Connect with us

DAKSHINA KANNADA

ಮಂಗಳೂರು ಉಗ್ರಬರಹ ವಿಚಾರ : ಆರೋಪಿಗಳಿಗಿತ್ತ ಐಸಿಸ್ ನಂಟು..!?

Published

on

ಮಂಗಳೂರು ಉಗ್ರ ಬರಹ ವಿಚಾರ : ಆರೋಪಿಗಳಿಗಿತ್ತ ಐಸಿಸ್ ನಂಟು..!?

ಮಂಗಳೂರು : ಮಂಗಳೂರಿನ ಬಿಜೈ ಮತ್ತು ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಕಂಡುಬಂದ ಉಗ್ರ ಪರ ಗೋಡೆ ಬರಹ ವಿಚಾರ ಇದೀಗ ತೀರ್ವ ಸ್ವರೂಪ ಪಡೆದುಕೊಂಡಿದ್ದು, ಶಂಕಿತ ಆರೋಪಿಗಳಿಗೆ ವಿಶ್ವದ ಡೆಡ್ಲಿಯೆಸ್ಟ್ ಉಗ್ರ ಸಂಘಟನೆಗಳಲ್ಲಿ ಒಂದಾದ  ಐಸಿಸ್ ನಂಟಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.

ರಾಷ್ಟ್ರಮಟ್ಟದಲ್ಲೇ ಸಂಚಲನ ಮೂಡಿಸಿದ್ದು, ಬಂಧಿತ ಆರೋಪಿಗಳಾದ ತೀರ್ಥಹಳ್ಳಿ ನಿವಾಸಿ, ಬಿ-ಟೆಕ್‌ ವಿದ್ಯಾರ್ಥಿ ಮಾಝ್‌ ಮುನೀರ್‌(21) ಮತ್ತು ಮಹಮ್ಮದ್‌ ಶಾರೀಕ್‌(22)ಗೆ ದೇಶದ್ರೋಹಿ ಸಂಘಟನೆ ಜತೆ ನಿಕಟ ಸಂಪರ್ಕವಿರಿಸಿದ್ದ ಅಘಾತಕಾರಿ ಅಂಶ ಬಯಲಾಗಿದೆ.

ಆರೋಪಿಗಳಿಬ್ಬರು ಫೇಸ್‌ಬುಕ್‌, ಇನ್‌ಸ್ಟಾಗ್ರಾಂ, ಯೂಟ್ಯೂಬ್‌, ವಾಟ್ಸ್‌ಆ್ಯಪ್‌ ಮೂಲಕ ಉಗ್ರ ಸಂಘಟನೆಗಳ ಜತೆ ನೇರಾ ನಂಟು ಹೊಂದಿರುವುದು ಪ್ರಾಥಮಿಕ ತನಿಖೆಯಿಂದ ಸಾಬೀತಾಗಿದೆ.

ದೇಶದ್ರೋಹಿ ಚಟುವಟಿಕೆಯಲ್ಲಿ ತೊಡಗಿರುವ ಪುಣೆಯ ವ್ಯಕ್ತಿ ಎಡ್ಮಿನ್‌ ಆಗಿರುವ ವಾಟ್ಸ್‌ಆ್ಯಪ್‌ ಗ್ರೂಪ್‌ನಲ್ಲಿ ಈ ಇಬ್ಬರು ಆರೋಪಿಗಳಿದ್ದಾರೆ.

ಈ ಗ್ರೂಪ್‌ನಲ್ಲಿ ದೇಶದ್ರೋಹಿ ಚಟುವಟಿಕೆಗಳಿಗೆ ಸಂಬಂಧಿಸಿ ಚರ್ಚೆ ನಡೆಯುತ್ತಿತ್ತು. ಇದರಿಂದ ಪ್ರೇರಣೆಗೊಂಡು ಇವರು ಮಂಗಳೂರಿನಲ್ಲಿ ಗೋಡೆ ಬರಹದ ಮೂಲಕ ಜನರಲ್ಲಿ ಭಯದ ವಾತಾವರಣ ಉಂಟು ಮಾಡಿದ್ದರು. ಇದೊಂದು ವ್ಯವಸ್ಥಿತ ಉಗ್ರ ಜಾಲವಾಗಿರುವುದು ತನಿಖೆಯಿಂದ ತಿಳಿದುಬಂದಿದೆ.

ಬಂಧಿತ ಆರೋಪಿಗಳು ಐಸಿಸ್‌ ಬಗ್ಗೆ ಒಲವು ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣ ಮುಖೇನ ಆ ಸಂಘಟನೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದರು. ಜತೆಗೆ ಸಂಘಟನೆಗೆ ಪೂರಕವಾದ ಮಾಹಿತಿಗಳನ್ನು ಅಂತರ್ಜಾಲದಲ್ಲಿ ಹುಡುಕಾಡಿ ಓದುತ್ತಿದ್ದು, ಅದನ್ನು ನೆಚ್ಚಿಕೊಂಡಿದ್ದರು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಇದೇ ಮಾದರಿಯ ಗೋಡೆ ಬರಹಗಳು ಮತ್ತು ಅದಕ್ಕೆ ಪ್ರತಿಸ್ಪಂದನೆ ಬಗ್ಗೆಯೂ ತಿಳಿದು ಮಂಗಳೂರಿನಲ್ಲಿ ಕೃತ್ಯಕ್ಕೆ ಮುಂದಾಗಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಮತ್ತೋರ್ವ ಆರೋಪಿಯ ಬಂಧನ..!?

ಇನ್ನು ಉಗ್ರ ಗೋಡೆಬರಹಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ತನಿಖಾಧಿಕಾರಿಗಳ ತಂಡ ಇನ್ನೊಬ್ಬ ಆರೋಪಿಯನ್ನು ಬಂಧಿಸಿದೆ. ಬಂಧಿತನನ್ನು ತೀರ್ಥ ಹಳ್ಳಿ ಮೂಲದ ಸಾದತ್‌ ಎಂದು ಗುರುತಿಸಲಾಗಿದೆ.

ಈಗಾಗಲೇ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ಇಬ್ಬರು ಆರೋಪಿಗಳಲ್ಲಿ ಒಬ್ಬನಾಗಿರುವ ಮುಹಮ್ಮದ್‌ ಶಾರೀಕ್ ಎಂಬಾತನ ಸ್ನೇಹಿತ ಈತ ಎಂದು ತಿಳಿದು ಬಂದಿದ್ದು, ತನಿಖೆ ತೀವ್ರಗತಿಯಲ್ಲಿ ಮುಂದುವರೆದಿದೆ.

ಉಗ್ರ ಪರ, ದೇಶದ್ರೋಹಿ ಚಟುವಟಿಕೆಗಳು ಭಾರತೀಯ ದಂಡಸಂಹಿತೆ ಪ್ರಕಾರ ಕಾನೂನುಬಾಹಿರ ಸಂಘಟಿತ ಅಪರಾಧದಡಿ ಬರುತ್ತದೆ. ಕೇಸು ದಾಖಲಾದ ಹಿನ್ನೆಲೆಯಲ್ಲಿ ತನಿಖೆಯನ್ನು ಕೇಂದ್ರ ಉಪವಿಭಾಗ ಸಹಾಯಕ ಪೊಲೀಸ್‌ ಆಯುಕ್ತ ಜಗದೀಶ್‌ ಅವರಿಗೆ ವಹಿಸಲಾಗಿದೆ.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending