Connect with us

    ಮಾನವೀಯತೆ ಮೆರೆಯಲು ಹೋಗಿ ಪೇಚಿಗೆ ಸಿಲುಕಿದ ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ.!

    Published

    on

    ಮಾನವೀಯತೆ ಮೆರೆಯಲು ಹೋಗಿ ಪೇಚಿಗೆ ಸಿಲುಕಿದ ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ.!

    ಮಂಗಳೂರು: ಮಾನವೀಯತೆಯ ಮೆರೆಯಲು ಹೋಗಿ ತಾಲೂಕು ಪಂಚಾಯತ್ ಅಧ್ಯಕ್ಷರೊಬ್ಬರು ಸಮಸ್ಯೆಯ ಸುಳಿಯಲ್ಲಿ ಸಿಲುಕಿದ್ದಾರೆ.

    ಹೌದು..ಇಂಥಹದ್ದೊಂದು ಘಟನೆ ಚಿಕ್ಕಮಗಳೂರಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ನಡೆದಿದೆ. ಚಿಕ್ಕಮಗಳೂರಿನಲ್ಲಿ ನೆಲೆಸಿರುವ ದಂಪತಿಗಳ 5 ವರ್ಷದ ಮಗುವೊಂದು ಲಾಕ್ ಡೌನ್ ಗಿಂತ ಮೊದಲು ಅಡ್ಯಾರ್ ನಲ್ಲಿರುವ ತನ್ನ ಸಂಬಂಧಿಕರ ಮನೆಗೆ ಬಂದಿತ್ತು.

    ಲಾಕ್ ಡೌನ್ ಆಗಿದ್ದರಿಂದ  ಮಗು ಕಳೆದ 21 ದಿನಗಳಿಂದ ತನ್ನ ಹೆತ್ತವರ ನೆನೆದು ಮಾನಸಿಕ ಸ್ಥಿತಿಯಲ್ಲಿತ್ತು.

    ಈ ಮದ್ಯೆ ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮಹಮ್ಮದ್ ಮೋನು ಅವರನ್ನು ಸಂಪರ್ಕಿಸಿದ ಕುಟುಂಬ ತನ್ನ ಮಗುವನ್ನು ಹೇಗಾದರೂ ಚಿಕ್ಕಮಗಳೂರು ಮುಟ್ಟಿಸಬೇಕೆಂದು ಗೋಗರೆಯುತ್ತಾ ಇದ್ದರು.

    ಆದರೆ ತಾಲೂಕು ಪಂಚಾಯತ್ ಅಧ್ಯಕ್ಷರು ಎಪ್ರಿಲ್ 14ಕ್ಕೆ ಲಾಕ್ ಡೌನ್ ಮುಗಿಯುತ್ತದೆ ಅಲ್ಲಿಯವರೆಗೆ ದಯವಿಟ್ಟು ಕಾಯಿರಿ ಎಂದು ಮನವೊಲಿಸಿದ್ದರು.

    ಆದರೆ ಎಪ್ರಿಲ್ 14ರ ನಂತರವೂ ಲಾಕ್ ಡೌನ್ ಮುಂದುವರಿದ ಹಿನ್ನಲೆಯಲ್ಲಿ ಪುನಃ ಅಧ್ಯಕ್ಷರನ್ನು ಸಂಪರ್ಕಿಸಿದ ಕುಟುಂಬ ದಯವಿಟ್ಟು ತಮ್ಮ ಮಗುವನ್ನು ಮುಟ್ಟಿಸುವಂತೆ ದಂಬಾಲು ಬಿದ್ದಿತ್ತು.

    ಹಾಗಾಗಿ ಹೆತ್ತವರ ರೋದನ ಮಗುವಿನ ಸ್ಥಿತಿಯನ್ನು ಕಂಡು ಕರಗಿದ ಅಧ್ಯಕ್ಷರು, ತನ್ನ ಸರಕಾರಿ ವಾಹನದಲ್ಲಿ ಮಗುವನ್ನು ಕರೆದುಕೊಂಡು, ತಮ್ಮಿಬ್ಬರ ಹಿತೈಷಿಗಳು ಹಾಗೂ ಡ್ರೈವರ್ ಜತೆಗೂಡಿ ಗಡಿ ತನಕ ಬಿಡಲು ಹೊರಟಿದ್ದರು.

    ಆ ಕಡೆಯಿಂದ ಬೇರೆ ವಾಹನ ಬಂದು ಮಗುವನ್ನು ಕರೆದುಕೊಂಡು ಹೋಗುವ ಬಗ್ಗೆ ಮಾತುಕತೆ ನಡೆದಿತ್ತು. ನಂತರ ಕಾರಣಾಂತರಗಳಿಂದ ಆ ಕಡೆಯಿಂದ ವಾಹನ ಬಾರದ ಹಿನ್ನೆಲೆಯಲ್ಲಿ ಇವರೇ ಮಗುವಿನೊಂದಿಗೆ ಬಣಕಲ್ ತನಕ ಹೋಗಿದ್ದಾರೆ.

    ಕೊಟ್ಟಿಗೆಹಾರ ಬಣಕಲ್ ಸಮೀಪದಲ್ಲಿ ವಾಹನವನ್ನು ತಡೆದ ಪೋಲೀಸರು ಚಿಕ್ಕಮಗಳೂರು ಪ್ರವೇಶಿಸದಂತೆ ತಡೆದು ಹಿಂದೆ ಕಳುಹಿಸಿದ್ದರು.

    ಈ ಮದ್ಯೆ ಬಣಕಲ್ ನಲ್ಲಿ ತಮ್ಮ ವಾಹನದಲ್ಲಿದ್ದ ಹಿತೈಷಿಯೊಬ್ಬರ ಮನೆಗೆ ತೆರಳಿ ರೇಷನ್ ಕಿಟ್ ಹಾಗೂ ಸ್ವಲ್ಪ ಹಣವನ್ನು ನೀಡಿ ಬಂದಿದ್ದರು.

    ಈ ಸಂದರ್ಭದಲ್ಲಿ ಯಾರೋ ಫೋಟೋ ತೆಗೆದು ಪೋಲೀಸರಿಗೆ ತಪ್ಪು ಮಾಹಿತಿ ನೀಡಿ ವಾಹನದಲ್ಲಿ 15 ಜನ ತುಂಬಿಕೊಂಡು ಹೋಗಿದ್ದಾರೆಂದು ನಂಬಿಸಿ ಠಾಣೆಯಲ್ಲಿ ಕೇಸು ದಾಖಲಿಸಿದ್ದರು.

    ಬಣಕಲ್ ಮನೆಗೆ ಜನರನ್ನು ಬಿಟ್ಟಿದ್ದಾರೆನ್ನಲಾದ ಮನೆಗೆ ಸ್ಥಳೀಯ ಪಂಚಾಯತ್ ಪ್ರತಿನಿಧಿಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಾಣಾಧಿಕಾರಿ,

    ಬಣಕಲ್ ಠಾಣಾಧಿಕಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸೇರಿ ಪರಿಶೀಲನೆ ನಡೆಸಿದಾಗ ಹೊರಗಿನಿಂದ ಬಂದ ಯಾವುದೇ ಜನ ಅಲ್ಲಿ ಕಂಡು ಬಂದಿರಲಿಲ್ಲ.

    ಈ ರಂಪಾಟದಿಂದ ಇದೀಗ ಅಧ್ಯಕ್ಷರ ವಾಹನ ಸೀಝಾಗಿದ್ದಲ್ಲದೇ, ಅಧ್ಯಕ್ಷ ಮೋನು ಹಾಗೂ ಚಾಲಕನ ಮೇಲೆ ಕೇಸು ದಾಖಲಾಗಿದ್ದು, ಮಾನವೀಯತೆಗೆ ಕರಗಿದ ಮನಸ್ಸಿಗೆ ಸಂಕಷ್ಟ ಎದುರಾಗಿದೆ.

    ವಿಡಿಯೋ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಹಳ್ಳ ಹಿಡಿದ ಸ್ಮಾರ್ಟ್‌ ಸಿಟಿಯ ಕಾಮಗಾರಿ; ಕುಂಟುತ್ತಾ ಸಾಗಿದ ಮಹಾಕಾಳಿ ಪಡ್ಪು ಅಂಡರ್ ಪಾಸ್

    Published

    on

    ಮಂಗಳೂರು: ಮಂಗಳೂರು ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ ಕೈಗೆತ್ತಿಕೊಂಡಿರುವ ಮಹಾಕಾಳಿ ಪಡ್ಪುವಿನ ರೈಲ್ವೇ ಅಂಡರ್‌ ಪಾಸ್‌ ಕಾಮಗಾರಿ ಸದ್ಯಕ್ಕಂತು ಮುಗಿಯುವ ಲಕ್ಷಣ ಕಾಣಿಸುತ್ತಿಲ್ಲ. ಈ ಕಾಮಗಾರಿ ಕೈಗೆತ್ತಿಕೊಂಡು ವರ್ಷಗಳೇ ಕಳೆದರೂ ಕಾಮಗಾರಿ ಮುಗಿಸಬೇಕು ಅನ್ನೋ ಇಚ್ಚೆ ಸ್ಮಾರ್ಟ್‌ ಸಿಟಿ ಯೋಜನೆಯವರಿಗೂ ಇದ್ದಂತಿಲ್ಲ.

    ಕೆಲ ತಿಂಗಳ ಹಿಂದೆ ಕಳಪೆ ಕಾಮಗಾರಿಯಿಂದಾಗಿ ಇಲ್ಲಿ ಕಾಮಗಾರಿ ಕುಸಿತ ಕೂಡಾ ಉಂಟಾಗಿತ್ತು. ಇದೀಗ ಕೆಲ ದಿನಗಳಿಂದ ಯಾವುದೇ ಕಾಮಗಾರಿ ನಡೆಸದೆ ಕಾರ್ಮಿಕರು ಕೂಡಾ ಕೆಲಸ ಇಲ್ಲದೆ ಸುಮ್ಮನೆ ಕುಳಿತಿರುವ ದೃಶ್ಯ ಇಲ್ಲಿ ಮಾಮೂಲಾಗಿದೆ. ಮಾರ್ಗನ್‌ ಗೇಟ್ ಮೂಲಕವಾಗಿ ಜೆಪ್ಪಿನ ಮೊಗೆರು ಹೈವೆ ಸಂಪರ್ಕಿಸುವ ಈ ರಸ್ತೆಯಲ್ಲಿ ನಿತ್ಯ ಸಾವಿರಾರು ವಾಹನಗಳು ಓಡಾಡುತ್ತಿದೆ. ಸದ್ಯ ಈ ಕಾಮಗಾರಿ ಆರಂಭವಾದ ಬಳಿಕ ಇಲ್ಲಿ ದ್ವಿಚಕ್ರ ವಾಹನಕ್ಕಷ್ಟೇ ಓಡಾಡಲು ವ್ಯವಸ್ಥೆ ಮಾಡಲಾಗಿದೆ.

    ಉಪ್ಪಳದಲ್ಲಿ 3.5 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್‌ ವಶ; ಓರ್ವ ಬಂಧನ

    ಹೀಗಾಗಿ ಈ ರಸ್ತೆಯ ಮೂಲಕ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಕಾಮಗಾರಿ ಯಾವಾಗ ಮುಗಿಸ್ತೀರಿ ಅಂತ ಪ್ರಶ್ನೆ ಮಾಡುತ್ತಿದ್ದಾರೆ. ಆದರೆ ಇಲ್ಲಿ ನಡಿಯುತ್ತಿರುವ ಕಾಮಗಾರಿಯ ವೇಗ ನೋಡಿದರೆ ಇದು 2024 ರಲ್ಲಿ ಪೂರ್ಣಗೊಳ್ಳುವ ಯಾವುದೇ ಲಕ್ಷಣ ಇಲ್ಲ ಅನ್ನೋದು ಸ್ಪಷ್ಟವಾಗುತ್ತಿದೆ. ಹೀಗಾಗಿ ತಕ್ಷಣ ಅಂಡರ್ ಪಾಸ್ ಕೆಲಸ ಮಗಿಸಿ ಅಂತ ಜನ ಒತ್ತಾಯಿಸಿದ್ದಾರೆ.

    Continue Reading

    LATEST NEWS

    11 ವರ್ಷದ ಬಾಲಕ ಹೃದಯಘಾ*ತಕ್ಕೆ ಬ*ಲಿ

    Published

    on

    ಹಾಸನ : ಹೃದಯಾಘಾ*ತ ಎಂಬುದು ಇತ್ತೀಚೆಗೆ ಸಾಮಾನ್ಯವಾಗಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದವರೂ ಹೃದಯಾ*ಘಾತಕ್ಕೆ ಒಳಗಾಗುತ್ತಿದ್ದಾರೆ. ರಾಜ್ಯದಲ್ಲಿ ಮತ್ತೊಂದು ಕಳವಳಕಾರಿ ಘಟನೆ ನಡೆದಿದ್ದು, 11 ವರ್ಷದ ಬಾಲಕ ಹೃದಯಾ*ಘಾತಕ್ಕೆ ಬ*ಲಿಯಾಗಿದ್ದಾನೆ. ಈ  ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಸಚಿನ್ ಮೃ*ತ ಬಾಲಕ.

    ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ಸಚಿನ್, ಮನೆಯಲ್ಲಿ ಟಿವಿ ನೋಡುತ್ತಿದ್ದ ವೇಳೆ ಹೃದಯಾ*ಘಾತವಾಗಿದೆ.

    ಇದನ್ನೂ ಓದಿ : ಮನೆಯಲ್ಲಿ ಹಲ್ಲಿ ಕಾಟವೇ? ಈ ಸಿಂಪಲ್​ ಮನೆಮದ್ದು ಟ್ರೈ ಮಾಡಿ

    ಟಿವಿ ನೋಡುತ್ತಲೇ ಕುಸಿ*ದು ಬಿದ್ದ ಮಗನನ್ನು ಮಾತನಾಡಿಸಲು ಮನೆಯವರು ಪ್ರಯತ್ನಿಸಿದ್ದು, ಏನು ಮಾತನಾಡದೆ ಇರೋದನ್ನು ಗಮನಿಸಿ ಪೋಷಕರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಆಲೂಕು ಸರ್ಕಾರಿ ಆಸ್ಪತ್ರೆಗೆ ಕರೆತರುವ ಮುನ್ನವೇ ಬಾಲಕ ಸಾ*ವನ್ನಪ್ಪಿದ್ದ ಎಂದು ವೈದ್ಯರು ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.

    Continue Reading

    FILM

    ಕನ್ನಡದ ಸೀರಿಯಲ್‌ನಲ್ಲಿ ಮಿಂಚುತ್ತಿರುವ ಉಡುಪಿಯ ಬೆಡಗಿ

    Published

    on

    ಬೆಂಗಳೂರು/ಮಂಗಳೂರು: ಸಿನೆಮಾದಲ್ಲಿ ನಟಿಸಬೇಕು ಅನ್ನೋದು ಎಲ್ಲರ ಕನಸು. ಆದರೆ ಇಲ್ಲೊಬ್ಬಾಕೆ ನಟಿಗೆ ಸೀರಿಯಲ್‌ನಲ್ಲಿ ನಟಿಸಬೇಕು ಎಂಬ ಆಸೆ. ಆದರೆ ಆಕೆಗೆ ಮಾತ್ರ ಮೊದಲು ಒಲಿದು  ಬಂದಿದ್ದು ಸಿನೆಮಾದಲ್ಲಿ ನಟಿಸುವ ಅವಕಾಶ. ಇದೀಗ ಆ ನಟಿ ಸುರ್ವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಅವನು ಮತ್ತು ಶ್ರಾವಣಿ’ ಧಾರವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೌದು, ಈ ಧಾರಾವಾಹಿಯಲ್ಲಿ ಶ್ರಾವಣಿಯಾಗಿ ಕಾಣಿಸಿಕೊಂಡಿರುವ ಇಶಿಕಾ ಶೆಟ್ಟಿಗಾರ್ ಮೂಲತಃ ಉಡುಪಿಯವರಾಗಿದ್ದಾರೆ.

    ಶ್ರಾವಣಿ ಪಾತ್ರದ ಇಶಿಕಾ ಶೆಟ್ಟಿಗಾರ್ ಮೂಲತಃ  ಉಡುಪಿಯವರಾಗಿದ್ದು ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಈಕೆ 9 ನೇ ತರಗತಿಯಲ್ಲಿದ್ದಅಗಲೇ ಸಿನೆಮಾ ನಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಊರ್ವಿ, ಗರುಡ, ಮನದ ಮರೆಯಲಿ ಸೇರಿದಂತೆ ನಾಳ್ಕೈದು ಸಿನೆಮಾಗಳಲ್ಲಿ ನಟಿಸಿದ್ದಾರೆ. ಬಳಿಕ ಕಾನೂನು ಪದವಿ ಮುಗಿಸಿರುವ ಇವರು ಸೀರಿಯಲ್‌ ನಲ್ಲಿ ಆಭಿನಯಿಸುವತ್ತ ಒಲವು ಮಾಡಿದ್ದಾರೆ. ಹೀಗಾಗಿ ಲುಕ್‌ ಟೆಸ್ಟ್ ಕೂಡಾ ಕೊಟ್ಟಿದ್ದಾರೆ.

    ಜಾನಿ ಮಾಸ್ಟರ್ ಪತ್ನಿಗೂ ಬಂತು ಕಂಟಕ..! ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್..!!

    ಇದೇ ವೇಳೆ ‘ಅವನು ಮತ್ತು ಶ್ರಾವಣಿ’ ಧಾರಾವಾಹಿಗೆ ರಿಪ್ಲೇಸ್‌ಮೆಂಟ್‌ ಪಾತ್ರಕ್ಕೆ ಕರೆ ಬರುತ್ತದೆ. ರಿಪ್ಲೇಸ್‌ಮೆಂಟ್‌ ಪಾತ್ರ ಆಗಿದ್ದರಿಂದ ಜನರಿಗೆ ಇಷ್ಟ ಆಗ್ಬೋದಾ ಅನ್ನುವ ಮೈಂಡ್‌ ಸೆಟ್ ನಲ್ಲಿ ಇವರು ಕೊನೆಗೂ ಪಾತ್ರಕ್ಕೆ ಸೈ ಎಂದು ಹೇಳಿದ್ದಾರೆ. ಇದೀಗ ಧಾರಾವಾಹಿ ಮೂಲಕ ಕನ್ನಡಿಗರ ಮನಗೆದ್ದಿದ್ದಾರೆ. ಈ ಧಾರಾವಾಹಿಯಲ್ಲಿ ನಟನೆ ಆರಂಭಿಸಿದ ಮೇಲೆ ಆಫರ್‌ಗಳು ಬರುತ್ತಿದೆ ಎಂದು ಇಶಿಕಾ ಶೆಟ್ಟಿಗಾರ್ ಹೇಳಿದ್ದಾರೆ.

    Continue Reading

    LATEST NEWS

    Trending