ಹಂತಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ.

ಇದನ್ನೂ ಓದಿ : ಅಜೆಕಾರು : ಮನೆ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಸಾ*ವು

ತಾರಾಂಗಣ :

ನಾಯಕ ನಟನಾಗಿ ಶರಣ್ ಶೆಟ್ಟಿ, ನಾಯಕಿಯಾಗಿ ವೆನ್ಸಿಟಾ ಅಭಿನಯಿಸಿದ್ದಾರೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಯಾದಾಗ ಮತ್ತೆ ಶಾಂತಿ ನೆಲೆಸುವಂತೆ ಮಾಡುವ ಖಡಕ್ ಅಧಿಕಾರಿ ಪಾತ್ರದಲ್ಲಿ ಶರಣ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ. “ಗಬ್ಬರ್ ಸಿಂಗ್” ಆ್ಯಕ್ಷನ್ ಥ್ರಿಲ್ಲರ್ ಫ್ಯಾಮಿಲಿ ಓರಿಯೆಂಟೆಡ್ ಫಿಲ್ಮ್ ಆಗಿದೆ.

ಸಿನಿಮಾ ಕತೆ, ಚಿತ್ರಕತೆ, ಸತೀಶ್ ಪೂಜಾರಿ ಬಾರ್ಕೂರ್, ಮಧು ಸುರತ್ಕಲ್ ಸಂಭಾಷಣೆ, ಮುಖ್ಯ ಪಾತ್ರದಲ್ಲಿ ಕುಸೇಲ್ದರಸೆ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಾಯಿಕೃಷ್ಣ, ಉಮೇಶ್ ಮಿಜಾರ್, ರವಿರಾಮ ಕುಂಜ, ಗಿರೀಶ್ ಎಂ. ಶೆಟ್ಟಿ ಕಟೀಲ್, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್, ಉದಯ ಆಳ್ವ ಇಡ್ಯಾ, ಸಂದೀಪ್ ಭಕ್ತ, ಕಿರಣ್ ಮಲ್ಪೆ, ಪೂರ್ಣಿಮಾ ಶೆಟ್ಟಿ, ಪವಿತ್ರ ಶೆಟ್ಟಿ,ಚಂದ್ರಹಾಸ ಶೆಟ್ಟಿ ಮಾಣಿ, ಸಂಪತ್ ಲೋಬೋ, ಆಶಾ ಶೆಟ್ಟಿ ಶಿಬರೂರು, ಲಹರಿ ಶೆಟ್ಟಿ ಪಡ್ರೆ, ಶಿಲ್ಪಾ ಶೆಟ್ಟಿ, ಭವ್ಯಾ ಶೆಟ್ಟಿ ಸುರತ್ಕಲ್ ಸಂತೋಷ್, ಚಂದ್ರಹಾಸ ಶೆಟ್ಟಿ ಕಪ್ಪೆಟ್ಟು, ಫ್ರಾಂಕಿ ಕೊಳಲಗಿರಿ, ಉಮೇಶ್ ಶೆಟ್ಟಿ ಹಾವಂಜೆ, ಬೇಬಿ ಆಧ್ಯಾ ಉಡುಪಿ ಮೊದಲಾದವರಿದ್ದಾರೆ.

Continue Reading

LATEST NEWS

Trending