LATEST NEWS
ಮಂಗಳೂರು: ಬಸ್ ಮಾಲಕರು ಮತ್ತು ಟ್ರಾಫಿಕ್ ಪೊಲೀಸರಿಂದ ಕಂಡಕ್ಟರ್ಗಳಿಗೆ ಜಾಗೃತಿ
ಮಂಗಳೂರು: ಇತ್ತೀಚೆಗೆ ಮಂಗಳೂರಿನ ನಂತೂರು ಜಂಕ್ಷನ್ ನಲ್ಲಿ ಖಾಸಗಿ ಬಸ್ಸಿನ ಕಂಡಕ್ಟರ್ ಒಬ್ಬರು ತಾನು ಕರ್ತವ್ಯ ನಿರ್ವಹಿಸುತ್ತಿದ್ದ ಬಸ್ಸಿನಿಂದ ಹೊರಗೆಸೆಯಲ್ಪಟ್ಟು ಮೃತಪಟ್ಟ ಘಟನೆ ಹಾಗೂ ಖಾಸಗಿ ಬಸ್ ಗಳ ಬಗ್ಗೆ ಪ್ರಯಾಣಿಕರು ಮತ್ತು ಸಾರ್ವಜನಿಕರಿಂದ ಹತ್ತು ಹಲವು ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಬಸ್ ಸಿಬಂದಿ ಕೈಗೊಳ್ಳ ಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಬಸ್ ಮಾಲಕರು ಮತ್ತು ಟ್ರಾಫಿಕ್ ಪೊಲೀಸರು ನಂತೂರಿನಲ್ಲಿ ಬಸ್ ಚಾಲಕ ಮತ್ತು ನಿರ್ವಾಹಕರಲ್ಲಿ ಜಾಗೃತಿ ಮೂಡಿಸಿ ಕೆಲವು ಸ್ಪಷ್ಟ ಸೂಚನೆಗಳನ್ನು ನೀಡಿದರು.
ಈ ಕುರಿತಂತೆ ಮಾಹಿತಿ ಇರುವ ಪ್ರತಿಗಳನ್ನು ಬಸ್ ಕಂಡಕ್ಟರ್ ಗಳಿಗೆ ನೀಡಿ ಮನವರಿಕೆ ಮಾಡಿದರು. ನಿರ್ವಾಹಕ ಸಹಿತ ಯಾರೂ ಬಸ್ಸಿನ ಫೂಟ್ಬೋರ್ಡ್ನಲ್ಲಿ ನಿಲ್ಲುವಂತಿಲ್ಲ, ಪ್ರತಿಯೊಬ್ಬರಿಗೂ ಟಿಕೆಟ್ ನೀಡ ಬೇಕು, ಚಲೋ ಕಾರ್ಡ್ಗಳನ್ನು ತಿರಸ್ಕರಿಸುವಂತಿಲ್ಲ, ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸ ಬೇಕು, ವ್ಯಾಕ್ಯೂಂ ಹಾರ್ನ್ ಸಹಿತ ಕರ್ಕಶ ಹಾರ್ನ್ ಬಳಸುವಂತಿಲ್ಲ. ಟೇಪ್ ರೆಕಾರ್ಡ್ ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಬಸ್ ಸಿಬಂದಿ ಸಮವಸ್ತ್ರ ಧರಿಸುವುದು, ನಿಗದಿತ ಬಸ್ ಜಿಲ್ದಾಣ ಅಥವಾ ಬಸ್ ತಂಗುದಾಣವನ್ನು ಹೊರತು ಪಡಿಸಿ ಬೇರೆ ಸ್ಥಳಗಳಲ್ಲಿ ಪ್ರಯಾಣಿಕರನ್ನು ಹತ್ತಿಸುವುದು ಮತ್ತು ಇಳಿಸುವುದನ್ನು ಮಾಡ ಕೂಡದು, ಕಂಕನಾಡಿ ಬೈಪಾಸ್ ರಸ್ತೆಯಲ್ಲಿ ಪಂಪ್ ವೆಲ್ ಕಡೆಗೆ ಸಂಚರಿಸುವ ಬಸ್ಸುಗಳು ಕರಾವಳಿ ಸರ್ಕಲ್ ನ ಕೆಳಭಾಗದಲ್ಲಿರುವ ಬಸ್ ತಂಗುದಾಣದ ಬಳಿಯೇ ನಿಲ್ಲಿಸ ಬೇಕು,
ಸರ್ಕಲ್ ಪಕ್ಕದಲ್ಲಿ ಅಥವಾ ಮೇಲ್ಭಾಗದಲ್ಲಿ ನಿಲ್ಲಿಸ ಬಾರದು ಎಂಬಿತ್ಯಾದಿ ಸೂಚನೆಗಳನ್ನು ಬಸ್ಸು ಚಾಲಕ ಮತ್ತು ನಿರ್ವಾಹಕರಿಗೆ ನೀಡಲಾಯಿತು. ಈ ಸೂಚನೆಗಳ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆಯನ್ನೂ ನೀಡಲಾಯಿತು.
DAKSHINA KANNADA
ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮೋದಿ ಹೆಸರು ಉಲ್ಲೇಖಿಸಿದ್ದ ವರ..! ವರನ ಮೇಲೆ ದೂರು ದಾಖಲು..!
ಕಡಬ: ವ್ಯಕ್ತಿಯೊಬ್ಬರು ತಮ್ಮ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮೋದಿಯ ಕುರಿತಾಗಿ ಉಲ್ಲೇಖಿಸಿದ್ದು ಇದೀಗ ಇಕ್ಕಟ್ಟಿಗೆ ಸಿಲುಕಿರುವ ಘಟನೆ ನಡೆದಿದೆ. ಕಡಬ ತಾಲೂಕಿನ ಆಲಂತಾಯ ನಿವಾಸಿ ಶಿವಪ್ರಸಾದ್ ಎಂಬವರು ತಮ್ಮ ಮದುವೆಯ ಆಮಂತ್ರನ ಪತ್ರಿಕೆಯಲ್ಲಿ ಪ್ರಧಾನಿ ಮೋದಿಯನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡುವುದು ನಮಗೆ ನೀವು ನೀಡುವ ಉಡುಗೊರೆ ಎಂದು ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಉಲ್ಲೇಖಿಸಿದ್ದರು.
ಮುಂದೆ ಓದಿ..; ಮಕ್ಕಳ ಮುಂದೆಯೇ ದಾಂಪತ್ಯಕ್ಕೆ ಕಾಲಿಟ್ಟ ವೃದ್ದರು..!! ಅಚ್ಚರಿಯಾದ್ರು ಇದು ಸತ್ಯ..!!
ಮದುವೆ ನಡೆದ ಬಳಿಕ ವರನ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರನ್ನು ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ. ಮಾರ್ಚ್1 ರಂದು ಮದುವೆ ಆಮಂತ್ರಣ ಪತ್ರಿಕೆ ಮುದ್ರಿಸಿ ಶಿವಪ್ರಸಾದ್ರವರು ಹಂಚಿದ್ದರು. ನೀತಿ ಸಂಹಿತಿ ಘೋಷಣೆಗೆ ಮೊದಲೇ ಈ ಆಮಂತ್ರಣ ಪತ್ರಿಕೆ ಮುದ್ರಣಗೊಂಡಿತ್ತಾದರೂ ಇದೀಗ ಚುನಾವಣಾ ಅಧಿಕಾರಿಗಳಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
FILM
ಬೆಳ್ಳಿತೆರೆಯಲ್ಲಿ ಮತ್ತೊಮ್ಮೆ ಅಬ್ಬರಿಸಲಿದೆ ‘ಪುನೀತ್’ ಸಿನೆಮಾ..! ಯಾವ ಸಿನೆಮಾ?
ಬೆಂಗಳೂರು: ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಯದ ಫ್ಯಾಮಿಲಿ ಪ್ಯಾಕೇಜ್, ಹಿಟ್ ಮೂವಿಯೊಂದು ರಿ ರಿಲೀಸ್ಗೆ ರೆಡಿಯಾಗಿದೆ. ಮಾರ್ಚ್ ನಲ್ಲಿ ಅಪ್ಪು ಅಭಿನಯದ ಜಾಕಿ ಚಿತ್ರ ರಿ ರಲೀಸ್ ಆಗಿದ್ದು ಹಿಟ್ ಲಿಸ್ಟ್ಅಲ್ಲಿ ಸೇರಿಕೊಂಡಿದೆ. ಇದೀಗ ಅವರ ಅಭಿನಯದ ಮತ್ತೊಂದು ಸಿನೆಮಾ ‘ಅಂಜನಿಪುತ್ರ’ ರಿ ರಲೀಸ್ಗೆ ತಯಾರಾಗಿದೆ.
ರಿ ರಿಲೀಸ್ ಯಾವಾಗ?
ಪುನೀತ್ ರಾಜ್ಕುಮಾರ್, ರಶ್ಮಿಕಾ ಮಂದಣ್ಣ, ರಮ್ಯಾ ಕೃಷ್ಣನ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದ ಅಂಜನಿ ಪುತ್ರ ಸಿನಿಮಾ ಇದೀಗ ಮರು ಬಿಡುಗಡೆ ಆಗುತ್ತಿದೆ. ಹರ್ಷ ನಿರ್ದೇಶನದಲ್ಲಿ ಮೂಡಿ ಬಂದ ಈ ಚಿತ್ರ, ಎನ್ಎಮ್ಕೆ ಮೂವೀಸ್ ಲಾಂಛನದಲ್ಲಿ ಬಿಡುಗಡೆಗೊಂಡಿತ್ತು. 2017ರಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ಈಗ ಆರು ವರ್ಷಗಳ ಬಳಿಕ ಮತ್ತೆ ಚಿತ್ರಮಂದಿರಕ್ಕೆ ಬರುತ್ತಿದೆ. ರಾಜ್ಯದ ಹಲವು ಚಿತ್ರಮಂದಿರಗಳಲ್ಲಿ ಮೇ.10ರಂದು ಸಿನೆಮಾ ರಿಲೀಸ್ ಆಗಲಿದೆ ಎಂದು ನಿರ್ಮಾಪಕ ಎಮ್ಎನ್ ಕುಮಾರ್ ತಿಳಿಸಿದ್ದಾರೆ.
ಮುಂದೆ ಓದಿ..; ನೇ*ಣಿಗೆ ಶರಣಾದ ಯುವ ನಟಿ..! ಸಾ*ವಿಗೂ ಮುನ್ನ ವ್ಯಾಟ್ಸಾಪ್ ಸ್ಟೇಟಸ್ನಲ್ಲಿ ಬರೆದಿದ್ದೇನು..!
ರವಿ ಬಸ್ರೂರು ಸಂಗೀತ ನಿರ್ದೇಶನದಲ್ಲಿ ಮೂಡಿ ಬಂದ ಈ ಚಿತ್ರ ಹಿಟ್ ಸಾಂಗ್ಗಳನ್ನು ಒಳಗೊಂಡಿದೆ. ಅದರಲ್ಲೂ’ಭಾರಿ ಖುಷಿ ಮರ್ರೆ ನನ್ನ ಹೆಂಡ್ತಿ ಕಂಡ್ರೆ’ ಸಾಂಗ್ ಎಲ್ಲರ ತುಟಿಯಂಚಿನಲ್ಲಿ ಈಗಲೂ ಗುಣುಗುಟ್ಟುವಂತಿದೆ. ಮುಂದಿನ ದಿನಗಳಲ್ಲಿ ಪುನೀತ್ ಹಲವು ಸಿನೆಮಾಗಳು ರಿ ರಿಲೀಸ್ ಆಗುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗಿದೆ.
DAKSHINA KANNADA
ಮೇ 3 ರಂದು ಗಬ್ಬರ್ ಸಿಂಗ್ ತುಳು ಸಿನಿಮಾ ತೆರೆಗೆ
ಮಂಗಳೂರು: ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ತಯಾರಾದ ಸತೀಶ್ ಬಾರ್ಕೂರು ನಿರ್ಮಾಣದ ಗಬ್ಬರ್ ಸಿಂಗ್ ತುಳು ಚಲನ ಚಿತ್ರ ಮೇ 3 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ.
ಉತ್ತರ ಪ್ರದೇಶದಲ್ಲಿ ನಡೆದ ಘಟನೆಯೊಂದನ್ನು ಆಧರಿಸಿ ಗಬ್ಬರ್ ಸಿಂಗ್ ತುಳು ಸಿನಿಮಾ ಕಥೆಯನ್ನು ಹೆಣೆಯಲಾಗಿದೆ. ಸಿನಿಮಾದಲ್ಲಿ ಆರು ಹಾಡು, ನಾಲ್ಕು ಫೈಟ್ಸ್ ಇದೆ. ಈ ಚಿತ್ರವನ್ನುಸುರತ್ಕಲ್, ಚಿತ್ರಾಪುರ, ಬೈಕಂಪಾಡಿ ಮೊದಲಾದ ಪ್ರದೇಶಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ನಾಯಕ ನಟನಾಗಿ ಶರಣ್ ಶೆಟ್ಟಿ ನಾಯಕಿಯಾಗಿ ವೆನ್ಸಿಟಾ ಅಭಿನಯಿಸಿದ್ದಾರೆ. ಗಬ್ಬರ್ ಸಿಂಗ್ ಸಿನಿಮಾ ಈಗಾಗಲೇ ಮಸ್ಕತ್ ಮತ್ತು ಉಡುಪಿಯಲ್ಲಿ ಸಿನಿಮಾದ ಪ್ರೀಮಿಯರ್ ಶೋ ನಡೆದಿದೆ. ಎಂದು ನಿರ್ಮಾಪಕ ಸತೀಶ್ ಬಾರ್ಕೂರು ತಿಳಿಸಿದ್ದಾರೆ.
“ಗಬ್ಬರ್ ಸಿಂಗ್” ಆ್ಯಕ್ಷನ್ ಥ್ರಿಲ್ಲರ್ ಫ್ಯಾಮಿಲಿ ಓರಿಯೆಂಟೆಡ್ ಫಿಲ್ಮ್ ಆಗಿದೆ. ಈ ಸಿನಿಮಾದ ಕಥೆ, ಚಿತ್ರಕಥೆ, ನಿರ್ಮಾಪಕರು ಸತೀಶ್ ಪೂಜಾರಿ ಬಾರ್ಕೂರ್ , ನಿರ್ದೇಶನದ ಜವಾಬ್ದಾರಿಯನ್ನು ಪ್ರದೀಪ್ ವಹಿಸಿದ್ದಾರೆ. ಮಧು ಸುರತ್ಕಲ್ ಸಂಭಾಷಣೆ ರಚಿಸಿದ್ದಾರೆ.
ಮುಖ್ಯ ಪಾತ್ರದಲ್ಲಿ ಕುಸೇಲ್ದರಸೆ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಾಯಿಕೃಷ್ಣ, ಉಮೇಶ್ ಮಿಜಾರ್, ರವಿರಾಮ ಕುಂಜ, ಗಿರೀಶ್ ಎಂ. ಶೆಟ್ಟಿ ಕಟೀಲ್, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್, ಉದಯ ಆಳ್ವ ಇಡ್ಯಾ, ಸಂದೀಪ್ ಭಕ್ತ, ಕಿರಣ್ ಮಲ್ಪೆ, ಪೂರ್ಣಿಮಾ ಶೆಟ್ಟಿ, ಪವಿತ್ರ ಶೆಟ್ಟಿ,ಚಂದ್ರಹಾಸ ಶೆಟ್ಟಿ ಮಾಣಿ, ಸಂಪತ್ ಲೋಬೋ, ಆಶಾ ಶೆಟ್ಟಿ ಶಿಬರೂರು, ಲಹರಿ ಶೆಟ್ಟಿ ಪಡ್ರೆ, ಶಿಲ್ಪಾ ಶೆಟ್ಟಿ, ಭವ್ಯಾ ಶೆಟ್ಟಿ ಸುರತ್ಕಲ್ ಸಂತೋಷ್, ಚಂದ್ರಹಾಸ ಶೆಟ್ಟಿ ಕಪ್ಪೆಟ್ಟು, ಫ್ರಾಂಕಿ ಕೊಳಲಗಿರಿ, ಉಮೇಶ್ ಶೆಟ್ಟಿ ಹಾವಂಜೆ, ಬೇಬಿ ಆಧ್ಯಾ ಉಡುಪಿ ಮೊದಲಾದವರಿದ್ದಾರೆ.
ಛಾಯಾಗ್ರಹಣ: ರವಿ ಸುವರ್ಣ, ಸಂಕಲನ: ಪ್ರಜ್ವಲ್ ಸುವರ್ಣ, ಕಲೆ: ವೆಂಕಟೇಶ್ ಬೆಂಗಳೂರು, ಸಂಗೀತ: ಡೊಲ್ಪಿನ್ ಕೊಳಲಗಿರಿ. ಹಿನ್ನಲೆ ಸಂಗೀತ: ಕಾರ್ತಿಕ್ ಮುಲ್ಕಿ, ಸಾಹಸ: ಅಲ್ಟಿಮೆಟ್ ಶಿವ್ ನೃತ್ಯ: ಅವಿನಾಶ್ ಬಂಗೇರ, ಶುಭಕಿರಣ್, ಮೇಕಪ್ ಪ್ರದೀಪ್, ವಸ್ತ್ರಾಲಂಕಾರ : ಶರತ್ ಬರ್ಕೆ, ಸಹ ನಿರ್ದೇಶನ: ಪುಷ್ಪರಾಜ ರೈ, ಜಯರಾಜ್, ಸಹಾಯ: ಭಾಗ್ಯರಾಜ್ ಮಾಡಿದ್ದಾರೆ.
ಪ್ರೀಮಿಯರ್ ಶೋ
ಈಗಾಗಲೇ ಮಸ್ಕತ್, ಕತಾರ್ ಉಡುಪಿ, ಸುರತ್ಕಲ್ ನಲ್ಲಿ ಗಬ್ನರ್ ಸಿಂಗ್ ಸಿನಿಮಾದ ಪ್ರೀಮಿಯರ್ ಶೋ ನಡೆದಿದೆ. ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಲಭಿಸಿದೆ. ಸಾಂಸಾರಿಕ ಕತೆಯ ಜೊತೆ ಇಲ್ಲಿ ಹಾಸ್ಯವೂ ಚೆನ್ನಾಗಿ ವಕ್೯ಹೌಟ್ ಆಗಿದೆ. ನವೀನ್ ಪಡೀಲ್, ಬೋಜರಾಜ್ ವಾಮಂಜೂರು, ಅರವಿಂದ ಬೋಳಾರ್, ಸಾಯಿಕೃಷ್ಣ, ಉಮೇಶ್ ಮಿಜಾರ್, ಪ್ರಸನ್ನ ಶೆಟ್ಟಿ ಬೈಲೂರು, ರವಿರಾಮ ಕುಂಜ ಇವರ ಹಾಸ್ಯ ಸಕ್ಕತ್ತಾಗಿದೆ. ಜೊತೆಗೆ ಗಿರೀಶ್ ಶೆಟ್ಟಿ ಕಟೀಲು, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್ ಮೊದಲಾದವರ ಪಾತ್ರಗಳೂ ಕೂಡಾ ಇಲ್ಲಿ ಪ್ರಾಮುಖ್ಯತೆಯನ್ನು ಪಡೆದಿದೆ ಎಂದು ನಿರ್ಮಾಪಕ ಸತೀಶ್ ಬಾರ್ಕೂರು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ನಿರ್ಮಾಪಕ ಸತೀಶ್ ಪೂಜಾರಿ ಬಾರ್ಕೂರು, ನಟ ಭೋಜರಾಜ ವಾಮಂಜೂರು, ಮಧು ಸುರತ್ಕಲ್, ಚಂದ್ರ ಶೇಖರ ನಾನಿಲ್ ಹಳೆಯಂಗಡಿ, ನಟ ಶರಣ್ ಶೆಟ್ಟಿ
ನಟಿ ವೆನ್ಸಿಟಾ ಇದ್ದರು.
- FILM5 days ago
“ನಿತ್ಯಾಮೆನನ್” ಚಿತ್ರರಂಗದಿಂದ ‘ಬ್ಯಾನ್’ ಆಗಲು ಕಾರಣವೇನು ಗೊತ್ತಾ? ಈ ಬಗ್ಗೆ ನಿತ್ಯಾ ಹೇಳಿದ್ದೇನು?
- DAKSHINA KANNADA5 days ago
ನಮ್ಮ ಮಾತುಗಳಿಗೆ ಅಸ್ತು ಅನ್ನುವ ಅಶ್ವಿನಿ ದೇವತೆಗಳು – ಯಾರಿವರು?
- LATEST NEWS6 days ago
ಖತರ್ನಾಕ್ ಕಳ್ಳನನ್ನು ಬಂಧಿಸಿದ ಕೋಟ ಪೊಲೀಸರು; ‘ನನ್ನ ಬಗ್ಗೆ ಮಾಹಿತಿ ಬೇಕಾದ್ರೆ ಯೂಟ್ಯೂಬ್ ನೋಡಿ’ ಎಂದ ಖದೀಮ!
- bangalore6 days ago
ರಾಜ್ಯದ ಎಂಟು ಜಿಲ್ಲೆಗಳಲ್ಲಿ ಮಳೆಯಾಗಲಿದೆ: ಹವಾಮಾನ ಇಲಾಖೆ ಮುನ್ಸೂಚನೆ