DAKSHINA KANNADA
ಮಂಗಳೂರು : ನಾಳೆಯಿಂದ ರೇಶನಿಂಗ್ ಆರಂಭ; ಎಲ್ಲೆಲ್ಲಿ ನೀರಿಲ್ಲ?
ಮಂಗಳೂರು: ಕರಾವಳಿಗೆ ಬಿರುಬೇಸಿಗೆಯ ಬಿಸಿ ಭಾರೀ ತಟ್ಟಿದ್ದು, ನೀರಿನ ಅಭಾವ ಎದುರಾಗಿದೆ. ಮಂಗಳೂರು ಮಹಾ ನಗರಪಾಲಿಕೆಯ ತುಂಬೆ ಕಿಂಡಿ ಅಣೆಕಟ್ಟಿನಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿದಿದೆ. ಹೀಗಾಗಿ ಮಂಗಳೂರು ನಗರ ಪಾಲಿಕೆ ಆಯುಕ್ತರು ಮೇ 5 ರಿಂದ ನೀರಿನ ರೇಶನಿಂಗ್ ಆರಂಭಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲಭ್ಯವಿರುವ ನೀರನ್ನು ಮಂಗಳೂರು ನಗರ (ಮಂಗಳೂರು ನಗರ ದಕ್ಷಿಣ) ಮತ್ತು ಸುರತ್ಕಲ್ (ಮಂಗಳೂರು ನಗರ ಉತ್ತರ ಭಾಗಕ್ಕೆ) ಪರ್ಯಾಯ ದಿನಗಳಲ್ಲಿ ನೀರು ಬಿಡಲು ಕ್ರಮ ವಹಿಸಲಾಗಿದೆ.
ಬೆಂದೂರು ಸ್ಥಾವರದಿಂದ ನೀರು ಪೂರೈಕೆ :
ಮೇ 5ರಿಂದ ಬೆಸ ದಿನಗಳಲ್ಲಿ ಬೆಂದೂರು ಸ್ಥಾವರದಿಂದ ಕೋರ್ಟ್ ಪ್ರದೇಶ, ಕಾರ್ಸ್ಟ್ರೀಟ್, ಬಾವುಟಗುಡ್ಡ, ಆಕಾಶವಾಣಿ, ಪದವು, ಗೋರಿಗುಡ್ಡ, ಸೂಟರ್ಪೇಟೆ, ಶಿವಬಾಗ್, ಕದ್ರಿ, ವಾಸ್ಲೇನ್, ಬೆಂದೂರು, ಲೋವರ್ ಬೆಂದೂರು, ಕುದ್ರೋಳಿ, ಕೋಡಿಯಾಲ್ ಬೈಲ್ ಮತ್ತು ಪಡೀಲ್ ಸ್ಥಾವರದಿಂದ ಮಂಗಳಾದೇವಿ, ಅತ್ತಾವರ, ಬಾಬುಗುಡ್ಡ, ವೆಲೆನ್ಸಿಯಾ, ಜಪ್ಪಿನಮೊಗರು, ಬಿಕರ್ನಕಟ್ಟೆ, ಉಲ್ಲಾಸ್ನಗರ, ಬಜಾಲ್, ತಿರುವೈಲು, ವಾಮಂಜೂರು ಹಾಗೂ ಶಕ್ತಿನಗ ಟ್ಯಾಂಕ್ನಿಂದ ಕುಂಜತ್ತಬೈಲ್, ಮೊಗ್ರೊಡಿ, ಶಕ್ತಿನಗರ, ಸಂಜಯನಗರ, ಪ್ರೀತಿನಗರ, ಮಂಜಡ್ಕ, ರಾಜೀವ ನಗರ, ಬೋಂದೆಲ್, ಗಾಂಧಿ ನಗರ, ಶಾಂತಿನಗರ, ಕಾವೂರು ಮತ್ತು ತುಂಬೆ – ಪಣಂಬೂರು ನೇರ ಲೈನ್ನಿಂದ ಕಂಕನಾಡಿ, ನಾಗುರಿ, ಪಂಪ್ವೆಲ್, ಬಳ್ಳೂರುಗುಡ್ಡೆ, ಪಡೀಲ್ಗೆ ನೀರು ಪೂರೈಕೆ ಮಾಡಲಾಗುವುದು.
ಪಣಂಬೂರು ಸ್ಥಾವರದಿಂದ ನೀರು ಪೂರೈಕೆ :
ಮೇ 6 ರಿಂದ ಪಣಂಬೂರು ಸ್ಥಾವರದಿಂದ ಸುರತ್ಕಲ್, ಎನ್ಐಟಿಕೆ, ಮುಕ್ಕ, ಹೊಸಬೆಟ್ಟು, ಕುಳಾಯಿ, ಜನತಾ ಕಾಲನಿ, ಬೈಕಂಪಾಡಿ, ಪಣಂಬೂರು, ಮೀನಕಳಿಯ ಮತ್ತು ಪಡೀಲ್ ಸ್ಥಾವರದಿಂದ ಬಜಾಲ್, ಜಲ್ಲಿಗುಡ್ಡ, ಮುಗೇರ್, ಎಕ್ಕೂರು, ಸದಾಶಿವ ನಗರ, ಅಳಪೆ, ಮೇಘ ನಗರ, ಮಂಜಳಿಕೆ, ಕಂಕನಾಡಿ ರೈಲ್ವೆ ಸ್ಟೇಷನ್, ಕುಡುಪು, ಪಾಂಡೇಶ್ವರ, ಸ್ಟೇಟ್ ಬ್ಯಾಂಕ್, ಗೂಡ್ಸ್ಶೆಡ್, ಬಂದರ್ ದಕ್ಕೆ,ಕಣ್ಣೂರು, ನಿಡ್ಡೆಲ್, ಶಿವನಗರ. ಕೊಡಕ್ಕಲ್, ನೂಜಿ, ಸರಿಪಳ್ಳ, ಉಲ್ಲಾಸ್ ನಗರ, ವೀರನಗದ ಹಾಗೂ ಶಕ್ತಿನಗರ ಟ್ಯಾಂಕ್ನಿಂದ ಕಂಡೆಟ್ಟು, ಕುಲಶೇಖರ, ಮರೋಳಿ, ಕಕ್ಕೆಬೆಟ್ಟು, ಸಿಲ್ವರ್ ಗೇಟ್, ಕೊಂಗೂರು ಮಠ, ಪ್ರಶಾಂತ್ ನಗರ ಮತ್ತು ತುಂಬೆ-ಪಣಂಬೂರು ನೇರ ಲೈನ್ನಿಂದ ಮುಡಾ ಪಂಪ್ ಹೌಸ್, ಕೊಟ್ಟಾರ ಚೌಕಿ ಪಂಪ್ಹೌಸ್, ಕೂಳೂರು ಪಂಪ್ಹೌಸ್, ಕಾಪಿಕ್ಕಾಡ್, ದಡ್ಡಲ್ಕಾಡ್, ಬಂಗ್ರ ಕೂಳೂರುಗೆ ನೀರು ಸರಬರಾಜು ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪೋಲು ಮಾಡಿದಲ್ಲಿ ನೀರು ಕಡಿತ :
ಕಟ್ಟಡ ರಚನೆ ಮತ್ತಿತರ ನಿರ್ಮಾಣ ಕಾಮಗಾರಿಗಳು ಹಾಗೂ ವಾಹನ ತೊಳೆಯುವ ಸರ್ವಿಸ್ ಸೆಂಟರ್ಗಳ ಜೋಡಣೆ ಯನ್ನು ಮುಂದಿನ ಸೂಚನೆಯವರೆಗೆ ಕಡಿತಗೊಳಿಸುವುದು. ಸಾರ್ವಜನಿಕರು ನೀರನ್ನು ಅನವಶ್ಯಕವಾಗಿ ಪೋಲು ಮಾಡುವುದು ಕಂಡು ಬಂದಲ್ಲಿ ಯಾವುದೇ ಸೂಚನೆ ನೀಡದೆ ಜೋಡಣೆ ಕಡಿತಗೊಳಿಸುವುದು ಎಂದು ಎಚ್ಚರಿಸಿದ್ದಾರೆ.
ಇದನ್ನೂ ಓದಿ :
ಸಂಪರ್ಕ ಸಂಖ್ಯೆ :
ಕುಡಿಯುವ ನೀರಿನ ಸಮಸ್ಯೆಯಾದರೆ ದೂ.ಸಂ: ಪಡೀಲ್ ರೇಚಕ ಸ್ಥಾವರ-0824-2220364 ಹಾಗೂ ಮನಪಾ ವಾಟ್ಸ್ಆ್ಯಪ್ ಸಂಖ್ಯೆ 9449007722/ಮನಪಾ ಕಂಟ್ರೋಲ್ ರೂಮ್- 0824-2220319/2220306ನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
DAKSHINA KANNADA
ಮಂಗಳೂರು : ಮೇ 25 ರಂದು ಉಚಿತ ವೈದ್ಯಕೀಯ ಮತ್ತು ರಕ್ತದಾನ ಶಿಬಿರ
ಮಂಗಳೂರು : ಅಖಿಲ ಭಾರತ ಬಿಲ್ಲವರ ಯೂನಿಯನ್ (ರಿ.), ಮಂಗಳೂರು ಮತ್ತು ನಾರಾಯಣ ಗುರು ಕಾಲೇಜು ಇದರ ಆಶ್ರಯದಲ್ಲಿ ಕೆ.ಎಮ್.ಸಿ. ಆಸ್ಪತ್ರೆ ಅತ್ತಾವರ ಮಂಗಳೂರು ಇದರ ಸಹಕಾರದಿಂದ ಹಿಂದುಳಿದ ಸಮಾಜದ ಸಾಮಾಜಿಕ ಕ್ರಾಂತಿಯ ಹರಿಕಾರ ದಿ.ದಾಮೋದರ ಆರ್.ಸುವರ್ಣ ಜನ್ಮಶತಾಬ್ದಿ ಪ್ರಯುಕ್ತ ಮೇ 25 ರಂದು ಕುದ್ರೋಳಿ ನಾರಾಯಣ ಗುರು ಕಾಲೇಜಿನ ದಾಮೋದರ ಆರ್.ಸಭಾಂಗಣದಲ್ಲಿ ಉಚಿತ ವೈದ್ಯಕೀಯ ಮತ್ತು ರಕ್ತದಾನ ಶಿಬಿರ ನಡೆಯಲಿದೆ. ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಘಂಟೆ ತನಕ ಈ ಕಾರ್ಯಕ್ರಮ ನಡೆಯಲಿದೆ.
ವೈದ್ಯಕೀಯ ಶಿಬಿರದಲ್ಲಿ ಕಣ್ಣು, ಕಿವಿ, ಮೂಗು, ಗಂಟಲು, ಎಲುಬು, ಕೀಲು ಮತ್ತು ಸಾಮಾನ್ಯ ರೋಗ ತಪಾಸಣೆ, ಮಧುಮೇಹ, ರಕ್ತದೊತ್ತಡ ಪರೀಕ್ಷೆ, ರೀಡಿಂಗ್ ಕನ್ನಡಕ ಅಗತ್ಯ ಇದ್ದವರಿಗೆ ಉಚಿತವಾಗಿ ನೀಡಲಾಗುವುದು. ಶಿಬಿರದಲ್ಲಿ ಭಾಗವಹಿಸುವವರಿಗೆ ಕೆ.ಎಮ್.ಸಿ.ಯ ಹಸಿರು ಕಾರ್ಡ್ ನೀಡಲಾಗುವುದು.
ಇದನ್ನೂ ಓದಿ : ಟಿ 20 ವಿಶ್ವಕಪ್ ಗೆ ಲಗ್ಗೆಯಿಟ್ಟ ‘ನಂದಿನಿ’; ಕ್ರಿಕೆಟಿಗರ ಜೆರ್ಸಿಯಲ್ಲಿ ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್
ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆಯಬೇಕು. ಅದೇ ರೀತಿ ರಕ್ತದಾನದಲ್ಲೂ ಸ್ವಯಂ ಸ್ಪೂರ್ತಿಯಿಂದ ಭಾಗವಹಿಸಬೇಕೆಂದು ಅಖಿಲ ಭಾರತ ಬಿಲ್ಲವರ ಯೂನಿಯನ್ ನ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
DAKSHINA KANNADA
ಈ 7 ರೈಲು ನಿಲ್ದಾಣಗಳಲ್ಲಿ ಸಿಗುತ್ತೆ ಅತೀ ಕಡಿಮೆ ಬೆಲೆಗೆ ತಿಂಡಿ, ಊಟ
ಮಂಗಳೂರು: ಭಾರತೀಯ ರೈಲ್ವೆ ಮಂಡಳಿಯು ಕರ್ನಾಟಕದ ಏಳು ನಿಲ್ದಾಣಗಳು ಸೇರಿದಂತೆ ದೇಶದ 100ಕ್ಕೂ ಹೆಚ್ಚು ರೈಲು ನಿಲ್ದಾಣಗಳಲ್ಲಿ ಸಾಮಾನ್ಯ ಕಂಪಾರ್ಟ್ಮೆಂಟ್ ಕೋಚ್ಗಳ ಬಳಿ ಕಡಿಮೆ ದರದಲ್ಲಿ ಉತ್ತಮ ಆಹಾರವನ್ನು ಒದಗಿಸುವ ಕೌಂಟರ್ಗಳನ್ನು ತೆರೆದಿದೆ.
ಕರ್ನಾಟಕದಲ್ಲಿ ದಕ್ಷಿಣ ರೈಲ್ವೆ ಅಡಿಯಲ್ಲಿ ಮಂಗಳೂರು ಸೆಂಟ್ರಲ್ ಮತ್ತು ಜಂಕ್ಷನ್ ರೈಲ್ವೆ ವಿಭಾಗಗಳಲ್ಲಿ ಸಬ್ಸಿಡಿ ಆಹಾರ ಕೌಂಟರ್ಗಳನ್ನು ತೆರೆಯಲಾಗಿದೆ. ಹಾಗೆಯೇ ನೈರುತ್ಯ ರೈಲ್ವೆಯ ಅಡಿಯಲ್ಲಿ ಕೆಎಸ್ಆರ್ ಬೆಂಗಳೂರು, ಯಶವಂತಪುರ, ಮೈಸೂರು, ವಿಜಯಪುರ ಮತ್ತು ಬಳ್ಳಾರಿ ರೈಲು ನಿಲ್ದಾಣಗಳಲ್ಲಿ ಈ ಆಹಾರ ಕೌಂಟರ್ಗಳನ್ನು ತೆರೆಯಲಾಗಿದೆ.
ಈ ಯೋಜನೆಯು ಭಾರತೀಯ ರೈಲ್ವೆಯ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ ಮತ್ತು ಭಾರತೀಯ ರೈಲ್ವೆಯ ಜಂಟಿ ಉಪಕ್ರಮವಾಗಿದೆ. ಕಾಯ್ದಿರಿಸದ ಬೋಗಿಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಆರೋಗ್ಯಕರ ಆಹಾರವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಹಿಂದೆ ಜನತಾ ಊಟದ ಸೇವೆಯ ಅಡಿಯಲ್ಲಿ ರೈಲ್ವೆ ನಿಲ್ದಾಣದ ರೆಸ್ಟೋರೆಂಟ್ಗಳಲ್ಲಿ ಕಡಿಮೆ ದರದ ಆಹಾರ ಲಭ್ಯವಿತ್ತು. ಈಗ ಕೌಂಟರ್ಗಳು ನೇರವಾಗಿ ಪ್ಲಾಟ್ಫಾರ್ಮ್ಗಳಲ್ಲಿ ಈ ಸೇವೆಯನ್ನು ಆರಂಭಿಸಲಾಗಿದೆ.
ಪ್ರಸ್ತುತ 100 ರೈಲು ನಿಲ್ದಾಣಗಳಲ್ಲಿ 150 ಪ್ಲಾಟ್ಫಾರ್ಮ್ಗಳು ಈ ಸೌಲಭ್ಯವನ್ನು ನೀಡುತ್ತವೆ. ಬೆಳಗಿನ ಉಪಹಾರ 20 ರೂ., ಲಘು ಊಟ 50 ರೂ., 3 ರೂ.ಗೆ 200 ಎಂಎಲ್ ನೀರು ನೀಡಲಾಗುತ್ತದೆ. ಈ ಮಾಹಿತಿಯನ್ನು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಒಟ್ಟಾರೆ ಈ ಯೋಜನೆಯು ರೈಲು ಪ್ರಯಾಣಿಕರ ಆಹಾರ ಸಮಸ್ಯೆಯನ್ನು ಪರಿಹರಿಸಲಿದೆ ಎಂಬ ನಿರೀಕ್ಷೆ ಗರಿಗೆದರಿದೆ.
DAKSHINA KANNADA
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಮೇ 19, 20ರಂದು ಆರೆಂಜ್ ಅಲರ್ಟ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇದೇ 18 ರಿಂದ 21 ರವರೆಗೆ ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ 19 ಮತ್ತು 20 ರಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಆರೆಂಜ್ ಅಲರ್ಟ್ ಇರುವ ದಿನಗಳಲ್ಲಿ ಮಿಂಚು, ಗುಡುಗು, ಸಿಡಿಲುಗಳಿಂದ ಕೂಡಿದ ಭಾರಿ ಮಳೆಯಾಗಲಿದೆ. ಜಿಲ್ಲೆಯ ಕೆಲವೆಡೆ 11.55 ಸೆಂ.ಮೀ ನಿಂದ 20.44 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಇದೇ 18 ಮತ್ತು 21ರಂದು ಜಿಲ್ಲೆಯಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಕೆಲವೆಡೆ 6.45 ಸೆಂ.ಮೀ ನಿಂದ 11.55 ಸೆಂ.ಮೀವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
- LATEST NEWS7 days ago
ವರ್ತೂರು ಸಂತೋಷ್ ತೋಟದಲ್ಲಿ ಮತ್ತೆ ಸೇರಿದ ಬಿಗ್ಬಾಸ್ ಸ್ಪರ್ಧಿಗಳು
- LATEST NEWS6 days ago
ಖಾಲಿ ಬಿಯರ್ ಬಾಟಲಿಗಳಿಂದ ಲಕ್ಷಾಧಿಪತಿಯಾದ ವ್ಯಕ್ತಿ..!
- LATEST NEWS6 days ago
ಪ್ರೇಯಸಿಯ ಜೊತೆ ಗೋವಾ ಟೂರ್..! ಕ್ಷೌರಿಕನಿಗೆ ದುಬಾರಿಯಾದ ಟೂರ್..!
- DAKSHINA KANNADA6 days ago
ದೇವರಿಗೆ ಇಟ್ಟ ಹೂವುಗಳನ್ನು ಒಣಗಿದ ನಂತರ ಹೀಗೆ ಮಾಡಿ..!