Connect with us

LATEST NEWS

ಅಂಗಾಂಗ ದಾನಕ್ಕೆ ಸಿದ್ದವಾಗ್ತಿದೆ ಮಂಗಳೂರು ಸ್ಮಾರ್ಟ್‌ ಸಿಟಿ

Published

on

ಮಂಗಳೂರು: ಮೆಡಿಕಲ್‌ ಹಬ್‌ ಆಗಿರುವ ಮಂಗಳೂರಿನಲ್ಲಿ ಅಂಗಾಂಗ ದಾನದ್ದೇ ಸುದ್ದಿ. ರಸ್ತೆಯಲ್ಲಿ ಬಿದ್ದು, ತಲೆಗೆ ಏಟಾಗಿ ಕೋಮಾಕ್ಕೆ ಜಾರಿ ಅಂಗಾಂಗ ದಾನದಲ್ಲಿ ಪ್ರಾಣ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚುತ್ತಿದೆ. ಇದಕ್ಕೆ ಪೂರಕವಾಗಿ ಮಂಗಳೂರು ಸ್ಮಾರ್ಟ್‌ ಸಿಟಿಯ ಯೋಜನೆಗಳು ಇದೀಗ ಕಾರ್ಯಗತವಾಗಿವೆ…!

ಮುಂಗಾರು ಮಳೆ ಇನ್ನೇನು ಪ್ರಾರಂಭವಾಗಬೇಕಷ್ಟೆ. ಕಳೆದ 10- 15 ದಿನಗಳಿಂದ ಮಂಗಳೂರು ನಗರದಲ್ಲಿ ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ಈ ಮಳೆಗಾಲ ಮಂಗಳೂರು ನಗರದಲ್ಲಿ ಅನೇಕ ಅವಾಂತರಗಳಿಗೆ ಸಾಕ್ಷಿಯಾಗಲಿದೆ.

ಸ್ಮಾರ್ಟ್‌ ಸಿಟಿ ಎಂಬ ಅಭಿವೃದ್ಧಿ ಹೆಸರಿನಲ್ಲಿ ನಗರದಾದ್ಯಂತ ರಸ್ತೆ, ಫುಟ್‌ಪಾತ್ ಅನ್ನು ನಾಯಿ ತಿಂದಂತೆ ಅಲ್ಲಲ್ಲಿ ಅಗೆದು ಹಾಕಿದ ಪರಿಣಾಮ ನೀರು ಮತ್ತು ಕೆಸರು ತುಂಬಿ ಮರಣ ಬಾವಿಯಂತೆ ಬಾಯಿ ತೆರೆದು ಬಲಿ ಪಡೆಯಲು ಸಿದ್ದವಾಗಿದೆ.

ಮನೆ ಮನೆಗೆ ಅನಿಲ ಸರಬರಾಜು ಮಾಡುವ ಕೊಳವೆ ಯೋಜನೆಯ ‘ಗೇಲ್‌ ಇಂಡಿಯಾ’, ಕುಡಿಯುವ ನೀರು ಪೂರೈಕೆಯ ‘ಜಲಸಿರಿ’ ಯೋಜನೆ,

ಒಳಚರಂಡಿ ಸೇರಿ ಹಲವು ಅಭಿವೃದ್ಧಿ ಕಾಮಗಾರಿಗಾಗಿ ನಗರದ ಕದ್ರಿ, ಬಂಟ್ಸ್‌ ಹಾಸ್ಟೆಲ್‌, ಜ್ಯೋತಿ, ಲಾಲ್‌ಭಾಗ್‌, ಕೆಎಸ್‌ಆರ್‌ಟಿಸಿ ಸೇರಿದಂತೆ ಹಲವೆಡೆ ಕಾಂಕ್ರೀಟ್‌ ರಸ್ತೆಯನ್ನು ಅಗೆದು ಹಾಕಿದ್ದಾರೆ.

ಸರಿ ಸುಮಾರು 5 ಇಂಚು ಇರುವ ಕಾಂಕ್ರೀಟ್‌ ರಸ್ತೆ ಮತ್ತು ಫುಟ್ ಪಾತ್ ಗಳಲ್ಲಿ ಗುಂಡಿಗಳನ್ನು ಅಗೆದಿಟ್ಟು ಅನಿಲದ ಪೈಪ್‌ ಇಳಿಸಿ ಯಥಾಸ್ಥಿತಿಯಲ್ಲಿ ಬಿಟ್ಟು ಹೋಗಿದ್ದಾರೆ.

ಆದ್ರೆ ಇದೇ ಗುಂಡಿಗಳು ಮಂಗಳೂರಿಗರಿಗೆ ಮೃತ್ಯುಕೂಪಗಳಾಗಿ ಪರಿವರ್ತಿತವಾಗಿವೆ.

ಈ ಗುಂಡಿಗಳಲ್ಲಿ ಬಿದ್ದು ಕುತ್ತಿಗೆ, ಕೈ ಕಾಲು ಮುರಿದು ತಲೆಗೆ ಏಟಾಗಿ ಕೋಮಾಕ್ಕೆ ಜಾರುವ ಅಘಾತಕಾರಿ ಬೆಳವಣಿಗೆ ಈ ಮಳೆಗಾಲದಲ್ಲಿ ನಡೆಯುವ ಆತಂಕ ಎದುರಾಗಿದೆ.

ಮುಂಗಾರು ಪೂರ್ವ ಸುರಿದ ಪ್ರಾರಂಭದ ಮಳೆಗೆ ಈ ಗುಂಡಿಗಳಲ್ಲಿ ಕೆಸರಿನ ನೀರು ತುಂಬಿದ ಪರಿಣಾಮ ಗುಂಡಿಯ ಅರಿವಿಲ್ಲದ ಪಾದಚಾರಿಗಳು ಹಾಗೂ ದ್ವಿಚಕ್ರ ಸವಾರರು ಈ ಗುಂಡಿಗಳಲ್ಲಿ ಬಿದ್ದು ಮುಖ, ಮೂತಿ ಚಚ್ಚಿಸಿಕೊಂಡ ಘಟನೆಗಳು ನಡೆದಿವೆ.

ಹಲವೆಡೆ ಇಂತಹ ಅಧ್ವಾನಗಳಿಂದ ಲಕ್ಷಾಂತರ ರೂಪಾಯಿಗಳನ್ನು ಖರ್ಚು ಮಾಡಿ ಸ್ಮಾರ್ಟ್‌ ಸಿಟಿಯಡಿ ಅಂದ ಚೆಂದವಾಗಿ ಕಾಣಲು ನಿರ್ಮಿಸಿದ ಫುಟ್‌ಪಾತ್‌ ಗಳು ಬಿರುಕು ಬಿಟ್ಟಿದೆ.

ಇತ್ತೀಚೆಗೆ ನಗರದ ಕೆನರಾ ಶಾಲೆಯ ಬಳಿ ತಾಯಿ ಜೋತೆ ವಾಕ್ ಮಾಡುತ್ತಿದ್ದ ಪುಟ್ಟ ಮಗುವೊಂದರ ಕಾಲು ಗುಂಡಿಯೊಳಗೆ ಸಿಲುಕಿದ ಘಟನೆ ವರದಿಯಾಗಿತ್ತು.

ಅಗೆದ ಗುಂಡಿಯ ಸುತ್ತಲೂ ಅಪಾಯದ ಸೂಚನೆ ನೀಡುವ ಯಾವುದೇ ಫಲಕ ಅಳವಡಿಸಿಲ್ಲ. ಕೆಲವೆಡೆ ಕಟ್ಟಿದ್ದ ಅಪಾಯ ಸೂಚನೆಯ ಟೇಪ್‌ ಕಟ್ಟಿ ಬಿಟ್ಟವರ ಹಿಂದೆಯೇ ಹೋಗಿದೆ.

ಈ ಕಾಮಗಾರಿ ಗುತ್ತಿಗೆಯನ್ನು ನೀಡಿದ ಮಹಾನಗರ ಪಾಲಿಕೆ ಮತ್ತು ಕಾಮಗಾರಿಯನ್ನು ಮಾನಿಟರ್ ಮಾಡಬೇಕಾಗಿದ್ದ ಪಾಲಿಕೆಯ ಅಧಿಕಾರಿಗಳು ಎಸಿ ಆಫೀಸ್‌ ನಲ್ಲಿ ಬಿಸಿ ಕಾಫಿಯೊಂದಿಗೆ ಕುರ್ಚಿ ಬಿಸಿ ಮಾಡಿ ‘ಬಂದ ಪುಟ್ಟ ಹೋದ ಪುಟ್ಟ’ ಎಂದು ಮನೆ ಕಡೆ ಹೆಜ್ಜೆ ಹಾಕುತ್ತಾರೆ.

ವಾರ್ಡ್‌ ನ ಜವಾಬ್ದಾರಿ ಹೊಂದಿರುವ ಕೆಲ ಕಾರ್ಪೋರೇಟರ್‌ಗಳು ಮುಂದಿನ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದರೆ ಮತ್ತೆ ಕೆಲವರು ಖಾಸಾಗಿ ‘ವೈವಾಟಿನಲ್ಲೇ ‘ ಬ್ಯಸಿಯಾಗಿದ್ದಾರೆ. ಕೋಟ್ಯಾಂತರ ರೂಪಾಯಿಗಳನ್ನು ಖರ್ಚುಮಾಡಿ ಮಾಡಿದ ಸ್ಮಾರ್ಟ್ ಸಿಟಿ ಯೋಜನೆ ನೀರಲ್ಲಿಟ್ಟ ಹೋಮದಂತಾಗಿದೆ..!

“ನಗರಕ್ಕೆ ಮೂಲಸೌಕರ್ಯ ಬೇಕು. ಅಭಿವೃದ್ಧಿಯಾಗುವುದು ಸಂತೋಷ. ಆದರೆ ಕಾಮಗಾರಿ ಮುಗಿದ ನಂತರ ರಸ್ತೆಯನ್ನು ಮೊದಲಿನ ಸ್ಥಿತಿಯಂತೆ ಮಾಡದೇ ಕೇವಲ ಮಣ್ಣುಹಾಕಿ ಸಮತಟ್ಟು ಮಾಡಿ ಕೈತೊಳೆಯುತ್ತಿದ್ದಾರೆ.

ಇದನ್ನು ಗಮನಿಸಬೇಕಾದ ಮೂರ್ಖ ಕಾರ್ಪೋರೇಟರ್‌ ಗಲೇ ನಿಮ್ಮ ಮತದಾರರಿಗೆ ಓಟು ಕೊಟ್ಟಿದ್ದಕ್ಕೆ ಅವರು ನೆಮ್ಮದಿಯಾಗಿರಲು ಇಷ್ಟಾದರೂ ಮಾಡಿ.

ಇಲ್ಲದಿದ್ದರೆ ರಿಸೈನ್‌ ಕೊಟ್ಟು ಮನೆಗೆ ನಡೀರಿ” ಎಂದು ಆಕ್ರೋಶದ ನುಡಿಗಳನ್ನು ಆಡಿದ್ದಾರೆ. ಸಾಮಾಜಿಕ ಕಾರ್ಯಕರ್ತ ಹನುಮಂತ ಕಾಮತ್.

ಕಾಮಗಾರಿ ನಡೆಯುವಾಗ ಮೊದಲಿದ್ದಂತೆ ರಸ್ತೆ, ಫುಟ್‌ಪಾತ್‌ ನಿರ್ಮಿಸುತ್ತೇವೆ ಎಂದು ಒಡಂಬಡಿಕೆ ಮಾಡಿಕೊಂಡಿರುತ್ತಾರೆ.

ಇದು ಎರಡು ದಿನದ ಮಳೆಯ ನಂತರದ ಸ್ಯಾಂಪಲ್‌ ಅಷ್ಟೇ. ಇದನ್ನು ಗಮನಿಸಬೇಕಾದ ಪಾಲಿಕೆ ಅಧಿಕಾರಿಗಳು ಎಸಿ ರೂಮಿನಲ್ಲಿ ಕುಳಿತಿರುವುದರಿಂದ ಇಂತಹ ಅಧ್ವಾನ ನಡೆಯುತ್ತಲೇ ಇರುತ್ತವೆ.

ನಿನ್ನೆ ಮಹಿಳೆಯೊಬ್ಬರು ಹೊಂಡಕ್ಕೆ ಬಿದ್ದು ಆಸ್ಪತ್ರೆ ಸೇರಿದ್ದಾರೆ. ಇನ್ನಾದರೂ ಸಂಬಂಧಪಟ್ಟವರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ದಕ್ಷಿಣ ಕನ್ನಡ ರಸ್ತೆ ಸುರಕ್ಷಾ ಸಮಿತಿ ಸದಸ್ಯ ಹಾಗೂ ಸಾಮಾಜಿಕ ಕಾರ್ಯಕರ್ತ ಜಿ.ಕೆ ಭಟ್‌ ಒತ್ತಾಯಿಸಿದ್ದಾರೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಅತ್ತಾವರ ಅಪಾರ್ಟ್‌ಮೆಂಟ್‌ನಲ್ಲಿ ಆಕಸ್ಮಿಕ ಬೆಂಕಿ – ವೃದ್ಧೆ ಸಾವು..!

Published

on

ಮಂಗಳೂರು: ಮಂಗಳೂರಿನ ಅತ್ತಾವರದ ಅಪಾರ್ಟ್‌ ಮೆಂಟ್‌ವೊಂದರಲ್ಲಿ ಇಂದು ಬೆಳಗ್ಗೆ ನಡೆದ ಆಕಸ್ಮಿಕ ಬೆಂಕಿ ಅನಾಹುತದಲ್ಲಿ ಗಂಭೀರ ಗಾಯಗೊಂಡಿದ್ದ ವೃದ್ಧೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ‌ಮಾಹಿತಿ ನೀಡಿದ್ದಾರೆ.

ಶಾಹಿನಾ ನುಸ್ಬಾ(58) ಸಾವನ್ನಪ್ಪಿದ ವೃದ್ಧೆ ಎಂದು ಗುರುತಿಸಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮುಂಜಾನೆ 4 ಗಂಟೆಯ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದ್ದು, ಐವರು ಮಕ್ಕಳ ಸಹಿತ ಎಂಟು ಮಂದಿ ಅಪಾಯದಿಂದ ಪಾರಾಗಿದ್ದಾರೆ.

ಅನಾರೋಗ್ಯದಿಂದಾಗಿ ಬೆಡ್ ರೂಮ್ ನಲ್ಲೇ ಇದ್ದ ವೃದ್ಧ ಮಹಿಳೆ ದಟ್ಟ ಹೊಗೆಯಿಂದಾಗಿ ತಕ್ಷಣ ಹೊರಬರಲಾಗದೇ ಉಸಿರುಗಟ್ಟಿ ಚಿಂತಾಜನಕ ಸ್ಥಿತಿಯಲ್ಲಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

Continue Reading

LATEST NEWS

ಬೋರ್ ವೆಲ್ ನಲ್ಲಿ ಸುರಿದ ಹಾಲು – ಪಾತ್ರೆ ಹಿಡಿದು ಓಡೋಡಿ ಬಂದ ಜನ..!

Published

on

ಉತ್ತರ ಪ್ರದೇಶ: ಸಾಮನ್ಯವಾಗಿ ಬೋರ್ ವೆಲ್ ನಲ್ಲಿ ನೀರು ಬರುವದನ್ನು ನೋಡಿದ್ದೇವೆ ಆದರೆ ಇಲ್ಲೊಂದು ಕಡೆ ಹಾಲಿನ ಬಣ್ಣದ ನೀರು ಸುರಿದ ವಿಸ್ಮಯ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ ನಲ್ಲಿ ನಡೆದಿದೆ.


ಇಲ್ಲಿನ ಸಾರ್ವಜನಿಕ ಸ್ಥಳವೊಂದರಲ್ಲಿರುವ ಬೋರ್ ವೆಲ್ ನಲ್ಲಿ ನೀರಿನ ಬದಲು ಬಿಳಿ ಬಣ್ಣ ಇರುವ ನೀರು ಸುರಿದಿದೆ. ಇದನ್ನು ಕಂಡ ಸ್ಥಳಿಯರಿಗೆ ಅಚ್ಚರಿಯ ಪ್ರಶ್ನೆ ಮೂಡಿದೆ. ಅಲ್ಲದೆ ಇದೀಗ ಇದರ ವಿಡಿಯೋ ವೈರಲ್ ಆದ ಬೆನ್ನಲ್ಲೇ ಈ ಸ್ಥಳಕ್ಕೆ ಸಾಕಷ್ಟು ಜನ ಬಂದು ಸೇರಿದ್ದಾರೆ.


ಇದನ್ನು ಕಂಡ ಜನರು ಇದು ನೀರಲ್ಲ ಹಾಲು ಎಂದು ಪಾತ್ರ , ಬಾಟಲಿ ಹಾಗೂ ಕೈಗೆ ಸಿಕ್ಕಿದ ಪಾತ್ರವನ್ನು ಹಿಡಿದು ಓಡಾಡಿಕೊಂಡು ಬಂದು ಸರತಿ ಸಾಲಿನಲ್ಲಿ ನಿಂತು ತಮ್ಮ ಪಾತ್ರೆಗಳಿಗೆ ತುಮಬಿಸಿ ಮನೆಗೆ ಕೊಂಡೊಯ್ಯುತ್ತಿದ್ದರು. ಈ ವಿಚಾರ ತಿಳಿದ ಪುರಸಭೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆದರೆ ಇದು ಹಾಲಲ್ಲ ಇದು ಕಲುಷಿತ ನೀರು ಎಂದು ಸ್ಪಷ್ಟನೆ ನೀಡಿದ್ದಾರೆ. ಬೋರ್ ವೆಲ್ ನಲ್ಲಿರುವ ಹ್ಯಾಂಡ್ ಪಂಪ್ ನ ಕೆಳಭಾಗ ಹಾನಿಗೊಳಗಾದ ಕಾರಣ ಇದರಲ್ಲಿ ಹಾಲಿನ ಬಣ್ಣದ ಕಲುಷಿತ ನೀರು ಸೊರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿರುವುದು ವರದಿಯಾಗಿದೆ.

Continue Reading

DAKSHINA KANNADA

ನ.30ರಂದು ಶ್ರೀ ಆದಿ ಕ್ಷೇತ್ರ ಜಾರದಲ್ಲಿ ನಿಧಿ ಕುಂಭ ಮತ್ತು ಶಿಲಾನ್ಯಾಸ ಕಾರ್ಯಕ್ರಮ

Published

on

ಮಂಗಳೂರು: ಧಾರ್ಮಿಕ ಕ್ಷೇತ್ರ ಜಾರದಲ್ಲಿ ನ. 30ರಂದು ಬೆಳಿಗ್ಗೆ 8 ಗಂಟೆಯಿಂದ ಜಾರಂದಾಯ ಬಂಟ ಪರಿವಾರ ಸಾನಿಧ್ಯ ಮತ್ತು ಕ್ಷೇತ್ರ ಕಲ್ಲುರ್ಟಿ ಸಾನಿಧ್ಯಗಳ ನಿಧಿ ಕುಂಭ ಮತ್ತು ಶಿಲಾನ್ಯಾಸ ಕಾರ್ಯಕ್ರಮ ವಿಜೃಂಭಣೆಯಿಂದ ಜರಗಲಿದೆ ಎಂದು ದೈವಜ್ಞ ಪ್ರಕಾಶ ವಿ. ಹೊಳ್ಳ ಶಕ್ತಿನಗರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

“ಕಾರ್ಯಕ್ರಮದ ಯಶಸ್ಸಿಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು ಕ್ಷೇತ್ರದ ತಂತ್ರಿಗಳಾದ ಕೊಂರ್ಗಿಬೈಲು ನಾರಾಯಣ ಮಯ್ಯರ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನೆರವೇರಲಿದೆ. ಖ್ಯಾತ ವಾಸ್ತು ತಜ್ಞಮಹೇಶ್ ಮುನಿಯಂಗಳ ಇವರ ವಾಸ್ತು ವಿನ್ಯಾಸದೊಂದಿಗೆ ಸುಮಾರು 12 ರಿಂದ 15 ಕೋಟಿ ವೆಚ್ಚದಲ್ಲಿ ಹಂತ ಹಂತವಾಗಿ ಕ್ಷೇತ್ರ ಜೀರ್ಣೋದ್ಧಾರ ನಡೆಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡಿದೆ. ಈಗಾಗಲೇ ನವೆಂಬರ್ 11ರಂದು ಜಾರಚಾವಡಿಯಲ್ಲಿ ಪ್ರಧಾನ ದೈವ ಜಾರಂದಾಯ  ಬಂಟ ಮಾಯಾಂದಾಲ್ ದೈವಗಳ ನೇಮೋತ್ಸವ ಶ್ರದ್ಧಾ ಭಕ್ತಿಯಿಂದ ನೆರವೇರಿದೆ. ನವೆಂಬರ್ 30ರಂದು
ಬೆಳಿಗ್ಗೆ 9.00 ಗಂಟೆಗೆ ಸರಳ ಜುಮಾದಿ ಬಂಟ ಹಾಗೂ ಪರಿವಾರ ದೈವಗಳಿಗೆ ಹಾಗೂ 11.00 ಗಂಟೆಗೆ ಶ್ರೀ ಜಾರ ಆದಿ ಕ್ಷೇತ್ರದ ಗಿರಿಯಲ್ಲಿ ಗ್ರಾಮ ದೈವ ಶ್ರೀ ಬಂಟ ಸರಳ ಜುಮಾದಿ ಬಂಟ ಮತ್ತು ಪರಿವಾರ ದೈವಗಳಿಗೆ ನಿಧಿ ಕುಂಬ ಮತ್ತು ಶಿಲಾನ್ಯಾಸ ಕಾರ್ಯಕ್ರಮ ನೆರವೇರಲಿದೆ. ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೆ  ಭಕ್ತಾಧಿಗಳು ತನು ಮನ ಧನಗಳಿಂದ ಸಹಕರಿಸಬೇಕು” ಎಂದು ಮನವಿ ಮಾಡಿದರು.

ಬಳಿಕ ಮಾತಾಡಿದ ಕ್ಷೇತ್ರದ ತಂತ್ರಿಗಳಾದ ಕೊಂರ್ಗಿಬೈಲು ನಾರಾಯಣ ಮಯ್ಯ ಅವರು, “ಶ್ರೀ ಆದಿ ಕ್ಷೇತ್ರ ಜಾರ ಇದು ತುಳುನಾಡಿನ ಕಾರ್ಣಿಕ ಕ್ಷೇತ್ರಗಳಲ್ಲಿ ಒಂದಾಗಿದೆ. ಸಾನಿಧ್ಯ ಪ್ರಧಾನ ದೈವಗಳಾಗಿ ಶ್ರೀ ಉಳ್ಳಾಯ, ಶ್ರೀ ಜಾರಂದಾಯ ಬಂಟ, ಸರಳ ಧೂಮಾವತಿ ಬಂಟ, ಕಾಂತೇರಿ ಧೂಮಾವತಿ ಬಂಟ, ಮಾಯಾಂದಾಲ್ ದೈವ, ಪಿಲಿ ಚಾಮುಂಡಿ, ಬಬ್ಬರ್ಯ ದೈವಗಳು ಕ್ಷೇತ್ರ ಹಾಗೂ ಗ್ರಾಮದ ಮಾಗಣೆಯ ದೈವಗಳಾಗಿವೆ. ಕ್ಷೇತ್ರದ ಆದಿ ದೈವಗಳಾಗಿ ಕಲ್ಲುರ್ಟಿ, ಪಟ್ಟದ ಅಣ್ಣಪ್ಪ ಸ್ವಾಮಿ, ಸ್ಥಳದ ಪಂಜುರ್ಲಿ, ನಾಗಬ್ರಹ್ಮ ಪ್ರಧಾನ ಸಾನಿಧ್ಯಗಳಾಗಿವೆ” ಎಂದರು. ಸುದ್ದಿಗೋಷ್ಠಿಯಲ್ಲಿ ದೈವಜ್ಞ ಶ್ರೀ ಪ್ರಕಾಶ ವಿ. ಹೊಳ್ಳ ಶಕ್ತಿನಗರ, ಕ್ಷೇತ್ರದ ತಂತ್ರಿಗಳಾದ ಕೊಂರ್ಗಿಬೈಲು ನಾರಾಯಣ ಮಯ್ಯರ , ಕ್ಷೇತ್ರದ ಗಡಿ ಪ್ರಧಾನರಾದ ಜತ್ತಿ ಪೂಜಾರಿ ಜಾರ, ಅಧ್ಯಕ್ಷರಾದ ಉದಯಶಂಕರ ಜಾರಮನೆ, ಕಾರ್ಯದರ್ಶಿ ಎಂ. ವಿಠಲ್ ಪೂಜಾರಿ ಕುಕ್ಕುದಡಿ, ಕೋಶಾಧಿಕಾರಿ ಜೀವನ್ ದಾಸ್ ಜಾರ ಮತ್ತಿತರರು ಉಪಸ್ಥಿತರಿದ್ದರು.

Continue Reading

LATEST NEWS

Trending