Connect with us

    LATEST NEWS

    ಮಂಗಳೂರು: ಮೇ 19ರಂದು ಮಸ್ಕತ್ ಒಮಾನ್ ನಲ್ಲಿ ‘ಸ್ವಾಮಿ ಕೊರಗಜ್ಜ’ ಹಾಗೂ ‘ಶ್ರೀ ಶನೀಶ್ವರ ಮಹಾತ್ಮೆ’ ತುಳು ಯಕ್ಷಗಾನ ತಾಳ ಮದ್ದಳೆ

    Published

    on

    ಬಿರುವ ಜವನೆರ್ ಮಸ್ಕತ್ ಇವರು ಮೇ 19 ಶುಕ್ರವಾರದಂದು ಮಸ್ಕತ್ ಒಮಾನ್ ನಲ್ಲಿ “ಸ್ವಾಮಿ ಕೊರಗಜ್ಜ” ಹಾಗೂ “ಶ್ರೀ ಶನೀಶ್ವರ ಮಹಾತ್ಮೆ” ತುಳು ಯಕ್ಷಗಾನ ತಾಳ ಮದ್ದಳೆಯನ್ನು ಆಯೋಜಿಸಿದ್ದಾರೆ.

    ಮಂಗಳೂರು: ಬಿರುವ ಜವನೆರ್ ಮಸ್ಕತ್ ಇವರು ಮೇ 19 ಶುಕ್ರವಾರದಂದು ಮಸ್ಕತ್ ಒಮಾನ್ ನಲ್ಲಿ “ಸ್ವಾಮಿ ಕೊರಗಜ್ಜ” ಹಾಗೂ “ಶ್ರೀ ಶನೀಶ್ವರ ಮಹಾತ್ಮೆ” ತುಳು ಯಕ್ಷಗಾನ ತಾಳ ಮದ್ದಳೆಯನ್ನು ಆಯೋಜಿಸಿದ್ದಾರೆ.ದಾರ್ ಸೈಟ್ ಶ್ರೀ ಕೃಷ್ಣ ದೇವಸ್ಥಾನ ದಲ್ಲಿ ಶ್ರೀ ಶನೀಶ್ವರ ಭಕ್ತ ವೃಂದ ಪಕ್ಷಿಕೆರೆ ಮಂಗಳೂರು ಇವರಿಂದ ನವರಸ ಭರಿತ ಎರಡು ತುಳು ಯಕ್ಷಗಾನ ಪ್ರಸಂಗಗಳು ಒಂದೇ ದಿನ ಪ್ರದರ್ಶನ ಕಾಣಲಿದೆ ಎಂದು ಬಿರುವ ಜವನೆರ್ ಸಂಘಟನೆಯ  ಮಾಧುರಿ ಸುವರ್ಣ ಸುದ್ದಿ ಗೋಷ್ಠಿ ಯಲ್ಲಿ ತಿಳಿಸಿದ್ದಾರೆ.

    ಮಸ್ಕತ್ ನ ಬಿರುವ ಜವನೆರ್ ಸಂಘಟನೆಯು ಕಳೆದ ಒಂದು ದಶಕ ದಿಂದ ಮಸ್ಕತ್ ನಲ್ಲಿ ಸಾಮಾಜಿಕ, ಧಾರ್ಮಿಕ, ಸೇವಾ ಚಟುವಟಿಕೆ ಗಳನ್ನು ನಡೆಸಿಕೊಂಡು ಬಂದಿದ್ದು, ಈ ಮೊದಲು ಇದೇ ತಂಡವನ್ನು ಆಹ್ವಾನಿಸಿ ಒಮಾನ್ ರಾಷ್ಟ್ರದಲ್ಲಿ ಪ್ರಪ್ರಥಮ ಪೂಜಾ ಸಹಿತ “ಶನೀಶ್ವರ ಮಹಾತ್ಮೆ” ಯಕ್ಷಗಾನ ತಾಳಮದ್ದಳೆಯನ್ನು ಆಯೋಜಿಸಿದ ಕೀರ್ತಿಗೆ ಭಾಜನವಾಗಿದೆ.

    ಒಮಾನ್ ಬಿಲ್ಲವಾಸ್, ಬಂಟ್ಸ್ ಓಮನ್, ವಿಶ್ವಕರ್ಮ, ಗೌಡ ಸಾರಸ್ವತ ಬ್ರಾಹ್ಮಣ, ಮೊಗವೀರ ಒಮಾನ್ ಹಾಗೂ ತುಳು ಭಾಷಾ ಸಂಘಟನೆಗಳ ಸಹಕಾರ, ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮ ಸಂಯೋಜನೆ ಮಾಡಲಾಗಿದೆ.

    ಮೇ 19 ರಂದು ಬೆಳಿಗ್ಗೆ 8.30 ರಿಂದ 12.30 ರ ತನಕ ಹರೀಶ್ ಶೆಟ್ಟಿ ಸೂಡಾ ರಚನೆಯ “ಅಜ್ಜ ಕೊರಗಜ್ಜ” ತುಳು ತಾಳಮದ್ದಳೆ, ನಂತರ ಪ್ರಸಾದ ಭೋಜನ.

    ಮಧ್ಯಾಹ್ನ 2.30 ರಿಂದ ಸಂಜೆ 7 ರ ತನಕ ಚಿನ್ಮಯ ದಾಸ ವಿರಚಿತ “ಶ್ರೀ ಶನೀಶ್ವರ ಮಹಾತ್ಮೆ” ವಿಕ್ರಮಾದಿತ್ಯ ಚರಿತ್ರೆ ಎಂಬ ಪುಣ್ಯ ಪ್ರಸಂಗ ಪೂಜಾ ಸಹಿತ ಯಕ್ಷಗಾನ ತಾಳಮದ್ದಳೆ ಸ್ವರೂಪದಲ್ಲಿ ನಡೆಯಲಿದೆ.

    ಕಳೆದ ಮೂರು ದಶಕಗಳಿಂದ ಶನಿ ಪೂಜಾ ಸಹಿತ ತಾಳಮದ್ದಳೆಯನ್ನು ಮಸ್ಕತ್, ದುಬೈ, ಅಬುದಾಬಿ, ಮುಂಬಯಿ, ಸಾಂಗ್ಲಿ ಸೇರಿ ದೇಶ ವಿದೇಶಗಳಲ್ಲಿ ನೂರಾರು ಕಾರ್ಯಕ್ರಮಗಳನ್ನು ನೀಡಿರುವ ಕರಾವಳಿಯ ಪ್ರಸಿದ್ದ ಯಕ್ಷಗಾನ ತಂಡ ಶ್ರೀ ಶನೀಶ್ವರ ಭಕ್ತ ವೃಂದ ಪಕ್ಷಿಕೆರೆ ಇದೀಗ ಎರಡನೇ ಬಾರಿ ಮಸ್ಕತ್ ನಲ್ಲಿ ಖ್ಯಾತ ಅರ್ಥಧಾರಿಗಳ ಸಮ್ಮಿಲನದೊಂದಿಗೆ ಕಾರ್ಯಕ್ರಮ ನೀಡಲು ಸನ್ನದ್ದವಾಗಿದೆ.

    ತೆಂಕು ತಿಟ್ಟಿನ ಪ್ರಸಿದ್ದ ಭಾಗವತ ರವಿಚಂದ್ರ ಕನ್ನಡಿಕಟ್ಟೆ ಅವರ ಭಾಗವತಿಕೆಯಲ್ಲಿ ಎರಡೂ ಪ್ರಸಂಗಗಳು ಮಿಂಚಲಿವೆ.

    ಹಿಮ್ಮೆಳ ದಲ್ಲಿ ಪದ್ಮನಾಭ ಶೆಟ್ಟಿಗಾರ್ ಪಕ್ಷಿಕೆರೆ, ಭಾಸ್ಕರ ಭಟ್ ಕಟೀಲು ಸಹಕರಿಸಲಿದ್ದಾರೆ. ತಂಡದ ಪ್ರಧಾನ ಸಂಚಾಲಕ ಪಕ್ಷಿಕೆರೆ ಪದ್ಮನಾಭ ಶೆಟ್ಟಿಗಾರ್, ಅರ್ಥಧಾರಿಗಳಾಗಿ ಕದ್ರಿ ನವನೀತ ಶೆಟ್ಟಿ, ಶ್ರೀಪತಿ ಭಟ್ ಸಸಿಹಿತ್ಲು, ವಿಜಯ ಕುಮಾರ್ ಶೆಟ್ಟಿ ಮೊಯಿಲೊಟ್ಟು, ಸೀತಾರಾಮ್ ಕುಮಾರ್ ಕಟೀಲ್, ಸದಾಶಿವ ಆಳ್ವ ತಲಪಾಡಿ, ಕಾವಳಕಟ್ಟೆ ದಿನೇಶ್ ಶೆಟ್ಟಿ , ದಯಾನಂದ ಜಿ ಕತ್ತಲ್ ಸ್ಸಾರ್, ಪ್ರಸನ್ನ ಶೆಟ್ಟಿ ಅತ್ತೂರು, ಪುಷ್ಪರಾಜ ಕುಕ್ಕಾಜೆ, ರಾಮಚಂದ್ರ ಮುಕ್ಕ ಪಾಲ್ಗೊಳ್ಳಲಿದ್ದಾರೆ.

    ಇದು ತುಳು ಭಾಷೆಯ ಸೊಗಡು, ಅಜ್ಜ ಕೊರಗಜ್ಜನ ಸಂದಿ ಪಾರ್ದನದ ತಿರುಳು, ಪುರಾಣ ಪುಣ್ಯ ಕಥಾನಕಕ್ಕೆ ಹೊಸ ಮೆರುಗು ನೀಡುವ ನವರಸ ಭರಿತ ಕಾರ್ಯಕ್ರಮವಾಗಿದೆ.

    ಮಸ್ಕತ್ ನಲ್ಲಿ ನೆಲೆಸಿರುವ ಎಲ್ಲಾ ಸಮುದಾಯದ ಕಲಾಸಕ್ತರು ಪಾಲ್ಗೊಂಡು ಸಹಕರಿಸಬೇಕಾಗಿ ಬಿರುವ ಜವನೆರ್ ಮಸ್ಕತ್ ವಿನಂತಿಸಿದ್ದಾರೆ.

    ದಾಮೋದರ್ ಕುಂದರ್ ಮಸ್ಕತ್, ಸುಹಾನ್ ಸುವರ್ಣ ಮಸ್ಕತ್, ಕದ್ರಿ ನವನೀತ ಶೆಟ್ಟಿ, ಪದ್ಮನಾಭ ಶೆಟ್ಟಿಗಾರ್ ಪಕ್ಷಿಕೆರೆ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?

    Published

    on

    ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
    ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.

    ಸೀಟ್ ಗಾಗಿ ಎಡವಟ್ಟು :
    ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.

    ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್‌ಗೆ 60 ರೂ., ಹಾಲ್ಫ್‌ಗೆ 40 ರೂ.
    ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.

    ರೋಹಿತ್‌ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

    ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.

    Continue Reading

    LATEST NEWS

    Trending