MANGALORE
“ಮಂಗಳೂರು ಯೂನಿವರ್ಸಟಿ ಕೆರಿಯರ್ ಸೆಂಟರ್” ಆಪ್ ಶುಭಾರಂಭ
ಮಂಗಳೂರು: “ನ್ಯೂಮರೋ ಉನೋ ಪಾರ್ಟ್ ನರ್ಸ್” ಸಹಯೋಗದೊಂದಿಗೆ ಮಂಗಳೂರು ಯೂನಿವರ್ಸಿಟಿ ಕೆರಿಯರ್ ಸೆಂಟರ್ ಅಪ್ಲಿಕೇಶನ್ ಅನ್ನು ಇಂದು ಸಂಜೆ ನಗರದ ಖಾಸಗಿ ಹೋಟೆಲ್ ನಲ್ಲಿ ಶುಭಾರಂಭಗೊಳಿಸಲಾಯಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಪ್ರಾಸ್ತಾವಿಕ ಮಾತನ್ನಾಡಿದ ನ್ಯೂಮರೋ ಉನೋ ಸಂಸ್ಥೆಯ ಎಂ.ಡಿ. ಶಿವ್ ಬಸವ್ ಅವರು, “ಕೆರಿಯರ್ ಸೆಂಟರ್ ಒಂದು ಸ್ಪೆಷಲಿಸ್ಟ್ ಡಿಜಿಟಲ್ ಪ್ಲಾಟ್ಫಾರ್ಮ್ ಆಗಿದ್ದು ಇದು ವಿದ್ಯಾರ್ಥಿಗಳ ಪ್ರೊಫೈಲ್ ಬಿಲ್ಡಿಂಗ್ ಮೂಲಕ ಅವರಿಗೆ ಶಿಕ್ಷಣದ ಬಳಿಕ ಪ್ಲೇಸ್ಮೆಂಟ್ಗಳನ್ನು ಸುಗಮಗೊಳಿಸುತ್ತದೆ.
ಮಂಗಳೂರು ವಿಶ್ವವಿದ್ಯಾನಿಲಯ ಕೆರಿಯರ್ ಸೆಂಟರ್ (MUCC) ಒಂದು ಸಮಗ್ರ ಕ್ಲೌಡ್ ಆಧಾರಿತ ಅಪ್ಲಿಕೇಶನ್ ಪ್ಲಾಟ್ಫಾರ್ಮ್ ಆಗಿದ್ದು ಇದು ವಿಶ್ವವಿದ್ಯಾಲಯ, ಕಾಲೇಜುಗಳು, ವಿದ್ಯಾರ್ಥಿಗಳು, ಕಾರ್ಪೊರೇಟ್ ಕಂಪೆನಿಗಳು, ಕೋರ್ಸ್ ಪೂರೈಕೆದಾರರು, ಪ್ರಮಾಣಪತ್ರ ಏಜೆನ್ಸಿಗಳನ್ನು ಸಂಪರ್ಕಿಸುವ ವ್ಯವಸ್ಥೆಯನ್ನು ಕಲ್ಪಿಸುತ್ತದೆ. ಈ ಮೂಲಕ ಉದ್ಯೋಗ ಪ್ಲೇಸ್ ಮೆಂಟ್ ಗಳನ್ನು ಪಡೆಯಲು ಸಹಕಾರಿಯಾಗಿದೆ” ಎಂದರು.
ಬಳಿಕ ಮಾತಾಡಿದ ಮಂಗಳೂರು ವಿಶ್ವವಿದ್ಯಾಲಯ ಉಪಕುಲಪತಿ ಡಾ.ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಅವರು, “ವಿದ್ಯಾರ್ಥಿಗಳು ಮೌಲ್ಯಯುತವಾಗಿ ಶಿಕ್ಷಣ ಪಡೆದಾಗ ಯಶಸ್ಸು ಪ್ರಾಪ್ತಿಯಾಗುತ್ತದೆ. ಇದಕ್ಕಾಗಿ ನ್ಯೂಮರೋ ಉನೋ ಜೊತೆಗೆ ಕೆರಿಯರ್ ಸೆಂಟರ್ ಅಪ್ಲಿಕೇಶನ್ ಅನ್ನು ಆರಂಭಿಸಲಾಗಿದೆ.
ವಿದ್ಯಾರ್ಥಿಗಳು ಈ ಅಪ್ಲಿಕೇಶನ್ ಮೂಲಕ ತಮ್ಮ ಕೆರಿಯರ್ ಅನ್ನು ವೃದ್ಧಿಸಿ ತಮ್ಮ ಮುಂದಿನ ದಾರಿಯನ್ನು ಸುಗಮಗೊಳಿಸಿ ಜೀವನದಲ್ಲಿ ಯಶಸ್ಸು ಕಾಣಬಹುದು. ಕೆರಿಯರ್ ಸೆಂಟರ್ ಅಪ್ಲಿಕೇಶನ್ ಬಳಸುವಂತೆ ವಿಶ್ವವಿದ್ಯಾಲಯ ಅಧೀನದಲ್ಲಿರುವ ಎಲ್ಲಾ ಕಾಲೇಜುಗಳಿಗೆ ಈಗಾಗಲೇ ತಿಳಿಸಲಾಗಿದೆ. ಕಡ್ಡಾಯವಾಗಿ ಇದನ್ನು ಬಳಸಲೇಬೇಕು ಎಂದು ಹೇಳುತ್ತಿಲ್ಲ. ವಿದ್ಯಾರ್ಥಿಗಳಿಗೆ ಅನುಕೂಲವಾದಲ್ಲಿ ಇಂತಹ ಅಪ್ಲಿಕೇಶನ್ ಸಹಾಯ ಪಡೆದುಕೊಳ್ಳಿ” ಎಂದರು.
ಸಂಸ್ಥೆಯ ರಾಜೀವ್ ಮೆನನ್ ಮಾತನಾಡಿ, “ಡಿಗ್ರಿ ಪಡೆಯುವುದರಿಂದ ಮಾತ್ರ ಉದ್ಯೋಗ ಪಡೆಯಲಾಗುವುದಿಲ್ಲ. ವಿದ್ಯಾರ್ಥಿಗಳು ಅವರ ಬೌದ್ಧಿಕ ಸಾಮರ್ಥ್ಯ ಹಾಗೂ ಸ್ಕಿಲ್ ಅನ್ನು ಕೌಶಲ್ಯವನ್ನು ವೃದ್ಧಿಸುವುದು ಅತ್ಯವಶ್ಯವಾಗಿದೆ.
ತಮ್ಮ ಪ್ರೊಫೈಲ್ ಅನ್ನು ವೃದ್ಧಿಸಿ ಕಾಲೇಜ್ ಶಿಕ್ಷಣ ಪಡೆಯುವ ಅವಧಿಯಲ್ಲಿ ಹತ್ತಾರು ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮನ್ನು ತಾವು ಅಪ್ ಡೇಟ್ ಆಗಿಟ್ಟುಕೊಳ್ಳಬಹುದು. ಇಂಟರ್ನ್ ಶಿಪ್ ಮೂಲಕ ವಿವಿಧ ಕಂಪೆನಿಗಳು ವಿದ್ಯಾರ್ಥಿಗಳ ಸಾಮರ್ಥ್ಯವನ್ನು ಅರಿತು ನೇರವಾಗಿ ಸಂದರ್ಶನ ನಡೆಸಿ ಉದ್ಯೋಗ ಕಲ್ಪಿಸಲು ಸಾಧ್ಯವಾಗುತ್ತದೆ. ಕೆರಿಯರ್ ಸೆಂಟರ್ ಅಪ್ಲಿಕೇಶನ್ ಇಂತಹ ಹಲವಾರು ಅವಕಾಶಗಳನ್ನು ಸುಲಭವಾಗಿ ವಿದ್ಯಾರ್ಥಿಗಳಿಗೆ ಒದಗಿಸುತ್ತದೆ ಎಂದರು.
ಬಳಿಕ ವಿವಿಧ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು ಹಾಗೂ ಶಿಕ್ಷಕರ ಜೊತೆಗೆ ಸಂವಾದ ನಡೆಯಿತು.
ವೇದಿಕೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಪಿ. ಸುಬ್ರಮಣ್ಯ ಯಡಪಡಿತ್ತಾಯ, ನ್ಯೂಮರೋ ಉನೋ ಎಂ.ಡಿ. ಶಿವ್ ಬಸವ್, ಪ್ರೊ. ಜಯಶಂಕರ್, ಪ್ರೊ. ಮಂಜುನಾಥ್ ಪಟ್ಟಾಭಿ, ರಾಜೀವ್ ಮೆನನ್, ಉಪಸ್ಥಿತರಿದ್ದರು.
DAKSHINA KANNADA
ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ
ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.
ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.
DAKSHINA KANNADA
ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ
ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.
ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.
DAKSHINA KANNADA
ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ
ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಮಂಗಳೂರಿನಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಮಂಗಳೂರಿನ ಕಪಿತಾನಿಯೋ ಶಾಲೆಯ ಮತಗಟ್ಟೆಗೆ ತನ್ನ ಪತ್ನಿ ಹಾಗೂ ಮಗಳ ಜೊತೆ ಆಗಮಿಸಿ ಮತ ಚಲಾಯಿಸಿದ್ದಾರೆ.
ಮುಂಜಾನೆ ಏಳುಗಂಟೆಗೆ ಮತಗಟ್ಟೆಗೆ ಆಗಮಿಸಿದ ಪದ್ಮರಾಜ್ ಅವರು ಬರುವ ವೇಳೆಗೆ ಜನರು ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದರು. ಹೀಗಾಗಿ ಪದ್ಮರಾಜ್ ಹಾಗೂ ಅವರ ಪತ್ನಿ ಮತ್ತು ಮಗಳು ಸರತಿ ಸಾಲಿನಲ್ಲಿ ನಿಂತೇ ಮತ ಚಲಾಯಿಸಿದ್ದಾರೆ. ಪದ್ಮರಾಜ್ ಆಗಮಿಸುವ ವೇಳೆ ಅವರ ಸಾಕಷ್ಟು ಅಭಿಮಾನಿಗಳು ಮತಗಟ್ಟೆಯ ಹೊರಗೆ ನಿಂತು ಅವರಿಗೆ ಶುಭ ಕೋರಿದ್ದಾರೆ.
ಮತದಾನ ಮಾಡಿದ ಪದ್ಮರಾಜ್ ಬಳಿಕ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆ ವೀಕ್ಷಣೆಗೆ ತೆರಳಿದ್ದಾರೆ.
- FILM5 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM5 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM6 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru5 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!