DAKSHINA KANNADA
ದಲಿತೋದ್ಧಾರಕ ಕುದ್ಮುಲ್ ರಂಗರಾವ್ ಸಮಾಧಿಗೆ ಗೌರವ ಸಲ್ಲಿಸಿದ ಮಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ವೇದವ್ಯಾಸ್ ಕಾಮತ್..!
ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ವೇದವ್ಯಾಸ್ ಕಾಮತ್ ಅವರು ಈ ಬಾರಿಯೂ ನಾಮಪತ್ರ ಸಲ್ಲಿಸುವ ಮುನ್ನ ದಲಿತೋದ್ಧಾರಕ ಕುದ್ಮುಲ್ ರಂಗರಾವ್ ಅವರ ಸಮಾಧಿಗೆ ತೆರಳಿ ಗೌರವ ಸಲ್ಲಿಸಿದರು.
ಮಂಗಳೂರು : ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ವೇದವ್ಯಾಸ್ ಕಾಮತ್ ಅವರು ಈ ಬಾರಿಯೂ ನಾಮಪತ್ರ ಸಲ್ಲಿಸುವ ಮುನ್ನ ದಲಿತೋದ್ಧಾರಕ ಕುದ್ಮುಲ್ ರಂಗರಾವ್ ಅವರ ಸಮಾಧಿಗೆ ತೆರಳಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ಬಾರಿಯೂ ಚುನಾವಣೆಗೆ ನಾಮಪತ್ರ ಸಲ್ಲಿಸುವ ಮುನ್ನ ಪೂಜ್ಯ ಕುದ್ಮುಲ್ ರಂಗರಾವ್ ಅವರ ಸಮಾಧಿಗೆ ಗೌರವ ಸಮರ್ಪಸಿದ್ದೆ. ಕುದ್ಮುಲ್ ರಂಗರಾವ್ ಅವರು ನನಗೆ ಆದರ್ಶ. ಸಾಮಾಜಿಕ ಸಮಾನತೆ, ಅಸ್ಪೃಶ್ಯತೆ ನಿವಾರಣೆ, ಹಿಂದುಳಿದ ಸಮಾಜವನ್ನು ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಮುನ್ನೆಲೆಗೆ ತರಬೇಕೆಂಬ ಅವರ ಆಶಯವನ್ನು ಆದರ್ಶವಾಗಿ ಪರಿಗಣಿಸಿ ಜೀವನದಲ್ಲಿ ಅಳವಡಿಸಿಕೊಂಡಿದ್ದೇನೆ ಎಂದು ಹೇಳಿದರು.
ಮಂಗಳೂರು ನಗರ ದಕ್ಷಿಣ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷರಾದ ರಘುವೀರ್ ಬಾಬುಗುಡ್ಡೆ ಮಾತನಾಡಿ, ತನ್ನ ಶಾಸಕತ್ವದ ಅವಧಿಯಲ್ಲಿ ನಮ್ಮ ಸಮುದಾಯದ ಪ್ರತಿಯೊಂದು ಬೇಡಿಕೆಗಳಿಗೂ ಪೂರಕವಾಗಿ ಸ್ಪಂದಿಸಿದ ವೇದವ್ಯಾಸ್ ಕಾಮತ್ ಅವರು ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾಗಲಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೊರೇಟರ್ ಶೈಲೇಶ್, ಕುದ್ಮುಲ್ ರಂಗರಾಯರ ಎಜ್ಯುಕೇಷನ್ ಟ್ರಸ್ಟ್ ನ ಸದಸ್ಯರಾದ ಶ್ಯಾಮ್ ಕರ್ಕೇರ, ಶಶಿಕಾಂತ್, ಅರವಿಂದ್, ಹಾಗೂ ಭಾರತೀಯ ಜನತಾ ಪಾರ್ಟಿ ಎಸ್.ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ಬಿಲಿಂಬಿ, ಉಪಾಧ್ಯಕ್ಷರಾದ ಸಂದೀಪ್ ಬೋಳೂರು, ರಾಧಕೃಷ್ಣ, ಸದಸ್ಯರಾದ ಗಂಗಾಧರ, ಬಿಜೆಪಿ ಮುಖಂಡರಾದ ಪ್ರಮೋದ್ ಕೊಟ್ಟಾರಿ, ಅರ್ಚನಾ, ಜನಾರ್ದನ, ವಿವೇಕ್ ಶೆಟ್ಟರ್, ಲಲಿತಾ, ಅಕ್ಷತಾ, ಮೇಘ, ದಿನೇಶ್, ನಾರಾಯಣ್, ವಿಕ್ರಮ್ ಕದ್ರಿ, ರಶ್ಮಿ, ಮುಂತಾದವರು ಉಪಸ್ಥಿತರಿದ್ದರು.
DAKSHINA KANNADA
ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀ*ರ
ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್ ಹಾನಿಗೊಂಡಿದೆ.
ಮುಂದೆ ಓದಿ..; ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!
ಲಾರಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತದಿಂದ ನಜ್ಜುಗುಜ್ಜಾಗಿದೆ. ಇನ್ನು ಇದೇ ಭಾಗದಲ್ಲಿ ನಿತ್ಯವೂ ಮಹಿಳೆಯರು ಮೀನ ಮಾರಾಟ ಮಾಡುತ್ತಿದ್ದರು. ಅದೃಷ್ಟವಶಾತ್ ಇದೀಗ ಭಾರೀ ಅನಾಹುತ ತಪ್ಪಿದೆ.
DAKSHINA KANNADA
ದೊಡ್ಡವರ ಜಗಳದಲ್ಲಿ ಇಹಲೋಕ ತಜ್ಯಿಸಿದ 3 ರ ಕಂದಮ್ಮ…
ಮಂಗಳೂರು (ಬೆಳಗಾವಿ): ಅದು ಎರಡು ಕುಟುಂಬಗಳ ನಡುವೆ ನಡೆದಿರೋ ಜಗಳ . ಆದ್ರೆ ಆ ಜಗಳಕ್ಕೆ ಏನೂ ಅರಿಯದ ಮೂರು ವರ್ಷದ ಪುಟ್ಟ ಮಗು ಬಲಿಯಾಗಿದೆ. ಪಾಪಿಯೊಬ್ಬ ಮಗುವಿನ ಎದೆಗೆ ಕಾಲಿಟ್ಟು ಮಗುವಿನ ಉಸಿರು ನಿಲ್ಲಿಸಿದ್ದಾನೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಎಂಬ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ದೊಡ್ಡವರ ಜಗಳದಲ್ಲಿ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಎಂಬ ಮೂರು ವರ್ಷದ ಮಗು ಹತವಾಗಿದೆ. ಜೋತಿಭಾ ತುಕಾರಾಮ ಬಾಬಬರ ಎಂಬಾತ ಮಗುವಿನ ಜೀವಕ್ಕೆ ಕುತ್ತು ತಂದ ಆರೋಪಿಯಾಗಿದ್ದಾನೆ.
ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಜಗಳ ತಾರಕ್ಕೇರಿದಾಗ ಸಿಟ್ಟಿನಲ್ಲಿ ಜೋತಿಬಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ನಿಂತಿದ್ದಾನೆ. ಈ ವೇಳೆ ಮಗುವನ್ನು ಆತನ ಕಾಲಿನ ಅಡಿಯಿಂದ ತೆಗೆಯಲು ಮಗುವಿನ ತಾಯಿ ಯತ್ನಿಸಿದ್ದಾಳೆ . ಆ ವೇಳಗೆ ಇನ್ನಷ್ಟು ಗಟ್ಟಿಯಾಗಿ ಕಾಲಿನಿಂದ ಮಗುವಿನ ಎದೆಗೆ ಕಾಲಿನಿಂದ ಒತ್ತಿದ ಕಾರಣ ಮಗು ಉಸಿರು ನಿಲ್ಲಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.
DAKSHINA KANNADA
ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!
ನ್ಯೂಯಾರ್ಕ್ : ಅಮೇರಿಕಾದಲ್ಲಿ ನಡೆದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮಹಿಳೆಯರು ಇಹಲೋಕ ತ್ಯಜಿಸಿದ್ದಾರೆ. ಕೌಂಟಿಯ ಹೆದ್ದಾರಿಯ ಸೇತುವೆಯೊಂದರ ಮೇಲೆ ವೇಗವಾಗಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಉತ್ತರದ ಕಡೆಗೆ ಕಾರು ಪ್ರಯಾಣಿಸುತ್ತಿದ್ದು, ಎಲ್ಲಾ ಲೇನ್ಗಳನ್ನು ದಾಟಿ, ಹಂಪ್ ಮೇಲೆ ವೇಗವಾಗಿ ಏರಿತ್ತು. ಈ ಕಾರಣದಿಂದ ಕನಿಷ್ಟ 20 ಅಡಿಗಳಷ್ಟು ಮೇಲಕ್ಕೆ ಹಾರಿ ಸೇತುವೆಯ ಮುಂದೆ ಇದ್ದ ಮರಗಳಿಗೆ ಕಾರು ಅಪ್ಪಳಿಸಿದೆ. ಗುಜಾರಾತ್ ಮೂಲದ ಮೂವರು ಮಹಿಳೆಯರು ಈ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗುಜರಾತ್ನ ಆನಂದ್ ಜಿಲ್ಲೆಯ ರೇಖಾಬೆನ್ ಪಟೇಲ್ , ಸಂಗೀತಾಬೆನ್ ಪಟೇಲ್ ಹಾಗೂ ಮನೀಶಾಬೆನ್ ಪಟೇಲ್ ಅವರು ಇಹಲೋಕ ತ್ಯಜಿಸಿದವರಾಗಿದ್ದಾರೆ.
ಕಾರು ನಿಗದಿಪಡಿಸಿದ ವೇಗದ ಮಿತಿಗಿಂತ ಹೆಚ್ಚು ವೇಗದಲ್ಲಿತ್ತು ಎಂದು ಅಲ್ಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಪಘಾತದ ಪ್ರಮಾಣ ಎಷ್ಟಿತ್ತು ಮತ್ತು ಕಾರು ಎಷ್ಟು ಎತ್ತರಕ್ಕೆ ಹಾರಿತ್ತು ಅನ್ನೋದಿಕ್ಕೆ ಮರದ ಮೇಲಿರುವ ಕಾರಿನ ಅವಶೇಷಗಳು ಸಾಕ್ಷಿ ಎಂದು ಅವರು ಹೇಳಿದ್ದಾರೆ. ಮರದ ಮೇಲೆ ಬಿದ್ದ ಕಾರು ಛಿದ್ರಗೊಂಡು ಕಾರಿನ ಅವಶೇಷಗಳು ಚೆಲ್ಲಾಪಿಲ್ಲಿಯಾಗಿತ್ತು.
ದಕ್ಷಿಣ ಕೆರೊಲಿನಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಕ್ಷಣ ಸ್ಥಳಕ್ಕೆ ರಕ್ಷಣಾ ತಂಡಗಳು, ಪೊಲೀಸರು ಆಗಮಿಸಿದ್ದಾರೆ. ಅಪಘಾತದಲ್ಲಿ ಓರ್ವ ಬದುಕಿ ಉಳಿದಿದ್ದು, ಆತನ ಸ್ಥಿತಿ ಗಂಭೀರವಾಗಿದ್ದು ಈಗಲೇ ಏನೂ ಹೇಳಲು ಆಗದ ಪರಿಸ್ಥಿತಿಯಲ್ಲಿದ್ದಾನೆ. ವಾಹನ ಅಪಘಾತವಾದ ತಕ್ಷಣ ಅದರಲ್ಲಿದ್ದ ತಾಂತ್ರಿಕ ವ್ಯವಸ್ಥೆಯ ಕಾರಣ ತಕ್ಷಣ ಕುಟುಂಬ ಸದಸ್ಯರಿಗೆ ಅಲರ್ಟ್ ಮೆಸೆಜ್ ರವಾನೆಯಾಗಿತ್ತು. ಹೀಗಾಗಿ ತಕ್ಷಣ ಕುಟುಂಬಸ್ಥರು ಕೂಡಾ ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ.
- FILM6 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM6 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- chikkamagaluru6 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!
- FILM7 days ago
ಶೈನ್ ಶೆಟ್ಟಿ, ಅಂಕಿತಾ ಜಸ್ಟ್ ಮ್ಯಾರೀಡ್..!! ಅಭಿಮಾನಿಗಳಿಗೆ ಖುಷಿ