Connect with us

LATEST NEWS

ಅಂಗಾಂಗ ದಾನಕ್ಕೆ ಸಿದ್ದವಾಗ್ತಿದೆ ಮಂಗಳೂರು ಸ್ಮಾರ್ಟ್‌ ಸಿಟಿ

Published

on

ಮಂಗಳೂರು: ಮೆಡಿಕಲ್‌ ಹಬ್‌ ಆಗಿರುವ ಮಂಗಳೂರಿನಲ್ಲಿ ಅಂಗಾಂಗ ದಾನದ್ದೇ ಸುದ್ದಿ. ರಸ್ತೆಯಲ್ಲಿ ಬಿದ್ದು, ತಲೆಗೆ ಏಟಾಗಿ ಕೋಮಾಕ್ಕೆ ಜಾರಿ ಅಂಗಾಂಗ ದಾನದಲ್ಲಿ ಪ್ರಾಣ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚುತ್ತಿದೆ. ಇದಕ್ಕೆ ಪೂರಕವಾಗಿ ಮಂಗಳೂರು ಸ್ಮಾರ್ಟ್‌ ಸಿಟಿಯ ಯೋಜನೆಗಳು ಇದೀಗ ಕಾರ್ಯಗತವಾಗಿವೆ…!

ಮುಂಗಾರು ಮಳೆ ಇನ್ನೇನು ಪ್ರಾರಂಭವಾಗಬೇಕಷ್ಟೆ. ಕಳೆದ 10- 15 ದಿನಗಳಿಂದ ಮಂಗಳೂರು ನಗರದಲ್ಲಿ ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ಈ ಮಳೆಗಾಲ ಮಂಗಳೂರು ನಗರದಲ್ಲಿ ಅನೇಕ ಅವಾಂತರಗಳಿಗೆ ಸಾಕ್ಷಿಯಾಗಲಿದೆ.

ಸ್ಮಾರ್ಟ್‌ ಸಿಟಿ ಎಂಬ ಅಭಿವೃದ್ಧಿ ಹೆಸರಿನಲ್ಲಿ ನಗರದಾದ್ಯಂತ ರಸ್ತೆ, ಫುಟ್‌ಪಾತ್ ಅನ್ನು ನಾಯಿ ತಿಂದಂತೆ ಅಲ್ಲಲ್ಲಿ ಅಗೆದು ಹಾಕಿದ ಪರಿಣಾಮ ನೀರು ಮತ್ತು ಕೆಸರು ತುಂಬಿ ಮರಣ ಬಾವಿಯಂತೆ ಬಾಯಿ ತೆರೆದು ಬಲಿ ಪಡೆಯಲು ಸಿದ್ದವಾಗಿದೆ.

ಮನೆ ಮನೆಗೆ ಅನಿಲ ಸರಬರಾಜು ಮಾಡುವ ಕೊಳವೆ ಯೋಜನೆಯ ‘ಗೇಲ್‌ ಇಂಡಿಯಾ’, ಕುಡಿಯುವ ನೀರು ಪೂರೈಕೆಯ ‘ಜಲಸಿರಿ’ ಯೋಜನೆ,

ಒಳಚರಂಡಿ ಸೇರಿ ಹಲವು ಅಭಿವೃದ್ಧಿ ಕಾಮಗಾರಿಗಾಗಿ ನಗರದ ಕದ್ರಿ, ಬಂಟ್ಸ್‌ ಹಾಸ್ಟೆಲ್‌, ಜ್ಯೋತಿ, ಲಾಲ್‌ಭಾಗ್‌, ಕೆಎಸ್‌ಆರ್‌ಟಿಸಿ ಸೇರಿದಂತೆ ಹಲವೆಡೆ ಕಾಂಕ್ರೀಟ್‌ ರಸ್ತೆಯನ್ನು ಅಗೆದು ಹಾಕಿದ್ದಾರೆ.

ಸರಿ ಸುಮಾರು 5 ಇಂಚು ಇರುವ ಕಾಂಕ್ರೀಟ್‌ ರಸ್ತೆ ಮತ್ತು ಫುಟ್ ಪಾತ್ ಗಳಲ್ಲಿ ಗುಂಡಿಗಳನ್ನು ಅಗೆದಿಟ್ಟು ಅನಿಲದ ಪೈಪ್‌ ಇಳಿಸಿ ಯಥಾಸ್ಥಿತಿಯಲ್ಲಿ ಬಿಟ್ಟು ಹೋಗಿದ್ದಾರೆ.

ಆದ್ರೆ ಇದೇ ಗುಂಡಿಗಳು ಮಂಗಳೂರಿಗರಿಗೆ ಮೃತ್ಯುಕೂಪಗಳಾಗಿ ಪರಿವರ್ತಿತವಾಗಿವೆ.

ಈ ಗುಂಡಿಗಳಲ್ಲಿ ಬಿದ್ದು ಕುತ್ತಿಗೆ, ಕೈ ಕಾಲು ಮುರಿದು ತಲೆಗೆ ಏಟಾಗಿ ಕೋಮಾಕ್ಕೆ ಜಾರುವ ಅಘಾತಕಾರಿ ಬೆಳವಣಿಗೆ ಈ ಮಳೆಗಾಲದಲ್ಲಿ ನಡೆಯುವ ಆತಂಕ ಎದುರಾಗಿದೆ.

ಮುಂಗಾರು ಪೂರ್ವ ಸುರಿದ ಪ್ರಾರಂಭದ ಮಳೆಗೆ ಈ ಗುಂಡಿಗಳಲ್ಲಿ ಕೆಸರಿನ ನೀರು ತುಂಬಿದ ಪರಿಣಾಮ ಗುಂಡಿಯ ಅರಿವಿಲ್ಲದ ಪಾದಚಾರಿಗಳು ಹಾಗೂ ದ್ವಿಚಕ್ರ ಸವಾರರು ಈ ಗುಂಡಿಗಳಲ್ಲಿ ಬಿದ್ದು ಮುಖ, ಮೂತಿ ಚಚ್ಚಿಸಿಕೊಂಡ ಘಟನೆಗಳು ನಡೆದಿವೆ.

ಹಲವೆಡೆ ಇಂತಹ ಅಧ್ವಾನಗಳಿಂದ ಲಕ್ಷಾಂತರ ರೂಪಾಯಿಗಳನ್ನು ಖರ್ಚು ಮಾಡಿ ಸ್ಮಾರ್ಟ್‌ ಸಿಟಿಯಡಿ ಅಂದ ಚೆಂದವಾಗಿ ಕಾಣಲು ನಿರ್ಮಿಸಿದ ಫುಟ್‌ಪಾತ್‌ ಗಳು ಬಿರುಕು ಬಿಟ್ಟಿದೆ.

ಇತ್ತೀಚೆಗೆ ನಗರದ ಕೆನರಾ ಶಾಲೆಯ ಬಳಿ ತಾಯಿ ಜೋತೆ ವಾಕ್ ಮಾಡುತ್ತಿದ್ದ ಪುಟ್ಟ ಮಗುವೊಂದರ ಕಾಲು ಗುಂಡಿಯೊಳಗೆ ಸಿಲುಕಿದ ಘಟನೆ ವರದಿಯಾಗಿತ್ತು.

ಅಗೆದ ಗುಂಡಿಯ ಸುತ್ತಲೂ ಅಪಾಯದ ಸೂಚನೆ ನೀಡುವ ಯಾವುದೇ ಫಲಕ ಅಳವಡಿಸಿಲ್ಲ. ಕೆಲವೆಡೆ ಕಟ್ಟಿದ್ದ ಅಪಾಯ ಸೂಚನೆಯ ಟೇಪ್‌ ಕಟ್ಟಿ ಬಿಟ್ಟವರ ಹಿಂದೆಯೇ ಹೋಗಿದೆ.

ಈ ಕಾಮಗಾರಿ ಗುತ್ತಿಗೆಯನ್ನು ನೀಡಿದ ಮಹಾನಗರ ಪಾಲಿಕೆ ಮತ್ತು ಕಾಮಗಾರಿಯನ್ನು ಮಾನಿಟರ್ ಮಾಡಬೇಕಾಗಿದ್ದ ಪಾಲಿಕೆಯ ಅಧಿಕಾರಿಗಳು ಎಸಿ ಆಫೀಸ್‌ ನಲ್ಲಿ ಬಿಸಿ ಕಾಫಿಯೊಂದಿಗೆ ಕುರ್ಚಿ ಬಿಸಿ ಮಾಡಿ ‘ಬಂದ ಪುಟ್ಟ ಹೋದ ಪುಟ್ಟ’ ಎಂದು ಮನೆ ಕಡೆ ಹೆಜ್ಜೆ ಹಾಕುತ್ತಾರೆ.

ವಾರ್ಡ್‌ ನ ಜವಾಬ್ದಾರಿ ಹೊಂದಿರುವ ಕೆಲ ಕಾರ್ಪೋರೇಟರ್‌ಗಳು ಮುಂದಿನ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದರೆ ಮತ್ತೆ ಕೆಲವರು ಖಾಸಾಗಿ ‘ವೈವಾಟಿನಲ್ಲೇ ‘ ಬ್ಯಸಿಯಾಗಿದ್ದಾರೆ. ಕೋಟ್ಯಾಂತರ ರೂಪಾಯಿಗಳನ್ನು ಖರ್ಚುಮಾಡಿ ಮಾಡಿದ ಸ್ಮಾರ್ಟ್ ಸಿಟಿ ಯೋಜನೆ ನೀರಲ್ಲಿಟ್ಟ ಹೋಮದಂತಾಗಿದೆ..!

“ನಗರಕ್ಕೆ ಮೂಲಸೌಕರ್ಯ ಬೇಕು. ಅಭಿವೃದ್ಧಿಯಾಗುವುದು ಸಂತೋಷ. ಆದರೆ ಕಾಮಗಾರಿ ಮುಗಿದ ನಂತರ ರಸ್ತೆಯನ್ನು ಮೊದಲಿನ ಸ್ಥಿತಿಯಂತೆ ಮಾಡದೇ ಕೇವಲ ಮಣ್ಣುಹಾಕಿ ಸಮತಟ್ಟು ಮಾಡಿ ಕೈತೊಳೆಯುತ್ತಿದ್ದಾರೆ.

ಇದನ್ನು ಗಮನಿಸಬೇಕಾದ ಮೂರ್ಖ ಕಾರ್ಪೋರೇಟರ್‌ ಗಲೇ ನಿಮ್ಮ ಮತದಾರರಿಗೆ ಓಟು ಕೊಟ್ಟಿದ್ದಕ್ಕೆ ಅವರು ನೆಮ್ಮದಿಯಾಗಿರಲು ಇಷ್ಟಾದರೂ ಮಾಡಿ.

ಇಲ್ಲದಿದ್ದರೆ ರಿಸೈನ್‌ ಕೊಟ್ಟು ಮನೆಗೆ ನಡೀರಿ” ಎಂದು ಆಕ್ರೋಶದ ನುಡಿಗಳನ್ನು ಆಡಿದ್ದಾರೆ. ಸಾಮಾಜಿಕ ಕಾರ್ಯಕರ್ತ ಹನುಮಂತ ಕಾಮತ್.

ಕಾಮಗಾರಿ ನಡೆಯುವಾಗ ಮೊದಲಿದ್ದಂತೆ ರಸ್ತೆ, ಫುಟ್‌ಪಾತ್‌ ನಿರ್ಮಿಸುತ್ತೇವೆ ಎಂದು ಒಡಂಬಡಿಕೆ ಮಾಡಿಕೊಂಡಿರುತ್ತಾರೆ.

ಇದು ಎರಡು ದಿನದ ಮಳೆಯ ನಂತರದ ಸ್ಯಾಂಪಲ್‌ ಅಷ್ಟೇ. ಇದನ್ನು ಗಮನಿಸಬೇಕಾದ ಪಾಲಿಕೆ ಅಧಿಕಾರಿಗಳು ಎಸಿ ರೂಮಿನಲ್ಲಿ ಕುಳಿತಿರುವುದರಿಂದ ಇಂತಹ ಅಧ್ವಾನ ನಡೆಯುತ್ತಲೇ ಇರುತ್ತವೆ.

ನಿನ್ನೆ ಮಹಿಳೆಯೊಬ್ಬರು ಹೊಂಡಕ್ಕೆ ಬಿದ್ದು ಆಸ್ಪತ್ರೆ ಸೇರಿದ್ದಾರೆ. ಇನ್ನಾದರೂ ಸಂಬಂಧಪಟ್ಟವರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ದಕ್ಷಿಣ ಕನ್ನಡ ರಸ್ತೆ ಸುರಕ್ಷಾ ಸಮಿತಿ ಸದಸ್ಯ ಹಾಗೂ ಸಾಮಾಜಿಕ ಕಾರ್ಯಕರ್ತ ಜಿ.ಕೆ ಭಟ್‌ ಒತ್ತಾಯಿಸಿದ್ದಾರೆ.

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಚುನಾವಣಾ ಆಯೋಗಕ್ಕೆ ದೂರು

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಪ್ರಕರಣ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

LATEST NEWS

ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

Published

on

ಚಿತ್ರದುರ್ಗ : ಮತ ಕೇಂದ್ರದಲ್ಲಿ ಚುನಾವಣಾ ಕರ್ತವ್ಯ ನಿರತ ಶಿಕ್ಷಕಿಯೊಬ್ಬರು ಕುಸಿದು ಬಿದ್ದು ಸಾ*ವನ್ನಪ್ಪಿರುವ ಘಟನೆ ಚಳ್ಳಕೆರೆ ತಾಲೂಕಿನಲ್ಲಿ ನಡೆದಿದೆ. ಚಳ್ಳಕೆರೆ ನಗರದ ವಿಠಲನಗರದ ನಿವಾಸಿ ಯಶೋದಮ್ಮ ( 55) ಅವರು ಮೃ*ತ ಶಿಕ್ಷಕಿ.


ಯಶೋದಮ್ಮ ಹೊಟ್ಲೆಪನಹಳ್ಳಿ 202 ಮತ ಕೇಂದ್ರದಲ್ಲಿ ಚುನಾವಣಾ ಕರ್ತವ್ಯ ನಿರತರಾಗಿದ್ದರು. ಈ ಸಂದರ್ಭ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಸರ್ಕಾರಿ ಆಸ್ಪತ್ರೆಗೆ ಕರೆತರುವ ವೇಳೆ ದಾರಿ‌ಮಧ್ಯದಲ್ಲಿ ಸಾ*ವನಪ್ಪಿದ್ದಾರೆ. ಮೃ*ತ ಶಿಕ್ಷಕಿ ಯಶೋಧ ಅವರು ಬೊಮ್ಮಸಂದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

ಚುನಾವಣಾ ಕರ್ತವ್ಯ ನಿಮಿತ್ತ ಯಶೋದಮ್ಮ ಹೊಟ್ಲೆಪನಹಳ್ಳಿ ಮತಗಟ್ಟೆಗೆ ಬಂದಿದ್ದರು. ಸಹಾಯಕ ಪೋಲಿಂಗ್‌ ರಿಟರ್ನಿಂಗ್ ಆಫೀಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮತದಾನ ಆರಂಭವಾದಾಗ ಆರೋಗ್ಯವಾಗಿದ್ದ ಯಶೋದಮ್ಮ ಅವರಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ಈ ಬಗ್ಗೆ ರಿಟರ್ನಿಂಗ್ ಆಫೀಸರ್ ಗಮನಕ್ಕೆ ತಂದಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ, ಆಸ್ಪತ್ರೆ ತಲುಪುವ ಮೊದಲೇ ಯಶೋದಮ್ಮ ಮೃ*ತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಇವಿಎಂನಲ್ಲಿ ಪ್ರಧಾನಿ ಮೋದಿ ಚಿತ್ರ ಕಾಣದೆ ಕಂಗಾಲಾದ ಮಹಿಳೆ; ಅಧಿಕಾರಿಗಳೊಂದಿಗೆ ಜಗಳ!

ಘಟನೆಯ ಮಾಹಿತಿ ಪಡೆದ ಶಾಸಕ ಟಿ.ರಘುಮೂರ್ತಿ ಹಾಗೂ ಚುನಾವಣಾ ಅಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಮೃ*ತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

Continue Reading

FILM

ಮತ್ತೆ ಬಾಯ್‌ ಫ್ರೆಂಡ್ ಬದಲಾಯಿಸಿದ ಶೃತಿ ಹಾಸನ್..!

Published

on

ಮಂಗಳೂರು : ಪ್ರೀತಿ ಎಂಬ ಎರಡಕ್ಷರವನ್ನ ಬಣ್ಣದ ಲೋಕದಲ್ಲಿರುವ ಅನೇಕರು ಗಂಭೀರವಾಗಿ ಪರಿಗಣಿಸಿಯೇ ಇಲ್ಲ. ಹೀಗಾಗಿಯೇ ದಿನಕ್ಕೊಂದು ಸಂಬಂಧ ಇಲ್ಲಿ ಬದಲಾಗುತ್ತೆ. ಲವ್ ಬೆನ್ನಲ್ಲಿಯೇ ಬ್ರೇಕ್‌ಪ್ ಆಗುತ್ತೆ. ಇದಕ್ಕೆ ಮತ್ತೊಂದು ಉದಾಹರಣೆ ಶ್ರುತಿ ಹಾಸನ್ ಮತ್ತು ಶಾಂತನು ಹಜಾರಿಕಾ.

ಹೌದು, ನಿಮಗೆ ಗೊತ್ತಿರಲಿ.. ಮೂರ್ನಾಲ್ಕು ವರ್ಷಗಳ ಹಿಂದೆ, ಕಮಲ ಹಾಸನ್ ಅವರ ಮುದ್ದಿನ ಮಗಳು ಶ್ರುತಿ ಹಾಸನ್, ಬ್ರಿಟಿಷ್ ನಟ ಮೈಕಲ್ ಕೋರ್ಸೆಲ್ ಜೊತೆ ಪ್ರೇಮದ ಖಾತೆ ತೆರೆದಿದ್ದರು. ಜೊತೆ ಜೊತೆಯಲ್ಲಿ ಇಬ್ಬರು ಅನೇಕ ಕಡೆ ಕಾಣಿಸಿಕೊಂಡಿದ್ದರು. ಆದರೆ ಆ ನಂತರ ಏನಾಯಿತೋ ಗೊತ್ತಿಲ್ಲ. ಸಂಬಂಧ ಮುರಿದು ಬಿತ್ತು.

ಎರಡನೇ ಬಾಯ್‌ಫ್ರೆಂಡ್‌:

ಮೈಕಲ್ ಕೋರ್ಸೆಲ್ ಅವರಿಂದ ದೂರವಾದ ನಂತರ ಶ್ರುತಿ ಹಾಸನ್ ಬದುಕಿನಲ್ಲಿ ಬಂದ ವ್ಯಕ್ತಿ ಶಾಂತನು ಹಜಾರಿಕಾ. ಶಾಂತನು ಜೊತೆ ಎರಡು ವರ್ಷ ಪ್ರೇಮದ ತಪಸ್ಸು ಮಾಡಿದ್ದ ಶ್ರುತಿ ಹಾಸನ್ ಅನೇಕ ಸಲ ತಮ್ಮ ಈ ಪ್ರೇಮ ಕಥೆಯನ್ನ ಹೆಮ್ಮೆಯಿಂದ ಹೇಳಿಕೊಂಡಿದ್ದರು. ತನ್ನ ಮೇಲೆ ಶಾಂತನುಗೆ ಇರುವ ಕಾಳಜಿ ಪ್ರೀತಿಯನ್ನೂ ಮೆಚ್ಚಿ ಮಾತನಾಡಿದ್ದರು. ಇನ್ನು ಎರಡು ವರ್ಷದ ಹಿಂದೆ ಅಂದರೆ 2022ರ ಸಮಯದಲ್ಲಿ ತಮ್ಮ ಮದುವೆ ಆಗಿದೆ ಎಂಬ ವಿಚಾರವನ್ನ ಕದ್ದು ಶಾಂತನು ಹೇಳಿದ್ದರು.

ಮದುವೆ ಆದ ನಂತರದಿಂದ ನಮ್ಮ ಸಂಬಂಧ ಇನ್ನು ಗಟ್ಟಿಯಾಗಿದೆ ಹಾಗೂ ಉತ್ತಮವಾಗಿದೆ. ಒಬ್ಬರಿಗೊಬ್ಬರು ಪರಸ್ಪರ ಅರ್ಥ ಮಾಡಿಕೊಂಡು ಜೀವನ ನಡೆಸಲು ನಮ್ಮ ಮದುವೆ ನಮಗೆ ದಾರಿ ಮಾಡಿಕೊಟ್ಟಿದೆ. ಮುಂದೆಯೂ ಹೀಗೆ ಸಂತೋಷದಿಂದ ದಿನಗಳನ್ನು ಕಳೆಯಲು ತೀರ್ಮಾನಿಸಿದ್ದೇವೆ ಎಂದಿದ್ದರು.

ಇದನ್ನೂ ಓದಿ  “ನಿತ್ಯಾಮೆನನ್” ಚಿತ್ರರಂಗದಿಂದ ‘ಬ್ಯಾನ್’ ಆಗಲು ಕಾರಣವೇನು ಗೊತ್ತಾ? ಈ ಬಗ್ಗೆ ನಿತ್ಯಾ ಹೇಳಿದ್ದೇನು?

ಆದರೆ ಈಗ ಶ್ರುತಿ ಹಾಸನ್ ಮತ್ತು ಶಾಂತನು ನಡುವೆ ಇದ್ದ ಪ್ರೇಮ ಸೇತುವೆ ಮುರಿದು ಬಿದ್ದಿದೆ ಅನ್ನುವ ಎಂಬ ಸುದ್ದಿ ಎಲ್ಲೆಡೆ ಕೇಳಿ ಬರುತ್ತಿದೆ. ಇದಕ್ಕೆ ಪೂರಕವಾಗಿ ಶ್ರುತಿ ಹಾಸನ್ ಸಾಮಾಜಿಕ ಜಾಲತಾಣದಲ್ಲಿ ಶಾಂತನು ಜೊತೆ ಫೋಟೋಗಳೆಲ್ಲ ಮಾಯವಾಗಿವೆ. ಶಾಂತನು ಅವರನ್ನ ಶ್ರುತಿ ಹಾಸನ್ ಅನ್ ಫ್ರೆಂಡ್ ಮಾಡಿದ್ದಾರೆ. ಒಟ್ಟಿನಲ್ಲಿ

ಸದ್ಯಕ್ಕೆ ಶ್ರುತಿ ಹಾಸನ್ ಮತ್ತು ಶಾಂತನು ನಡುವೆ ಮೊಳಕೆಯೊಡೆದಿದ್ದ ಪ್ರೀತಿ ಈಗ ಕಮರಿಹೋಗಿದೆ ಅನ್ನುವ ಮಾತು ಎಲ್ಲೆಡೆ ಕೇಳಿ ಬರುತ್ತಿದೆ. ಹರಿದಾಡುತ್ತಿರುವ ಈ ಸುದ್ದಿಯ ಬಗ್ಗೆ ಶ್ರುತಿ ಹಾಸನ್ ಸ್ಪಷ್ಟೀಕರಣ ಕೊಡ್ತಾರಾ ಅನ್ನುವುದನ್ನ ಕಾದು ನೋಡಬೇಕಿದೆ.

Continue Reading

LATEST NEWS

Trending