Connect with us

DAKSHINA KANNADA

Mangaluru: 24ನೇ ವರ್ಷದ ‘ನಮ್ಮ ಕುಡ್ಲ’ ಗೂಡು ದೀಪ ಸ್ಪರ್ಧೆ

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೊತ್ತಮೊದಲ ತುಳು ವಾರ್ತಾ ವಾಹಿನಿ ‘ನಮ್ಮ ಕುಡ್ಲ’ 25ನೇ ವರ್ಷದ ಸಂಭ್ರಮದಲ್ಲಿದ್ದು, ವಾಹಿನಿ ವತಿಯಿಂದ ಪ್ರತೀ ವರ್ಷ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಆಯೋಜಿಸಲಾಗುವ ‘ನಮ್ಮ ಕುಡ್ಲ ಗೂಡುದೀಪ ಸ್ಪರ್ಧೆ’  ನ.11ರ ಶನಿವಾರ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆವರಣದಲ್ಲಿ ನಡೆಯಿತು.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಉಪಾಧ್ಯಕ್ಷರಾದ ಊರ್ಮಿಳಾ ರಮೇಶ್‌ ಕುಮಾರ್‌ ದೀಪ ಬೆಳಗಿಸಿದರು.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್‌ ಗೂಡು ದೀಪವನ್ನು ಏರಿಸುವ ಮೂಲಕ ಸ್ಪರ್ಧೆಗೆ ಚಾಲನೆ ನೀಡಿದರು.

ಈ ಸಂದರ್ಭ ಕೃಷ್ಣ ಜೆ. ಪಾಲೆಮಾರ್ ಅವರು ಮಾತನಾಡಿ ಹಿಂದಿನ ಕಾಲದಲ್ಲಿ ದೀಪಾವಳಿ ಸಂದರ್ಭದಲ್ಲಿ ಮನೆ ಮನೆಗಳಲ್ಲಿ ಗೂಡು ದೀಪಗಳು ರಾರಾಜಿಸುತ್ತಿದ್ದವು. ಕ್ರಮೇಣ ಈ ಸಂಸ್ಕೃತಿ ನಶಿಸಲು ಆರಂಭಿಸಿತ್ತು. ಇದನ್ನು ಮನಗಂಡು ನಮ್ಮ ಕುಡ್ಲ ವಾಹಿನಿಯು ಗೂಡು ದೀಪ ಸ್ಪರ್ಧೆಯನ್ನು ಏರ್ಪಡಿಸುವ ಮೂಲಕ ಈ ಸಂಸ್ಕೃತಿ ಯನ್ನು ಉಳಿಸಿಕೊಂಡು ಬರಲು ಯುವ ಜನತೆಗೆ ಸ್ಪೂರ್ತಿ ನೀಡುತ್ತಿದೆ.      ಕಳೆದ 24 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಈ ಸ್ಪರ್ಧೆ ಮುಂದುವರಿಯಲಿ ಎಂದು ಶುಭ ಹಾರೈಸಿದರು.ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು, ಶಾಸಕ ಡಿ. ವೇದವ್ಯಾಸ ಕಾಮತ್ ಮತ್ತು ಮಾಜಿ ಸಚಿವರಾದ ವಿನಯ ಕುಮಾರ್‌ ಸೊರಕೆ ಅವರು ಮಾತನಾಡಿ ಗೂಡು ದೀಪ ಸ್ಪರ್ಧೆಯನ್ನು ಏರ್ಪಡಿಸಿ ಈ ಸಂಸ್ಕೃತಿಯನ್ನು ಉಳಿಸಿ ಮುಂದುವರಿಸಲು ಸಹಕಾರ ನೀಡುತ್ತಿರುವ ನಮ್ಮ ಕುಡ್ಲ ವಾಹಿನಿಯ ಕರ್ಕೇರ ಸಹೋದರರಿಗೆ ಅಭಿನಂದನೆ ಸಲ್ಲಿಸಿದರು.

ಜತೆಗೆ ಎಲ್ಲರಿಗೂ ದೀಪಾವಳಿಯ ಶುಭಾಶಯ ಸಲ್ಲಿಸಿದರು. ವೇದಿಕೆಯಲ್ಲಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷ ಎಚ್‌.ಎಸ್. ಸಾಯಿರಾಂ, ಕೋಶಾಧಿಕಾರಿ ಪದ್ಮರಾಜ್‌ ಆರ್‌., ಟ್ರಸ್ಟಿಗಳಾದ ರವಿ ಶಂಕರ ಮಿಜಾರ್‌ ಮತ್ತು ಹರಿಕೃಷ್ಣ ಬಂಟ್ವಾಳ್‌ , ಸದಸ್ಯಡಾ. ಬಿ. ಜಿ. ಸುವರ್ಣ,ಶೇಖರ್ ಪೂಜಾರಿ, ಉದ್ಯಮಿ ಗೌರವಿ ಅವರು ಉಪಸ್ಥಿತರಿದ್ದರು. ನಮ್ಮಕುಡ್ಲ ವಾಹಿನಿಯ ನಿರ್ದೇಶಕರಾದ ಹರೀಶ್ ಕರ್ಕೇರ , ಲೀಲಾಕ್ಷ ಬಿ. ಕರ್ಕೇರ, ಸುರೇಶ್ ಬಿ. ಕರ್ಕೇರ, ಮೋಹನ್ ಬಿ. ಕರ್ಕೇರ ಅವರು ಉಪಸ್ಥಿತರಿದ್ದರು. ಭಾಸ್ಕರ ರೈ ಕುಕ್ಕುವಳ್ಳಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಕದ್ರಿ ನವನೀತ್‌ ಶೆಟ್ಟಿ ಸ್ಪರ್ಧೆಯ ನಿಯಮ ವಿವರಿಸಿದರು. ಪ್ರೊ. ಎಂ.ಎಸ್. ಕೋಟ್ಯಾನ್‌ ವಂದಿಸಿದರು.

ಇದು 24 ನೇ ವರ್ಷದ ನಮ್ಮ ಕುಡ್ಲ ಗೂಡುದೀಪ ಸ್ಪರ್ಧೆಯಾಗಿದ್ದು, ಸಾಂಪ್ರದಾಯಿಕ, ಆಧುನಿಕ ಮತ್ತು ಪ್ರತಿಕೃತಿ ಎಂಬ ಮೂರು ವಿಭಾಗಗಳಲ್ಲಿ ಸ್ಪರ್ಧೆ ನಡೆದಿದ್ದು, ಸುಮಾರು ಒಂದು ಸಾವಿರ ಸ್ಪರ್ಧಿಗಳು ಭಾಗವಹಿಸಿದ್ದರು.ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪ್ರಥಮ ಮತ್ತು ದ್ವಿತೀಯ ವಿಜೇತರಿಗೆ ಚಿನ್ನದ ಪದಕ, ತೃತೀಯ ಸ್ಪರ್ಧಾ ವಿಜೇತರು ಬೆಳ್ಳಿ ಪದಕ ನೀಡಲಾಯಿತು.

 

Click to comment

Leave a Reply

Your email address will not be published. Required fields are marked *

DAKSHINA KANNADA

ಪತಿ ಇನ್ನಿಲ್ಲ ಅನ್ನೋ ಸುದ್ದಿ ಗೊತ್ತಾಗಿ ಮತದಾನದ ಕೊನೆ ಆಸೆ ತೀರಿಸಿದ ಪತ್ನಿ.‌.!

Published

on

ಮಂಗಳೂರು : ಅವರ ಪತಿ ಆಸ್ಪತ್ರೆಯಲ್ಲಿ ಕೊನೆ ಉಸಿರು ಎಳೆದಿದ್ದಾರೆ. ಅದೇ ದಿನ ರಾಜ್ಯದಲ್ಲಿ ಎರಡನೇ ಹಂತದ ಮತದಾನ ಕೂಡಾ ನಡೆದಿದೆ. ಆಕೆಗೆ ಪತಿ ಇನ್ನಿಲ್ಲ ಅನ್ನೋ ವಿಚಾರವನ್ನು ಯಾರೋ ತಿಳಿಸಿದ್ದಾರೆ. ಆದ್ರೆ ಆಕೆ ಪತಿಯ ಕೊನೆ ಆಸೆ ಈಡೇರಿಸಿದ ಬಳಿಕ ಪತಿಯ ಅಂತಿಮ ದರ್ಶನ ಪಡೆದಿದ್ದಾರೆ‌.

ಇದು ಮತದಾನ ಮಾಡದೇ ಇರುವವರಿಗೆ ಇವರೊಂದು ಪಾಠವಾಗಿದೆ. ಮಂಗಳವಾರ ರಾಜ್ಯದಲ್ಲಿ ನಡೆದ ಎರಡನೇ ಹಂತದ ಮತದಾನದಲ್ಲಿ ನಡೆದ ಘಟನೆ ಇದು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಗುಡ್ಡೇಕೊಪ್ಪ ಪಂಚಾಯತ್ ವ್ಯಾಪ್ತಿಯಲ್ಲಿ ಇದು ನಡೆದಿದೆ. ಇಲ್ಲಿನ ಆಡುಗೋಡಿನ ಕಲಾವತಿ ವೆಂಕಟೇಶ್ ಇವರ ಪತಿ ವೆಂಕಟೇಶ್ ಚುನಾವಣೆಯ ದಿನ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ  ಇಹಲೋಕ ತ್ಯಜಿಸಿದ್ದಾರೆ.  ಇನ್ನೇನು ಓಟು ಹಾಕಲು ಹೋಗಬೇಕು ಅನ್ನೋ ಅಷ್ಟರಲ್ಲಿ ಪತಿ ಇಹಲೋಕ ತ್ಯಜಿಸಿದ ಮಾಹಿತಿ ಪತ್ನಿ ಕಲಾವತಿಗೆ ಬಂದಿದೆ. ಆದ್ರೆ ಕಲಾವತಿ ಅವರು ಈ ವೇಳೆ ತಮ್ಮ ಅಮೂಲ್ಯ ಮತ ಚಲಾಯಿಸಿ, ಬಳಿಕ ಪತಿಯ ದೇಹವನ್ನು ನೋಡಲು ತೆರಳಿದ್ದಾರೆ.

ಪತಿ ಒಂದು ಪಕ್ಷದ ಅಭಿಮಾನಿಯಾಗಿದ್ದು ,ಆ ಪಕ್ಷದ ನಾಯಕನನ್ನು ಯಾವಾಗಲು ಜಪಿಸ್ತಾ ಇದ್ರು ಹಾಗಾಗಿ ಪತಿಯ ಕೊ‌‌ನೆಯ ಆಸೆಯಾಗಿ ಅವರ ಪ್ರೀಯಪಟ್ಟವರಿಗೆ ಮತ ಚಲಾಯಿಸಿದೆ ಅಂತ ಕಲಾವತಿ ಹೇಳಿಕೊಂಡಿದ್ದಾರೆ.

Continue Reading

DAKSHINA KANNADA

ಪ್ರಜ್ವಲ್‌ ಅಶ್ಲೀಲ್ ವಿಡಿಯೋ ಡಿಲೀಟ್ ಮಾಡಿ..! ಎಸ್‌ಐಟಿ ವಾರ್ನಿಂಗ್..!

Published

on

ಮಂಗಳೂರು : ಸದ್ಯ ಸಂಸದ ಪ್ರಜ್ವಲ್ ರೇವಣ್ಣ ವೀಡಿಯೋ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಪ್ರಕರಣ ಬೆಂಬತ್ತಿರುವ ಎಸ್ ಐ ಟಿ ಖಡಕ್ ವಾರ್ನ್ ಮಾಡಿದೆ. ಅಶ್ಲೀಲ ವಿಡಿಯೋಗಳನ್ನು ಶೇರ್ ಮಾಡದಂತೆ ಹೇಳಿದೆ. ಅಷ್ಟೇ ಅಲ್ಲದೆ, ಅಶ್ಲೀಲ ವಿಡಿಯೋ ಮೊಬೈಲ್ ನಲ್ಲಿ ಸ್ಟೋರ್ ಮಾಡಿಕೊಂಡಿದ್ದರೆ, ಒಂದು ವೇಳೆ ಡಿಲೀಟ್‌ ಮಾಡದೇ ಇದ್ದರೆ ಕಾನೂನು ಕ್ರಮಗಳನ್ನು ಎದುರಿಸಬೇಕಾದೀತು ಎಂದು ಎಸ್ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್ ಮಾಧ್ಯಮ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಅಲ್ಲದೇ, ಯಾವುದೇ ಅಶ್ಲೀಲ ವೀಡಿಯೋ ಹಾಗೂ ಧ್ವನಿ ಮುದ್ರಣವನ್ನು ಇಟ್ಟುಕೊಂಡಿದ್ದರೆ ಅದು ಅಪರಾಧವಾಗುವುದರಿಂದ ಜನರು ತಮ್ಮ ಮೊಬೈಲ್‌ ಅಥವಾ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಇಟ್ಟುಕೊಳ್ಳಬಾರದು. ಒಂದು ವೇಳೆ ಇಟ್ಟುಕೊಂಡಿದ್ದರೆ ಕೂಡಲೇ ಡಿಲೀಟ್‌ ಮಾಡಿಬಿಡಿ. ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ಇದ್ದರೆ ಅದರ ರಚನಕಾರರು ನೀವು ಎಂದು ಪರಿಗಣಿಸಿ ಕ್ರಿಮಿನಲ್ ಕೇಸ್ ಬೀಳುತ್ತದೆ. ಆದ್ದರಿಂದ, ಡಿಲೀಟ್ ಮಾಡುವುದರಿಂದ ಕಾನೂನು ಕ್ರಮಗಳಿಂದ ಪಾರಾಗುವ ಸಾಧ್ಯತೆ ಇರುತ್ತದೆ ಎಂದು ಬಿ.ಕೆ. ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

BANTWAL

ಸಾಲದ ಶೂಲಕ್ಕೆ ಜೀವಾಂತ್ಯಗೊಳಿಸಿದ ಯುವಕ…!

Published

on

ಮಂಗಳೂರು : ತಾನು ತಂಗಿದ್ದ ಲಾಡ್ಜ್ ನಲ್ಲಿಯೇ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ‌ಘಟನೆ ಬಿಸಿರೋಡಿನಲ್ಲಿ ನಡೆದಿದೆ.

ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ ( 30) ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಮೇ. 5 ರಂದು ಬಿಸಿರೋಡಿನ ಖಾಸಗಿ ಬಸ್ ನಿಲ್ದಾಣದ ಹತ್ತಿರವಿರುವ ಹೋಟೆಲೊಂದರಲ್ಲಿ ರೂಂ ಮಾಡಿದ್ದ. ಈತ ಮೇ.6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಮಂಗಖವಾರ ಬೆಳಿಗ್ಗೆ ರೂಂನ ಬಾಗಿಲು ತೆರೆಯದ ಇದ್ದ ಕಾರಣ ಹೋಟೆಲ್ ಸಿಬ್ಬಂದಿ ಕರೆದರೂ ಸ್ಪಂದಿಸಿರಲಿಲ್ಲ. ಹೀಗಾಗಿ ಪೊಲೀಸರಿಗೆ ಮಾಹಿತಿ ನೀಡಿ ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪ್ರಜ್ವಲ್ ಮೃ*ತದೇಹದ ಪತ್ತೆಯಾಗಿದೆ.


ಓನ್ ಲೈನ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಪ್ರಜ್ವಲ್ ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದ ಎನ್ನಲಾಗಿದೆ. ತಾನು ಕೆಲಸ ಮಾಡಿಕೊಂಡಿದ್ದ ಕಂಪೆನಿಯ ಮಾಲಕರಿಂದ 60 ಸಾವಿರ ಸಾಲ ಪಡೆದು ಬಳಿಕ ಹಣ ಹೊಂದಿಸಲಾಗದೆ, ಸರಿಯಾದ ಸಮಯಕ್ಕೆ ಹಿಂದುರುಗಿಸಲಾಗಿಲ್ಲ ಎಂಬ ಕಾರಣಕ್ಕೆ ಕೊರುಗುತ್ತಿದ್ದ ಎಂದು ಹೇಳಲಾಗಿದೆ. ಸಾಲದ ವಿಚಾರವಲ್ಲದೆ ಪ್ರೀತಿಸಿದ ಯುವತಿ ಕೈಕೊಟ್ಟಿದ್ದು, ಪ್ರೇಮ ವೈಫಲ್ಯದ ನೋವಿನಲ್ಲೂ ಇದ್ದ ಎಂದು ವರದಿಯಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

Trending