Connect with us

LATEST NEWS

ಮಂಗಳೂರು: ಬಸ್‌ ಮಾಲಕರು ಮತ್ತು ಟ್ರಾಫಿಕ್‌ ಪೊಲೀಸರಿಂದ ಕಂಡಕ್ಟರ್‌ಗಳಿಗೆ ಜಾಗೃತಿ

Published

on

ಮಂಗಳೂರು: ಇತ್ತೀಚೆಗೆ ಮಂಗಳೂರಿನ ನಂತೂರು ಜಂಕ್ಷನ್‌ ನಲ್ಲಿ ಖಾಸಗಿ ಬಸ್ಸಿನ ಕಂಡಕ್ಟರ್‌ ಒಬ್ಬರು ತಾನು ಕರ್ತವ್ಯ ನಿರ್ವಹಿಸುತ್ತಿದ್ದ ಬಸ್ಸಿನಿಂದ ಹೊರಗೆಸೆಯಲ್ಪಟ್ಟು ಮೃತಪಟ್ಟ ಘಟನೆ ಹಾಗೂ ಖಾಸಗಿ ಬಸ್ ಗಳ ಬಗ್ಗೆ ಪ್ರಯಾಣಿಕರು ಮತ್ತು ಸಾರ್ವಜನಿಕರಿಂದ ಹತ್ತು ಹಲವು ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಬಸ್‌ ಸಿಬಂದಿ ಕೈಗೊಳ್ಳ ಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಬಸ್‌ ಮಾಲಕರು ಮತ್ತು ಟ್ರಾಫಿಕ್‌ ಪೊಲೀಸರು ನಂತೂರಿನಲ್ಲಿ ಬಸ್ ಚಾಲಕ ಮತ್ತು ನಿರ್ವಾಹಕರಲ್ಲಿ ಜಾಗೃತಿ ಮೂಡಿಸಿ ಕೆಲವು ಸ್ಪಷ್ಟ ಸೂಚನೆಗಳನ್ನು ನೀಡಿದರು.

 

ಈ ಕುರಿತಂತೆ ಮಾಹಿತಿ ಇರುವ ಪ್ರತಿಗಳನ್ನು ಬಸ್‌ ಕಂಡಕ್ಟರ್‌ ಗಳಿಗೆ ನೀಡಿ ಮನವರಿಕೆ ಮಾಡಿದರು. ನಿರ್ವಾಹಕ ಸಹಿತ ಯಾರೂ ಬಸ್ಸಿನ ಫೂಟ್‌ಬೋರ್ಡ್‌ನಲ್ಲಿ ನಿಲ್ಲುವಂತಿಲ್ಲ, ಪ್ರತಿಯೊಬ್ಬರಿಗೂ ಟಿಕೆಟ್ ನೀಡ ಬೇಕು, ಚಲೋ ಕಾರ್ಡ್‌ಗಳನ್ನು ತಿರಸ್ಕರಿಸುವಂತಿಲ್ಲ, ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸ ಬೇಕು, ವ್ಯಾಕ್ಯೂಂ ಹಾರ್ನ್ ಸಹಿತ ಕರ್ಕಶ ಹಾರ್ನ್ ಬಳಸುವಂತಿಲ್ಲ. ಟೇಪ್ ರೆಕಾರ್ಡ್‌ ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಬಸ್‌ ಸಿಬಂದಿ ಸಮವಸ್ತ್ರ ಧರಿಸುವುದು, ನಿಗದಿತ ಬಸ್‌ ಜಿಲ್ದಾಣ ಅಥವಾ ಬಸ್‌ ತಂಗುದಾಣವನ್ನು ಹೊರತು ಪಡಿಸಿ ಬೇರೆ ಸ್ಥಳಗಳಲ್ಲಿ ಪ್ರಯಾಣಿಕರನ್ನು ಹತ್ತಿಸುವುದು ಮತ್ತು ಇಳಿಸುವುದನ್ನು ಮಾಡ ಕೂಡದು, ಕಂಕನಾಡಿ ಬೈಪಾಸ್‌ ರಸ್ತೆಯಲ್ಲಿ ಪಂಪ್‌ ವೆಲ್‌ ಕಡೆಗೆ ಸಂಚರಿಸುವ ಬಸ್ಸುಗಳು ಕರಾವಳಿ ಸರ್ಕಲ್‌ ನ ಕೆಳಭಾಗದಲ್ಲಿರುವ ಬಸ್‌ ತಂಗುದಾಣದ ಬಳಿಯೇ ನಿಲ್ಲಿಸ ಬೇಕು,

ಸರ್ಕಲ್‌ ಪಕ್ಕದಲ್ಲಿ ಅಥವಾ ಮೇಲ್ಭಾಗದಲ್ಲಿ ನಿಲ್ಲಿಸ ಬಾರದು ಎಂಬಿತ್ಯಾದಿ ಸೂಚನೆಗಳನ್ನು ಬಸ್ಸು ಚಾಲಕ ಮತ್ತು ನಿರ್ವಾಹಕರಿಗೆ ನೀಡಲಾಯಿತು. ಈ ಸೂಚನೆಗಳ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆಯನ್ನೂ ನೀಡಲಾಯಿತು.

Click to comment

Leave a Reply

Your email address will not be published. Required fields are marked *

DAKSHINA KANNADA

ಮಂಗಳೂರು : ‘ಮಹೇಶ್’ ಬಸ್ ಮಾಲೀಕ ಆತ್ಮಹತ್ಯೆ..!

Published

on

ಮಂಗಳೂರು: ಮಂಗಳೂರಿನ ಖಾಸಗಿ ಬಸ್ ನ ಮಾಲೀಕರೊಬ್ಬರು ತಾವು ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತರನ್ನು ಮಹೇಶ್ ಬಸ್ ಮಾಲೀಕ  ಪ್ರಕಾಶ್ ಶೇಖ ಎಂದು ಗುರುತಿಸಲಾಗಿದೆ. ಅವರು ಕದ್ರಿ ಕಂಬಳ ಸಮೀಪ ಇರುವ ಅಪಾರ್ಟ್ ಮೆಂಟ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಹೇಶ್ ಹೆಸರಿನಲ್ಲಿ ಹಲವಾರು ಸಿಟಿ ಬಸ್ ಗಳು ದಿನನಿತ್ಯ ಸಂಚರಿಸುತ್ತಿದ್ದು, ಜನಮನ್ನಣೆ ಪಡೆದಿದೆ.

ಬಸ್ ಉದ್ಯಮದ ಬಗ್ಗೆ ಭಾರೀ ಪ್ರೀತಿ ಇಟ್ಟುಕೊಂಡಿದ್ದ ಪ್ರಕಾಶ್ ಯಾಕಾಗಿ ಸಾವಿಗೆ ಶರಣಾಗಿದ್ದಾರೆ ಎನ್ನುವುದು ಆಪ್ತ ಬಳಗಕ್ಕೆ ಶಾಕ್ ನೀಡಿದೆ.  ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

ಬೈಕ್‌ ಅಪಘಾತ: ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಲೆ ಹರಿದ ಲಾರಿ- ಮೂವರು ಸ್ಥಳದಲ್ಲೇ ಸಾವು..!

Published

on

ಶಿವಮೊಗ್ಗ: ಬೈಕ್ ಗಳ ಮದ್ಯೆ ನಡೆದ ಅಪಘಾತದಿಂದ ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಳೆ ಲಾರಿ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಹತೊಳಲು ಗ್ರಾಮದಲ್ಲಿ ನಡೆದಿದೆ.

ಹಳೆ ಜಂಬರಗಟ್ಟ ನಿವಾಸಿ ವಿಕಾಸ್ (18), ಯಶ್ವಂತ್ (17), ಹಾಗೂ ಶಶಾಂಕ್ (17) ಮೃತ ದುರ್ದೈವಿಗಳು.

ಎರಡು ಬೈಕ್ ಗಳ ಮಧ್ಯೆ ನಡೆದ ಅಪಘಾತದಲ್ಲಿ ಸವಾರರ ರಸ್ತೆ ಮೇಲೆ ಬಿದ್ದಿದ್ದಾರೆ.

ಇದೇ ವೇಳೆ ರಭಸವಾಗಿ ಬಂದ ಲಾರಿ ಆ ವ್ಯಕ್ತಿಗಳ ಮೇಲೆ ಹರಿದಿದೆ.

ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಒಬ್ಬನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

FILM

ಮೋದಿಗೆ ರಕ್ತದಲ್ಲಿ ಪತ್ರ ಬರೆದ ಚಿತ್ರ ನಟ ಪ್ರೇಮ್..!

Published

on

ಚಿಕ್ಕಮಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಯಬಿಡುವುದನ್ನು ಖಂಡಿಸಿದ ಕನ್ನಡ ಚಿತ್ರನಟ ಪ್ರೇಮ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ​ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಕಾವೇರಿ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ರಾಜ್ಯದಾದ್ಯಂತ ಹೋರಾಟ ನಡೆಯುತ್ತಿದ್ದು, ಚಿತ್ರನಟ ನೆನಪಿರಲಿ ಪ್ರೇಮ್ ಸಾಥ್ ನೀಡಿದ್ದಾರೆ.

‘ಕಾವೇರಿ ನಮ್ಮದು’ ಎಂದು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಕಾವೇರಿ ನೀರಿನಿಂದ ರಾಜ್ಯಕ್ಕೆ ನ್ಯಾಯ ನೀಡಬೇಕೆಂದು ಪತ್ರದ ಮೂಲಕ ಪ್ರೇಮ್ ಅವರು  ಮನವಿ ಮಾಡಿದ್ದಾರೆ.

ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Continue Reading

LATEST NEWS

Trending