DAKSHINA KANNADA
Mangaluru: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!
ಕಳೆದ 30 ವರ್ಷಗಳ ಹಿಂದೆ ಮನೆಯೊಂದಕ್ಕೆ ಬೆಂಕಿ ಹಚ್ಚಿ ತಲೆಮರೆಸಿಕೊಂಡಿದ್ದ ಹಳೇ ಪ್ರಕರಣದ ಆರೋಪಿಯನ್ನು ಮಂಗಳೂರಿನ ಸಿಸಿಬಿ ಘಟಕದ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು: ಕಳೆದ 30 ವರ್ಷಗಳ ಹಿಂದೆ ಮನೆಯೊಂದಕ್ಕೆ ಬೆಂಕಿ ಹಚ್ಚಿ ತಲೆಮರೆಸಿಕೊಂಡಿದ್ದ ಹಳೇ ಪ್ರಕರಣದ ಆರೋಪಿಯನ್ನು ಮಂಗಳೂರಿನ ಸಿಸಿಬಿ ಘಟಕದ ಪೊಲೀಸರು ಬಂಧಿಸಿದ್ದಾರೆ.
ಉಡುಪಿ ಜಿಲ್ಲೆಯ ನಂದಿಕೂರು ಗ್ರಾಮದ ಮೂಡು ಫಲಿಮಾರು ನಿವಾಸಿಯಾಗಿರುವ ಪ್ರಸ್ತುತ ಮಂಗಳೂರಿನ ಕುಳಾಯಿಯಲ್ಲಿ ವಾಸವಿರುವ ಮುಸ್ತಫಾ ಯಾನೆ ಮೊಹಮ್ಮದ್ ಮುಸ್ತಫಾ (63) ಎಂಬಾತ ಬಂಧಿತ ಆರೋಪಿಯಾಗಿದ್ದಾನೆ.
ಈತ ಸುರತ್ಕಲ್ ಠಾಣಾ ವ್ಯಾಫ್ತಿಯಲ್ಲಿ 1993 ನೇ ಇಸವಿಯಲ್ಲಿ ಮನೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಭಾಗಿಯಾಗಿ ನಂತರ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಆರೋಪಿಯನ್ನು ಉಡುಪಿ ಜಿಲ್ಲೆಯ ಪಲಿಮಾರು ಪರಿಸರದಿಂದ ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಸುರತ್ಕಲ್ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ಆರೋಪಿಯ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ಸುದೀಪ್ ಎಂ .ವಿ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.
DAKSHINA KANNADA
ಮಂಗಳೂರು : ‘ಮಹೇಶ್’ ಬಸ್ ಮಾಲೀಕ ಆತ್ಮಹತ್ಯೆ..!
ಮಂಗಳೂರು: ಮಂಗಳೂರಿನ ಖಾಸಗಿ ಬಸ್ ನ ಮಾಲೀಕರೊಬ್ಬರು ತಾವು ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತರನ್ನು ಮಹೇಶ್ ಬಸ್ ಮಾಲೀಕ ಪ್ರಕಾಶ್ ಶೇಖ ಎಂದು ಗುರುತಿಸಲಾಗಿದೆ. ಅವರು ಕದ್ರಿ ಕಂಬಳ ಸಮೀಪ ಇರುವ ಅಪಾರ್ಟ್ ಮೆಂಟ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಹೇಶ್ ಹೆಸರಿನಲ್ಲಿ ಹಲವಾರು ಸಿಟಿ ಬಸ್ ಗಳು ದಿನನಿತ್ಯ ಸಂಚರಿಸುತ್ತಿದ್ದು, ಜನಮನ್ನಣೆ ಪಡೆದಿದೆ.
ಬಸ್ ಉದ್ಯಮದ ಬಗ್ಗೆ ಭಾರೀ ಪ್ರೀತಿ ಇಟ್ಟುಕೊಂಡಿದ್ದ ಪ್ರಕಾಶ್ ಯಾಕಾಗಿ ಸಾವಿಗೆ ಶರಣಾಗಿದ್ದಾರೆ ಎನ್ನುವುದು ಆಪ್ತ ಬಳಗಕ್ಕೆ ಶಾಕ್ ನೀಡಿದೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
DAKSHINA KANNADA
ಮೇಯರ್ ಫೋನ್ ಇನ್ : ಮಂಗಳೂರು ನಗರದ 8 ಕಡೆ ಬಸ್ ಬೇ ನಿರ್ಮಾಣ- ಸುಧೀರ್ ಶೆಟ್ಟಿ
ಮಂಗಳೂರು: ಮಂಗಳೂರು ನಗರ ವ್ಯಾಪ್ತಿಯಲ್ಲಿ ಒಟ್ಟು 53 ಪ್ರದೇಶಗಳಲ್ಲಿ ಬಸ್ಸು ತಂಗುದಾಣ ನಿರ್ಮಿಸಲು ಮಂಗಳೂರು ಪೊಲೀಸ್ ಕಮಿಷನರ್ ಪ್ರಸ್ತಾವನೆ ಸಲ್ಲಿಸಿದ್ದು, ಪ್ರಸ್ತುತ 8 ಪ್ರದೇಶಗಳಲ್ಲಿ ಬಸ್ ಬೇ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ತಿಳಿಸಿದ್ದಾರೆ.
ಮೇಯರ್ ಕಚೇರಿಯಲ್ಲಿ ಶನಿವಾರ ನಡೆದ ಮೇಯರ್ ಫೋನ್ ಇನ್ ಕಾರ್ಯಕ್ರಮದಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡಿದರು.
ಮೊದಲ ಹಂತದಲ್ಲಿ ನಾಗರಿಕರಿಂದ ಹೆಚ್ಚು ಬೇಡಿಕೆ ಇರುವ ಬಿಜೈ ಕೆಎಸ್ಸಾರ್ಟಿಸಿ ಬಸ್ಸು ನಿಲ್ದಾಣ ಸಮೀಪ, ಲೇಡಿಹಿಲ್, ಕಂಕನಾಡಿ ಜಂಕ್ಷನ್, ಬಂಟ್ಸ್ ಹಾಸ್ಟೇಲ್ ಸೇರಿದಂತೆ ಒಟ್ಟು 8 ಕಡೆಗಳಲ್ಲಿ ಬಸ್ ಬೇ ನಿರ್ಮಿಸಲಾಗುವುದು.
ಬಳಿಕ ಹಂತ ಹಂತವಾಗಿ ಉಳಿದೆಡೆ ಬಸ್ ಬೇ ನಿರ್ಮಿಸಲಾಗುವುದು ಎಂದರು. ನಗರದಲ್ಲಿ 53 ಬಸ್ಸು ತಂಗುದಾಣಕ್ಕೆ ಪೊಲೀಸರು ಪ್ರಸ್ತಾವನೆ ಸಲ್ಲಿಸಿದ್ದರೂ ಅಧಿಕಾರಿಗಳುಮಾತ್ರ ಕಡತದಲ್ಲೇ ಬಾಕಿ ಇರಿಸಿದ್ದು, ಮನಪಾ ಆಡಳಿತದ ಸಭೆಗೆ ಹಾಜರುಪಡಿಸದಿರುವುದು ಗಮನಕ್ಕೆ ಬಂತು.
ಕೂಡಲೇ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ ಪ್ರಸ್ತಾವನೆಯನ್ನು ಮುಂದಿನ ಸಭೆಗೆ ಹಾಜರುಪಡಿಸುವಂತೆ ಸೂಚನೆ ನೀಡಿದರು.
ಬೀದಿ ಬದಿ ವ್ಯಾಪಾರಸ್ಥರು ನಗರದ ಅನೇಕ ಕಡೆಗಳಲ್ಲಿ ರಸ್ತೆ ಹಾಗೂ ಫುಟ್ಪಾತ್ ಅತಿಕ್ರಮಣ ನಡೆಸಿದ್ದಾರೆ.
ಅಗಲಗೊಂಡರಸ್ತೆಯಲ್ಲಿ ವಾಹನಗಳನ್ನು ಪಾರ್ಕ್ ಮಾಡಲಾಗುತ್ತಿದೆ.
ಈ ಬಗ್ಗೆ ಪಾಲಿಕೆ ಕ್ರಮ ವಹಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು.
bengaluru
ಬೆಂಗಳೂರಿನಲ್ಲಿ ಮೊತ್ತ ಮೊದಲ ಬಾರಿಗೆ ನಡೆಯುವ ಕಂಬಳಕ್ಕೆ ಡೇಟ್ ಫಿಕ್ಸ್-ಅಶೋಕ್ ಕುಮಾರ್ ರೈ
ಮಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಪ್ರಥಮ ಬಾರಿಗೆ ಹೊನಲು ಬೆಳಕಿನ ಕರಾವಳಿಯ ಜಾನಪದ ಕ್ರೀಡೆ ಕಂಬಳ ನ. 25 ಮತ್ತು 26ರಂದು ನಡೆಯಲಿದೆ ಎಂದು ಬೆಂಗಳೂರು ಕಂಬಳ ಸಮಿತಿಯ ಸಂಘಟಕ ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.
ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು ರಾಜ್ಯದ ಮುಖ್ಯಮಂತ್ರಿ, ಉಪಮುಖ್ಯ ಮಂತ್ರಿ ಸೇರಿದಂತೆ ರಜನಿಕಾಂತ್, ಐಶ್ವರ್ಯ ರೈ ಸೇರಿದಂತೆ ಸಿನಿಮಾ ಕ್ಷೇತ್ರದ ನಟ ನಟಿಯರು ಭಾಗವಹಿಸಲಿದ್ದಾರೆ.
ಪ್ರಥಮ ಬಾರಿಗೆ ಬೆಂಗಳೂರಿನಲ್ಲಿ ನಡೆಯುವ ಈ ಕಂಬಳ ಕೂಟದಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಸೇರಿದಂತೆ ವಿವಿಧ ಜಿಲ್ಲೆಗಳ ಸುಮಾರು 130 ಜೊತೆ ಕೋಣಗಳು ಅದರ ಮಾಲಕರು ಭಾಗವಹಿಸಲಿದ್ದಾರೆ ಎಂದರು.
ಇದರ ಜೊತೆ 125 ಸ್ಟಾಲ್ ಗಳಲ್ಲಿ ಕರಾವಳಿಯ ತಿಂಡಿ ತಿನಿಸುಗಳು ಗ್ರಾಹಕರಿಗೆ ದೊರೆಯಲಿದೆ.
ಸುಮಾರು 7 ರಿಂದ 8 ಲಕ್ಷ ಜನರು ಇದನ್ನು ವೀಕ್ಷಿಸುವ ನಿರೀಕ್ಷೆ ಇದೆ ಎಂದು ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಉಡುಪಿ, ದಕ್ಷಿಣ ಕನ್ನಡ ಕಂಬಳ ಸಮಿತಿಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಕಂಬಳ ಸಮಿತಿ ಪದಾಧಿಕಾರಿಗಳಾದ ರೋಹಿತ್ ಹೆಗ್ಡೆ, ಬಾರ್ಕೂರು ಶಾಂತರಾಮ ಶೆಟ್ಟಿ, ಲೋಕೇಶ್ ಶೆಟ್ಟಿ, ಚಂದ್ರಹಾಸ ಸನಿಲ್, ಮುರಳಂಧರ ರೈ, ವಿಜಯಕುಮಾರ್ ಜೈನ್ ಉಪಸ್ಥಿತರಿದ್ದರು.
- DAKSHINA KANNADA6 days ago
2ನೇ ಮದುವೆಯಾದ ಕಿರುತೆರೆ ನಟಿ ಜ್ಯೋತಿ ರೈ …!
- LATEST NEWS6 days ago
ವಾರವಿಡೀ ಕಾಡಿನಲ್ಲಿ ಸಿಲುಕಿದ್ದ ಯುವಕ- ಮನೆಗೆ ವಾಪಸ್ ಆಗುವಂತೆ ರಕ್ಷಣೆ ಮಾಡಿದ ಸಾಕುನಾಯಿ..!
- DAKSHINA KANNADA7 days ago
Puttur: ಕಾಲೇಜು ವಿದ್ಯಾರ್ಥಿನಿ ಜಿವಾಂತ್ಯ..!
- DAKSHINA KANNADA6 days ago
Ullala: ರೈಲಿನಡಿಗೆ ತಲೆಯಿಟ್ಟು ಅವಿವಾಹಿತ ವ್ಯಕ್ತಿ ಜೀವಾಂತ್ಯ..!