Connect with us

DAKSHINA KANNADA

ಮಂಗಳೂರು ವಿವಿ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಚೆಲ್ಲಾಟವಾಡುತ್ತಿದೆ-ABVP

Published

on

ಉಳ್ಳಾಲ: ಮಂಗಳೂರು ವಿಶ್ವವಿದ್ಯಾಲಯದ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡದೆ ಸತಾಯಿಸುತ್ತಿರುವುದು, ಅಂಕಪಟ್ಟಿ ಬಾರದೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಹಾಕಲು ಅವಕಾಶ ಸಿಗದಿರುವುದು, ಮೌಲ್ಯಮಾಪನವನ್ನು ಸೂಕ್ತ ಸಮಯದಲ್ಲಿ ನಡೆಸದಿರುವುದು, ಎಲ್ಲ ಸಮಸ್ಯೆಗಳು ಒಂದು ಕಡೆಯಾದರೆ ಎನ್‌ಇಪಿ ಜಾರಿಯಾದ ನಂತರ ಮೊದಲನೇ ವರ್ಷಕ್ಕೆ ಸೇರ್ಪಡೆಯಾದ ವಿದ್ಯಾರ್ಥಿಗಳು ಪ್ರಸ್ತುತ ದ್ವಿತೀಯ ವರ್ಷದಲ್ಲಿ ಇದ್ದರೂ ಸಹ ಪ್ರಥಮ ಹಾಗೂ ದ್ವಿತೀಯ ಸೆಮಿಸ್ಟರ್ ನ ಮೌಲ್ಯಮಾಪನವನ್ನು ನಡೆಸಿ ಫಲಿತಾಂಶವನ್ನು ಈವರೆಗೂ ನೀಡದೆ ಚೆಲ್ಲಾಟವಾಡುತ್ತಿದೆ. ಎಲ್ಲ ಸಮಸ್ಯೆಗಳಿಗೆ ಮಂಗಳೂರು ವಿವಿಯ ಕುಲಪತಿ ಹಾಗೂ ಪರೀಕ್ಷಾಂಗ ಕುಲಸಚಿವರು ಕಾರಣ ಎಂದು ಎಬಿವಿಪಿ ಮಂಗಳೂರು ವಿಭಾಗ ಸಂಚಾಲಕ ಹರ್ಷಿತ್ ಕೊಯ್ಲ ,ಮಾತನಾಡಿ ಎಂದರು.

ಮಂಗಳೂರು ವಿ.ವಿ ವ್ಯಾಪ್ತಿಯ ಪದವಿ ಫಲಿತಾಂಶ ವಿಳಂಬ ಖಂಡಿಸಿ ಕೊಣಾಜೆ ಮಂಗಳೂರು ವಿ.ವಿ ಆಡಳಿತ ಕಚೇರಿಗೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿರುವ ಘಟನೆ ಇಂದು ನಡೆದಿದೆ. ಈ ನಡುವೆ ಆಡಳಿತ ಕಚೇರಿಯಲ್ಲಿ ನಡೆಯುತ್ತಿದ್ದ ಸಿಂಡಿಕೇಟ್ ಸಭೆಗೆ ಎಬಿವಿಪಿ ಕಾರ್ಯಕರ್ತರು ನುಗ್ಗಲು ಯತ್ನಿಸಿದಾಗ ಪೊಲೀಸರು ತಡೆಹಿಡಿದಿದ್ದಾರೆ.


ಎಲ್ಲ ಸಮಸ್ಯೆಗಳಿಗೆ ಕುಲಸಚಿವರೇ ಕಾರಣ ಎಂಬ ಆರೋಪಕ್ಕೆ ಭಾವುಕರಾದ ಪರೀಕ್ಷಾಂಗ ಕುಲಸಚಿವ ಪ್ರೊ. ಪಿ.ಎಲ್. ಧರ್ಮ ಅವರು ಮಾತನಾಡಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಾ ಫಲಿತಾಂಶ ವಿಳಂಬಕ್ಕೆ ಪರೀಕ್ಷಾಂಗ ಕುಲಸಚಿವರ ರಾಜೀನಾಮೆ ಆಗ್ರಹಿಸುತ್ತಿದ್ದು ಆ ಕಾರಣದಿಂದ ನನ್ನಿಂದ ಸಮಸ್ಯೆ ಆಗಿದ್ದು ಪರಿಹಾರ ದೊರಕುವುದಾದರೆ ನಾನು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಲು ರಾಜೀನಾಮೆ ಪತ್ರ ಬರೆದು ಸಿದ್ಧನಾಗಿಯೇ ಬಂದಿದ್ದೇನೆ ಎಂದರು.


ವಿದ್ಯಾರ್ಥಿಗಳು ವಾಸ್ತವ ಅರ್ಥಮಾಡಿಕೊಂಡಿಲ್ಲ. ಒಂದು ದಿವಸ ಸಿಎಲ್ ಹಾಕದೆ ನನ್ನ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಯುಸಿಎಂಎಸ್ ನದ್ದೇ ನಮಗೆ ಸಮಸ್ಯೆ ಆಗಿರುವುದು.

ಸರ್ವರ್ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಸರಕಾರದ ವಿರುದ್ಧ ನಾನು ಮಾತನಾಡುತ್ತಿಲ್ಲ, ವ್ಯವಸ್ಥೆ ವಿರುದ್ಧ ಮಾತನಾಡುತ್ತಿದ್ದೇನೆ. ವಿವಿ ವಿದ್ಯಾರ್ಥಿಗಳಿಗೆ ಸಹಾಯವೇ ಮಾಡಿದೆ.ಜನವರಿ 25ರ ಒಳಗಡೆ ಫಲಿತಾಂಶ ಪ್ರಕಟಣೆಗೆ ಎಲ್ಲ ವ್ಯವಸ್ಥೆ ಮಾಡುತ್ತೇವೆ ಎಂಬ ಭರವಸೆ ನೀಡಬಲ್ಲೆ ಎಂದರು.

ಪರೀಕ್ಷಾಂಗ ಕುಲಸಚಿವರ ಭರವಸೆಯ ಮೇರೆಗೆ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ. ಎಬಿವಿಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಚಿನ್ ಕುಲಗೇರಿ,ತಾಲೂಕು ಸಂಚಾಲಕ ಆದರ್ಶ್ ಉಪ್ಪಾರ ,ಜಿಲ್ಲಾ ಸಂಚಾಲಕ ಶ್ರೇಯಸ್ ಶೆಟ್ಟಿ ಮೊದಲಾದವರು ಪ್ರತಿಭಟನೆಯಲ್ಲಿದ್ದರು

Click to comment

Leave a Reply

Your email address will not be published. Required fields are marked *

DAKSHINA KANNADA

ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನ ಗಣಪತಿ ವಿಗ್ರಹದ ವಿಸರ್ಜನೆ

Published

on

ಮಂಗಳೂರು: ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನಲ್ಲಿ 3ದಿನಗಳ ಕಾಲ ನಡೆದ 17ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಗುರುವಾರ ರಾತ್ರಿ ಸಂಪನ್ನಗೊಂಡಿತು.

ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಸಹಯೋಗದಲ್ಲಿ ದಕ್ಷಿಣ ಕನ್ನಡ, ಉಡುಪಿ ಕಾಸರಗೋಡು ಜಿಲ್ಲೆಗಳ ಬಂಟರ ಸಂಘಗಳ ಸಹಯೋಗದಲ್ಲಿ ನಡೆದ ಈ ಉತ್ಸವದ ಕೊನೆಗೆ ಶ್ರೀ ಸಿದ್ದಿವಿನಾಯಕ ದೇವರಿಗೆ ಮಹಾಪೂಜೆ ನೆರವೇರಿಸಲಾಯಿತು.

ಬಳಿಕ ಕಡೆಂಜ ಅಶೋಕ್ ಕುಮಾರ್ ಚೌಟ ಶೋಭಾಯಾತ್ರೆಯನ್ನು ಉದ್ಘಾಟಿಸಿದರು. ಚೆಂಡೆ ವಾದ್ಯ ಮೇಳ ಮತ್ತು ಭಜನಾ ಸೇವೆಗಳ ಜೊತೆಗೆ ಸಾಗಿ ಬಂದ ಶೋಭಾಯಾತ್ರೆಯು ಬಂಟ್ಸ್ ಹಾಸ್ಟೆಲ್ ನ ಹಿಂಭಾಗವಾಗಿ ಹೊರಟು ಪಿವಿಸ್ ಸರ್ಕಲ್, ನವಭಾರತ ಸರ್ಕಲ್, ಡೊಂಗರಕೇರಿ, ನ್ಯೂ ಚಿತ್ರ ಆಗಿ ಕಾರ್ ಸ್ಟ್ರೀಟ್ ಗೆ ಸಾಗಿ ಕುಡ್ತೇರಿ ಮಹಮ್ಮಾಯಿ ದೇವಸ್ಥಾನದ ಕೆರೆಗೆ ಬಂದು ಗಣಪತಿ ಮೂರ್ತಿಯ ವಿಗ್ರಹದ ವಿಸರ್ಜನೆ ಮಾಡಲಾಯಿತು.

3ಜಿಲ್ಲೆಗಳಿಂದ ಆಗಮಿಸಿದ ಬಂಟರ ಮತ್ತು ಊರ – ಪರವೂರ ಭಕ್ತರು ವೈಭವದ ಶೋಭಾಯಾತ್ರೆಯಲ್ಲಿ ಪಾಲ್ಗೊಂಡರು .

Continue Reading

DAKSHINA KANNADA

ಹಿಂದೂ ನಾಯಕರ ಫೇಸ್ಬುಕ್‌ ಅಕೌಂಟ್‌ ಹ್ಯಾಕ್‌- ಶ್ರೀಕಾಂತ್‌ ಶೆಟ್ಟಿ ಆರೋಪ..!

Published

on

ಹಿಂದೂ ಜಾಗರಣ ವೇದಿಕೆಯ ಕರ್ನಾಟಕದ ಕೆಲವು ನಾಯಕರ ಫೇಸ್ಬುಕ್‌ ಖಾತೆಗಳನ್ನು ನಿಷ್ಕ್ರೀಯಗೊಳಿಸಿದಕ್ಕೆ ಹಿಂದೂ ಜಾಗರಣ  ವೇದಿಕೆ ಮುಖಂಡ ಶ್ರೀಕಾಂತ್‌ ಶೆಟ್ಟಿ ಆರೋಪಿಸಿದ್ದಾರೆ. 

ಉಡುಪಿ: ಹಿಂದೂ ಜಾಗರಣ ವೇದಿಕೆಯ ಕರ್ನಾಟಕದ ಕೆಲವು ನಾಯಕರ ಫೇಸ್ಬುಕ್‌ ಖಾತೆಗಳನ್ನು ನಿಷ್ಕ್ರೀಯಗೊಳಿಸಲಾಗಿದೆ.

ಆದರೆ ಇದನ್ನು ಸ್ವತಃ ಫೇಸ್ಬುಕ್‌ ಸಂಸ್ಥೆಯೇ ನಿಷ್ಕ್ರೀಯಗೊಳಿಸಿದೆಯೋ ಅಥವಾ ಯಾರದ್ದೋ ದೂರಿನ ಆಧಾರದಲ್ಲಿ ನಿಷ್ಕ್ರೀಯಗೊಳಿಸಲಾಗಿದೆಯೋ ಎನ್ನುವುದು ತಿಳಿದು ಬಂದಿಲ್ಲ.

ಆದರೆ ಇದು ಹಿಂದೂ ವಿಚಾರಧಾರೆಯ ಪ್ರಚಾರ ಮತ್ತು ಹೋರಾಟ ನಡೆಸುತ್ತಿರುವವರ ಮೇಲೆ ನಡೆದ ವ್ಯವಸ್ಥಿತ ಸೈಬರ್  ದಾಳಿಯಾಗಿದೆ ಎಂದು ವೇದಿಕೆ ಮುಖಂಡ ಶ್ರೀಕಾಂತ್‌ ಶೆಟ್ಟಿ ಆರೋಪಿಸಿದ್ದಾರೆ.

ಸ್ವತಃ ಶ್ರೀಕಾಂತ್‌ ಶೆಟ್ಟಿ ಸಂಘಟನೆಯ ಇತರ ಪ್ರಚಾರಕರಾದ ಪ್ರವೀಣ್‌ ಯಕ್ಷಮಠ, ಕೆ ಟಿ ಉಲ್ಲಾಸ್‌, ಸುಕೃತ್‌ ಭಾರದ್ವಾಜ್‌, ಅರವಿಂದ ಕೋಟೇಶ್ವರ ಮೊದಲಾದ 20ಕ್ಕೂ ಹೆಚ್ಚು ಮಂದಿಯ ಫೇಸ್ಬುಕ್‌ ಪೇಜ್‌ಗಳನ್ನು ಡಿಲಿಟ್ ಮಾಡಲಾಗಿದೆ.

ನಾವು ಯಾರೂ ಸಾಮಾಜಿಕ ಸಾಮರಸ್ಯವನ್ನು ಕೆಡಿಸಿಲ್ಲ. ಗಲಭೆ ಸೃಷ್ಟಿಸಿಲ್ಲ. ಕೇವಲ ಹಿಂದೂಪರ ಹೋರಾಟ ಮಾಡುತ್ತಿರುವವರು.

ಆದ್ದರಿಂದ ಹಿಂದೂ ಚಳುವಳಿಯಲ್ಲಿ ಭಾಗವಹಿಸುತ್ತಿರುವವರನ್ನು ಹತ್ತಿಕ್ಕುವ ಹುನ್ನಾರ ಇದು ಎನ್ನುವುದು ಸಾಬೀತಾಗಿದೆ ಎಂದವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಾಡಲಾಗಿರುವ ಕೆಲಸ ಇದು.

2014ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಹಿಂದೂವಾದಿ ಸಂಗಟನೆಳು ಮೋದಿ ಪರವಾಗಿ ಯಶಸ್ವಿ ಕೆಲಸ ಮಾಡಿದ್ದೆವು.

2024ರ ಚುನಾವಣೆಯಲ್ಲಿ ಮತ್ತೇ ಅದಾಗಬಾರದು ಎನ್ನುವ ಪೂರ್ವ ತಯಾರಿ ಇದಾಗಿದೆ ಎಂದವರು ಹೇಳಿದ್ದಾರೆ.

ಆದರೆ ಆರ್‌ಎಸ್‌ಎಸ್‌ನ ಭಾಗವಾಗಿರುವ ಹಿಂದು ಜಾಗರಣ ವೇದಿಕೆ ಸಾಮಾಜಿಕ ಜಾಲತಾಣಗಳನ್ನು ನಂಬಿಕೊಂಡಿರುವ ಫೇಸ್ಬುಕ್‌ ಉಳಿಯಲ್ಲ.

ಆನ್ ಗ್ರೌಂಡ್‌ ಜನರ ಮಧ್ಯೆ ಕೆಲಸ ಮಾಡವ ವೇದಿಕೆ.

ಈ ಫೇಸ್ಬುಕ್‌ ಖಾತೆಗಳ ನಿಷ್ಕ್ರೀಯ ಕೃತ್ಯವನ್ನು ಸವಾಲಾಗಿ ಸ್ವೀಕರಿಸಿ ಕೆಲಸ ಮಾಡುತ್ತದೆ ಎಂದು ಎಚ್ಚರಿಸಿದ್ದಾರೆ.

Continue Reading

DAKSHINA KANNADA

Mangaluru: ಅಯ್ಯೋ… ಸಂಚಾರಿ ಪೊಲೀಸರ ಕಷ್ಟಕ್ಕೆ ಸ್ಪಂದಿಸುವವರು ಯಾರು..?

Published

on

 ಮಂಗಳೂರು ನಗರದಲ್ಲಿ ಹೊಂಡಗುಂಡಿಗಳನ್ನು ಸರಿಪಡಿಸುವ ಗತಿ ಇಲ್ಲದ ಕಾರಣ, ಇದೀಗ ಸಂಚಾರಿ ಪೊಲೀಸರೇ ಹಾರೆ ಕೈಯಲ್ಲಿ ಹಿಡಿದುಕೊಂಡು ಬಿರುಬಿಸಿಲಿಗೆ ಹೊಂಡಗುಂಡಿಗಳನ್ನು ತುಂಬಿಸುತ್ತಿದ್ದಾರೆ.

ಮಂಗಳೂರು: ಮಂಗಳೂರು ನಗರದಲ್ಲಿ ಹೊಂಡಗುಂಡಿಗಳನ್ನು ಸರಿಪಡಿಸುವ ಗತಿ ಇಲ್ಲದ ಕಾರಣ, ಇದೀಗ ಸಂಚಾರಿ ಪೊಲೀಸರೇ ಹಾರೆ ಕೈಯಲ್ಲಿ ಹಿಡಿದುಕೊಂಡು ಬಿರುಬಿಸಿಲಿಗೆ ಹೊಂಡಗುಂಡಿಗಳನ್ನು ತುಂಬಿಸುತ್ತಿದ್ದಾರೆ.

ಮಂಗಳೂರು ದಕ್ಷಿಣ ವಿಭಾಗದ ಸಂಚಾರಿ ಠಾಣೆಯ ಸಭ್ ಇನ್ಸ್ ಪೆಕ್ಟರ್ ಈಶ್ವರ ಸ್ವಾಮಿ , ಎಎಸ್‌ಐ ವಿಶ್ವನಾಥ ರೈ ಅವರು  ಹಾರೆ, ಗುದ್ದಲಿ ಹಿಡಿದು ಈ ದುರಸ್ತಿ ಕಾರ್ಯವನ್ನು ಮಾಡಿದ್ದಾರೆ.

ಸದ್ಯ ಸಾಮಾಜಿಕ ಜಾಲತಾಣದಲ್ಲೂ ಈ ವಿಡಿಯೋ ವೈರಲ್‌ ಆಗುತ್ತಿದೆ.

ಮಂಗಳೂರಿನ ಬಹುತೇಕ ರಸ್ತೆಗಳಲ್ಲಿ ಈಗ ಹೊಂಡಗಳೇ ಇವೆ. ಅದರಲ್ಲೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇದ್ದರೂ ಆಟಕ್ಕುಂಟು…ಲೆಕ್ಕಕ್ಕಿಲ್ಲ ಎಂಬಂತಾಗಿದೆ.

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹೊಂಡಗುಂಡಿಗಳೂ ಇವೆ. ಆದರೆ ಇದನ್ನು ಸರಿಪಡಿಸಬೇಕಾದ ಹೆದ್ದಾರಿ ಇಲಾಖೆ ಅದಕ್ಕೆ ಮುಂದಾಗುತ್ತಿಲ್ಲ.

ಅದಕ್ಕೆ ಹೆದ್ದಾರಿಯ ಗುಂಡಿಗಳನ್ನು ಕೂಡಾ ಸಂಚಾರಿ ಪೊಲೀಸರೇ ಹಾರೆ ಹಿಡಿದು ತುಂಬಿಸುವ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ.

ಹೇಳಿ…ಕೇಳಿ ನಗರದ ನಂತೂರು ವೃತ್ತ ಸಾವಿನ ಸರಮಾಲೆಗೆ ಕಾರಣವಾಗಿರುವ ಜಂಕ್ಷನ್‌. ಇಲ್ಲಿ ಅಪಘಾತಗಳಿಗೆ ಕಡಿವಾಣ ಹಾಕಲು ಸಂಚಾರಿ ಪೊಲೀಸರು ಹಲವು ಮಾರ್ಪಾಟುಗಳನ್ನು ಮಾಡಿದ್ದಾರೆ.

ಸದ್ಯ ಇತ್ತೀಚೆಗೆ ಸಾವಿನ ಸಂಖ್ಯೆ ಇಳಿಮುಖವಾಗಿದೆ. ಇಲ್ಲಿನ ಹೆದ್ದಾರಿಗಳ ಹೊಂಡ ತುಂಬಿ, ಸಾವಿಗೆ ನ್ಯಾಯ ಕೊಡಿ ಎಂದು ಸಾಮಾಜಿಕ ಕಾರ್ಯಕರ್ತರು ಕೈಯಲ್ಲಿ ಪ್ಲೇಕಾರ್ಡ್‌ ಹಿಡಿದು ಪ್ರತಿಭಟನೆಯನ್ನೂ ನಡೆಸಿದ್ದರು.

ಇದೀಗ ನಂತೂರಿನ ಹೊಂಡಗುಂಡಿಗಳನ್ನು ಸಂಚಾರಿ ಪೊಲೀಸರೇ ತುಂಬಿಸುತ್ತಿರುವುದು ಪಾಪ ಅನ್ನಿಸಿದರೂ ಅವರ ಕಾರ್ಯಕ್ಕೆ ವಾಹನ ಸವಾರರು, ಜನತೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಬಿರುಬಿಸಿಲಿಗೂ ಅವರು ಸಿಮೆಂಟ್‌, ಜಲ್ಲಿಕಲ್ಲು ಮಿಕ್ಸರ್ ಹಾಕಿ ರಸ್ತೆ ಸರಿಪಡಿಸುತ್ತಿರುವುದು ನೋಡಿದರೆ ಅಯ್ಯೋ ಅನ್ನಿಸುತ್ತಿದೆ.

ಇನ್ನೊಂದೆಡೆ ರಸ್ತೆ ಬ್ಲಾಕ್‌ ಆಗಿ ಜನ ಹಿಡಿಶಾಪ ಹಾಕುತ್ತಿದ್ದಾರೆ.

 

Continue Reading

LATEST NEWS

Trending