Connect with us

DAKSHINA KANNADA

ಮಂಗಳೂರು ಏರ್‌ಪೋರ್ಟ್‌ ಇನ್ಮುಂದೆ ಫುಲ್‌ ಕಾಸ್ಟ್ಲಿ ಮಾರ್ರೆ..!

Published

on

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರವಾಸ ಕೈಗೊಳ್ಳುವ ಹಾಗೂ ಆಗಮಿಸುವವರ ಪಾಲಿಗೆ ಭವಿಷ್ಯದಲ್ಲಿ ದುಬಾರಿಯಾಗಲಿದೆ. ಮುಂದಿನ ಐದು ವರ್ಷಗಳಲ್ಲಿ ಮಂಗಳೂರು ವಿಮಾನ ನಿಲ್ದಾಣದ ಅಭಿವೃದ್ಧಿ ಬಳಕೆ ಶುಲ್ಕ 3 ರಿಂದ 10 ಪಟ್ಟು ಹೆಚ್ಚಳವಾಗಲಿದೆ.


ಸದ್ಯ ಈ ವಿಮಾನ ನಿಲ್ದಾಣ ನಿರ್ವಹಣೆ ಮಾಡುತ್ತಿರುವ ಅದಾನಿ ಕಂಪನಿ ಪ್ರಯಾಣಿಕರಿಂದ ವಸೂಲಿ ಮಾಡುತ್ತಿರುವ ಯುಡಿಎಫ್‌ (ಯೂಸರ್‌ ಡೆವಲಪ್‌ಮೆಂಟ್‌ ಫೀ) ಪ್ರಸ್ತಾವನೆಯನ್ನು ಆ.12 ರಂದು ಏರ್‌ಪೋರ್ಟ್‌ ಇಕಾನಮಿಕ್ಸ್‌ ರೆಗ್ಯುಲೇಟರಿ ಅಥಾರಿಟಿ (ಎಇಆರ್‌ಎ)ಗೆ ಅನುಮತಿಗಾಗಿ ಸಲ್ಲಿಸಿದೆ.

ಇದರಲ್ಲಿ ದೇಶಿಯಾ ಹಾಗೂ ವಿದೇಶಿ ಯಾನಿಗಳಿಗೆ ಶುಲ್ಕ ಹೆಚ್ಚಳ ಪ್ರಸ್ತಾಪಿಸಲಾಗಿದೆ. ಇದರಲ್ಲಿ ನಿರ್ಗಮನ ಮಾತ್ರವಲ್ಲ ಆಗಮನದ ಯಾತ್ರಿಗಳಿಗೂ ಈ ಶುಲ್ಕ ಅನ್ವಯಿಸುವಂತೆ ಪ್ರಸ್ತಾವನೆಯಲ್ಲಿ ತಿಳಿಸಲಾಗಿದೆ.

ಪ್ರಸ್ತುತ ವಿಮಾನ ನಿಲ್ದಾಣದಿಂದ ನಿರ್ಗಮಿಸುವ ದೇಶಿಯ ಯಾನಿಗಳಿಗೆ 15 ರೂ ಹಾಗೂ ವಿದೇಶಿಯರಿಗೆ 825 ರೂ ಅಭಿವೃದ್ಧಿ ಬಳಕೆ ಶುಲ್ಕ ವಿಧಿಸಲಾಗುತ್ತಿದೆ. 2010 ರಿಂದ ಇದೇ ಶುಲ್ಕ ವಿಧಿಸಲಾಗುತ್ತಿತ್ತು.
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ನಿಲ್ದಾಣವನ್ನು ನಿರ್ವಹಣೆ ಮಾಡುತ್ತಿದ್ದುದರಿಂದ ಈ ಶುಲ್ಕದಲ್ಲಿ ಪರಿಷ್ಕರಣೆಯಾಗಿರಲಿಲ್ಲ. ಪ್ರಾಧಿಕಾರದ ನಿಯಮದ ಪ್ರಕಾರ ಇದು ಪ್ರತೀ ಐದು ವರ್ಷದಲ್ಲಿ ಶುಲ್ಕ ಪರಿಷ್ಕರಣೆಗೆ ಅವಕಾಶ ಇದೆ. ಪ್ರಸ್ತಾವನೆಗೆ ಅನುಮತಿ ಸಿಕ್ಕರೆ ಅ.1 ರಿಂದ ಈ ಶುಲ್ಕ ಜಾರಿಯಾಗುವ ಸಾಧ್ಯತೆ ಇದೆ.

ಇದೀಗ 2022ರಿಂದ 2026ರವರೆಗೆ ದೇಶಿಯ ಯಾನಿಗಳಿಗೆ 250 ರಿಂದ 725ರವರೆಗೆ, ವಿದೇಶಿಯಾನಿಗಳಿಗೆ 825 ರಿಂದ 1,200ವರೆಗೆ ಅಭಿವೃದ್ಧಿ ಶುಲ್ಕ ಹೆಚ್ಚಾಗಲಿದೆ. 2 ವರ್ಷದೊಳಗಿನ ಮಕ್ಕಳಿಗೆ ಮಾತ್ರ ಇದರಲ್ಲಿ ವಿನಾಯ್ತಿ ಇರುತ್ತದೆ. ಈ ಶುಲ್ಕ ಹೆಚ್ಚಳಕ್ಕೆ ಅನಿವಾಸಿ ಭಾರತೀಯರು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ.

ಪಿಎಂಒ ಕಚೇರಿ ಸೇರಿ ಹಲವರಿಗೆ ಟ್ವೀಟ್‌

ಈ ಬಗ್ಗೆ ಅನಿವಾಸಿ ಕನ್ನಡಿಗ ಮೋಹನ್‌ದಾಸ್‌ ಕಾಮತ್‌ ಈಗಾಗಲೇ ಪಿಎಂಓ ಕಚೇರಿಗೆ, ಶೋಭಾ ಕರಂದ್ಲಾಜೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರಿಗೂ ಟ್ವೀಟ್‌ ಮಾಡಿ ಶುಲ್ಕ ಹೆಚ್ಚಳದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮಂಗಳೂರಲ್ಲಿ ಲಗೇಜು ಸಾಗಾಟಗಾರರ ದರವೂ ದುಬಾರಿ
ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಲಗೇಜು ಸಾಗಾಟದಾರರ ದರವೂ ಲಗೇಜ್‌ಗೆ 100 ರೂ. ಇದ್ದುದು ಮೂರು ಪಟ್ಟು ಏರಿಕೆಯಾಗಿ 400 ರೂ ಆದರೆ. ವಿದೇಶಿ ಯಾನಿಗಳಿಗೆ 600 ರೂ ಆಗಿದೆ.

ಗಲ್ಫ್‌ ಉದ್ಯೋಗಿಗಳಿಗೆ ಸಂಕಷ್ಟ
ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಸೇರಿದಂತೆ ಹಲವು ಕರಾವಳಿಗರು ಗಲ್ಫ್‌ ದೇಶಗಳಲ್ಲಿ ದುಡಿಯುತ್ತಿದ್ದಾರೆ. ಅವರು ತಮ್ಮ ಹೊಟ್ಟೆಪಾಡಿಗಾಗಿ ದೂರದ ದೇಶಗಳಲ್ಲಿ ದುಡಿಯುತ್ತಾರೆ. ಇಂತಹ ಶುಲ್ಕಗಳಿಂದ ಅಂತಹವರು ಸಂಕಷ್ಟಕ್ಕೀಡಾಗುತ್ತಾರೆ. ಆದ್ದರಿಂದ ಈ ಶುಲ್ಕಗಳು ಹೆಚ್ಚಾಗಬಾರದು ಎಂದು ಹೆಚ್ಚಿನ ಗಲ್ಫ್‌ ಉದ್ಯೋಗಿಗಳು ಹೇಳುತ್ತಿದ್ದಾರೆ.

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending