Connect with us

    DAKSHINA KANNADA

    ಮಂಗಳೂರಿನಲ್ಲೂ ಒಮಿಕ್ರಾನ್ ಭೀತಿ : ಘಾನದಿಂದ ಬಂದ ಪ್ರಯಾಣಿಕನಲ್ಲಿ ಪಾಸಿಟಿವ್- ಹೈ ಅಲರ್ಟ್..!

    Published

    on

    ಮಂಗಳೂರು : ಕರಾವಳಿ ನಗರಿ ಮಂಗಳೂರಿನಲ್ಲ್ಲೂ ಒಮಿಕ್ರಾನ್ ಭೀತಿ ತಲೆದೋರಿದೆ. ಹೈರಿಸ್ಕ್ ದೇಶವಾಗಿರುವ ಘಾನದಿಂದ ಆಗಮಿಸಿದ ಪ್ರಯಾಣಿಕರೊಬ್ಬರಲ್ಲಿ ರಾಪಿಡ್ ಆರ್.ಟಿ.ಪಿ.ಸಿ.ಆರ್. ತಪಾಸಣೆ ವೇಳೆ ಪಾಸಿಟಿವ್ ಪತ್ತೆಯಾಗಿದೆ.
    ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೆಂದ್ರ ಕೆ.ವಿ. ಅವರು ತುರ್ತಾಗಿ ಮಂಗಳೂರು ಏರ್ ಪೋರ್ಟ್ ಮುಖ್ಯಸ್ಥರು, ಏರ್ ಪೋರ್ಟ್ ಆರೋಗ್ಯಾಧಿಕಾರಿ (ಎ.ಪಿ.ಹೆಚ್.ಓ), ಜಿಲ್ಲಾ ಸರ್ವೇಕ್ಷಾಣಾಧಿಕಾರಿ (ಡಿ.ಎಸ್.ಓ), ಕೋವಿಡ್ ನೋಡಲ್ ಅಧಿಕಾರಿ ಹಾಗೂ ಅಪೋಲೋ ಲ್ಯಾಬ್ ಮುಖ್ಯಸ್ಥರೊಂದಿಗೆ ಸಭೆ ನಡೆಸಿದರು.
    ಮಧ್ಯಾಹ್ನ ಏರ್ ಪೋರ್ಟ್‍ನ ಕಾನ್ಫರೆನ್ಸ್ ಸಭಾಂಗಣದಲ್ಲಿ ಹಮ್ಮಿಕೊಂಡ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಸವಿಸ್ತಾರವಾಗಿ ಚರ್ಚಿಸಿ, ಘಾನ ದೇಶದಿಂದ ಬಂದ ಪ್ರಯಾಣಿಕರೊಬ್ಬರನ್ನು ನಿನ್ನೆ ರಾತ್ರಿಯೇ ವೆನ್‍ಲಾಕ್ ಆಸ್ಪತ್ರೆಯ ಐಸೋಲೇಶನ್ ವಾರ್ಡ್‍ಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
    ಆ ಪ್ರಯಾಣಿಕರಲ್ಲಿ ಯಾವುದೇ ರೋಗ ಲಕ್ಷಣ ಕಂಡು ಬಂದಿರುವುದಿಲ್ಲ. ಆ ಪ್ರಯಾಣಿಕ ಆಸೀನವಾಗಿದ್ದ 3 ಸಾಲಿನ ಎದುರು ಹಾಗೂ 3 ಸಾಲಿನ ಹಿಂದಿನ ಪ್ರಯಾಣಿಕರು ಸೇರಿದಂತೆ ಒಟ್ಟು 27 ಪ್ರಯಾಣಿಕರನ್ನು ಪ್ರಾಥಮಿಕ ಸಂಪರ್ಕಿತರೆಂದು ಗುರುತಿಸಿ ಅವರನ್ನು ಆರೋಗ್ಯ ಇಲಾಖೆಯಿಂದ ರ್ಯಾಪಿಡ್ ಆರ್.ಟಿ.ಪಿ.ಸಿ.ಆರ್ ಮತ್ತು ರ್ಯಾಂಡಮೈಸ್ ಪರೀಕ್ಷೆಗೆ ಒಳಪಡಿಸಿ, ಅವರನ್ನು ಕ್ವಾರಂಟೈನ್ ಮಾಡಲಾಗಿದೆ.
    ಪಾಸಿಟಿವ್ ಬಂದಿರುವ ಪ್ರಯಾಣಿಕರ ಗಂಟಲು ದ್ರವ್ಯ ಮಾದರಿಯನ್ನು ಜನೋಮಿಕ್ ಸೀಕ್ವೆನ್ಸ್ ಪರೀಕ್ಷೆಗಾಗಿ ಬೆಂಗಳೂರಿಗೆ ಈಗಾಗಲೇ ಕಳುಹಿಸಿಕೊಡಲಾಗಿದೆ ಎಂಬ ಮಾಹಿತಿ ಪಡೆದುಕೊಂಡಿದ್ದಾರೆ.
    ಜಿಲ್ಲಾಧಿಕಾರಿಯವರು ವಿಮಾನ ನಿಲ್ದಾಣದ ಅಧಿಕಾರಿಯೊಂದಿಗೆ ಆರ್.ಟಿ.ಪಿ.ಸಿ.ಆರ್. ಪರೀಕ್ಷೆ, ಇಮಿಗ್ರಿಯೇಶನ್, ಏರ್‍ಸುವಿಧಾ, ಚೆಕ್ಕಿಂಗ್ ಪಾಯಿಂಟ್, ಟ್ರಾನ್‍ಸಿಟ್ ಪ್ಯಾಸಿಂಜರ್ ಹಾಗೂ ರ್ಯಾಂಡಮೈಸ್ ಪರೀಕ್ಷೆಗಳ ಬಗ್ಗೆಯೂ ವಿವರವಾಗಿ ತಿಳಿದುಕೊಂಡು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.
    ಸಭೆಯಲ್ಲಿ ಚೀಫ್ ಏರ್‍ಪೋರ್ಟ್ ಆಫೀಸರ್ ನೀರವ್ ಶಾ, ಕೋವಿಡ್ ನೋಡಲ್ ಅಧಿಕಾರಿ ಡಾ. ಎಚ್. ಅಶೋಕ್, ಏರ್‍ಲೈನ್ ಸ್ಟೇಷನ್ ಮ್ಯಾನೇಜರ್ಸ್, ಟರ್ಮಿನಲ್ ಮ್ಯಾನೇಜರ್, ಇಮಿಗ್ರಿಯೇಶನ್ ಆಫೀಸರ್ಸ್ ಹಾಗೂ ಸಂಬಂಧಿಸಿದ ಅಧಿಕಾರಿಗಳಿದ್ದರು.
    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಶಾಲಾ ಮಕ್ಕಳಿಗೆ ದಸರಾ ರಜೆ ಘೋಷಿಸಿದ ಸರಕಾರ

    Published

    on

    ಬೆಂಗಳೂರು/ಮಂಗಳೂರು: ಇನ್ನೇನು ನಾಡಹಬ್ಬ ದಸರಾ ಸಮೀಪಿಸುತ್ತಿದೆ. ಈ ಬಾರಿ ದಸರಾವನ್ನು ಅದ್ಧೂರಿಯಾಗಿ ಆಚರಿಸಲು ಸರಕಾರ ಸಿದ್ಧತೆ ನಡೆಸುತ್ತಿದೆ. ಖ್ಯಾತ ಸಾಹಿತಿ ಹಂಪ ನಾಗರಾಜಯ್ಯನವರು ಈ ಬಾರಿಯ ದಸರಾವನ್ನು ಉದ್ಘಾಟಿಸಿಲಿದ್ದಾರೆಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಈಗಾಗಲೇ ಘೋಷಣೆ ಮಾಡಿದ್ದಾರೆ.

     

    ಶಾಲಾ ಮಕ್ಕಳಿಗೆ ರಜೆ ಘೋಷಣೆ:
    ದಸರಾ ಹಬ್ಬಕ್ಕೆ ಶಾಲಾ ಮಕ್ಕಳಿಗೆ ಸರಕಾರ ರಜೆ ಘೋಷಣೆ ಮಾಡಿದೆ. ಅ.3ರಿಂದ ಅ.20ರವರೆಗೆ ದಸರಾ ರಜೆ ಘೋಷಣೆ ಮಾಡಿದ್ದು, ಸರಕಾರಿ ಶಾಲೆಗಳು, ಅನುದಾನಿತ ಶಾಲೆಗಳು ಮತ್ತು ಖಾಸಗಿ ಶಾಲೆಗಳಿಗೆ ಈ ರಜೆ ಅನ್ವಯವಾಗಲಿದೆ. ಹೊರತಾಗಿ ಸಿಬಿಎಸ್‌ಸಿ ಹಾಗೂ ಐಎಸ್‌ಸಿಎಸ್ ಶಾಲೆಗಳಿಗೆ ದಸರಾ ರಜೆ ಅನ್ವಯವಾಗುವುದಿಲ್ಲ. ಯಾಕಂದ್ರೆ ಇವೆರಡು ಕೇಂದ್ರ ಪಠ್ಯಕ್ರಮದಡಿ ಕಾರ್ಯನಿರ್ವಹಿಸುತ್ತಿರುವುದರಿಂದ ಶಾಲಾ ರಜೆ ದಿನಾಂಕ ಹಾಗೂ ರಜಾ ಅವಧಿ ಬೇರೆಯಾಗಿರುತ್ತದೆ.

    Continue Reading

    DAKSHINA KANNADA

    ಮನೆಯಲ್ಲಿ ಹಲ್ಲಿ ಕಾಟವೇ? ಈ ಸಿಂಪಲ್​ ಮನೆಮದ್ದು ಟ್ರೈ ಮಾಡಿ

    Published

    on

    ಮಂಗಳೂರು: ಹಲ್ಲಿಗಳು ಯಾವಾಗಲೂ ನಮಗಿಂತ ಹೆಚ್ಚಾಗಿ ನಮ್ಮ ಮನೆಯಲ್ಲಿ ಸುತ್ತಾಡುತ್ತಿರುತ್ತವೆ. ಕೆಲವರ ಮನೆಯಲ್ಲಿ ಹಲ್ಲಿಗಳಿದ್ದರೆ ಇನ್ನು ಹಲವರಿಗೆ ನಡುಕ, ಹಲ್ಲಿ ಹತ್ತಿರ ಬಂದರೆ ಬಹಳ ದೂರ ಓಡಿ ಹೋಗುತ್ತಾರೆ. ಹಲ್ಲಿಯಿಂದ ಓಡಿಹೋಗುವ ಭಯವನ್ನು ಹರ್ಪಿಟೋಫೋಬಿಯಾ ಎಂದು ಕರೆಯಲಾಗುತ್ತದೆ. ಮತ್ತೊಂದೆಡೆ, ಅಡುಗೆ ಮನೆಯಲ್ಲಿ ಹಲ್ಲಿ ಇದ್ದರೆ, ಅಡುಗೆ ಮಾಡುವಾಗ ಅದರೊಳಗೆ ಬೀಳುವ ಭಯವಿದೆ. ಆದ್ದರಿಂದ, ಮನೆಯಿಂದ ಹಲ್ಲಿಗಳನ್ನು ತೊಡೆದುಹಾಕುವ ಸಿಂಪಲ್​ ಮನೆಮದ್ದು ಇಲ್ಲಿ ತಿಳಿದುಕೊಳ್ಳಿ.

    ಈರುಳ್ಳಿ:

    ಈರುಳ್ಳಿಯನ್ನು ಅಡುಗೆಗೆ ಮಾತ್ರ ಬಳಸಲಾಗುವುದಿಲ್ಲ, ಬದಲಾಗಿ ಅಡಿಗೆಮನೆಗಳಿಂದ ಹಲ್ಲಿಗಳನ್ನು ಹಿಮ್ಮೆಟ್ಟಿಸಬಹುದು. ಈರುಳ್ಳಿಯಿಂದ ಹೊರಹೊಮ್ಮುವ ಕಟುವಾದ ವಾಸನೆಯು ಹಲ್ಲಿಗಳನ್ನು ಓಡಿಸುತ್ತದೆ. ಈರುಳ್ಳಿಯನ್ನು ಕತ್ತರಿಸಿ, ಹಲ್ಲಿ ಬರುವ ಸ್ಥಳದಲ್ಲಿ ತುಂಡರಿಸಿ ಇಡಿ. ಅದರಿಂದ ಬರುವ ವಾಸನೆಯಿಂದ ಹಲ್ಲಿ ಮನೆಯೊಳಗೆ ಬರುವುದಿಲ್ಲ. ಹಾಗೆಯೇ ಹಲ್ಲಿಗಳನ್ನು ಗೋಡೆಯಿಂದ ಓಡಿಸಲು ಈರುಳ್ಳಿಯನ್ನು ಸುಲಿದು ಅದರ ತುಂಡುಗಳನ್ನು ದಾರದಿಂದ ಕಟ್ಟಿ ಗೋಡೆಗೆ ನೇತು ಹಾಕಿ.

    ಬೆಳ್ಳುಳ್ಳಿ:

    ಮನೆಯಲ್ಲಿ ಹಲ್ಲಿಗಳನ್ನು ಬರದಂತೆ ತಡೆಯಲು ಬೆಳ್ಳುಳ್ಳಿಯನ್ನು ಬಳಸಬಹುದು. ಮನೆಯಲ್ಲಿ ಹಲ್ಲಿಗಳು ಓಡಾಡುವ ಕಿಟಕಿ, ಬಾಗಿಲು ಮುಂತಾದ ಸ್ಥಳಗಳಲ್ಲಿ ಬೆಳ್ಳುಳ್ಳಿಯನ್ನು ಕತ್ತರಿಸಿ ಇಡಿ. ಬೆಳ್ಳುಳ್ಳಿಯ ಬಲವಾದ ವಾಸನೆಯು ಹಲ್ಲಿಗಳನ್ನು ಹಿಮ್ಮೆಟ್ಟಿಸುತ್ತದೆ. ಇದಲ್ಲದೇ ಹಲ್ಲಿ ಬರುವ ಜಾಗದಲ್ಲಿ ಬೆಳ್ಳುಳ್ಳಿಯನ್ನು ಪುಡಿ ಮಾಡಿ ಸ್ವಲ್ಪ ನೀರು ಚಿಮುಕಿಸಿದರೆ ಮತ್ತೆ ಬರುವುದಿಲ್ಲ.

    ಪೆಪ್ಪರ್ ಸ್ಪ್ರೇ:

    ಪೆಪ್ಪರ್ ಸ್ಪ್ರೇ ಮತ್ತು ಚಿಲ್ಲಿ ಸ್ಪ್ರೇ ಬಳಸಿ ಮನೆಗಳ ಸುತ್ತ ತಿರುಗುವ ಹಲ್ಲಿಗಳನ್ನು ಸಹ ಹಿಮ್ಮೆಟ್ಟಿಸಬಹುದು. ಸ್ಪ್ರೇನಿಂದ ಬಲವಾದ ವಾಸನೆಯು ಹಲ್ಲಿಗಳನ್ನು ಪರಿಣಾಮಕಾರಿಯಾಗಿ ಹಿಮ್ಮೆಟ್ಟಿಸುತ್ತದೆ. ನೀವು ಮಾರುಕಟ್ಟೆಯಲ್ಲಿ ಪೆಪ್ಪರ್ ಸ್ಪ್ರೇ ಖರೀದಿಸಲು ಬಯಸದಿದ್ದರೆ, ನೀವು ಮನೆಯಲ್ಲಿಯೇ ಪೆಪ್ಪರ್ ಸ್ಪ್ರೇ ತಯಾರಿಸಬಹುದು. ಮೊದಲು ಸ್ವಲ್ಪ ಮೆಣಸು ತೆಗೆದುಕೊಂಡು ಪುಡಿ ಮಾಡಿ. ಈಗ ಅದನ್ನು ನೀರಿನೊಂದಿಗೆ ಚೆನ್ನಾಗಿ ಮಿಶ್ರಣ ಮಾಡಿ ಮತ್ತು ಸ್ಪ್ರೇ ಬಾಟಲಿಯಲ್ಲಿ ತುಂಬಿಸಿ. ಈಗ ಹಲ್ಲಿಗಳು ಇರುವ ಸ್ಥಳಗಳಲ್ಲಿ ಸ್ಪ್ರೇ ಮಾಡಿದರೆ ಮತ್ತೆ ತೊಂದರೆ ಆಗುವುದಿಲ್ಲ.

    Continue Reading

    DAKSHINA KANNADA

    ಕನ್ನಡದಲ್ಲಿ ಔಷಧ ಚೀಟಿ ಬರೆದು ಗಮನ ಸೆಳೆದ ಕಾಸರಗೋಡು ಜಿಲ್ಲೆಯ ದಂತ ವೈದ್ಯ..!

    Published

    on

    ಮಂಜೇಶ್ವರ/ಮಂಗಳೂರು: ಈ ಹಿಂದೆ ವೈದ್ಯರೊಬ್ಬರು ಕನ್ನಡದಲ್ಲಿ ಔಷಧ ಚೀಟಿಯನ್ನು ಬರೆಯುವ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಬಳಿಕ ಕರ್ನಾಟಕದಲ್ಲಿ ವೈದ್ಯರು ಕನ್ನಡದಲ್ಲೇ  ಔಷಧ ಚೀಟಿಯನ್ನು ಬರೆಯುವಂತೆ ಕನ್ನಡ ಪ್ರಾಧಿಕಾರ ಸೂಚನೆ ಕೂಡಾ ನೀಡಿತ್ತು. ಆದರೆ ಕರ್ನಾಟಕದಲ್ಲಿ ಈ ಸೂಚನೆ ಕಟ್ಟುನಿಟ್ಟಾಗಿ ಜಾರಿಯಾಗುವ ಮೊದಲೇ ಕೇರಳದ ಕಾಸರಗೋಡಿನಲ್ಲಿ ವೈದ್ಯರೊಬ್ಬರು ಕನ್ನಡದಲ್ಲಿ ಔಷಧ ಚೀಟಿ ಬರೆದು ಎಲ್ಲರ ಗಮನ ಸೆಳೆದಿದ್ದಾರೆ.

    ಹೌದು, ಕಾಸರಗೋಡಿನ ಮಂಜೇಶ್ವರದಲ್ಲಿರುವ ಸುರಕ್ಷಾ ದಂತ ಚಿಕಿತ್ಸಾಲಯದ ಡಾ.ಮುರಳೀ ಮೋಹನ ಚೂಂತೂರು ರವರು ಕನ್ನಡ ಪ್ರೇಮ ಮೆರೆದಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪುರುಷೋತ್ತಮ ಬಿಳಿನೆಲೆ ಅವರು ಇತ್ತೀಚೆಗೆ ಮಂಗಳೂರು ಭೇಟಿ ನೀಡಿದ ವೇಳೆ ವೈದ್ಯರು ಕೂಡಾ ಕನ್ನಡದಲ್ಲಿ ಔಷಧ ಚೀಟಿಯನ್ನು ಜನರಿಗೆ ಅರ್ಥವಾಗುವಂತೆ ಬರೆಯಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಹೇಳಿದ್ದರು.

    ಹಾಗಾಗಿ ರಾಜ್ಯದಲ್ಲಿ ಒಬ್ಬ ವೈದ್ಯರು ಕನ್ನಡದಲ್ಲಿ ಔಷಧ ಚೀಟಿ ಬರೆಯುವ ಮೂಲಕ ಮೊದಲ ಸ್ಪಂದನ ನೀಡಿದ್ದರು. ಇದೀಗ ಕೇರಳ ರಾಜ್ಯದಲ್ಲಿ ವೈದ್ಯರೊಬ್ಬರು ಕನ್ನಡದಲ್ಲಿ  ಔಷಧ ಚೀಟಿ ಬರೆಯುವ ಮೂಲಕ ತನ್ನ ಕನ್ನಡ ಪ್ರೇಮವನ್ನು ತೋರಿಸಿದ್ದಾರೆ.

    ಸರ್ಕಾರಿ ವೈದ್ಯರು ಕನ್ನಡದಲ್ಲೇ ಔಷಧ ಚೀಟಿ ಬರೆಯಲು ಆದೇಶಿಸುವಂತೆ ಸಚಿವರಿಗೆ ಪ್ರಾಧಿಕಾರ ಪತ್ರ

    ಅದಾದ ಬಳಿಕ ಆರೋಗ್ಯ ಸಚಿವರು ಪತ್ರಿಕಾ ಹೇಳಿಕೆ ಹೊರಡಿಸಿ, ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಿ, ಮುಖ್ಯಮಂತ್ರಿಗಳೊಂದಿಗೂ ಚರ್ಚೆ ನಡೆಸಿ ಬಳಿಕ ಸಾಧಕ ಬಾಧಕ ನೋಡಿಕೊಂಡು ಅನುಷ್ಠಾನಕ್ಕೆ ತರವಲಾಗುವುದು ಎಂದಿದ್ದರು. ಈಗ ಗಡಿನಾಡಿನ ಕನ್ನಡಿಗ ವೈದ್ಯರು ಔಷಧ ಚೀಟಿಯನ್ನು ಕನ್ನಡದಲ್ಲಿ ಬರೆಯುವ ಮೂಲಕ ಇತರರಿಗೆ ಮಾರ್ಗದರ್ಶಿಯಾಗಿರುವುದನ್ನು ಪ್ರಾಧಿಕಾರ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಸಂತಸ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

    Continue Reading

    LATEST NEWS

    Trending