BANTWAL
ಬಂಟ್ವಾಳ: ಮಂಗಳೂರಿನಿಂದ ಪೊಳಲಿಗೆ ಕೆಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ ಚಾಲನೆ
ಬಂಟ್ವಾಳ: ಮಂಗಳೂರಿನಿಂದ ಪೊಳಲಿಯ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಕೆಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ ಶುಕ್ರವಾರ ಚಾಲನೆ ನೀಡಲಾಗಿದೆ.
ಪೊಳಲಿ ಕ್ಷೇತ್ರದ ವಠಾರದಲ್ಲಿ ಕೆಎಸ್ ಆರ್ ಟಿಸಿಗೆ ಪೂಜೆ ನೆರವೇರಿಸಿದ ಬಳಿಕ ಚಾಲನೆಗೊಂಡಿದೆ.ಶ್ರೀ ಪೊಳಲಿ ಕ್ಷೇತ್ರದಿಂದ ಬೆಂಜನಪದವು, ಕಲ್ಪನೆ ,ಕಡೇಗೋಳಿ, ಫರಂಗಿಪೇಟೆ, ಪಡೀಲಿನ ಮೂಲಕ ಮಂಗಳೂರಿಗೆ ಈ ಸರಕಾರಿ ಬಸ್ ನ ವ್ಯವಸ್ಥೆಯು ಇರಲಿದೆ.
ಇದರಿಂದಾಗಿ ಈ ಭಾಗದ ಜನರ ಬಹುಕಾಲದ ಕನಸು ನನಸಾಗಿದೆ.ಹಲವು ವರ್ಷದಿಂದ ಈ ರೂಟಿನಲ್ಲಿ ಮಂಗಳೂರಿನಿಂದ ಪೊಳಲಿಗೆ ಸರಕಾರಿ ಬಸ್ ನ ವ್ಯವಸ್ಥೆ ಕಲ್ಪಿಸುವಂತೆ ಇಲ್ಲಿನ ನಾಗರಿಕರು ಕೆಎಸ್ ಆರ್ ಟಿಸಿ ಹಾಗೂ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿತ್ತು.ಬ್ರಹ್ಮರಕೊಟ್ಲು ಯಕ್ಷಮಿತ್ರ ಸದಸ್ಯರು ಹಾಗೂ ಸ್ಥಳೀಯ ಮುಖಂಡರ ಮುತುವರ್ಜಿಯಿಂದ ನವರಾತ್ರಿಯ ಶುಭ ಸಂದರ್ಭದಲ್ಲಿಯೇ ಕೆಎಸ್ ಆರ್ ಟಿಸಿಬಸ್ ಬಸ್ ಆರಂಭಗೊಂಡಿದೆ. ನವರಾತ್ರಿಯ ಬಳಿಕವು ಈ ಬಸ್ ನ ವ್ಯವಸ್ಥೆ ಮುಂದುವರಿಯಲಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
BANTWAL
ಅಕ್ರಮ ಮರಳು ಅಡ್ಡೆಗೆ ದಾಳಿ; 20 ಬೋಟ್ ವಶಕ್ಕೆ
ಬಂಟ್ವಾಳ: ತುಂಬೆ, ಮಾರಿಪಳ್ಳ ಭಾಗದ ನೇತ್ರಾವತಿ ನದಿಯಲ್ಲಿ ದೋಣಿ ಮೂಲಕ ನಡೆಯುತ್ತಿದ್ದ ಅಕ್ರಮ ಮರಳು ಅಡ್ಡೆಗೆ ಶುಕ್ರವಾರ ದ.ಕ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಬಂಟ್ವಾಳ ಕಂದಾಯ ಇಲಾಖೆಯ ಅಧಿಕಾರಿಗಳ ತಂಡ ದ.ಕ ಜಿಲ್ಲಾಧಿಕಾಗಳ ಆದೇಶದಂತೆ 20 ಬೋಟ್ಗಳನ್ನು ವಶಪಡಿಸಿಕೊಂಡಿದ್ದರು. ಅಧಿಕಾರಿಗಳ ದಾಳಿಯ ವೇಳೆ ಮರಳುಗಾರಿಕೆ ನಡೆಸುತ್ತಿದ್ದ ಕಾರ್ಮಿಕರು ಪಲಾಯನಗೈದಿದ್ದಾರೆಂದು ವರದಿಯಾಗಿದೆ.
ದೋಣಿಗಳನ್ನು 4ರಂತೆ ಜೋಡಸಿಕೊಂಡು 5 ತಂಡಗಳ ಮೂಲಕ ನದಿಯಲ್ಲೇ ಮಂಗಳೂರಿನ ಅಡ್ಯಾರ್ವರೆಗೆ ಸಾಗಿಸಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ವಶಕ್ಕೆ ಒಪ್ಪಿಸಲಾಗಿದೆ. ಬೋಟ್ನಲ್ಲಿ ಯಾವುದೇ ರೀತಿಯ ಮರಳು ಪತ್ತೆಯಾಗಿಲ್ಲ. ಮರಳುಗಾರಿಕೆಲ್ಲಿ ತೊಡಗಿದ್ದವರು ಯಾರು, ಬೋಟ್ಗಳು ಯಾರಿಗೆ ಸಂಬಂಧಟ್ಟದ್ದು ಎಂಬುವುದರ ಕುರಿತು ಅಧಿಕಾರಿಗಳ ತನಿಖೆಯ ಬಳಿಕ ತಿಳಿದುಬರಬೇಕಷ್ಟೇ.
ಸಾಕಷ್ಟು ಸಮಯದಿಮದ ಕೇಳಿ ಬರುತ್ತಿದ್ದ ಆರೋಪ:
ದೋಣಿಗಳ ಸಹಾಯದಿಂದ ನದಿಯಲ್ಲಿ ಉತ್ತರ ಭಾರತದ ಕಾರ್ಮಿಕರನ್ನು ಬಳಸಿಕೊಂಡು ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಎಂಬ ಅರೋಪ ಸಾಕಷ್ಟು ಸಮಯದಿಂದ ಕೇಳಿ ಬರುತ್ತಿದ್ದವು. ಈ ಹಿನನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ದಾಳಿ ನಡೆಸಿ ಆಕ್ರಮವನ್ನು ಮಟ್ಟ ಹಾಕುವಂತೆ ಗಣಿ ಇಲಾಖೆಗೆ ಆದೇಶವನ್ನು ನೀಡಿದ್ದರು.
ಗಣಿ ಇಲಾಖೆಯ ಉಪನಿರ್ದೇಶಕಿ ಕೃಷ್ಣವೇಣಿ, ಬಂಟ್ವಾಳ ತಹಶೀಲ್ದಾರ್ ಅರ್ಚನಾ ಡಿ. ಭಟ್, ಮಂಗಳೂರು ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಹಿರಿಯ ಭೂ ವಿಜ್ಞಾನಿ ಗಿರಿಶ್ ಮೋಹನ್, ಭೂ ವಿಜ್ಞಾನಿ ಮಹಾದೇಶ್ವರ, ಬಂಟ್ವಾಳ ಕಂದಾಯ ನಿರೀಕ್ಷಕ ಜನಾರ್ಧನ್ ಜೆ., ಗ್ರಾಮಕರಣಿಕರು, ಕಂದಾಯ ಇಲಾಖೆ ಸಿಬ್ಬಂದಿ ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
BANTWAL
ಸಜಿಪದಲ್ಲಿ ರಸ್ತೆ ಅಪಘಾತ: ಯುವಕ ಮೃ*ತ್ಯು
ಬಂಟ್ವಾಳ: ಮೆಲ್ಕಾರ್ – ಮುಡಿಪು ರಾಜ್ಯ ಹೆದ್ದಾರಿಯ ಸಜಿಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ದ್ವಿಚಕ್ರ ವಾಹನ ಸವಾರ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃ*ತಪಟ್ಟಿದ್ದಾರೆ.
ಬರಿಮಾರು ನಿವಾಸಿ ಸರ್ಫ್ರಾಝ್ ( 33) ಮೃ*ತಪಟ್ಟ ಯುವಕ. ಬೈಕ್ ಸವರಳಾಗಿದ್ದ ಸಹೋದರಿ ಜಾಸ್ಮೀನ್ (18) ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸರ್ಫ್ರಾಝ್ ವಿದ್ಯಾರ್ಥಿನಿಯಾಗಿರುವ ತಂಗಿ ಜಾಸ್ಮೀನ್ ರನ್ನು ಬುಧವಾರ ಬೆಳಗ್ಗೆ ದೇರಳಕಟ್ಟೆಯ ಕಾಲೇಜಿಗೆ ಸ್ಕೂಟರ್ ನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಮೆಲ್ಕಾರ್ ನಿಂದ ಮುಡಿಪು ಮಾರ್ಗವಾಗಿ ಮಾರ್ನಬೈಲು ತಲುಪಿದಾಗ ಇವರ ಸ್ಕೂಟರ್ ಗೆ ಎದುರಿನಿಂದ ಇಮ್ತಿಯಾಝ್ ಎಂಬಾತ ಚಲಾಯಿಸಿಕೊಂಡು ಬಂದ ಬೈಕ್ ಢಿಕ್ಕಿ ಹೊಡೆದಿತ್ತು. ಇದರಿಂದ ಸ್ಕೂಟರ್ ನಲ್ಲಿದ್ದ ರಸ್ತೆಗೆ ಎಸೆಯಲ್ಪಟ್ಟಿದ್ದರು.
ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಸರ್ಫ್ರಾಝ್ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BANTWAL
ಬಸ್ಸಿನಿಂದ ಪರಿಸರ ಮಾಲಿನ್ಯ; ಸಾರ್ವಜನಿಕರ ಆಕ್ರೋಶ
ಬಂಟ್ವಾಳ: ಮಂಗಳೂರು ವಿಭಾಗಕ್ಕೆ ಸೇರಿದ ಕೆಎಸ್ಆರ್ಟಿಸಿ ಬಸ್ಸೊಂದು ಮಂಗಳೂರು – ಧರ್ಮಸ್ಥಳ ಸಂಚರಿಸುವ ವೇಳೆಯಲ್ಲಿ ಜೀವಕ್ಕೆ ಹಾಗೂ ಪರಿಸರಕ್ಕೆ ಹಾನಿಕಾರಕವಾದ ಕಪ್ಪು ಹೊಗೆಯನ್ನು ಹೊರ ಹಾಕುತ್ತಿದ್ದು ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಕೆ.ಎಸ್.ಆರ್.ಟಿ.ಸಿ ಸಂಸ್ಥೆಯು ಸರಿಯಾದ ನಿರ್ವಹಣೆ ಇಲ್ಲದ ಬಸ್ಸುಗಳನ್ನು ರಸ್ತೆಯಲ್ಲಿ ಓಡಿಸುತ್ತಿದ್ದು, ಇದರಿಂದ ಜನರಿಗೆ ಆಗುತ್ತಿರುವ ತೊಂದರೆಗಳನ್ನು ಶೀಘ್ರವೇ ನಿವಾರಿಸಬೇಕೆಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.
ಕಪ್ಪು ಹೋಗೆ ಹೊರ ಸೂಸುವ ಬಸ್ಸಿನ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ಸರ್ಕಾರದ ವಿರುದ್ಧ ಕಿಡಿ ಕಾರುತ್ತಿದ್ದಾರೆ.
- BIG BOSS5 days ago
BBK11 ವೇದಿಕೆಗೆ ಬರುತ್ತಿದ್ದಂತೆ ರೀಲ್ಸ್ ಸ್ಟಾರ್ ಮೇಲೆ ಕೋಪಗೊಂಡ ಕಿಚ್ಚ: ಇಂತವರನ್ನ ಏಕೆ ಕರೆಸಿದ್ರಿ ಎಂದು ಗರಂ?
- BIG BOSS5 days ago
ಭ್ರಷ್ಟರ ವಿರುದ್ಧ ಗುಡುಗಿದ ಸ್ಪರ್ಧಿ ಲಾಯರ್ ಜಗದೀಶ್ಗೆ ಕಿಚ್ಚ ವಾರ್ನಿಂಗ್..!
- LATEST NEWS4 days ago
Watch Video: ಕೋಚಿಂಗ್ ಸೆಂಟರ್ನಲ್ಲಿ ವಿದ್ಯಾರ್ಥಿನಿಯೊಂದಿಗೆ ಬಯಾಲಜಿ ಶಿಕ್ಷಕನ ರೊಮ್ಯಾನ್ಸ್
- BIG BOSS5 days ago
ಚೈತ್ರಾ ಕುಂದಾಪುರಗೆ ಮೊದಲ ದಿನವೇ ಹೊಸ ಬಿರುದು ಕೊಟ್ಟ ಲಾಯರ್ ಜಗದೀಶ್