DAKSHINA KANNADA
ಮಂಗಳೂರು : ಮುಳಿಹಿತ್ಲುವಿನಲ್ಲಿ ಯುವಕನ ಬರ್ಬರ ಕೊಲೆ – ಆರೋಪಿ ತೌಸಿಫ್ ಬಂಧನ..!
ಮಂಗಳೂರು ನಗರದ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಮುಳಿಹಿತ್ಲುವಿನ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಯುವಕನೋರ್ವ ಬರ್ಬರವಾಗಿ ಕೊಲೆಯಾಗಿದ್ದಾನೆ.
ಮಂಗಳೂರು : ಮಂಗಳೂರು ನಗರದ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಮುಳಿಹಿತ್ಲುವಿನ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಯುವಕನೋರ್ವ ಬರ್ಬರವಾಗಿ ಕೊಲೆಯಾಗಿದ್ದಾನೆ.
ಜಗ್ಗು (35) ಕೊಲೆಯಾದ ಯುವಕನಾಗಿದ್ದು ಆರೋಪಿ ಆರೋಪಿ ತೌಸಿಫ್ ಹುಸೈನ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಶನಿವಾರ ಬೆಳಗ್ಗೆ ತನ್ನ ಸ್ಟೋರಿನಲ್ಲಿ ಕೆಲಸಕ್ಕಿದ್ದ ಜಗ್ಗುವನ್ನು ಕ್ಷುಲ್ಲಕ ಕಾರಣಕ್ಕೆ ಆತನನ್ನು ಕೊಲೆ ಮಾಡುವ ಉದ್ದೇಶದಿಂದ ಬೆಂಕಿ ಕೊಟ್ಟು ಸುಟ್ಟು ನಂತರ ಸಾಕ್ಷಿ ನಾಶ ಮಾಡುವ ಹಾಗೂ ಪ್ರಕರಣದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಅಪರಾಹ್ನ 1.30 ರ ಸುಮಾರಿಗೆ ಅಂಗಡಿಯ ಸುತ್ತಮುತ್ತಲಿನ ಸಾರ್ವಜನಿಕರಿಗೆ ವಿದ್ಯುತ್ ಸ್ಪರ್ಶವಾಗಿರುವುದಾಗಿ ತೌಸಿಫ್ ಹೇಳಿದ್ದಾನೆ.
ಕೂಡಲೇ ಸ್ಥಳೀಯರು ಜಗ್ಗುವನ್ನು ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ಕರಕೊಂಡು ಹೋದಾಗ ಆದಾಗಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ನಂತರ ಪ್ರಕರಣ ದಾಖಲು ಮಾಡಿಕೊಂಡ ಪಾಂಡೇಶ್ವರ ಪೊಲೀಸರು ಕೂಲಂಕೂಷವಾಗಿ ತನಿಖೆಯನ್ನು ಆರಂಭಿಸಿದ್ದಾರೆ.
ಆ ಸಂದರ್ಭ ಪರಿಸರದ ಸಾರ್ವಜನಿಕರನ್ನು ವಿಚಾರಿಸಿದಾಗ ಜಗ್ಗುವನ್ನು ಸ್ಟೋರ್ ಮಾಲಿಕ ತೌಸಿಫನೇ ಕೊಲೆ ಮಾಡಿದ್ದರ ಬಗ್ಗೆ ಬಲವಾದ ಸಾಕ್ಷ್ಯಗಳು ದೊರೆತ್ತಿದ್ದು ಆರೋಪಿ ತೌಸಿಫ್ ಹುಸೈನ್ ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ತನಿಖೆ ಮುಂದುವರೆದಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.
ಘಟನೆ ಬೆಳಕಿಗೆ ಬಂದ ಬಳಿಕ ಸ್ಥಳದಲ್ಲಿ ಬಿಗು ವಾತಾವರಣ ನಿರ್ಮಾಣವಾಗಿತ್ತು. ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತನ್ನು ಏರ್ಪಡಿಸಿದ್ದಾರೆ.
DAKSHINA KANNADA
‘ಅಡ್ಡಣ ಪೆಟ್ಟು’ ದೈವಾರಾಧನೆಯ ವಿಶೇಷ ಆಚರಣೆ…! ಇದು ಸೌಹಾರ್ದತೆ ಬಯಸೋ ದೈವ..!
ಮಂಗಳೂರು : ತುಳುನಾಡಿನ ದೈವಾರಾಧನೆಯಲ್ಲಿ ಒಂದಕ್ಕಿಂತ ಒಂದು ವಿಶೇಷವಾದ ಆಚರಣೆ ಹಾಗೂ ನಂಬಿಕೆಗಳು ಇದೆ. ಅದು ಪ್ರದೇಶದಿಂದ ಪ್ರದೇಶಕ್ಕೆ ಒಂದಷ್ಟು ಬದಲಾವಣೆಯೊಂದಿಗೆ ನಡೆಯುತ್ತದೆ ಕೂಡಾ. ಕೇರಳದ ಗಡಿಗೆ ಹೊಂದಿಕೊಂಡಿರುವ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದಲ್ಲಿ ನಡೆಯೋ ದೈವಾರಾಧನೆ ಕೂಡಾ ಅದೇ ರೀತಿಯಾದ ವಿಶೇಷ ಆಚರಣೆಯೊಂದಕ್ಕೆ ಹೆಸರಾಗಿದೆ. ಇಲ್ಲಿನ ಶ್ರೀ ಮಹಾವಿಷ್ಣುಮೂರ್ತಿ ದೇವರ ಜಾತ್ರೆಯ ಬಳಿಕ ನಡೆಯುವ ದೈವದ ನೇಮದಲ್ಲಿ ‘ಅಡ್ಡಣ ಪೆಟ್ಟು’ ಅನ್ನೋ ಸಂಪ್ರದಾಯವಿದೆ. ಗ್ರಾಮದ ಜಾತ್ರೆಯ ಪ್ರಮುಖ ಆಕರ್ಷಣೆ ಕೂಡಾ ಇದೇ ಆಗಿದ್ದು, ಇದನ್ನು ನೋಡಲೆಂದೆ ಸಾವಿರಾರು ಜನ ಬರ್ತಾರೆ.
ನಾಲ್ಕು ಮನೆತನಗಳ ನಡುವೆ ಹೊಡೆದಾಟ…!
‘ಅಡ್ಡಣ ಪೆಟ್ಟು’ ಇದು ಮಂಡೆಕೋಲು ಗ್ರಾಮದ ಜಾತ್ರೆ ಮುಗಿದ ಬಳಿಕ ನಡೆಯುವ ಉಳ್ಳಾಕುಲು ಹಾಗೂ ಪರಿವಾರ ದೈವದ ನೇಮದಲ್ಲಿ ಕಾಣುವ ದೃಶ್ಯ. ನಾಲ್ಕು ಗೌಡ ಮನೆತನದವರು ಬೆತ್ತದ ಗುರಾಣಿ ಹಿಡಿದು ಕೋಲಿನಿಂದ ಹೊಡೆದಾಡುವುದೇ ಈ ‘ಅಡ್ಡಣ ಪೆಟ್ಟು’ ಅನ್ನೋ ವಿಶಿಷ್ಠ ಆಚರಣೆ. ದೇವಸ್ಥಾನಕ್ಕೆ ಸಂಬಂಧಪಟ್ಟ ಕೇನಾಜೆ- ಮಾವಜಿ, ಮುರೂರು- ಬೊಳುಗಲ್ಲು ಎಂಬ ನಾಲ್ಕು ಗೌಡ ಮನೆತನಗಳು ಈ ರೀತಿ ಹೊಡೆದಾಟ ನಡೆಸ್ತಾರೆ. ಈ ವೇಳೆ ಉಳ್ಳಾಕುಲು ದೈವ ಮದ್ಯಪ್ರವೇಶ ಮಾಡಿ ಜಗಳ ಬಿಡಿಸುತ್ತದೆ. ಇದು ನೋಡಲು ಕೂಡಾ ಸಾಕಷ್ಟು ಕುತೂಹಲವಾಗಿದ್ದು, ಇದರ ಜೊತೆ ದೈವದ ಸಂದೇಶ ಕೂಡಾ ಇದೆ.
‘ಅಡ್ಡಣ ಪೆಟ್ಟು’ವಿನ ಹಿಂದೆ ಇದೆ ದೈವದ ಸಂದೇಶ..!
ಮಂಡೆಕೋಲು ನೇಮದಲ್ಲಿ ಅಡ್ಡಣ ಪೆಟ್ಟು ಸಂಪ್ರದಾಯಕ್ಕೆ ಬೇರೆ ಬೇರೆ ಐಹಿತ್ಯವಿದೆ. ಅಡ್ಡಣಪೆಟ್ಟು ನಡೆದರೆ ಊರಲ್ಲಿ ಮುಂದೆ ಗಲಾಟೆ, ಹೊಡೆದಾಟಗಳು ಸಂಭವಿಸುವುದಿಲ್ಲ ಎಂಬ ನಂಬಿಕೆಯೂ ಊರಿನ ಭಕ್ತ ಜನರಲ್ಲಿದೆ. ನಾಲ್ಕೂರಿನ ಜಗಳವನ್ನು ದೈವ ಬಿಡಿಸುವುದು, ಗಲಾಟೆ ಮಾಡದೆ ಸೌಹಾರ್ದದಿಂದ ಬಾಳಿ ಎನ್ನುವ ಸಂದೇಶವೂ ಈ ಆಚರಣೆಯಲ್ಲಿದೆ. ಪುರಾತನ ಕಾಲದಲ್ಲಿ ಯಾವುದೋ ಗಲಾಟೆ ನಡೆದ ಸಂದರ್ಭ ಉಳ್ಳಾಕುಲು ದೈವ ಬಂದು ಗಲಾಟೆ ಬಿಡಿಸಿ ಪರಸ್ಪರ ಸಂದಾನ ನಡೆಸಿತ್ತು ಎಂಬ ಪ್ರತೀತಿಯೂ ಇದೆ. ಇದೇ ಕಾರಣದಿಂದ ಪ್ರತಿ ವರ್ಷ ಉಳ್ಳಾಕುಲು ನೇಮದ ಸಂದರ್ಭ “ಅಡ್ಡಣ ಪೆಟ್ಟು” ಒಂದು ಸಂಪ್ರದಾಯವಾಗಿ ನಡೆದು ಬರುತ್ತಿದೆ.
‘ಅಡ್ಡಣ ಪೆಟ್ಟು’ವಿನ ಆಚರಣೆ ಹೇಗೆ ?
ನೇಮೋತ್ಸವ ದಿನದಂದು ಉಳ್ಳಾಕುಲು ದೈವದ ಭಂಡಾರ ತೆಗೆದ ಬಳಿಕ ದೈವ ಸಹಿತ ನಾಲ್ಕೂರಿನ ಪ್ರತಿನಿಧಿಗಳು, ದೈವರ ಪರಿಚಾರಕರು ದೇವಸ್ಥಾನದ ಸಮೀಪದ ಗದ್ದೆಯಲ್ಲಿರುವ ಕಟ್ಟೆಗೆ ತೆರಳುತ್ತಾರೆ. ಕೇನಾಜೆ- ಮಾವಜಿ, ಮುರೂರು-ಬೊಳುಗಲ್ಲು ಮನೆತನಕ್ಕೆ ಸೇರಿದ ನಾಲ್ವರು ಪ್ರತಿನಿಧಿಗಳು ಸಮವಸ್ತ್ರ ಧರಿಸಿ ದಂಡ ಮತ್ತು ಗುರಾಣಿ (ಅಡ್ಡಣ) ಹಿಡಿದು ದೈವದ ಜತೆಯಲ್ಲಿ ತೆರಳುತ್ತಾರೆ. ಕಟ್ಟೆಯ ಬಳಿ ತೆರಳಿದ ಬಳಿಕ ಕೆಲವೊಂದು ಸಂಪ್ರದಾಯ ಆಚರಣೆಗಳು ನಡೆದು ಅಡ್ಡಣ ಹಿಡಿದ ಯುವಕರು ಅಡ್ಡಣವನ್ನು ನೆಲದಲ್ಲಿ ಎದುರು ಬದುರಾಗಿ ಇಡುತ್ತಾರೆ. ಲಾಠಿ ಮಾದರಿಯ ಹೊಡೆಯುವ ದಂಡವನ್ನು ಕೈಯಲ್ಲಿ ಹಿಡಿದಿರುತ್ತಾರೆ. ಇತ್ತ ಅಡ್ಡಣ ಹೊಡೆತದಲ್ಲಿ ಭಾಗವಹಿಸುವ ನಾಲ್ವರು ಯುವಕರಿಗೆ ಬೆನ್ನು ಹಾಕಿ ನಿಂತಿರುವ ಉಳ್ಳಾಕುಲು ದೈವಕ್ಕೆ ಅಣಿಯನ್ನು ಕೂರಿಸಲಾಗುತ್ತದೆ. ಅಣಿ ಇಟ್ಟ ಬಳಿಕ ತುಳು ನುಡಿಗಟ್ಟೊಂದನ್ನು ಹೇಳಲಾಗುತ್ತದೆ. ಈ ನುಡಿಗಟ್ಟು ಮುಗಿಯುತ್ತಿದ್ದಂತೆ ದೈವದ ಪರಿಚಾರಕರೊಬ್ಬರು ಅಡ್ಡಣ ಹೊಡೆತಕ್ಕೆ ಅಣಿಯಾಗಿ ನಿಂತಿರುವ ಯುವಕರತ್ತ ಕಲಶದ ನೀರಿನಿಂದ ಪ್ರೋಕ್ಷಣೆ ಮಾಡುತ್ತಾರೆ. ಕಲಶ ಪ್ರೋಕ್ಷಣೆ ಆಗುತ್ತಿದ್ದಂತೆ ಎದುರು ಬದುರಾಗಿ ನಿಂತಿರುವ ಯುವಕರು ನೆಲದಲ್ಲಿಟ್ಟ ಅಡ್ಡಣವನ್ನು ಕೈಗೆ ಎತ್ತಿಕೊಂಡು ಅದನ್ನು ಗುರಾಣಿಯಂತೆ ಹಿಡಿದು ಎದುರುಬದುರಾಗಿ ಹೊಡೆದಾಟ ಆರಂಭಿಸುತ್ತಾರೆ. ಪ್ರತಿಯೊಬ್ಬರೂ ಎದುರು ಪ್ರತಿನಿಧಿಯ ಕೈಯಲ್ಲಿ ಹಿಡಿದಿರುವ ಅಡ್ಡಣಕ್ಕೆ ಹೊಡೆಯಬೇಕೆಂಬ ನಿಯಮವೂ ಇದೆ. ಹೊಡೆದಾಟ ಜೋರಾಗುತ್ತಿದ್ದಂತೆ ಬೆನ್ನು ಹಾಕಿ ನಿಂತಿರುವ ಉಳ್ಳಾಕುಲು ದೈವ ಬಂದು ಹೊಡೆದಾಟವನ್ನು ಬಿಡಿಸುತ್ತದೆ.
DAKSHINA KANNADA
ನಾಲ್ಕು ತಿಂಗಳ ಮಗುವಿಗೆ ಹಾಲಿನಲ್ಲಿ ಆಲ್ಕೋಹಾಲ್ ಬೆರೆಸಿದ ಅಜ್ಜಿ..! ಅಜ್ಜಿ ಮಾಡಿದ ಎಡವಟ್ಟಿಗೆ ಕೋಮಾಗೆ ಜಾರಿದ ಮಗು !!
ಮಂಗಳೂರು/ಇಟಲಿ: ಇಟಲಿಯಲ್ಲೊಂದು ಆಘಾತಕಾರಿ ಘಟನೆ ನಡೆದಿದೆ. ಅಜ್ಜಿಯೊಬ್ಬರು ನಾಲ್ಕು ತಿಂಗಳ ಮಗುವಿಗೆ ಕುಡಿಯುವ ಹಾಲಿನಲ್ಲಿ ಆಲ್ಕೋಹಾಲ್ ಬೆರೆಸಿರುವ ಘಟನೆ ನಡೆದಿದೆ.
ಮೊಮ್ಮಗು ಕುಡಿಯುವ ಹಾಲಿಗೆ ಅಜ್ಜಿ ತಪ್ಪಾಗಿ ಆಲ್ಕೋಹಲ್ ಬೆರೆಸಿದ್ದಾರೆ. ಮಗು ಅರ್ಧ ಹಾಲು ಕುಡಿದ ಬಳಿಕ ಮಗು ಅಳಲು ಆರಂಭಿಸಿದೆ. ಅಜ್ಜಿಗೆ ಅನುಮಾನ ಬಂದು ತಾನು ಕುಡಿಸಿದ ಹಾಲಿನ ವಾಸನೆಯನ್ನು ತೆಗೆದು ಪರಿಶೀಲನೆ ಮಾಡಿದಾಗ ಅದರಲ್ಲಿ ಆಲ್ಕೋಹಾಲ್ ಮಿಶ್ರಣ ಹಾಕಿರುವುದು ಬೆಳಕಿಗೆ ಬಂದಿದೆ. ಇದರಿಂದ ಆಘಾತಕ್ಕೊಳಗಾದ ವೃದ್ಧೆ ಮಗುವನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಮುಂದೆ ಓದಿ..; ಜೀವಾಂತ್ಯವಾದ ಕಾಂತಾಬಾರೆ-ಬೂದಬಾರೆ ಜನ್ಮಕ್ಷೇತ್ರದ ಮರ..! ಇತಿಹಾಸದ ಜೀವಂತ ಸಾಕ್ಷಿಯ ಅಂತ್ಯ..!
ಕೋಮಾಗೆ ಜಾರಿದ ಮಗು:
ಅದಾಗಲೇ ಮಗುವಿನ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಕೋಮ ಸ್ಥಿತಿಗೆ ಜಾರಿತ್ತು. ಬಳಿಕ ವೈದ್ಯರು ಚಿಕಿತ್ಸೆ ನೀಡಿದ ಬಳಿಕ ಚೇತರಿಸಿಕೊಂಡಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಮಗುವಿಗೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಆದರೆ ಮಗುವಿನ ಆರೋಗ್ಯವನ್ನು ಸಂಪೂರ್ಣ ಪರಿಶೀಲಿಸಿದ ಬಳಿಕ ಅಜ್ಜಿ ವಿರುದ್ಧ ಪ್ರಕರಣ ದಾಖಲಿಸಲು ನಿರ್ಧರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
DAKSHINA KANNADA
ಚಲಿಸುತ್ತಿದ್ದಾಗ ಒಡೆದ ಬಸ್ಸಿನ ಗಾಜು; ಇಬ್ಬರು ಮಕ್ಕಳು, ಚಾಲಕನಿಗೆ ಗಾ*ಯ
ವಿಟ್ಲ : ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ ಗಾಜು ಒಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಸಂಭವಿಸಿದೆ. ಪುತ್ತೂರು ಕಡೆಯಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಅದರ ಮುಂಭಾಗ ಗಾಜು ಹೊಡೆದಿದೆ.
ಇದನ್ನೂ ಓದಿ : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ
ಇದರಿಂದ ಮುಂಭಾಗದಲ್ಲಿದ್ದ ಬಾಲಕ ಗಂಭೀರ ಗಾಯಗೊಂಡಿದ್ದು, ಚಾಲಕ ಮತ್ತು ಮತ್ತೊಂದು ಮಗು ಸಣ್ಣಪುಟ್ಟವಿಗೆ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಬಾಲಕನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡಿರುವ ಬಾಲಕ ಕೇರಳದ ಚೆರ್ಕಳ ನೆಲ್ಲಿಕಟ್ಟೆ ನಿವಾಸಿ ಎಂದು ಸ್ಥಳೀಯರು ತಿಳಿಸಿದ್ದಾರೆ.
ಬಿಸಿಲಿನ ತಾಪಕ್ಕೆ ಈ ಘಟನೆ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
- DAKSHINA KANNADA2 days ago
ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್ಗಳ ಹಗಲು ದರೋಡೆ..! ಏನಿದು ಘಟನೆ?
- FILM4 days ago
ಬಿಗ್ ಬಾಸ್ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ನಮ್ರತಾ ಗೌಡ!
- dehali3 days ago
ನಾಯಿಗಳಿಗೂ ಬಂತು ಆಧಾರ್ ಕಾರ್ಡ್.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?
- BELTHANGADY3 days ago
ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು