ಕರಾವಳಿ ಕುಕ್ಕುಟೋದ್ಯಮಕ್ಕೆ ಕೊರೊನಾ ಎಫೆಕ್ಟ್: ಪಾತಾಳಕ್ಕಿಳಿದ ಕೋಳಿ-ಮೊಟ್ಟೆ ಬೆಲೆ
ಕೋಳಿ ಸಾಕಾಣಿಕೆಗೆ ಕೊರೊನಾ ಪೆಟ್ಟು: ಮಂಗಳೂರಿನಲ್ಲಿ ಕುಸಿದ ಧಾರಣೆ ಬೆಲೆ
ಮಂಗಳೂರು: ಕೋಳಿ ಮಾಂಸ ಸೇವನೆಯಿಂದ ‘ಕೋವಿಡ್-19’ (ಕೊರೊನಾ) ಸೋಂಕು ತಗುಲುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಡಿದ ವದಂತಿಯಿಂದಾಗಿ ಕರಾವಳಿ ಭಾಗದಲ್ಲಿ ಕುಕ್ಕುಟೋದ್ಯಮಕ್ಕೆ ದೊಡ್ಡ ಪೆಟ್ಟು ಬಿದ್ದಿದೆ.
ಕೋಳಿ ಮಾಂಸಕ್ಕೆ ಬೇಡಿಕೆ ಕುಸಿದಿರುವುದರಿಂದ ಬೆಲೆಯಲ್ಲೂ ದಾಖಲೆಯ ಇಳಿಕೆ ಕಂಡಿದ್ದು, ಉದ್ಯಮಕ್ಕೆ ಕೋಟ್ಯಂತರ ರೂಪಾಯಿ ನಷ್ಟ ಉಂಟಾಗಿದೆ.
ಮೂರು ವಾರಗಳಿಂದ ಕೋಳಿ ಮಾಂಸದ ಬೆಲೆಯು ಇಳಿಮುಖವಾಗಿದ್ದು, ಮೂರ್ನಾಲ್ಕು ದಿನಗಳಿಂದ 1 ಕೆ.ಜಿ ಮಾಂಸವು 100ರ ಆಸುಪಾಸಿನಲ್ಲಿ ಧಾರಣೆಯಾಗುತ್ತಿದೆ.
ಧಾರಣೆ ಕುಸಿತವಾದರೂ ಮಾಂಸಕ್ಕೆ ಬೇಡಿಕೆ ಹೆಚ್ಚಳವಾಗದಿರುವುದು ಕುಕ್ಕುಟೋದ್ಯಮಿಗಳನ್ನು ಚಿಂತೆಗೀಡು ಮಾಡಿದೆ.
“20 ದಿನಗಳಿಂದ ಕರಾವಳಿಯಲ್ಲಿ ಕುಕ್ಕುಟೋದ್ಯಮ ಅಕ್ಷರಶಃ ನಲುಗಿದೆ. ಉದ್ಯಮಕ್ಕೆ ಕೋಟಿ ಕೋಟಿ ನಷ್ಟವಾಗಿದೆ. ಇಷ್ಟು ದಿನ ಕಳೆದರೂ ಉದ್ಯಮ ಚೇತರಿಸುವ ಲಕ್ಷಣ ಕಾಣಿಸುತ್ತಿಲ್ಲ. ಇದೇ ಪರಿಸ್ಥಿತಿ ಒಂದೆರಡು ತಿಂಗಳು ಮುಂದುವರಿದರೆ ಕರಾವಳಿಯಲ್ಲಿ ಉದ್ಯಮವೇ ನಿರ್ನಾಮವಾದರೂ ಅಚ್ಚರಿಯಿಲ್ಲ” ಎಂದು ಆತಂಕ ವ್ಯಕ್ತಪಡಿಸುತ್ತಾರೆ ಚಿಕನ್ ಮಾಲೀಕರೊಬ್ಬರು.
“ಸಾಮಾಜಿಕ ಜಾಲತಾಣದಲ್ಲಿ ವದಂತಿ ಹಬ್ಬಿದಾಗ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕಿತ್ತು. ಇಲ್ಲಿಯವರೆಗೆ ಸರ್ಕಾರದಿಂದ ಸರಿಯಾದ ಸ್ಪಂದನೆ ಸಿಕ್ಕಿಲ್ಲ. ಕುಕ್ಕುಟೋದ್ಯಮ ಅಳಿದರೆ ಅದರ ನೇರ ಪರಿಣಾಮ ಕೃಷಿಯ ಮೇಲೆ ಬೀಳುತ್ತದೆ ಎಂಬುದನ್ನು ಸರ್ಕಾರ ಮರೆಯಬಾರದು.
ಕುಕ್ಕುಟೋದ್ಯಮ ತತ್ತರವಾಗಿರುವುದರ ಪರಿಣಾಮವಾಗಿ ಇಂದು ಜೋಳದ ಬೆಲೆಯೂ ಇಳಿಕೆಯಾಗಿದೆ. ಇದೇ ರೀತಿ ಒಂದೊಂದೇ ಕೃಷಿ ಉತ್ಪನ್ನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಸರ್ಕಾರ ಇನ್ನಾದರೂ ಎಚ್ಚೆತ್ತುಕೊಂಡು ಕುಕ್ಕುಟೋದ್ಯಮದ ನೆರವಿಗೆ ಬರಲಿ” ಎಂದವರು ಮನವಿ ಮಾಡಿದ್ದಾರೆ.
“ಪ್ರಕೃತಿದತ್ತವಾಗಿ ಸಿಗುವ ಮತ್ಸೋತ್ಸಮಕ್ಕೆ ಸರ್ಕಾರದಿಂದ ತೆರಿಗೆ ವಿನಾಯಿತಿ, ಸಹಾಯಧನ ಲಭ್ಯವಿದೆ. ಅದೇ ಕುಕ್ಕುಟೋದ್ಯಮಕ್ಕೆ ಸರ್ಕಾರದಿಂದ ಒಂದೇ ಒಂದು ರೂಪಾಯಿ ಸಹಾಯಧನ ಸಿಗುತ್ತಿಲ್ಲ.
ಮಾತ್ರವಲ್ಲ, ಪ್ರತಿಯೊಂದಕ್ಕೂ ತೆರಿಗೆಯ ಮೇಲೆ ತೆರಿಗೆಯನ್ನು ವಸೂಲು ಮಾಡಲಾಗುತ್ತಿದೆ. ಸರ್ಕಾರ ಈಗಲೂ ನಮ್ಮ ಕೈಹಿಡಿಯದಿದ್ದರೆ ಹಂತ ಹಂತವಾಗಿ ಕೋಳಿ ಸಾಕಣೆ ಘಟಕಗಳನ್ನು ಮುಚ್ಚುವುದು ಅನಿವಾರ್ಯವಾಗುತ್ತದೆ” ಎಂದು ಕೋಳಿ ಅಂಗಡಿ ಮಾಲೀಕ ಆತಂಕ ವ್ಯಕ್ತಪಡಿಸಿದ್ದಾರೆ.
“ಸಾಮಾಜಿಕ ಜಾಲತಾಣಗಳ ಮೇಲೆ ಸರ್ಕಾರ ನಿಗಾ ಇಡಬೇಕು. ವದಂತಿಗಳನ್ನು ಹರಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಯಾರೋ ಮಾಡಿದ ತಪ್ಪಿನಿಂದಾಗಿ ಇಡೀ ಕುಕ್ಕುಟೋದ್ಯಮವು ಅಳಿವು– ಉಳಿವಿನ ಅಂಚಿನಲ್ಲಿದೆ.
ಕರಾವಳಿಯಲ್ಲಿ ಸಾವಿರಾರು ಕುಟುಂಬಗಳು ಇದೇ ಉದ್ಯಮವನ್ನು ನಂಬಿಕೊಂಡು ಬದುಕುತ್ತಿವೆ. ಈ ಉದ್ಯಮದ ನೆರವಿಗೆ ಸರ್ಕಾರ ತಕ್ಷಣ ಬರಬೇಕು ಎಂದು ಮತ್ತೋರ್ವ ಕೋಳಿ ಸಾಕಾಣೆಗಾರರೊಬ್ಬರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ತಿಂಗಳ ಹಿಂದೆ ಕೋಳಿ ಮೊಟ್ಟೆಯೊಂದಕ್ಕೆ ರೂ.5 ರಿಂದ ರೂ5.30ರಲ್ಲಿ ಧಾರಣೆಯಾಗುತ್ತಿತ್ತು.
ಕೊರೊನಾ ವದಂತಿಯೂ ಕೋಳಿ ಮೊಟ್ಟೆ ಧಾರಣೆ ಮೇಲೂ ಪರಿಣಾಮ ಬೀರಿದೆ.
ಹೀಗಾಗಿ, ಮೊಟ್ಟೆಯ ಬೇಡಿಕೆ ಗಣನೀಯವಾಗಿ ಕಡಿಮೆಯಾಗಿರುವುದರಿಂದ, ಇದೀಗ ಬೆಲೆ ರೂ. 4ರಿಂದ ರೂ. 4.50ರ ಆಸುಪಾಸಿನಲ್ಲಿ ಧಾರಣೆಯಾಗುತ್ತಿದೆ.
“ಸದ್ಯ ಕೋಳಿ ಮಾಂಸ ಸೇವನೆಯಿಂದ ‘ಕೋವಿಡ್-19’ ಸೋಂಕು ಹರಡುವುದಿಲ್ಲ. ವದಂತಿಯನ್ನು ಯಾರೂ ನಂಬಬೇಡಿ. ಈ ಬಗ್ಗೆ ಆರೋಗ್ಯ ಇಲಾಖೆಯಿಂದ ಸಾಕಷ್ಟು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ” ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣ ರಾವ್ ಜಿಲ್ಲೆಯ ಜನತೆಗೆ ತಿಳಿಸಿದ್ದಾರೆ.
BELTHANGADY
ಬೆಳ್ತಂಗಡಿ : ನೇಣು ಬಿಗಿದು ದಂಪತಿ ಆತ್ಮ*ಹತ್ಯೆ
ಬೆಳ್ತಂಗಡಿ : ದಂಪತಿ ನೇ*ಣು ಬಿಗಿದು ಆತ್ಮ*ಹತ್ಯೆ ಮಾಡಿಕೊಂಡಿರುವ ಘಟನೆ ಕಾಶಿಪಟ್ನ ಗ್ರಾಮದ ಉರ್ದು ಗುಡ್ಡೆಯಲ್ಲಿ ನಡೆದಿದೆ. ಉರ್ದುಗುಡ್ಡೆ ನಿವಾಸಿಗಳಾದ ನೋಣಯ್ಯ ಪೂಜಾರಿ (63) ಹಾಗೂ ಬೇಬಿ (46) ಆತ್ಮ*ಹತ್ಯೆ ಮಾಡಿಕೊಂಡವರು.
ಮನೆ ಸಮೀಪ ಇರುವ ಕಾಡಿನಲ್ಲಿ ದಂಪತಿ ನೇ*ಣಿಗೆ ಶರಣಾಗಿದ್ದಾರೆ. ಕಳೆದ 5 ವರ್ಷಗಳಿಂದ ನೋಣಯ್ಯ ಪೂಜಾರಿ ತಲೆ ನೋವಿನಿಂದ ಬಳಲುತ್ತಿದ್ದು, ಬೇಬಿ ಅವರಿಗೆ ಮಕ್ಕಳಿಲ್ಲದ ಕೊರಗು ಇತ್ತು ಎಂದು ತಿಳಿದು ಬಂದಿದೆ.
ನೋಣಯ್ಯ ಪೂಜಾರಿಯವರಿಗೆ ಇದು ಎರಡನೇ ವಿವಾಹವಾಗಿದ್ದು , ಮೊದಲ ಪತ್ನಿ 10 ವರ್ಷದ ಹಿಂದೆಯೇ ಸಾವನ್ನಪ್ಪಿದ್ದು, ಮೊದಲ ಪತ್ನಿಗೆ 5 ಜನ ಗಂಡು ಮಕ್ಕಳು ಇದ್ದರು ಎಂದು ತಿಳಿದುಬಂದಿದೆ. ಆತ್ಮ*ಹತ್ಯೆ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
ತಿರುಪತಿ ಲಡ್ಡಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ; ಗುಣಮಟ್ಟ ಪರೀಕ್ಷೆಗೆ ಸಮಿತಿ ರಚನೆ
ಮಂಗಳೂರು/ಆಂಧ್ರ : ದೇಶ – ವಿದೇಶದ ಭಕ್ತರನ್ನು ಹೊಂದಿರುವ ದೇಶದ ಪ್ರಸಿದ್ಧ ದೇವಸ್ಥಾನ ತಿರುಪತಿಯಲ್ಲಿ ಪ್ರಸಾದ ರೂಪವಾಗಿ ನೀಡುವ ಲಡ್ಡು ಅಪವಿತ್ರವಾಗಿರುವ ವಿಚಾರ ಬೆಳಕಿಗೆ ಬಂದಿದೆ. ಆಂಧ್ರದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಆರೋಪದ ಬಳಿಕ ಲ್ಯಾಬ್ ಪರೀಕ್ಷೆಯಲ್ಲಿ ಲಡ್ಡು ಅಪವಿತ್ರವಾಗಿರುವುದು ಸಾಬೀತಾಗಿದೆ. ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಇದೀಗ ತುಪ್ಪದ ಗುಣಮಣ್ಣ ಪರೀಕ್ಷೆಗೆ ಸಮಿತಿಯನ್ನು ರಚಿಸಲಾಗಿದೆ.
ಡಾ.ಸುರೇಂದ್ರನಾಥ್, ಡಾ.ವಿಜಯ್ ಭಾಸ್ಕರ್ ರೆಡ್ಡಿ, ಡಾ.ಸ್ವರ್ಣಲತಾ ಮತ್ತು ಡಾ.ಮಹದೇವನ್ ಅವರನ್ನೊಳಗೊಂಡ ನಾಲ್ಕು ತಜ್ಞರ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿ ಒಂದು ವಾರದ ಒಳಗಾಗಿ ವರದಿ ನೀಡಲಿದೆ ಎಂದು ಟಿಟಿಡಿ ಕಾರ್ಯನಿರ್ವಹಣಾಧಿಕಾರಿ ಜೆ. ಶ್ಯಾಮಲಾ ರಾವ್ ಮಾಹಿತಿ ನೀಡಿದ್ದಾರೆ. ತುಪ್ಪ ಸರಬರಾಜು ಮಾಡಲು ಟೆಂಡರ್ ಪಡೆದವರು ಕಳಪೆ ತುಪ್ಪ ಪೂರೈಕೆ ಮಾಡಿದ್ರೆ, ಕಠಿಣ ಕ್ರಮ ಜರುಗಿಸುವ ಎಚ್ಚರಿಕೆಯನ್ನೂ ನೀಡಲಾಗಿದೆ. ಕಲಬೆರಕೆಯ ಪರೀಕ್ಷಾ ಸಾಧನಗಳಿಲ್ಲದ ಕಾರಣ ಈ ಪ್ರಮಾದ ಉಂಟಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಉದ್ಯಮಿ ಮನೆ ದರೋಡೆ ಪ್ರಕರಣ; ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಸೇರಿ ಮೂವರ ಬಂಧನ
ತಿರುಪತಿಯ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಹಾಗೂ ಮೀನಿನ ಎಣ್ಣೆಯ ಬಳಕೆ ಬಗ್ಗೆ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇದು ಹಿಂದೂಗಳ ಧಾರ್ಮಿಕ ಭಾವನೆಗೆ ದಕ್ಕೆ ಉಂಟು ಮಾಡಿದ ಪ್ರಕರಣವಾಗಿದ್ದು, ಅಸಂಖ್ಯಾತ ಹಿಂದೂಗಳಿಗೆ ಇದರಿಂದ ನೋವು ಉಂಟಾಗಿದೆ. ಹೀಗಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ಇದರಲ್ಲಿ ಭಾಗಿಯಾಗಿರುವ ಆಂಧ್ರ ಪ್ರದೇಶದ ಹಿಂದಿನ ವೈಎಸ್.ಆರ್ ಸರಕಾರದ ಎಲ್ಲರನ್ನೂ ತನಿಖೆಗೆ ಒಳಪಡಿಸಬೇಕು ಎಂದು ವಿಶ್ವಹಿಂದೂ ಪರಿಷತ್ ಆಗ್ರಹಿಸಿದೆ.
DAKSHINA KANNADA
ಉದ್ಯಮಿ ಮನೆ ದರೋಡೆ ಪ್ರಕರಣ; ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಸೇರಿ ಮೂವರ ಬಂಧನ
ಮಂಗಳೂರು : ಉದ್ಯಮಿ ಐಕಳ ಹರೀಶ್ ಶೆಟ್ಟಿ ಅವರ ಮನೆ ದರೋಡೆ ಪ್ರಕರಣದಲ್ಲಿ ಭಾಗಿಯಾಗಿ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಸೇರಿ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಿದ್ದಕಟ್ಟೆ ನಿವಾಸಿ ಹುಸೈನಬ್ಬ ಯಾನೆ ಸುಹೈಲ್ , ಕೊಲ್ನಾಡು ನಿವಾಸಿ ಝುಬೈರ್ ಹಾಗೂ ಕಾಸರಗೋಡು ನಿವಾಸಿ ಕಲಾಮ್ ಬಂಧಿತರು. ಈ ಪೈಕಿ ಸುಹೈಲ್ ಹಾಗೂ ಝುಬೈರ್ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದ್ದು, ಕಲಾಮ್ ಆರೋಪಿಗಳು ತಲೆ ಮರೆಸಿಕೊಳ್ಳಲು ನಕಲಿ ಪಾಸ್ ಪೋರ್ಟ್ ಮಾಡಿಸಿಕೊಟ್ಟ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಬಂಧಿತರಿಂದ ನಕಲಿ ಪಾಸ್ ಪೋರ್ಟ್, ಮೊಬೈಲ್ ಫೋನ್, ಪಿಸ್ತೂಲು, ಸಜೀವ ಮದ್ದುಗುಂಡುಗಳು, ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು 2023ರಲ್ಲಿ ಉದ್ಯಮಿ ಹರೀಶ್ ಶೆಟ್ಟಿ ಐಕಳ ಅವರ ಮನೆ ದರೋಡೆ ಪ್ರಕರಣದಲ್ಲಿ ಭಾಗಿಯಾಗಿ ಕಾಸರಗೋಡು ನಿವಾಸಿ ಕಲಾಮ್ನ ಸಹಕಾರದಲ್ಲಿ ನಕಲಿ ಪಾಸ್ ಪೋರ್ಟ್ ಮಾಡಿಸಿಕೊಂಡು ವಿದೇಶಕ್ಕೆ ತೆರಳಿ ಅಲ್ಲಿ ತಲೆ ಮರೆಸಿಕೊಂಡಿದ್ದರು. ಇತ್ತೀಚೆಗೆ ಊರಿಗೆ ಬಂದಿದ್ದ ಆರೋಪಿಗಳು ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ನಾಡು ಕೋರ್ದಬ್ಬು ದೈವಸ್ಥಾನ ಬಳಿ ಮುಲ್ಕಿ ಸುಂದರರಾಮ ಶೆಟ್ಟಿ ಸಭಾಭವನದ ಬಳಿ ಇರುವುದನ್ನು ಖಚಿತ ಪಡಿಸಿಕೊಂಡ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಇದನ್ನೂ ಓದಿ : ಕಿನ್ನಿಗೋಳಿ : ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಅಧಿಕಾರಿಗಳು
ಈಗಾಗಲೇ ಮುಲ್ಕಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬುಧವಾರ ಸಿಸಿಬಿ ಪೊಲೀಸರು ಮತ್ತಿಬ್ಬರನ್ನು ಬಂದಿಸಿದ್ದು, ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 5ಕ್ಕೇರಿದೆ.