Connect with us

LATEST NEWS

ಮಂಗಳೂರು: ಮೇ 19ರಂದು ಮಸ್ಕತ್ ಒಮಾನ್ ನಲ್ಲಿ ‘ಸ್ವಾಮಿ ಕೊರಗಜ್ಜ’ ಹಾಗೂ ‘ಶ್ರೀ ಶನೀಶ್ವರ ಮಹಾತ್ಮೆ’ ತುಳು ಯಕ್ಷಗಾನ ತಾಳ ಮದ್ದಳೆ

Published

on

ಬಿರುವ ಜವನೆರ್ ಮಸ್ಕತ್ ಇವರು ಮೇ 19 ಶುಕ್ರವಾರದಂದು ಮಸ್ಕತ್ ಒಮಾನ್ ನಲ್ಲಿ “ಸ್ವಾಮಿ ಕೊರಗಜ್ಜ” ಹಾಗೂ “ಶ್ರೀ ಶನೀಶ್ವರ ಮಹಾತ್ಮೆ” ತುಳು ಯಕ್ಷಗಾನ ತಾಳ ಮದ್ದಳೆಯನ್ನು ಆಯೋಜಿಸಿದ್ದಾರೆ.

ಮಂಗಳೂರು: ಬಿರುವ ಜವನೆರ್ ಮಸ್ಕತ್ ಇವರು ಮೇ 19 ಶುಕ್ರವಾರದಂದು ಮಸ್ಕತ್ ಒಮಾನ್ ನಲ್ಲಿ “ಸ್ವಾಮಿ ಕೊರಗಜ್ಜ” ಹಾಗೂ “ಶ್ರೀ ಶನೀಶ್ವರ ಮಹಾತ್ಮೆ” ತುಳು ಯಕ್ಷಗಾನ ತಾಳ ಮದ್ದಳೆಯನ್ನು ಆಯೋಜಿಸಿದ್ದಾರೆ.ದಾರ್ ಸೈಟ್ ಶ್ರೀ ಕೃಷ್ಣ ದೇವಸ್ಥಾನ ದಲ್ಲಿ ಶ್ರೀ ಶನೀಶ್ವರ ಭಕ್ತ ವೃಂದ ಪಕ್ಷಿಕೆರೆ ಮಂಗಳೂರು ಇವರಿಂದ ನವರಸ ಭರಿತ ಎರಡು ತುಳು ಯಕ್ಷಗಾನ ಪ್ರಸಂಗಗಳು ಒಂದೇ ದಿನ ಪ್ರದರ್ಶನ ಕಾಣಲಿದೆ ಎಂದು ಬಿರುವ ಜವನೆರ್ ಸಂಘಟನೆಯ  ಮಾಧುರಿ ಸುವರ್ಣ ಸುದ್ದಿ ಗೋಷ್ಠಿ ಯಲ್ಲಿ ತಿಳಿಸಿದ್ದಾರೆ.

ಮಸ್ಕತ್ ನ ಬಿರುವ ಜವನೆರ್ ಸಂಘಟನೆಯು ಕಳೆದ ಒಂದು ದಶಕ ದಿಂದ ಮಸ್ಕತ್ ನಲ್ಲಿ ಸಾಮಾಜಿಕ, ಧಾರ್ಮಿಕ, ಸೇವಾ ಚಟುವಟಿಕೆ ಗಳನ್ನು ನಡೆಸಿಕೊಂಡು ಬಂದಿದ್ದು, ಈ ಮೊದಲು ಇದೇ ತಂಡವನ್ನು ಆಹ್ವಾನಿಸಿ ಒಮಾನ್ ರಾಷ್ಟ್ರದಲ್ಲಿ ಪ್ರಪ್ರಥಮ ಪೂಜಾ ಸಹಿತ “ಶನೀಶ್ವರ ಮಹಾತ್ಮೆ” ಯಕ್ಷಗಾನ ತಾಳಮದ್ದಳೆಯನ್ನು ಆಯೋಜಿಸಿದ ಕೀರ್ತಿಗೆ ಭಾಜನವಾಗಿದೆ.

ಒಮಾನ್ ಬಿಲ್ಲವಾಸ್, ಬಂಟ್ಸ್ ಓಮನ್, ವಿಶ್ವಕರ್ಮ, ಗೌಡ ಸಾರಸ್ವತ ಬ್ರಾಹ್ಮಣ, ಮೊಗವೀರ ಒಮಾನ್ ಹಾಗೂ ತುಳು ಭಾಷಾ ಸಂಘಟನೆಗಳ ಸಹಕಾರ, ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮ ಸಂಯೋಜನೆ ಮಾಡಲಾಗಿದೆ.

ಮೇ 19 ರಂದು ಬೆಳಿಗ್ಗೆ 8.30 ರಿಂದ 12.30 ರ ತನಕ ಹರೀಶ್ ಶೆಟ್ಟಿ ಸೂಡಾ ರಚನೆಯ “ಅಜ್ಜ ಕೊರಗಜ್ಜ” ತುಳು ತಾಳಮದ್ದಳೆ, ನಂತರ ಪ್ರಸಾದ ಭೋಜನ.

ಮಧ್ಯಾಹ್ನ 2.30 ರಿಂದ ಸಂಜೆ 7 ರ ತನಕ ಚಿನ್ಮಯ ದಾಸ ವಿರಚಿತ “ಶ್ರೀ ಶನೀಶ್ವರ ಮಹಾತ್ಮೆ” ವಿಕ್ರಮಾದಿತ್ಯ ಚರಿತ್ರೆ ಎಂಬ ಪುಣ್ಯ ಪ್ರಸಂಗ ಪೂಜಾ ಸಹಿತ ಯಕ್ಷಗಾನ ತಾಳಮದ್ದಳೆ ಸ್ವರೂಪದಲ್ಲಿ ನಡೆಯಲಿದೆ.

ಕಳೆದ ಮೂರು ದಶಕಗಳಿಂದ ಶನಿ ಪೂಜಾ ಸಹಿತ ತಾಳಮದ್ದಳೆಯನ್ನು ಮಸ್ಕತ್, ದುಬೈ, ಅಬುದಾಬಿ, ಮುಂಬಯಿ, ಸಾಂಗ್ಲಿ ಸೇರಿ ದೇಶ ವಿದೇಶಗಳಲ್ಲಿ ನೂರಾರು ಕಾರ್ಯಕ್ರಮಗಳನ್ನು ನೀಡಿರುವ ಕರಾವಳಿಯ ಪ್ರಸಿದ್ದ ಯಕ್ಷಗಾನ ತಂಡ ಶ್ರೀ ಶನೀಶ್ವರ ಭಕ್ತ ವೃಂದ ಪಕ್ಷಿಕೆರೆ ಇದೀಗ ಎರಡನೇ ಬಾರಿ ಮಸ್ಕತ್ ನಲ್ಲಿ ಖ್ಯಾತ ಅರ್ಥಧಾರಿಗಳ ಸಮ್ಮಿಲನದೊಂದಿಗೆ ಕಾರ್ಯಕ್ರಮ ನೀಡಲು ಸನ್ನದ್ದವಾಗಿದೆ.

ತೆಂಕು ತಿಟ್ಟಿನ ಪ್ರಸಿದ್ದ ಭಾಗವತ ರವಿಚಂದ್ರ ಕನ್ನಡಿಕಟ್ಟೆ ಅವರ ಭಾಗವತಿಕೆಯಲ್ಲಿ ಎರಡೂ ಪ್ರಸಂಗಗಳು ಮಿಂಚಲಿವೆ.

ಹಿಮ್ಮೆಳ ದಲ್ಲಿ ಪದ್ಮನಾಭ ಶೆಟ್ಟಿಗಾರ್ ಪಕ್ಷಿಕೆರೆ, ಭಾಸ್ಕರ ಭಟ್ ಕಟೀಲು ಸಹಕರಿಸಲಿದ್ದಾರೆ. ತಂಡದ ಪ್ರಧಾನ ಸಂಚಾಲಕ ಪಕ್ಷಿಕೆರೆ ಪದ್ಮನಾಭ ಶೆಟ್ಟಿಗಾರ್, ಅರ್ಥಧಾರಿಗಳಾಗಿ ಕದ್ರಿ ನವನೀತ ಶೆಟ್ಟಿ, ಶ್ರೀಪತಿ ಭಟ್ ಸಸಿಹಿತ್ಲು, ವಿಜಯ ಕುಮಾರ್ ಶೆಟ್ಟಿ ಮೊಯಿಲೊಟ್ಟು, ಸೀತಾರಾಮ್ ಕುಮಾರ್ ಕಟೀಲ್, ಸದಾಶಿವ ಆಳ್ವ ತಲಪಾಡಿ, ಕಾವಳಕಟ್ಟೆ ದಿನೇಶ್ ಶೆಟ್ಟಿ , ದಯಾನಂದ ಜಿ ಕತ್ತಲ್ ಸ್ಸಾರ್, ಪ್ರಸನ್ನ ಶೆಟ್ಟಿ ಅತ್ತೂರು, ಪುಷ್ಪರಾಜ ಕುಕ್ಕಾಜೆ, ರಾಮಚಂದ್ರ ಮುಕ್ಕ ಪಾಲ್ಗೊಳ್ಳಲಿದ್ದಾರೆ.

ಇದು ತುಳು ಭಾಷೆಯ ಸೊಗಡು, ಅಜ್ಜ ಕೊರಗಜ್ಜನ ಸಂದಿ ಪಾರ್ದನದ ತಿರುಳು, ಪುರಾಣ ಪುಣ್ಯ ಕಥಾನಕಕ್ಕೆ ಹೊಸ ಮೆರುಗು ನೀಡುವ ನವರಸ ಭರಿತ ಕಾರ್ಯಕ್ರಮವಾಗಿದೆ.

ಮಸ್ಕತ್ ನಲ್ಲಿ ನೆಲೆಸಿರುವ ಎಲ್ಲಾ ಸಮುದಾಯದ ಕಲಾಸಕ್ತರು ಪಾಲ್ಗೊಂಡು ಸಹಕರಿಸಬೇಕಾಗಿ ಬಿರುವ ಜವನೆರ್ ಮಸ್ಕತ್ ವಿನಂತಿಸಿದ್ದಾರೆ.

ದಾಮೋದರ್ ಕುಂದರ್ ಮಸ್ಕತ್, ಸುಹಾನ್ ಸುವರ್ಣ ಮಸ್ಕತ್, ಕದ್ರಿ ನವನೀತ ಶೆಟ್ಟಿ, ಪದ್ಮನಾಭ ಶೆಟ್ಟಿಗಾರ್ ಪಕ್ಷಿಕೆರೆ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

LATEST NEWS

ವಧು ಕೇಳಿದ ಆ ಒಂದು ಪ್ರಶ್ನೆ; ತಬ್ಬಿಬ್ಬಾದ ವರ..ಮದುವೆ ಕ್ಯಾನ್ಸಲ್!

Published

on

ಮಂಗಳೂರು : ಇತ್ತೀಚಿನ ದಿನಗಳಲ್ಲಿ ಮದುವೆ ಎಂಬುದರ ಸಂಭ್ರಮ ಹೇಳತೀರದು. ಅದ್ದೂರಿತನವೇ ಮೇಲುಗೈ ಸಾಧಿಸುತ್ತೆ. ಈ ನಡುವೆ ಮದುವೆ ಮುರಿದು ಬೀಳುವ ಘಟನೆಯೂ ಹೆಚ್ಚುತ್ತಲಿದೆ. ಕ್ಷುಲ್ಲಕ ಕಾರಣ ಇರಬಹುದು ಅಥವಾ ಇನ್ಯಾವುದೇ ಕಾರಣ ಇರಬಹುದು ಮದುವೆ ಮುರಿದು ಬೀಳುತ್ತಿದೆ.


ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು ಅನ್ನೋ ಗಾದೆ ಮಾತಿದೆ. ಅಂತೆಯೇ ಇಲ್ಲಿ ವರ ಸುಳ್ಳು ಹೇಳಿದ್ದಾನೆ. ಹಾಗಂತ ಮದುವೆ ಆಗಿಲ್ಲ. ಬದಲಿಗೆ ಸಿಕ್ಕಿ ಬಿದ್ದಿದ್ದಾನೆ. ವಧು ಕೇಳಿದ ಆ ಒಂದು ಪ್ರಶ್ನೆಯಿಂದ ಮದುವೆ ಮುರಿದು ಬಿದ್ದಿದೆ.

ಸುಳ್ಳು ಹೇಳಿ ತಗ್ಲಾಕ್ಕೊಂಡ!

ಸುಳ್ಳು ಹೇಳಿ ಮದುವೆಯಾಗಲು ಹೊರಟಿದ್ದ ವರನ ಅಸಲಿ ವಿಚಾರ ಗೊತ್ತಾಗಿದೆ. ಹೀಗಾಗಿ ಯುವತಿ ಮದುವೆ ನಿರಾಕರಿಸಿದ್ದಾಳೆ. ಅಂದಹಾಗೆ ಈ ಘಟನೆ ನಡೆದಿರೋದು ಉತ್ತರ ಪ್ರದೇಶದ ಪನ್ವಾರಿನಲ್ಲಿ. ಓದು, ಬರಹ ಏನೊಂದು ಬರದ ಅನಕ್ಷರಸ್ಥನೊಬ್ಬ ತಾನು ದೊಡ್ಡ ಸರ್ಕಾರಿ ಅಧಿಕಾರಿ ಎಂದು ಮದುವೆಯಾಗಲು ಹೊರಟಿದ್ದ.

ಆದರೆ, ಈ ಸತ್ಯ ಮದುವೆ ಮನೆಯಲ್ಲೇ ಬಯಲಾಗಿದೆ. ಸಂಶಯಗೊಂಡ ವಧು ವರನ ಬಳಿ, ಎರಡರ ಮಗ್ಗಿ ಹೇಳಲು ತಿಳಿಸಿದ್ದಾಳೆ. ಆಗ ಆತ ತಡವರಿಸಿದ್ದಾರೆ. ಹಾಗಾಗಿ, ಯುವತಿಗೆ ಸತ್ಯಾಂಶ ಗೊತ್ತಾಗಿದೆ. ಎರಡರ ಮಗ್ಗಿ ಬೇಸಿಕ್ ಗಣಿತವೂ ಗೊತ್ತಿಲ್ಲ, ನೀನು ಅಧಿಕಾರಿಯಾಗಲು ಹೇಗೆ ಸಾಧ್ಯ? ಎಂದು ಮದುವೆ ಮುರಿದುಕೊಂಡಿದ್ದಾಳೆ.

ಇದನ್ನೂ ಓದಿ : ಮತ್ತೆ ಬಾಯ್‌ ಫ್ರೆಂಡ್ ಬದಲಾಯಿಸಿದ ಶೃತಿ ಹಾಸನ್..!

ಇಷ್ಟಾದರೂ ಬಿಡದ ಕುಟುಂಬದವರು ವಧುವಿನ ಮನವೊಲಿಸುವ ಯತ್ನ ಮಾಡಿದ್ದಾರೆ. ಆದರೆ, ವಧು ಮಾತ್ರ ಇದಕ್ಕೆ ಒಪ್ಪಿಲ್ಲ. ಹೀಗಾಗಿ ವರದಕ್ಷಿಣೆಯನ್ನು ಹಿಂದಿರುಗಿಸಿದ್ದಾರೆ. ಪರಸ್ಪರ ನೀಡಿದ ಉಡುಗೊರೆ, ಆಭರಣಗಳನ್ನು ಹಿಂದಿರುಗಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

 

Continue Reading

LATEST NEWS

ಮತಗಟ್ಟೆಯನ್ನೇ ಧ್ವಂಸ ಮಾಡಿದ ಗ್ರಾಮಸ್ಥರು!

Published

on

ಚಾಮರಾಜನಗರ : ಲೋಕಸಭಾ ಚುನಾವಣೆಗೆ ನಡೆಯುತ್ತಿರುವ ಮತದಾನ ರಾಜ್ಯದೆಲ್ಲಡೆ ಸುಸೂತ್ರವಾಗಿಯೇ ನಡೆದಿದೆ. ಆದರೆ ಚಾಮರಾಜನಗರದಲ್ಲಿ ಮಾತ್ರ ಜನರು ಮತಗಟ್ಟೆಯನ್ನೇ ಪುಡಿ ಮಾಡಿ ಚುನಾವಣೆಯನ್ನು ಬಹಿಷ್ಕಾರ ಮಾಡಿದ್ದಾರೆ. ಚಾಮರಾಜನಗರದ ಲೋಕಸಭಾ ಕ್ಷೇತ್ರದ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಐದು ಗ್ರಾಮಗಳಲ್ಲಿ ಮತದಾನ ಬಹಿಷ್ಕಾರ ಮಾಡಲಾಗಿತ್ತು. ಈ ವೇಳೆ ಇಂಡಿಗನತ್ತ ಎಂಬ ಗ್ರಾಮದಲ್ಲಿ ಮತಗಟ್ಟೆಯನ್ನು ಗ್ರಾಮಸ್ಥರು ಧ್ವಂಸ ಮಾಡಿದ್ದಾರೆ.


ಚುನಾವಣೆ ಬಹಿಷ್ಕಾರಿಸಿದ್ದ 5 ಗ್ರಾಮ :

ಮೂಲ ಸೌಕರ್ಯದಿಂದ ವಂಚಿತರಾಗಿದ್ದ ಈ ಗ್ರಾಮದ ಜನರು ತಮ್ಮ ಹಕ್ಕಿಗಾಗಿ ಹಲವು ಹೋರಾಟ ನಡೆಸಿದ್ದರು. ಆದರೆ, ಚುನಾವಣೆಯಲ್ಲಿ ಆಶ್ವಾಸನೆ ನೀಡಿ ಹೋಗುವ ಜನ ಪ್ರತಿನಿಧಿಗಳು ಬಳಿಕ ಇತ್ತ ಸುಳಿಯುತ್ತಿರಲಿಲ್ಲ. ಹೀಗಾಗಿ ಐದು ಗ್ರಾಮಗಳ ಜನರು ಈ ಬಾರಿ ಮತ ಕೇಳಲು ಬರಬೇಡಿ, ನಾವು ಮತದಾನ ಮಾಡೋದಿಲ್ಲ ಎಂದಿದ್ದರು.

ಚುನಾವಣೆ ಬಹಿಷ್ಕಾರ ಮಾಡಿದ್ದರೂ ಕಾನೂನು ರೀತಿಯಲ್ಲಿ ಗ್ರಾಮದಲ್ಲಿ ಮತಗಟ್ಟೆಯನ್ನು ತೆರೆಯಲಾಗಿತ್ತು. ಇಂಡಿಗನತ್ತ, ತೇಕಣೆ, ಮೆಂದಾರೆ ಈ ಗ್ರಾಮದಲ್ಲಿ ಯಾವೊಬ್ಬ ಗ್ರಾಮಸ್ಥರೂ ಮತದಾನ ಮಾಡಿಲ್ಲ. ಇನ್ನು ಪಡಸಲನತ್ತ ಗ್ರಾಮದಲ್ಲಿ 85 ಮತದಾರು ಇದ್ದು ಇಬ್ಬರು ಮತದಾನ ಮಾಡಿದ್ದಾಗಿ ಮಾಹಿತಿ ಲಭ್ಯವಾಗಿದೆ.

ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ತೆರೆಯುವುದಕ್ಕೆ ಗ್ರಾಮಸ್ಥರು ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದರು. ಆದಾಗ್ಯೂ, ಚುನಾವಣಾ ಆಯೋಗ ಇಲ್ಲಿ ಮತಗಟ್ಟೆ ತೆರೆದು ‘ಮತದಾನ ಮಾಡಲು ಬನ್ನಿ’ ಎಂದು ಜನರನ್ನು ಕರೆದಿದ್ದರು. ಆದ್ರೆ ರೊಚ್ಚಿಗೆದ್ದ ಜನರು ಮತದಾನ ಕೇಂದ್ರದ ಒಳಗೆ ನುಗ್ಗಿ ಇವಿಎಂ ಮೆಷಿನ್ ಸಹಿತ ಮೇಜು ಕುರ್ಚಿ ಎಲ್ಲವನ್ನೂ ಧ್ವಂಸ ಮಾಡಿದ್ದಾರೆ.

ಕನಿಷ್ಠ ಮೂಲಭೂತ ಸೌಕರ್ಯವಾದ ಕುಡಿಯುವ ನೀರು, ರಸ್ತೆ, ವಿದ್ಯುತ್, ಆರೋಗ್ಯ, ಶಿಕ್ಷಣ ಯಾವುದೂ ಇಲ್ಲದ ನಮ್ಮ ಗ್ರಾಮದ ಮತ ಯಾಕೆ ಬೇಕು? ಎಂದು ಜನ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ : ಸುಡುಬಿಸಿಲಿನಲ್ಲೂ ಮತದಾನ; ಇಹಲೋಕ ತ್ಯಜಿಸಿದ 6 ಮಂದಿ

ಪೊಲೀಸ್ ಲಾಠಿ ಚಾರ್ಜ್…ಕೆರಳಿದ ಗ್ರಾಮಸ್ಥರು!

ಜನರು ಮತಗಟ್ಟೆ ಧ್ವಂಸಕ್ಕೆ ಮುಂದಾಗುತ್ತಿದ್ದಂತೆ ಭದ್ರತೆಯಲ್ಲಿದ್ದ ಪೊಲೀಸರು ಲಾಠಿ ಚಾರ್ಚ್ ನಡೆಸಿದ್ದಾರೆ. ಈ ವೇಳೆ ಅಧಿಕಾರಿಗಳಿಗೆ ಹಾಗೂ ಪೊಲೀಸರಿಗೆ ಹಲ್ಲೆ ಮಾಡಿದ ಜನರು ಬಳಿಕ ಕಲ್ಲು ತೂರಾಟ ನಡೆಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸಾರ್ವಜನಿಕರು ಹಾಗೂ ಅಧಿಕಾರಿಗಳಿಗೆ ಗಾಯಗಳಾಗಿದೆ.

ಪೊಲೀಸರು ಮಹಿಳೆಯರು ಪುರುಷರು ಎಂದು ನೋಡದೆ ಎಲ್ಲರ ಮೇಲೂ ಲಾಠಿ ಚಾರ್ಚ್ ಮಾಡಿರುವುದು ಗ್ರಾಮಸ್ಥರನ್ನು ಕೆರಳಿಸಿದೆ. ಸದ್ಯಕ್ಕೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಮತದಾನ ಕೇಂದ್ರವನ್ನು ಬಂದ್ ಮಾಡಲಾಗಿದೆ.

Continue Reading

LATEST NEWS

Trending