Connect with us

DAKSHINA KANNADA

Mangaluru: ಸೇನೆಯ ಜೀವನ ಅನ್ಯತ್ರ ದುರ್ಲಭ – ಸುಧೀರ್ ಪೈ

Published

on

ಮಂಗಳೂರಿನ ಕೊಡಿಯಾಲಬೈಲ್ ನಲ್ಲಿರುವ ಶ್ರುತ ಅಕಾಡೆಮೀ ಹಮ್ಮಿಕೊಂಡ ಎನ್ ಡಿಎ ಮತ್ತು ತತ್ ಸಂಬಂಧೀ ಪರೀಕ್ಷೆಗಳ ಸೆಮಿನಾರ್ ಕುರಿತು ಭಾರತೀಯ ನೌಕಾ ಸೇನೆಯ ಪೂರ್ವ ಪೆಟ್ಟಿ ಅಫೀಸರ್ ಸುಧೀರ್ ಪೈ ಉಪನ್ಯಾಸ ನೀಡಿದರು.

ಮಂಗಳೂರು: ಭಾರತೀಯ ಸೇನೆಯ ಸೇವೆಯಲ್ಲಿ ದೊರೆಯುವ ಅವಕಾಶ, ಗೌರವ, ಸವಲತ್ತುಗಳು ಬೇರೆ ಯಾವ ವೃತ್ತಿಯಲ್ಲೂ ದೊರೆಯಲು ಸಾಧ್ಯವಿಲ್ಲ.

ಹೊಸ ತಲೆಮಾರಿನ ಯುವಕರಿಗೆ ಸೇನೆಯಲ್ಲಿ ಬೆಳೆಯಲು ವಿಪುಲವಾದ ದಾರಿಗಳಿವೆ.

ಎಸ್ಎಸ್ಎಲ್ ಸಿ, ಪಿಯುಸಿ ಇನ್ನಾವುದೇ ಪದವಿ ಬಳಿಕವು ಕೂಡ ವಿದ್ಯಾರ್ಥಿಗಳು ಸೇನೆಗೆ ಸೇರಬಹುದು.

ಈ ಬಗ್ಗೆ ಹೆತ್ತವರು ಯಾವುದೇ ಆತಂಕವಿಲ್ಲದೆ ತಮ್ಮ ಮಕ್ಕಳನ್ನು ಸೇನೆಗೆ ಕಳುಹಿಸಬಹುದು’ ಎಂದು ಭಾರತೀಯ ನೌಕಾ ಸೇನೆಯ ಪೂರ್ವ ಪೆಟ್ಟಿ ಅಫೀಸರ್ ಸುಧೀರ್ ಪೈ ಹೇಳಿದರು.

ಅವರು ಮಂಗಳೂರಿನ ಕೊಡಿಯಾಲಬೈಲ್ ನಲ್ಲಿರುವ ಶ್ರುತ ಅಕಾಡೆಮೀ ಹಮ್ಮಿಕೊಂಡ ಎನ್ ಡಿಎ ಮತ್ತು ತತ್ ಸಂಬಂಧೀ ಪರೀಕ್ಷೆಗಳ ಕುರಿತ ಸೆಮಿನಾರ್ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.

ಭಾರತೀಯ ನೌಕ ಸೇನೆಯ ಕಮಾಂಡರ್ ಕ್ಲಾಡ್ ಲೋಬೊ ಮಾತನಾಡಿ ವಿದ್ಯಾರ್ಥಿಗಳು ಸೇನೆಗೆ ಸೇರುವ ಕುರಿತು ಗಂಭೀರ ಚಿಂತನೆ ನಡೆಸುವುದರ ಜೊತೆಗೆ ಅದಕ್ಕೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕಠಿಣ ಪ್ರಯತ್ನ ಮಾಡಬೇಕು ಎಂದು ಹೇಳಿದರು.

ಭಾರತೀಯ ವಾಯು ಸೇನೆಯ ನಿವೃತ್ತ ಅಧಿಕಾರಿ, ಮಧುಕರ ಭಾಗವತ್ ಮಾತನಾಡಿ ತಮ್ಮ ಜೀವನದಲ್ಲಿ ಸೇನೆ ಹೇಗೆ ಶಿಸ್ತನ್ನು ರೂಢಿಸಿತು, ತಾನು ಹೇಗೆ ಅಲ್ಲಿ ಹೊಸ ತಾಂತ್ರಿಕತೆಯನ್ನು ಕಲಿತೆ ಎಂದು ವಿವರಿಸಿದರು.

ಈ ಮೂವರೂ ಸೇನಾಸಾಧಕರನ್ನು ಅಕಾಡೆಮಿ ವತಿಯಿಂದ ಸನ್ಮಾನಿಸಲಾಯಿತು.

ಸಂಸ್ಥೆಯ ಡಾ. ಶ್ರುತಕೀರ್ತಿರಾಜ ಸ್ವಾಗತಿಸಿದರು.

ಉಪನ್ಯಾಸಕ ಪದ್ಮನಾಭ ವಂದಿಸಿದರು.

ಉಪನ್ಯಾಸಕ ರಮೇಶ ಕೆ.ಜಿ ಅತಿಥಿಗಳನ್ನು ಪರಿಚಯಿಸಿದರು.

ಸೇನೆಗೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಶ್ರುತ ಅಕಾಡೆಮಿ ತರಬೇತಿ ನೀಡುತ್ತದೆ.

ಆಸಕ್ತರು ಈ ಸಂಸ್ಥೆಯನ್ನು (9448502994) ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Click to comment

Leave a Reply

Your email address will not be published. Required fields are marked *

DAKSHINA KANNADA

Moodabidri: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಅರೆಸ್ಟ್..!

Published

on

ಮೂಡುಬಿದಿರೆ: ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ವ್ಯಕ್ತಿಗಳನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ.ನೇತೃತ್ವದ ತಂಡವು ಬುಧವಾರ ವಶಕ್ಕೆ ಪಡೆದಿದೆ.

ಬೆಳುವಾಯಿ ನಿವಾಸಿಗಳಾದ ಮಹಮ್ಮದ್ ಅಯಾನ್ (22), ಫರ್ಹಾನ್ ಖಾನ್ (18) ಹಾಗೂ ಶೇಖ್ ಮುಹಮ್ಮದ್ ಜುಬೈರ್ (19) ಬಂಧಿತ ಆರೋಪಿಗಳು.

ಮೂವರು ಆರೋಪಿಗಳು ಬೆಳುವಾಯಿ ಕಾಂತಾವಾರ ದ್ವಾರದ ಬಳಿ ಸ್ಕೂಟರ್ ನಲ್ಲಿ ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದಾರೆಂದ ಖಚಿತ ಮಾಹಿತಿಯನ್ನು ಮೇರೆಗೆ ಸ್ಥಳಕ್ಕೆ ಧಾವಿಸಿದ್ದಾರೆ.

ಬಳಿಕ ಮೂವರು ವ್ಯಕ್ತಿಗಳ ಸಹಿತ 800 ಗ್ರಾಂ ಗಾಂಜಾ ಮತ್ತು ಸ್ಕೂಟರನ್ನು ಪೊಲೀಸರು ಸ್ವಾಧೀನ ಪಡಿಸಿಕೊಂಡಿದ್ದಾರೆ.

ಈ ಎಲ್ಲಾ ಸೊತ್ತುಗಳ ಒಟ್ಟು ಮೌಲ್ಯ 62,000 ಆಗಿರಬಹುದೆಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

Continue Reading

DAKSHINA KANNADA

Mangaluru: ಸೋಮೇಶ್ವರ ಉಚ್ಚಿಲದಲ್ಲಿ ಬಲೆಗೆ ಬಿದ್ದ ದೈತ್ಯ ಪಿಲಿ ತೊರಕೆ..!

Published

on

ಮಂಗಳೂರು: ಮಂಗಳೂರಿನ ಉಳ್ಳಾಲ ಸಮೀಪದ ಸೋಮೇಶ್ವರ ಉಚ್ಚಿಲದ ನಾಡದೋಣಿ ಮೀನುಗಾರರಿಗೆ ದೈತ್ಯ ಗಾತ್ರದ ಪಿಲಿ ತೊರಕೆ ಮೀನು ಲಭಿಸಿದೆ.

ಉಚ್ಚಿಲ ಪೆರಿಬೈಲ್ ನಿವಾಸಿ ನಾಡದೋಣಿ ಮೀನುಗಾರರಾದ ಶೈಲೇಶ್ ಉಚ್ಚಿಲ, ಚಂದ್ರ ಉಚ್ಚಿಲ, ಅಝೀಝ್, ಕಲ್ಪೇಶ್ ಮತ್ತು ಶಂಭು ನ್ಯೂ ಉಚ್ಚಿಲ ಎಂಬವರು ನಿನ್ನೆ ಸಂಜೆ ಸಮುದ್ರ ತೀರದಲ್ಲಿ ಮೀನಿಗಾಗಿ ಬಲೆ ಹಾಕಿದ್ದು, ಸುಮಾರು 75 ಕೆ.ಜಿ. ತೂಕದ ಮೀನು ಅವರ ಬಲೆಗೆ ಬಿದ್ದಿದೆ.

ಈ ವರ್ಷದ ತಮ್ಮ ಮೀನುಗಾರಿಕೆ ಅವಧಿಯಲ್ಲಿ ಸಿಕ್ಕ ಅತಿದೊಡ್ಡ ಮೀನು ಇದಾಗಿದೆ ಎಂದವರು ಅಭಿಪ್ರಾಯ ಪಟ್ಟಿದ್ದಾರೆ.

ಪ್ರತಿವರ್ಷದಂತೆ ಈ ಬಾರಿಯೂ ಸಮುದ್ರದಲ್ಲಿ ಕೆಸರಿನಂತೆ ಅಲೆಗಳು ಬರುತ್ತವೆ.

ಈ ನೀರಿಗೆ ಮೀನುಗಾರಿಕೆಯಲ್ಲಿ ಅತ್ಯಂತ ಪಾವಿತ್ರ್ಯತೆಯೂ ಇದೆ.

ಅದರಲ್ಲಿ ಹಲವು ಬಗೆಯ ಮೀನುಗಳು ಬರುವ ಐತಿಹ್ಯವಿದೆ.
ಈ ಬಾರಿ ದೊಡ್ಡ ಗಾತ್ರದ ಪಿಲಿತೊರಕೆ ಬಂದಿರುವುದು ಮೀನುಗಾರರಲ್ಲಿ ಉತ್ಸಾಹ ಮೂಡಿಸಿದೆ.

ಮಾರಾಟ ಮಾಡುವುದಾದರೆ ಈ ಮೀನಿಗೆ ಕೆ.ಜಿ.ಗೆ 200 ರೂಪಾಯಿ ಬೆಲೆ ಇದೆ.

ಆದರೆ ಸಿಕ್ಕ ಮೀನನ್ನು ವ್ಯಾಪಾರ ಮಾಡದೆ ಈದ್ ಹಬ್ಬ ಇರುವುದರಿಂದ ತಮ್ಮೊಳಗೆ ಹಂಚಿಕೊಂಡಿದ್ದಾರೆ.

Continue Reading

DAKSHINA KANNADA

ದ.ಕ.ಜಿಲ್ಲೆಯ 9 ಗ್ರಾಮಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ

Published

on

ಮಂಗಳೂರು: ದ.ಕ.ಜಿಲ್ಲೆಯ 9 ತಾಲೂಕಿನ 9 ಗ್ರಾಮಗಳು 2022-23ನೆ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಯಾಗಿದೆ.

ಅಕ್ಟೋಬರ್ 2ರ ಗಾಂಧಿಜಯಂತಿ ದಿನದಂದು ರಾಜ್ಯ ವಿಧಾನಸೌಧದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಯನ್ನು ಪ್ರದಾನ ಮಾಡಲಾಗುತ್ತದೆ ಎಂದು ಪ್ರಕಟನೆ ತಿಳಿಸಿದೆ.

ಮಂಗಳೂರು ತಾಲೂಕಿನ ಉಳಾಯಿಬೆಟ್ಟು, ಉಳ್ಳಾಲ ತಾಲೂಕಿನ ಬೆಳ್ಮ, ಮುಲ್ಕಿ ತಾಲೂಕಿನ ಕೆಮ್ರಾಲ್, ಮೂಡುಬಿದಿರೆ ತಾಲೂಕಿನ ಪುತ್ತಿಗೆ, ಬಂಟ್ವಾಳ ತಾಲೂಕಿನ ಅಮ್ಮುಂಜೆ, ಪುತ್ತೂರು ತಾಲೂಕಿನ ಉಪ್ಪಿನಂಗಡಿ, ಕಡಬ ತಾಲೂಕಿನ ಸವಣೂರು, ಬೆಳ್ತಂಗಡಿ ತಾಲೂಕಿನ ಬಳಂಜ, ಸುಳ್ಯ ತಾಲೂಕಿನ ಮರ್ಕಂಜ ಗ್ರಾಮಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿವೆ.

Continue Reading

LATEST NEWS

Trending